Skip to main content

Posts

ಇಂದು ಮ,12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ 'ಕಾಂತಾರ ಅಧ್ಯಾಯ 1' ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು.

ನಾಡಿನ ಜನತೆಗೆ ದಸರಾ ಹಬ್ಬದ  ಹಾರ್ದಿಕ ಶುಭಾಶಯಗಳು...  ಇಂದು ಮ,12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ 'ಕಾಂತಾರ ಅಧ್ಯಾಯ 1' ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು.   ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಅವರಿಂದ, ವಿಶ್ವವೇ ಎದುರು ನೋಡುತ್ತಿರುವ ಕಾಂತಾರ ಅಧ್ಯಾಯ 1' ಚಿತ್ರದ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆಯಾಯಿತು.  ಆರಂಭದಿಂದಲೂ ಸಾಕಷ್ಟು ಕುತೂಹಲ, ಕಾತುರ ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣ ಹಾಗೂ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ, ವಿಶ್ವವೇ ಎದುರು ನೋಡುತ್ತಿರುವ, ಬಹು ನಿರೀಕ್ಷಿತ "ಕಾಂತಾರ ಅಧ್ಯಾಯ 1" ಚಿತ್ರವು ಸಪ್ತ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನ ಸೆ.22ರ ಸೋಮವಾರ ಮಧ್ಯಾಹ್ನ 12:45ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಟ್ರೇಲರನ್ನು ಆಯಾ ಭಾಷೆಗಳ ಸ್ಟಾರ್ ನಟರುಗಳು ಬಿಡುಗಡೆ ಮಾಡಿದರು. ಹಿಂದಿ ಟ್ರೇಲರ್ ಅನ್ನು ಹೃತಿಕ್ ರೋಶನ್, ತಮಿಳಿನ ಟ್ರೇಲರ್ ಅನ್ನು ಶಿವಕಾರ್ತಿಕೇಯನ್, ಮಲಯಾಳಂ ಟ್ರೇಲರ್ ಅನ್ನು ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯ ಟ್ರೇಲರ್ ಅನ್ನು ಪ್ರಭಾಸ್ ಅವರು ಅನಾವರಣ ಮಾಡಿದರು.  ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ "ಕಾಂತಾರ...
Recent posts

"ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ.. ಇದೇ ಶುಕ್ರವಾರ ತೆರೆಗೆ

"ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ ..  ಇದೇ ಶುಕ್ರವಾರ ತೆರೆಗೆ    ಈಗಿನ ಕಾಲದಲ್ಲಿ ಮಹಿಳೆಯರು ಎಂಥದೇ ಆಪತ್ತಿನ ಸಂದರ್ಭ ಎದುರಾದರೂ, ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಕರಾಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ನಾರಾಯಣ ಪೂಜಾರ. ಸೆ.26ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ಮೂಲಕ ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.     ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಿರ್ಮಾಪಕರ ಅನೇಕ ಹಿತೈಷಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿದರು.   ಕರಾಸ್ತ್ರ ಕುರಿತಂತೆ ಮಾತನಾಡಿದ ನಿರ್ದೇಶಕ ನಾರಾಯಣ ಪೂಜಾರ್, ಹೆಣ್ಣು ಮಕ್ಕಳಿಗೆ ಸ್ವರಕ್ಷಣೆ ಎಷ್ಟು ಮುಖ್ಯ ಎಂಬುದನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ನನ್ನೂರು ಬ್ಯಾಡಗಿ, ಒಬ್ಬ ಕಲಾವಿದನಾಗಬೇಕೆಂದು 2006ರಲ್ಲಿ ಬೆಂಗಳೂರಿಗೆ ಬಂದೆ. ಗುರು ದೇಶಪಾಂಡೆ ಅವರಬಳಿ ಕಲಿತು ಅವರ ಸಿನಿಮಾದಲ್ಲೂ ಅಭಿನಯಿಸಿದೆ. ವಿಜಯ್ ಸೇತುಪತಿ ಅವರ ಮೊದಲ ಕನ್ನಡ ಚಿತ್ರ 'ಹೋರಾಟ'ದಲ್ಲಿ ಪ್ರಮುಖ ಪಾತ್ರ ಮಾಡಿದ್ದೆ. ಆದರೆ ಆ ಚಿತ್ರ ರಿಲೀಸಾಗಲಿಲ್ಲ. ಒಂದಿಬ್...

ಸೆಪ್ಟೆಂಬರ್ 22ರಂದು ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಭಾಸ್ ಅವರಿಂದ ಅನಾವರಣವಾಗಲಿದೆ ವಿಶ್ವವೇ ಎದುರು ನೋಡುತ್ತಿರುವ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರದ ಟ್ರೇಲರ್

ಸೆಪ್ಟೆಂಬರ್ 22ರಂದು ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಭಾಸ್ ಅವರಿಂದ ಅನಾವರಣವಾಗಲಿದೆ ವಿಶ್ವವೇ ಎದುರು ನೋಡುತ್ತಿರುವ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರದ ಟ್ರೇಲರ್  ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ಹಾಗೂ ನಿರ್ದೇಶನದ ಈ ಚಿತ್ರದ ಕನ್ನಡದ ಟ್ರೇಲರ್ ಕನ್ನಡ ಕಲಾಭಿಮಾನಿಗಳಿಂದಲೇ ಬಿಡುಗಡೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಹಾಗೂ ವಿಶ್ವವೇ ಎದುರು ನೋಡುತ್ತಿರುವ, ಬಹು ನಿರೀಕ್ಷಿತ "ಕಾಂತಾರ ಅಧ್ಯಾಯ ೧" ಚಿತ್ರ ಸಪ್ತ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಸೆಪ್ಟೆಂಬರ್ 22 ರ ಸೋಮವಾರ ಮಧ್ಯಾಹ್ನ 12:45ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಟ್ರೇಲರ್ ಅನಾವರಣವಾಗಲಿದೆ. ಹಿಂದಿ ಟ್ರೇಲರ್ ಅನ್ನು ಹೃತಿಕ್ ರೋಶನ್, ತಮಿಳಿನ ಟ್ರೇಲರ್ ಅನ್ನು ಶಿವಕಾರ್ತಿಕೇಯನ್, ಮಲಯಾಳಂನ ಟ್ರೇಲರ್ ಅನ್ನು ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯ ಟ್ರೇಲರ್ ಅನ್ನು ಪ್ರಭಾಸ್ ಅವರು ಅನಾವರಣ ಮಾಡಲಿದ್ದಾರೆ. ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ "ಕಾಂತಾರ" ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿರುವುದು ವಿಶೇಷ. ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ...

"ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ..

"ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ.. ಸದಭಿರುಚಿಯ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ಜನಪ್ರಿಯ ನಟ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ "ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ವರ್ಷ ಬೊಳ್ಳಮ್ಮ ಅಭಿನಯಿಸುತ್ತಿದ್ದಾರೆ. ತಮಿಳಿನ "ಬಿಗಿಲ್", "96" ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಹಾಗೂ ತೆಲುಗು, ಮಲೆಯಾಳಂ ಚಿತ್ರಗಳಲ್ಲೂ‌ ನಟಿಸಿರುವ ವರ್ಷ ಬೊಳ್ಳಮ್ಮ ಅವರು ನಟಿಸುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದೆ. "ಮಹಾನ್" ಚಿತ್ರದ ಬಗ್ಗೆ ವರ್ಷ ಬೊಳ್ಳಮ್ಮ ಅವರು ಈ ರೀತಿ ಹೇಳುತ್ತಾರೆ. ಮೂಲತಃ ಕನ್ನಡದವಳಾದ ನಾನು ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ "ಮಹಾನ್" ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. "ಮಾಹಾನ್" ಒಂದು ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ನಾನು ಪಿ.ಸಿ.ಶೇಖರ್ ...

"ಗೆರಿಲ್ಲಾ WAR" ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ - ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ..

"ಗೆರಿಲ್ಲಾ WAR" ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ - ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ.. ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ.. "AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ "ಗೆರಿಲ್ಲಾ WAR". ಈ ಚಿತ್ರದ ನಾಯಕರಾಗಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ "ಗೆರಿಲ್ಲಾ WAR" ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.  ಪ್ರಸ್ತುತ ಓಂಪ್ರಕಾಶ್ ರಾವ್ ನಿರ್ದೇಶನದ ಬಹು ನಿರೀಕ್ಷಿತ "ತ್ರಿಶೂಲಂ" ಚಿತ್ರದಲ್ಲೂ ಉಪೇಂದ್ರ ಅವರು ನಟಿಸಿದ್ದು, "ಗೆರಿಲ್ಲಾ WAR" ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರವಾಗಿದೆ.                          ಬೇಬಿ ಇಂಚರ ಅರ್ಪಿಸುವ, ಎನ್ ಎಸ್ ರಾವ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಹಾಗೂ ಆರ್ ವಾಸುದೇವ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಸದ್ಯ...

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಡ್ಯಾಡ್‍’ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ ಎರಡನೇ ಹಂತದ ಚಿತ್ರೀಕರಣ...

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಡ್ಯಾಡ್‍’ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ ಎರಡನೇ ಹಂತದ ಚಿತ್ರೀಕರಣ... ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ "ಡ್ಯಾಡ್" ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು.‌ ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆಯತ್ತಿದೆ. ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.   ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್‍. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.   ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚ...

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ ಬಹು ನಿರೀಕ್ಷಿತ "45" ಚಿತ್ರತಂಡ...

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ ಬಹು ನಿರೀಕ್ಷಿತ "45" ಚಿತ್ರತಂಡ... ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಹಲವು ವಿಶೇಷಗಳಿಂದ "45" ಎಲ್ಲರ ಗಮನ ಸೆಳೆದಿದೆ. ಚಿತ್ರದ ನಾಯಕರಲ್ಲೊಬ್ಬರಾದ ಉಪೇಂದ್ರ ಅವರ ಹುಟ್ಟುಹಬ್ಬದ ದಿನ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಶೇಷವಾದ ಬೈಕ್ ಅನಾವರಣ ಮಾಡುವ ಮೂಲಕ "45" ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಈ ಬೈಕ್ "45" ಚಿತ್ರದಲ್ಲಿ ಉಪೇಂದ್ರ ಅವರು ಓಡಿಸುವ ಬೈಕ್ ಆಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಟ ಉಪೇಂದ್ರ ಅವರು ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ಇಂದು ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಅನಾವರಣಗೊಂಡಿರುವ ಈ ವಿಶೇಷ ಬೈಕ್ ಅನ್ನು ನಮ್ಮ ಚಿತ್ರದಲ್...