ನಾಡಿನ ಜನತೆಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು... ಇಂದು ಮ,12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ 'ಕಾಂತಾರ ಅಧ್ಯಾಯ 1' ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು. ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಅವರಿಂದ, ವಿಶ್ವವೇ ಎದುರು ನೋಡುತ್ತಿರುವ ಕಾಂತಾರ ಅಧ್ಯಾಯ 1' ಚಿತ್ರದ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆಯಾಯಿತು. ಆರಂಭದಿಂದಲೂ ಸಾಕಷ್ಟು ಕುತೂಹಲ, ಕಾತುರ ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣ ಹಾಗೂ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ, ವಿಶ್ವವೇ ಎದುರು ನೋಡುತ್ತಿರುವ, ಬಹು ನಿರೀಕ್ಷಿತ "ಕಾಂತಾರ ಅಧ್ಯಾಯ 1" ಚಿತ್ರವು ಸಪ್ತ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನ ಸೆ.22ರ ಸೋಮವಾರ ಮಧ್ಯಾಹ್ನ 12:45ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಟ್ರೇಲರನ್ನು ಆಯಾ ಭಾಷೆಗಳ ಸ್ಟಾರ್ ನಟರುಗಳು ಬಿಡುಗಡೆ ಮಾಡಿದರು. ಹಿಂದಿ ಟ್ರೇಲರ್ ಅನ್ನು ಹೃತಿಕ್ ರೋಶನ್, ತಮಿಳಿನ ಟ್ರೇಲರ್ ಅನ್ನು ಶಿವಕಾರ್ತಿಕೇಯನ್, ಮಲಯಾಳಂ ಟ್ರೇಲರ್ ಅನ್ನು ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯ ಟ್ರೇಲರ್ ಅನ್ನು ಪ್ರಭಾಸ್ ಅವರು ಅನಾವರಣ ಮಾಡಿದರು. ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ "ಕಾಂತಾರ...
"ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ .. ಇದೇ ಶುಕ್ರವಾರ ತೆರೆಗೆ ಈಗಿನ ಕಾಲದಲ್ಲಿ ಮಹಿಳೆಯರು ಎಂಥದೇ ಆಪತ್ತಿನ ಸಂದರ್ಭ ಎದುರಾದರೂ, ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಕರಾಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ನಾರಾಯಣ ಪೂಜಾರ. ಸೆ.26ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ಮೂಲಕ ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಿರ್ಮಾಪಕರ ಅನೇಕ ಹಿತೈಷಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿದರು. ಕರಾಸ್ತ್ರ ಕುರಿತಂತೆ ಮಾತನಾಡಿದ ನಿರ್ದೇಶಕ ನಾರಾಯಣ ಪೂಜಾರ್, ಹೆಣ್ಣು ಮಕ್ಕಳಿಗೆ ಸ್ವರಕ್ಷಣೆ ಎಷ್ಟು ಮುಖ್ಯ ಎಂಬುದನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ನನ್ನೂರು ಬ್ಯಾಡಗಿ, ಒಬ್ಬ ಕಲಾವಿದನಾಗಬೇಕೆಂದು 2006ರಲ್ಲಿ ಬೆಂಗಳೂರಿಗೆ ಬಂದೆ. ಗುರು ದೇಶಪಾಂಡೆ ಅವರಬಳಿ ಕಲಿತು ಅವರ ಸಿನಿಮಾದಲ್ಲೂ ಅಭಿನಯಿಸಿದೆ. ವಿಜಯ್ ಸೇತುಪತಿ ಅವರ ಮೊದಲ ಕನ್ನಡ ಚಿತ್ರ 'ಹೋರಾಟ'ದಲ್ಲಿ ಪ್ರಮುಖ ಪಾತ್ರ ಮಾಡಿದ್ದೆ. ಆದರೆ ಆ ಚಿತ್ರ ರಿಲೀಸಾಗಲಿಲ್ಲ. ಒಂದಿಬ್...