Skip to main content

Posts

ನಾಳೆಯಿಂದ‌ ಸೈಕಲಾಜಿಕಲ್ ಥ್ರಿಲ್ಲರ್ 'ಗ್ರೀನ್' ಸಿನಿಮಾ zee5 ಒಟಿಟಿಯಲ್ಲಿ ಪ್ರಸಾರ...

ನಾಳೆಯಿಂದ‌ ಸೈಕಲಾಜಿಕಲ್ ಥ್ರಿಲ್ಲರ್ 'ಗ್ರೀನ್' ಸಿನಿಮಾ zee5 ಒಟಿಟಿಯಲ್ಲಿ ಪ್ರಸಾರ... ಕಾಡುವ ಕಥೆ 'ಗ್ರೀನ್' ಸಿನಿಮಾ ನಾಳೆಯಿಂದ‌ zee5 ಒಟಿಟಿಯಲ್ಲಿ ಸ್ಟ್ರೀಮಿಂಗ್.. ಕನ್ನಡ‌ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್ ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ.  ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಭಿನ್ನ ಕಥಾಹಂದರವಿದೆ. ಇದು ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರವಾಗಿದ್ದು, ಪ್ರೇಕ್ಷಕರ ಮನಸ್ಸಿನ ಆಳಕ್ಕೆ ಕರೆದೊಯ್ಯುತ್ತದೆ. ತನ್ನ ಇಡೀ ಬದುಕನ್ನೇ ನಿಯಂತಣ ಮಾಡುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಪ್ರಯತ್ನಿಸುವ ನಾಯಕನ ಕಥೆಯೇ ಗ್ರೀನ್. 'ಗ್ರೀನ್’ ಸಿನಿಮಾದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಡಿಂಪಿ ಫಾಧ್ಯಾ, ಆರ್ ಜೆ ವಿಕ್ಕಿ ಮತ್ತು ಶಿವ ಮಂಜು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕೆ. ಮಧುಸೂದನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಕ್ತಿ ಸ್ಯಾಕ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಗ್ರೀನ್ ಸಿನಿಮಾವನ್ನು ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣ ಮಾಡಿದ್ದಾರೆ.
Recent posts

ಚಿತ್ರೀಕರಣ ಮುಗಿಸಿದ ‘ಮಹಾಕವಿ’..

ಚಿತ್ರೀಕರಣ ಮುಗಿಸಿದ ‘ಮಹಾಕವಿ’.. ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ನಡೆಯುತ್ತಿವೆ. ‘ಮಹಾಕವಿ’ಯು ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ ಎನ್ನುವುದು ಒಂದು ವಿಶೇಷ. ‘ಮಹಾಕವಿ’ ಚಿತ್ರವು ಕನ್ನಡದ ಆದಿಕವಿಯೆಂದೇ ಪ್ರಸಿದ್ಧನಾದ ಪಂಪನ ಕಾವ್ಯಗಳನ್ನು ಆಧರಿಸಿದೆ. ಇದು ಪಂಪನ ಜೀವನ ಚರಿತ್ರೆಯಲ್ಲ. ಪಂಪನ ಪರಿಕಲ್ಪನೆಗಳ ದೃಶ್ಯರೂಪಕ. ಅಂದರೆ ಪಂಪ ಮಹಾಕವಿಯು ತನ್ನ ಕಾವ್ಯಗಳಲ್ಲಿ ಪ್ರತಿಪಾದಿಸಿದ ಪರಿಕಲ್ಪನೆಗಳಿಗೆ ಕಥನ ರೂಪ ಕೊಡಲಾಗಿದೆ. ಪಂಪ ಮಹಾಕವಿಯು ರಾಜನ ಆಸ್ಥಾನದಲ್ಲಿದ್ದೂ ಸೃಜನಶೀಲ ಸ್ವಾತಂತ್ರ್ಯವನ್ನು ಸಮರ್ಥಿಸಿಕೊಂಡು ಬರೆದ ಕವಿ. ಪ್ರಭುತ್ವ ಮತ್ತು ಸೃಜನಶೀಲ ಸ್ವಾತಂತ್ರ್ಯವನ್ನು ಕುರಿತ ಪಂಪನ ಪರಿಕಲ್ಪನೆಯು ಇಂದಿಗೂ ಪ್ರಸ್ತುತವಾಗಿದೆ. ಅಂತೆಯೇ ಕನ್ನಡ ಸಾಹಿತ್ಯದಲ್ಲಿ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಮೊಟ್ಟಮೊದಲ ಕವಿ ಪಂಪ. ‘ಆದಿಪುರಾಣ’ದಲ್ಲಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದು ಪ್ರತಿಪಾದಿಸಿದ ಪಂಪ, ‘ವಿಕ್ರಮಾರ್ಜುನ ವಿಜಯ’ದಲ್ಲಿ ಕರ್ಣನ ಪಾತ್ರದ ಮೂಲಕ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ್ದಾನೆ. ‘ಆದಿಪುರಾಣ’ದಲ್ಲಿ ಅಧಿಕಾರದ ಅಹಂಕಾರಕ್ಕೆ ವಿರೋಧ ಒಡ್ಡಿ ಯುದ್ಧದ ಬದಲು ಶಾಂತಿ ...

"ಉಡಾಳ" ಚಿತ್ರಕ್ಕೆ 25 ದಿನಗಳ ಸಂಭ್ರಮ...

"ಉಡಾಳ" ಚಿತ್ರಕ್ಕೆ 25 ದಿನಗಳ ಸಂಭ್ರಮ... ಉತ್ತರ ಕರ್ನಾಟಕದ ಭಾರಿ ದೊಡ್ಡ ಪಿಚ್ಚರ್ ಎನ್ನುವ ಟ್ಯಾಗ್ ಲೈನ್ ಮೂಲಕ ಹೊರಬಂದ ಅಪ್ಪಟ ಉತ್ತರ ಕರ್ನಾಟಕದ ಉಡಾಳ ಚಿತ್ರವು ಯಶಸ್ವಿ 25 ದಿನಗಳನ್ನು ಪೂರೈಸಿದ ಸಂಭ್ರಮವನ್ನು ಚಿತ್ರತಂಡ ಹಂಚಿಕೊಂಡಿದೆ. ಈ ಹಿಂದೆ ಪದವಿ ಪೂರ್ವ ಚಿತ್ರವನ್ನು ನಿರ್ಮಿಸಿ ಯಶಸ್ಸು ಕಂಡಿದ್ದ ದಾವಣಗೆರೆ ಮೂಲದ ರವಿ ಶಾಮನೂರು ಮತ್ತು ಯೋಗರಾಜ್ ಭಟ್ ಉಡಾಳ ಚಿತ್ರವನ್ನು ನಿರ್ಮಿಸಿ ಮತ್ತೊಮ್ಮೆ ಯಶಸ್ವಿ ಕಂಡಿದ್ದಾರೆ,  ನಾಯಕನಾಗಿ ಪೃಥ್ವಿ ಶಾಮನೂರು ತಮ್ಮ ನಟನೆ ನೃತ್ಯ ಸಾಹಸ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದು ಚಿತ್ರರಂಗದ ಭರವಸೆಯ ನಾಯಕ ನಟನಾಗಿ ಹೊರಹೊಮ್ಮಿ ಜೊತೆಗೆ ಚಿತ್ರದ ಯಶಸ್ಸಿನಿಂದ ಮುಂದಿನ ಚಿತ್ರಗಳ ಕಥೆಗಳ ಆಯ್ಕೆಯಲ್ಲಿ ಬಿಜಿಯಾಗಿದ್ದಾರೆ. ಇನ್ನು ನಿರ್ದೇಶಕ ಅಮೋಲ್ ಪಾಟೀಲ್ ಅವರಿಗೆ ಮೊದಲನೇ ನಿರ್ದೇಶನದ ಚಿತ್ರವಾಗಿದ್ದು ಮೊದಲ ಚಿತ್ರದಲ್ಲೇ ಯಶಸ್ವಿ ಕಂಡು ತಮ್ಮ ಕೆಲಸಕ್ಕೆ ಚಿತ್ರರಂಗದಲ್ಲಿ ಉತ್ತಮ ಪ್ರಶಂಸೆ ಪಡೆದುಕೊಂಡು ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ. ಇನ್ನು ಬಹುಪಾಲು ಉತ್ತರ ಕರ್ನಾಟಕದ ಕಲಾವಿದರು ತಂತ್ರಜ್ಞರು ಚಿತ್ರಕ್ಕೆ ಕೆಲಸ ಮಾಡಿದ್ದು ಇನ್ನೊಂದು ವಿಶೇಷ, ಅಮೋಲ್ ಪಾಟೀಲ್ ಮತ್ತು ವೀರೇಶ್ ಪಿಎಂ ಚಿತ್ರಕಥೆ ಸಂಭಾಷಣೆ ಬರೆದಿದ್ದು ಚಿತ್ರಕ್ಕೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸಿದ್ದಾರೆ, ಸಹ ಮತ್ತು ಪೋಷಕ ಕಲಾವಿದರ...

ಸುನಯನ "ಮೌನ ರಾಗ" ಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಸಾಥ್..

ಸುನಯನ "ಮೌನ ರಾಗ" ಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಸಾಥ್.. ಪತ್ರಕರ್ತೆ ಹಾಗೂ ವಿಮರ್ಶಕಿ ಸುನಯನ ಸುರೇಶ್ ಈಗ ನಿರ್ದೇಶಕಿಯಾಗಿದ್ದಾರೆ. ಇಪ್ಪತ್ತು ನಿಮಿಷಗಳ "ಮೌನ ರಾಗ" ಎಂಬ ಕಿರುಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಈ ಕಿರುಚಿತ್ರ ಪ್ರಶಸ್ತಿಯ ಜೊತೆಗೆ ಅಪಾರ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಇತ್ತೀಚೆಗೆ ಈ ಕಿರುಚಿತ್ರದ ವಿಶೇಷ ಪ್ರದರ್ಶನ ಬೆಂಗಳೂರಿನಲ್ಲಿ ನಡೆಯಿತು. ಅಶ್ವಿನಿ‌ ಪುನೀತ್ ರಾಜಕುಮಾರ್, ಪ್ರಿಯಾಂಕಾ ಉಪೇಂದ್ರ, ಕೆ.ಎಂ.ಚೈತನ್ಯ, ಪನ್ನಗಾಭರಣ, ಭಾವನಾ ರಾವ್, ಮೇಘನಾ ಗಾಂವ್ಕರ್, ಮಾನ್ವಿತ ಕಾಮತ್, ಪ್ರವೀಣ್ ತೇಜ್, ಶುಭ್ರ ಅಯ್ಯಪ್ಪ, ರಕ್ಷ್, ಪ್ರಭು ಮುಂಡ್ಕರ್, ದಿಶಾ ಮದನ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಸೆಲೆಬ್ರಿಟಿಗಳು "ಮೌನ ರಾಗ" ದ ವಿಶೇಷ ಪ್ರದರ್ಶನಕ್ಕೆ ಆಗಮಿಸಿ, ಸುನಯನ ಅವರ ಚೊಚ್ಚಲ ಪ್ರಯತ್ನಕ್ಕೆ ಮನಸ್ಸಾರೆ ಹಾರೈಸಿದರು. ನಂತರ ತಂಡದ ಸದಸ್ಯರು ಮಾತನಾಡಿದರು. ಕಿರುಚಿತ್ರದಲ್ಲಿ ನಟಿಸಿರುವ ನಟಿ ಶ್ರುತಿ ಹರಿಹರನ್ ಮಾತನಾಡಿ, ಸುನಯನ ಅವರು ನನಗೆ ಬಹಳ ವರ್ಷಗಳ ಪರಿಚಯ. ಈಗ ಅವರು ನಿರ್ದೇಶಕಿಯಾಗಿರುವುದು ಖುಷಿಯಾಗಿದೆ. ಹೆಣ್ಣು ಮಕ್ಕಳ ದಿನನಿತ್ಯದ ಬವಣೆಗಳನ್ನು ಸುನಯನ ಇಪ್ಪತ್ತು ನಿಮಿಷಗಳಲ್ಲಿ ಮನಮುಟ್ಟುವಂತೆ ತೋರಿಸಿದ್ದಾರೆ. ನಿರ್ದೇಶನದ ಬಗ್ಗೆ ಆಸಕ್ತ...

"ಕೊರಗಜ್ಜ" ಸಿನಿಮಾದ ಶ್ರೇಯ ಘೋಷಾಲ್ ಹಾಡಿನ ಸಾಹಿತ್ಯ ಬಿಡುಗಡೆ...!

"ಕೊರಗಜ್ಜ" ಸಿನಿಮಾದ ಶ್ರೇಯ ಘೋಷಾಲ್ ಹಾಡಿನ ಸಾಹಿತ್ಯ ಬಿಡುಗಡೆ...! ಎರಡನೆಯ ಹಾಡು ಬಿಡುಗಡೆಗೆ ಕ್ಷಣಗಣನೆ.. ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ"ಕೊರಗಜ್ಜ" ಚಿತ್ರದ ಜೀ಼ ಮ್ಯೂಸಿಕ್ ಬಿಡುಗಡೆ ಗೊಳಿಸಿದ್ದ ಗುಳಿಗಾ...ಗುಳಿಗಾ...ಹಾಡು ದೇಶಾದ್ಯಂತ ಎಬ್ಬಿಸಿದ ಧೂಳು ಇನ್ನೂ ಹಾರಾಡುತ್ತಿರುವಂತೆಯೇ, ಈಗ ಶ್ರೇಯಾ ಘೋಷಾಲ್ ಜೊತೆ ಅರ್ಮಾನ್ ಮಲಿಕ್ ಹಾಡಿರುವ ಅತ್ಯಂತ ಸುಮಧುರ ಮತ್ತು "ರಿಚ್ ಪೊಯೆಟಿಕ್" ಸಾಲುಗಳುಳ್ಳ , ನಿರ್ದೇಶಕ ಸುಧೀರ್ ಅತ್ತಾವರ್ ಬರೆದಿರುವ ಹಾಡು ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ..! ಈ ನಡುವೆ ವಿಶೇಷ ವಿದ್ಯಮಾನವೆಂಬಂತೆ,ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಕವಿ ಸುಧೀರ್ ಅತ್ತಾವರ್ ಬರೆದ ಈ ಹಾಡಿನ ಕಾವ್ಯಮಯ ಸಾಹಿತ್ಯವನ್ನು ಚಿತ್ರತಂಡವು ಮೊದಲು ಬಿಡುಗಡೆಗೊಳಿಸಿದೆ. ಇಲ್ಲಿದೆ ಈ ಅಪರೂಪದ ಸಾಹಿತ್ಯ... (ಶ್ರೇಯ ಘೋಷಲ್)   ಗಾಳಿ ಗಂಧ.....ತೀಡಿ ತಂದಾ.....  ಶಬ್ದವಿರದ ಮಾತೂ.... ! (ಅರ್ಮಾನ್ ಮಲಿಕ್):   ಕೇಳಿದಂತಾ.... ಜೋಡಿಯಿಂದಾ.....  ಮುಗ್ಧ ವಿರಹ ಹಾಡೂ....!! ಗಾಳಿ ಗಂಧ.....ತೀಡಿ ತಂದಾ.....  ಶಬ್ದವಿರದ ಮಾತೂ.... ! ( ಶ್ರೇಯ ಘೋಷಲ್ )   ಮೂಗುದಾಣ ಹಾಕಲೇನು ಪ್ರೀತಿ.....  ಸಾಕು ಗಿಣಿಯೇ..?  ಮೂರು ದಾರ ಕಟ್ಟಿ ನಾನು ಬಂಧಿ....  ಸಾಕು ಪ್ರಿಯನೇ.....! (ಅರ್...

"ಲ್ಯಾಂಡ್ ಲಾರ್ಡ್ " ನಲ್ಲಿ ದುನಿಯಾ ವಿಜಯ್ - ರಾಜ್ ಬಿ ಶೆಟ್ಟಿ ಜುಗಲ್ ಬಂದಿ...

"ಲ್ಯಾಂಡ್ ಲಾರ್ಡ್ " ನಲ್ಲಿ ದುನಿಯಾ ವಿಜಯ್ - ರಾಜ್ ಬಿ ಶೆಟ್ಟಿ ಜುಗಲ್ ಬಂದಿ... "ದಿ ರೂಲರ್" ಟೀಸರ್ ಮೂಲಕ ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯ..  ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಚಿತ್ರದ ಸರ್ವೈವರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ಈಗ ಈ ಚಿತ್ರದ "ದಿ ರೂಲರ್" ಟೀಸರ್ ಬಿಡುಗಡೆಯಾಗಿದೆ‌. "ದಿ ರೂಲರ್" ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಅಭಿನಯಿಸಿದ್ದಾರೆ. ಇದು ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ಆಗಿದೆ. "ದಿ ರೂಲರ್" ಟೀಸರ್ ನೋಡಿದ ರಾಜ್ ಬಿ ಶೆಟ್ಟಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಬಹು ನಿರೀಕ್ಷಿತ ಈ ಚಿತ್ರ 2026ರ ಜನವರಿ 23 ರಂದು ಬಿಡುಗಡೆಯಾಗುತ್ತಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.  ನಾನು ಈ ಚಿತ್ರ ಒಪ್ಪಿಕೊಳ್ಳಲು ಮೊದಲ ಕಾರಣ ನಿರ್ದೇಶಕ ಜಡೇಶ್ ಅವರು‌ ಎಂದು ಮಾತನಾಡಿದ ನಟ ರಾಜ್ ಬಿ ಶೆಟ್ಟಿ, ಏಕೆಂದರೆ ಒಬ್ಬ ನಿರ್ದೇಶಕ ಗೆಲ್ಲಲ್ಲೇಬೇಕು ಎಂದು ಬಯಸುವವನು ನಾನು. ಈ ಚಿತ್ರದಲ್ಲಿ ನನ್ನದು ಶೋಷಕ ವರ್ಗದಲ್ಲಿರುವಂ...

ಖೈದಿ ಪ್ರೇಮಿ ಚಿತ್ರಕ್ಕೆ ಮುಹೂರ್ತ..

ಖೈದಿ ಪ್ರೇಮಿ ಚಿತ್ರಕ್ಕೆ ಮುಹೂರ್ತ ..    ಉತ್ತರ ಕರ್ನಾಟಕ ಭಾಗದ ಸಾಕಷ್ಟು ಪ್ರತಿಭೆಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ‌. ಇದೀಗ ರಾಯಚೂರು ಮೂಲದ ಯುವಕರ ತಂಡವೊಂದು ವಿಭಿನ್ನ ಕಾನ್ಸೆಪ್ಡ್ ಇಟ್ಟುಕೊಂಡು ಖೈದಿಪ್ರೇಮಿ ಎಂಬ ಚಿತ್ರ ಮಾಡಲು ಹೊರಟಿದೆ. ಮರುಜನ್ಮ ಮೂವೀಸ್ ನಿರ್ಮಾಣದ ಈ ಚಿತ್ರಕ್ಕೆ ವಂಶಿ ಎಡೆದೊರೆ (ಗಧಾರ) ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ಇಬ್ಬರೂ ರಾಯಚೂರಿನವರು ಎನ್ನುವುದು ವಿಶೇಷ.   ಪ್ರೀತಿ, ಪ್ರೇಮದ ಜತೆ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಕಥಾಹಂದರ ಹೆಣೆದಿರುವ ಖೈದಿಪ್ರೇಮಿ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು. ಪ್ರಥಮ ದೃಶ್ಯಕ್ಕೆ ಥ್ರಿಲ್ಲರ್ ಮಂಜು ಕ್ಲಾಪ್ ಮಾಡಿದರೆ, ನಿರ್ದೇಶಕ ವಸಂತ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಎಂ.ತಿಲಕ್ ಈ ಚಿತ್ರದ ನಾಯಕ ಹಾಗೂ ನಿರ್ಮಾಪಕ ಕೂಡ.  ಮೂಹೂರ್ತದ ನಂತರ ಮಾತನಾಡಿದ ನಿರ್ದೇಶಕ ವಂಶಿ ಎಡೆದೊರೆ ಖೈದಿ ಪ್ರೇಮ ಇದೊಂದು ಲವ್ ಸ್ಟೋರಿಯಾದರೂ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಕಥೆ ಮಾಡಿದ್ದೇನೆ. ಕಳೆದ 4 ವರ್ಷಗಳಿಂದ ಈ ಕಥೆ ರೆಡಿ ಮಾಡಿಟ್ಟುಕೊಂಡಿದ್ದು, ತುಂಬಾ ಹೋಮ್ ವರ್ಕ್ ಮಾಡಿದ್ದೇನೆ. ರಮೇಶ್ ಭಟ್, ಥ್ರಿಲ್ಲರ್ ಮಂಜು, ಅಭಿಜಿತ್ ರಂಥ ಹಿರಿಯರ ಸಹಕಾರ ತಗೊಂಡು ಮುಂದುವರಿಯುತ್ತಿದ್ದೇನೆ. ಕಥೆಯಲ್ಲಿ ನಾವೀನ್ಯತೆ ಇದೆ, ಫೆಬ್ರವರಿಯಿಂದ ಆರಂಭಿಸಿ ...