Skip to main content

Posts

ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ.. ಇದು 12 ಇಂಡಸ್ಟ್ರಿ ಒಟ್ಟುಗೂಡಿಸುವ ಪ್ಯಾನ್ ಇಂಡಿಯಾ ವೇದಿಕೆ..

ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ..  ಇದು 12 ಇಂಡಸ್ಟ್ರಿ ಒಟ್ಟುಗೂಡಿಸುವ ಪ್ಯಾನ್ ಇಂಡಿಯಾ ವೇದಿಕೆ.. 12 ಚಲನಚಿತ್ರೋದ್ಯಮಗಳನ್ನು ಒಂದುಗೂಡಿಸುವ ಪ್ಯಾನ್-ಇಂಡಿಯಾ ವೇದಿಕೆ...  ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ ಘೋಷಣೆ.. ಇಡೀ ಚಿತ್ರೋದ್ಯಮನ್ನು ಒಂದುಗೂಡಿಸುವ ಪ್ಯಾನ್ ಇಂಡಿಯಾ ವೇದಿಕೆಯೊಂದನ್ನು ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ ಸೃಷ್ಟಿಸಿದೆ. ಇದರಲ್ಲಿ 12 ಚಿತ್ರೋದ್ಯಮಗಳು ಭಾಗಿಯಾಗುತ್ತಿವೆ.  12 ಇಂಡಸ್ಟ್ರಿ ಯಾವುವು? 1.ಹಿಂದಿ 2.ತಮಿಳು 3.ತೆಲುಗು 4.ಮಲಯಾಳಂ 5.ಕನ್ನಡ 6.ಬಂಗಾಳಿ 7.ಮರಾಠಿ 8.ಗುಜರಾತಿ 9.ಪಂಜಾಬಿ 10.ಭೋಜ್‌ಪುರಿ,  11.ಅಸ್ಸಾಮಿ  12.ಒಡಿಯಾ ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ- INCA ತನ್ನ ಚೊಚ್ಚಲ ಪ್ರಶಸ್ತಿ ದಿನಾಂಕ ಪ್ರಕಟಿಸಿದೆ. ಏಪ್ರಿಲ್ 15 ಮತ್ತು 16 ರಂದು ಮುಂಬೈನಲ್ಲಿ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಇದು ಭಾರತೀಯ ಸಿನಿಮಾಕ್ಕೆ ಐತಿಹಾಸಿಕ ಮತ್ತು ಪರಿವರ್ತನಾ ಕ್ಷಣವಾಗಿದೆ. INCA ಅನ್ನು ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಮತ್ತು SIIMA ಸಂಸ್ಥಾಪಕರಾದ ವಿಷ್ಣು ವರ್ಧನ್ ಇಂದೂರಿ ನೇತೃತ್ವದಲ್ಲಿ‌ ನಡೆಯಲಿದೆ. ಕಲ್ಯಾಣ್ ಜ್ಯುವೆಲ್ಲರ್ಸ್  ಮೊದಲ INCA ಪ್ರಶಸ್ತಿಗಳ ಪ್ರಸ್ತುತ ಪ್ರಾಯೋಜಕರಾಗಿ ಸಾಥ್ ಕೊಡುತ್ತಿದ್ದಾರೆ.‌ ಪ್ರಶಸ್ತಿ ಪ್ರವೇಶಕ್ಕಾಗಿ ಕರೆ ಮಾಡಿ.. 2025 ರ ಕ್ಯಾಲೆಂಡರ್ ವರ್ಷದಲ್ಲಿ ...
Recent posts

ಕಮಲ್ ಹಾಸನ್-ಶಿವಕಾರ್ತಿಕೇಯನ್ ಜೋಡಿಯ ಹೊಸ ಸಿನಿಮಾಗೆ ಸಿಯೋನ್ ಟೈಟಲ್ ಫಿಕ್ಸ್..

ಕಮಲ್ ಹಾಸನ್-ಶಿವಕಾರ್ತಿಕೇಯನ್ ಜೋಡಿಯ ಹೊಸ ಸಿನಿಮಾಗೆ ಸಿಯೋನ್ ಟೈಟಲ್ ಫಿಕ್ಸ್.. ಕಮಲ್ ಹಾಸನ್ ನಿರ್ಮಾಣದಲ್ಲಿ ಶಿವಕಾರ್ತಿಕೇಯನ್ ಹೊಸ ಸಿನಿಮಾದ ಟೈಟಲ್ ರಿವೀಲ್... ಸಿಯೋನ್ ಆಗಿ ಬಂದ ಅಮರನ್ ಹೀರೋ.. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ಕಮಲ್ ಹಾಸನ್ ಹಾಗೂ ಶಿವಕಾರ್ತಿಯೇನ್ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಈ ಹಿಂದೆ ಕಮಲ್ ನಿರ್ಮಿಸಿದ್ದ ಅಮರನ್ ಸೂಪರ್ ಹಿಟ್ ಕಂಡಿತ್ತು. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್ ನಾಯಕನಾಗಿ ನಟಿಸಿದ್ದರು. ಇದೀಗ ಈ ಜೋಡಿ ಸಿಯೋನ್ ಎಂಬ ಸಿನಿಮಾಗಾಗಿ ಮತ್ತೆ ಒಂದಾಗಿದ್ದಾರೆ. ರಾಜ್ ಕಮಲ್ ಇಂಟರ್ನ್ಯಾಷನಲ್   ಹಾಗೂ ಟರ್ಮಿರಿಕ್ ಮೀಡಿಯಾ ಬ್ಯಾನರ್ ನಡಿ ಕಮಲ್ ಹಾಸನ್ ಹಾಗೂ ಆರ್ ಮಹೇಂದ್ರನ್ ನಿರ್ಮಾಣದಲ್ಲಿ ಸಿಯೋನ್ ಸಿನಿಮಾ ಮೂಡಿ ಬರ್ತಿದೆ. ಶಿವಕಾರ್ತಿಕೇಯನ್ ಹುಟ್ಟುಹಬ್ಬದ ವಿಶೇಷವಾಗಿ ಗ್ಲಿಂಪ್ಸ್ ಬಿಡುಗಡೆ ಮಾಡಲಾಗಿದೆ. ಹಣೆಯಲ್ಲಿ ವಿಭೂತಿ ಧರಿಸಿ, ಕೈಯಲ್ಲಿ ಕತ್ತಿ ಹಿಡಿದು ಶಿವಕಾರ್ತಿಕೇಯನ್ ಮಾಸ್ ಅವತಾರ ತಾಳಿದ್ದಾರೆ. ಥಾಯ್ ಕಿಝವಿ ಸಿನಿಮಾ ನಿರ್ದೇಶಿಸಿರುವ ಶಿವಕುಮಾರ್ ಮುರುಗೇಶನ್ ಸಿಯೋನ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ‌. ಸಂತೋಷ್ ನಾರಾಯಣ್ ಸಂಗೀತ, ವಿವೇಕ್ ವಿಜಯಕುಮಾರ್ ಛಾಯಾಗ್ರಹಣ, ಸ್ಯಾನ್ ಲೋಕೇಶ್ ಸಂಕಲನ ಚಿತ್ರಕ್ಕಿದೆ. ಇದೇ ವರ್ಷ ಅಕ್ಟೋಬರ್ ತಿಂಗಳಲ್ಲಿ ವಿಶ್ವಾದ್ಯಂತ ಚಿತ್ರ ಬಿಡುಗಡೆ ಮಾಡಲು ಸಿನಿಮಾ ಟೀಂ ಯೋಜನೆ ಹಾಕಿಕೊಂಡಿದೆ.

ದಿ ರೈಸ್ ಆಫ್ ಅಶೋಕ ಟ್ರೇಲರ್ ಅನಾವರಣ...ಸತೀಶ್ ನೀನಾಸಂ ಸಿನಿಮಾಗೆ ಚಂದನವನದ ತಾರೆಯರು ಸಾಥ್..

ದಿ ರೈಸ್ ಆಫ್ ಅಶೋಕ ಟ್ರೇಲರ್ ಅನಾವರಣ... ಸತೀಶ್ ನೀನಾಸಂ ಸಿನಿಮಾಗೆ ಚಂದನವನದ ತಾರೆಯರು ಸಾಥ್.. ದಿ ರೈಸ್ ಆಫ್ ಅಶೋಕ ಟ್ರೇಲರ್ ಬಿಡುಗಡೆ... ಸತೀಶ್ ನೀನಾಸಂ ಚಿತ್ರಕ್ಕೆ ಸ್ಯಾಂಡಲ್ ವುಡ್ ಸ್ಟಾರ್ಸ್ ಬೆಂಬಲ.. ಟ್ರೇಲರ್ ನಲ್ಲಿ ಕಿಚ್ಚು ಹಚ್ಚಿದ ಅಶೋಕ.. ಇದೇ ತಿಂಗಳ 27ಕ್ಕೆ ಸತೀಶ್ ನೀನಾಸಂ ಸಿನಿಮಾ ರಿಲೀಸ್.. ಸತೀಶ್ ನೀನಾಸಂ ಅಭಿನಯ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 27ರಂದು ಬಹು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಿ ರೈಸ್ ಆಫ್ ಅಶೋಕ ಟ್ರೇಲರ್ ಲಾಂಚ್ ಈವೆಂಟ್​​ಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಸಾಥ್ ಕೊಟ್ಟರು. ರವಿಚಂದ್ರನ್​, ದುನಿಯಾ ವಿಜಯ್, ವಸಿಷ್ಠ ಸಿಂಹ, ಲೂಸ್ ಮಾದ ಯೋಗಿ, ದಿಗಂತ್, ನಾಗಭೂಷಣ್ ಮತ್ತು ಶಿವರಾಜ್ ಕೆ ಆರ್ ಪೇಟೆ ಮೊದಲಾದವರು ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.  ಈ ವೇಳೆ ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, ಸತೀಶ್ ಚಿತ್ರದ ಟ್ರೇಲರ್, ಹಾಡು ಯಾವುದು ಕಾಣಿಸಲಿಲ್ಲ. ನಿನ್ನ ಕಣ್ಣಲ್ಲಿ ನೀರು ಕಾಣಿಸಿತು. ಅದು ಹೊರಗಡೆ ಬರಲಿಲ್ಲ. ನೀನು ಅಲ್ಲೇ ಅರ್ಧ ಗೆದ್ದಾಯ್ತು. ಗಂಡ್ಸು ಕಣ್ಣೀರು ಹಾಕಬಾರದು...

ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್, ಮಾರ್ಚ್ ತಿಂಗಳಲ್ಲಿ ತೆರೆಗೆ..

ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್, ಮಾರ್ಚ್ ತಿಂಗಳಲ್ಲಿ ತೆರೆಗೆ..   ಮೆಜೆಸ್ಟಿಕ್, 25 ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವೀ ಪ್ರದರ್ಶನ ಕಂಡ ಚಿತ್ರ. ಇದೀಗ ಅದೇ ಹೆಸರಿನ ಮತ್ತೊಂದು ಚಿತ್ರ ನಿರ್ಮಾಣವಾಗಿದ್ದು, ಆ ಚಿತ್ರದಲ್ಲೂ ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ ಏನೇನೆಲ್ಲ ವ್ಯವಹಾರಗಳು, ದಂದೆಗಳು ನಡೆಯುತ್ತವೆ ಎಂಬುದನ್ನು ರಿಯಲ್ಲಾಗಿ ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರಕ್ಕೆ ಮೆಜೆಸ್ಟಿಕ್- -2 ಎಂಬ ಟೈಟಲ್ ಇಡಲಾಗಿದ್ದು ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಬುಧವಾರ ನೆರವೇರಿದೆ.   ಅಮ್ಮಾ ಎಂಟರ್‌ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ಬಿಗ್ ಬಜೆಟ್ ನಲ್ಲಿ ನಿರ್ಮಿಸಿರುವ ಆ ಚಿತ್ರದಲ್ಲಿ ಹಿರಿಯ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ಕುಮಾರ್ ನಾಯಕನಾಗಿ ನಟಿಸಿದ್ದಾರೆ. ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರವನ್ನು ನಿರ್ವಹಿಸಿದ್ದಾರೆ. ಅಲ್ಕದೆ ಮತ್ತೊಬ್ಬ ನಟಿ ಮಾಲಾಶ್ರೀ ಅವರು ಕೂಡ ಚಿತ್ರದಲ್ಲಿದ್ದಾರೆ. ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಅವರು ಕಾಣಿಸಿಕೊಂಡಿದ್ದಾರೆ, ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ, ಅಲ್ಲಿ ನಡೆಯುವ ವ್ಯವಹಾರಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ನಿರ್ದೇಶರು ಚಿತ್ರದಲ್ಲಿ ಹೇಳಿದ್...

ಉತ್ತರ ಕರ್ನಾಟಕ ಭಾಗದ ಮೊದಲ ವೆಬ್ ಸಿರೀಸ್ ರಾಕ್ಷಸ ಪ್ರೀಮಿಯರ್ ಶೋ..

ಉತ್ತರ ಕರ್ನಾಟಕ ಭಾಗದ ಮೊದಲ ವೆಬ್ ಸಿರೀಸ್ ರಾಕ್ಷಸ ಪ್ರೀಮಿಯರ್ ಶೋ..  ಕ್ರೈಮ್ ಸೈಕಲಾಜಿಕಲ್ ಸರಣಿ ಯಾವಾಗ, ಎಲ್ಲಿ ಸ್ಟ್ರೀಮಿಂಗ್?.. ನಾಳೆಯಿಂದ zee5ನಲ್ಲಿ ರಾಕ್ಷಸ ವೆಬ್ ಸಿರೀಸ್ ಸ್ಟ್ರೀಮಿಂಗ್... ಪ್ರತಿಷ್ಟಿತ ಒಟಿಟಿಗಳಲ್ಲಿ ಒಂದಾದ zee5 ಕನ್ನಡದಲ್ಲಿ ವೆಬ್ ಸಿರೀಸ್ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ.‌ ಈಗಾಗಲೇ ಅಯ್ಯನ ಮನೆ, ಮಾರಿಗಲ್ಲು ಸೇರಿದಂತೆ ಹಲವು ವೆಬ್ ಸರಣಿಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕಿದೆ. ಇದೀಗ ಇದೇ ತಿಂಗಳ 20ರಿಂದ zee5ನಲ್ಲಿ ರಾಕ್ಷಸ ವೆಬ್ ಸಿರೀಸ್ ಪ್ರಸಾರವಾಗಲಿದೆ. ನಟ ವಿಜಯ್ ರಾಘವೇಂದ್ರ ಅವರ ಚೊಚ್ಚಲ ವೆಬ್ ಸರಣಿ ಇದಾಗಿದೆ. ಮಲಪ್ರಭಾ ನದಿ ತೀರದ ನಿಗೂಢ ಮೊಸಳೆ ದಾಳಿಗಳ ಸುತ್ತ ಈ ಕಥೆಯನ್ನು ಹೆಣೆಯಲಾಗಿದೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ರಾಕ್ಷಸ ಪ್ರೀಮಿಯರ್ ಶೋ ಹಾಗೂ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ  Zee5 ಬ್ಯುಸಿನೆಸ್ ಹೆಡ್ ದೀಪಕ್ ತಿಮ್ಮಯ್ಯ ಮಾತನಾಡಿ, zee5 ವೆಬ್ ಸಿರೀಸ್ ಜರ್ನಿ ಶುರು ಮಾಡಿದಾಗ, ಶೃತಿ ನಾಯ್ಡು ‌ಪ್ರೊಡಕ್ಷನ್, ಪಿಆರ್ ಕೆ, ಕೆಆರ್ ಜಿ ಈಗ ತರುಣ್ ಸುಧೀರ್ ಅವರು ಸಾಥ್ ಕೊಟ್ಟಿದ್ದಾರೆ. ನಾವು ಕೇಳಿದಾಗ ಸಿರೀಸ್ ಮಾಡಲು ಮುಂದೆ ಬಂದರು. ಈ ಒಂದು ವರ್ಷ ನಾವು ಸಾಕಷ್ಟು ಕಲಿತಿದ್ದೇವೆ. ಈ ಕಲಿಯುವಿಕೆ ಇಷ್ಟು ಕೊಂಡು ಮುಂದಿನ ವರ್ಷ ಸಾಕಷ್ಟು ಜಾನರ್ ನೊಂದಿಗೆ ಬರುತ್ತಿದ್ದೇವೆ. ಸಿರೀಸ್ ಜೊತೆಗೆ ನಾನ್ ಫಿ...

"ಪಬ್ಬಾರ್"ಗೋಸ್ಕರ ಲುಕ್ ಚೇಂಜ್.. ಹಳೇ ಅಯ್ಯಪ್ಪ ಈಗ ಸ್ಪೆಷಲ್..

"ಪಬ್ಬಾರ್"ಗೋಸ್ಕರ ಲುಕ್ ಚೇಂಜ್..  ಹಳೇ ಅಯ್ಯಪ್ಪ ಈಗ ಸ್ಪೆಷಲ್.. ಪಬ್ಬಾರ್ ಸಿನಿಮಾಗೆ ಗೆಟಪ್ ಬದಲಿಸಿದ ಅಯ್ಯಪ್ಪ.. ಹೊಸ ಗೆಟಪ್ನಲ್ಲಿ ಮಿಂಚ್ತಿದ್ದಾರೆ ಸ್ಪೆಷಲ್.. 'ಪಬ್ಬಾರ್'ಗಾಗಿ 14 ವರ್ಷದ ಬಳಿಕ ಕ್ಲೀನ್ ಶೇವ್... ಖದರ್ ಲುಕ್ ನಲ್ಲಿ ಅಯ್ಯಪ್ಪ ಶರ್ಮ.. 14ವರ್ಷಗಳ ಬಳಿಕ ಪೋಲೀಸ್ ಪಾತ್ರದಲ್ಲಿ ಅಯ್ಯಪ್ಪ..ಪಬ್ಬಾರ್ ಗಾಗಿ ಗೆಟಪ್ ಚೇಂಜ್.. 'ಪಬ್ಬಾರ್'ಗಾಗಿ ಹೊಸ ಲುಕ್.. ಸ್ಮಾರ್ಟ್ SP ಆಗಿ ಕಾಣಿಸ್ತಾರೆ ಅಯ್ಯಪ್ಪ.. ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್ ಕುಮಾರ್ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಪಬ್ಬಾರ್. ಚಿತ್ರದಲ್ಲಿ ಧೀರೇನ್ ರಾಮ್ ಕುಮಾರ್ ನಾಯಕನಾಗಿ, ಅಮೃತಾ ಪ್ರೇಮ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಶಾಖಾಹಾರಿ ನಿರ್ದೇಶಕ ಸಂದೀಪ್ ಸುಂಕದ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಪಬ್ಬಾರ್ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ಕಲಾವಿದ ಅಯ್ಯಪ್ಪ ಎಂಟ್ರಿ ಕೊಟ್ಟಿದ್ದಾರೆ. ಅಯ್ಯಪ್ಪ ಪಿ ಶರ್ಮ ಪಬ್ಬಾರ್ ಸಿನಿಮಾದಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ. ಅದಕ್ಕಾಗಿ ಅವರು ಹೊಸ ಅವತಾರ ತಾಳಿದ್ದಾರೆ. ಅಯ್ಯಪ್ಪ 14 ವರ್ಷದ ಬಳಿಕ ಹೇರ್ ಕಟ್ ಮತ್ತು ಕ್ಲೀನ್ ಶೇವ್ ಮಾಡಿ ಸ್ಮಾರ್ಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉದ್ದ ಗಡ್ಡ ಬಿಟ್ಟು ತಮ್ಮ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಅವರೀಗ ಪಬ್ಬಾರ್ ಸಿನಿಮಾದ SP ಪಾತ್ರಕ್ಕಾಗಿ ಗ...

ಈ ವಾರ ತೆರೆಗೆ ಅಜೇಯ್ ರಾವ್ ಅಭಿನಯದ ಸುಂದರ ಕೌಟುಂಬಿಕ ಕಥಾನಕ "ಸರಳ ಸುಬ್ಬರಾವ್"..

ಈ ವಾರ ತೆರೆಗೆ ಅಜೇಯ್ ರಾವ್ ಅಭಿನಯದ ಸುಂದರ ಕೌಟುಂಬಿಕ ಕಥಾನಕ "ಸರಳ ಸುಬ್ಬರಾವ್".. 1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಹಾಗೂ ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿಸಿರುವ ಚಿತ್ರ "ಸರಳ ಸುಬ್ಬರಾವ್". ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ "ಸರಳ ಸುಬ್ಬರಾವ್" ಚಿತ್ರ ಈ ವಾರ ಫೆಬ್ರವರಿ 20 ರಂದು ತೆರೆಗೆ ಬರುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಪ್ರದೀಪ್ ಪದ್ಮಕುಮಾರ್ ಅವರ ಛಾಯಾಗ್ರಹಣವಿದೆ. ಬಸವರಾಜ ಅರಸ್ ಸಂಕಲನ,‌ ಅಮರ್ ಕಲಾ ನಿರ್ದೇಶನ ಹಾಗೂ ಮದನ್ - ಹರಿಣಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಅಜೇಯ್ ರಾವ್, ಮಿಶಾ ನಾರಂಗ್, ರಂಗಾಯಣ ರಘು, ನಟ ಶ್ರೀ, ಚಿತ್ಕಲಾ ಬಿರಾದಾರ್, ವಿಜಯ್ ಚಂಡೂರ್, ರಘು ರಾಮನಕೊಪ್ಪ ಮುಂತಾದವರು "ಸರಳ ಸುಬ್ಬರಾವ್" ಚಿತ್ರದಲ್ಲಿ ಅಭಿನಯಿಸಿದ್ದಾರೆ.