Skip to main content

Posts

ಚಿತ್ರೀಕರಣ ಮುಗಿಸಿದ ಮತ್ತೆ ಮಳೆ ಹೊಯ್ಯುತ್ತಿದೆ..

ಚಿತ್ರೀಕರಣ ಮುಗಿಸಿದ ಮತ್ತೆ ಮಳೆ ಹೊಯ್ಯುತ್ತಿದೆ..      ತಂತ್ರಜ್ಘರು ಹೊರತುಪಡಿಸಿ, ಕಲಾವಿದರೆಲ್ಲರೂ ಹೊಸಬರಾಗಿರುವ *ಮತ್ತೆ ಮಳೆ ಹೊಯ್ಯುತ್ತಿದೆ* ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದರಿಂದ ಅನುಭವಗಳನ್ನು ಹಂಚಿಕೊಳ್ಳಲು ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ *ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ*. ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ *ಪರಮ್‌ಗುಬ್ಬಿ ನಿರ್ದೇಶನ* ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ಅವರದಾಗಿದೆ.      ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮತ್ತು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.        ನಿರ್ಮಾಪಕರ ಮಗ ಜಿ.ಲಿಖಿತ್ ಮತ್ತು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ನಾಯಕರ...
Recent posts

ಯಶಸ್ಸಿನ ಸಂಭ್ರಮದಲ್ಲಿ ಲಕ್ಷ್ಮಿ26 ಅಂತರರಾಷ್ಟ್ರೀಯ ಪ್ರಶಸ್ತಿ ಗಳಿಸಿದ ಕಿರುಚಿತ್ರ..

ಯಶಸ್ಸಿನ ಸಂಭ್ರಮದಲ್ಲಿ ಲಕ್ಷ್ಮಿ 26 ಅಂತರರಾಷ್ಟ್ರೀಯ  ಪ್ರಶಸ್ತಿ ಗಳಿಸಿದ ಕಿರುಚಿತ್ರ ..     ಕಿರುತೆರೆಯ ಸಾಕಷ್ಟು ವಿಭಾಗಗಳಲ್ಲಿ ಕೆಲಸಮಾಡಿ ಅನುಭವ ಪಡೆದ ಅಭಿಜಿತ್ ಪುರೋಹಿತ್ ಕಳೆದ ವರ್ಷ "ಲಕ್ಷ್ಮಿ" ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದರು. ಆ ಚಿತ್ರವು ಇದೀಗ ದೇಶ ವಿದೇಶಗಳ ಫಿಲಂ ಫೆಸ್ಟಿವಲ್ ಗಳಲ್ಲಿ ಭಾಗವಹಿಸಿ ಪ್ರಶಂಸೆಯ ಜತೆ ಅಭಿನಯ, ನಿರ್ದೇಶನ, ಸಂಗೀತ, ಛಾಯಾಗ್ರಹಣ ಸೇರಿದಂತೆ ನಾನಾ ವಿಭಾಗಗಳಲ್ಲಿ 27 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ಸಂಭ್ರಮವನ್ನು ನಿರ್ದೇಶಕ ಅಭಿಜಿತ್ ಮಾಧ್ಯಮದೊಂದಿಗೆ ಹಂಚಿಕೊಳ್ಳಲು ಪತ್ರಿಕಾ ಗೋಷ್ಟಿ ಆಯೋಜಿಸಿದ್ದರು.           ಇದೇ ಸಂದರ್ಭದಲ್ಲಿ ತನ್ನ ತಾಯಿಯ ಮೇಲೆ ಅಪಾರ ಪ್ರೀತಿ ಗೌರವ ಇಟ್ಟುಕೊಂಡಿರುವ ಅಭಿಜಿತ್ ತಾಯಿ ನಳಿನಿ ಅವರ 70ನೇ ಹುಟ್ಟುಹಬ್ಬವನ್ನು "ನಳಿನಿ at 70” ಅಡುಗೆ ಮನೆಯಿಂದ ರೆಡ್ ಕಾರ್ಪೆಟ್ ವರೆಗೆ" ಶೀರ್ಷಿಕೆಯಡಿ ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿದರು. ಎಐ ತಂತ್ರಜ್ಞಾನದ ಮೂಲಕ ತಾಯಿ ನಳಿನಿ ಅವರಿಗೆ ಅವರ ಪತಿ, ತಂದೆ, ತಾಯಿ ಶುಭ ಹಾರೈಸುವ ವಿಡಿಯೋ ತೋರಿಸಿದರು‌. ಈ ಅನಿರೀಕ್ಷಿತ ಅಚ್ಚರಿ ಕಂಡು ನಳಿನಿ ಅವರ‌ ಕಣ್ಣಿಂದ ಆನಂದ ಭಾಷ್ಪ ಹರಿಯಿತು.     ವೇದಿಕೆಯಲ್ಲಿ ಮಾತನಾಡಿದ ಆಭಿಜಿತ್ ಈ ಸಮಾರಂಭಕ್ಕೆ ಗಿರಿಜಮ್ಮ ಅವರೇ ಸೂಕ್ತ ವ್ಯಕ್ತಿ ಎಂದು ಅವರನ...

ಹೊಂಬಾಳೆ ಫಿಲ್ಮ್ಸ್: ಕರ್ನಾಟಕದ ಹೆಮ್ಮೆಯ, ಭಾರತದ ಮೊದಲ ಸಿನಿಮ್ಯಾಟಿಕ್ ಯೂನಿವರ್ಸ್..

ಹೊಂಬಾಳೆ ಫಿಲ್ಮ್ಸ್: ಕರ್ನಾಟಕದ ಹೆಮ್ಮೆಯ, ಭಾರತದ ಮೊದಲ ಸಿನಿಮ್ಯಾಟಿಕ್ ಯೂನಿವರ್ಸ್.. ಕನ್ನಡ ಚಿತ್ರರಂಗದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಭಾರತೀಯ ಸಿನಿಮಾರಂಗದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ. ಅವರ ಹೊಸ ಅನಿಮೇಷನ್ ಚಿತ್ರ 'ಮಹಾವತಾರ ನರಸಿಂಹ', ಅಶ್ವಿನ್ ಕುಮಾರ್ ನಿರ್ದೇಶನದಲ್ಲಿ ಮೂಡಿಬಂದು, ಭಾರತದಲ್ಲೇ ಅತಿ ಹೆಚ್ಚು ಗಳಿಸಿದ ಅನಿಮೇಷನ್ ಚಲನಚಿತ್ರ ಎಂಬ ಇತಿಹಾಸ ಬರೆದಿದೆ. ಸನಾತನ ಮೌಲ್ಯಗಳ ಜೊತೆಗೆ ಜಾಗತಿಕ ಗುಣಮಟ್ಟದ ಕಥಾ ನಿರೂಪಣೆಯನ್ನು ಬೆಸೆದು, ಈ ಚಿತ್ರ ಮಕ್ಕಳಿಂದ ದೊಡ್ಡವರವರೆಗೆ ಎಲ್ಲರ ಮನಸೂರೆಗೊಂಡಿದೆ. ಪುರಾಣ ಕಥೆಗಳಿಗೆ ಹೊಸ ದೃಶ್ಯವೈಭವ ನೀಡಿ, ಈ ಚಿತ್ರ ಎಲ್ಲರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದೆ. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಹುಟ್ಟಿದ್ದು ಕರ್ನಾಟಕದ ಮಣ್ಣಿನಲ್ಲಿ. 'ರಾಜಕುಮಾರ' ಚಿತ್ರದ ಮೂಲಕ ಯಶಸ್ಸಿನ ಹಾದಿ ಆರಂಭಿಸಿದ ಈ ಸಂಸ್ಥೆ, ತನ್ನ ಮೂಲ ಬೇರುಗಳಿಗೆ ಸದಾ ಅಂಟಿಕೊಂಡಿದೆ. ಕೌಟುಂಬಿಕ ಮೌಲ್ಯಗಳು, ಸಂಪ್ರದಾಯ ಮತ್ತು ಭಾವನಾತ್ಮಕ ಕಥೆಗಳಿಗೆ ಒತ್ತು ನೀಡುತ್ತಲೇ, ಭಾರತೀಯ ಕಥೆಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದೆ. ಕರ್ನಾಟಕದ ಹೃದಯದಿಂದ ಹೊರಟ ಈ ಸಂಸ್ಥೆ, ಇಂದು ವಿಶ್ವಾದ್ಯಂತ ಭಾರತೀಯ ಸಿನಿಮಾದ ಹೊಸ ಶಕ್ತಿಯಾಗಿ ಗುರುತಿಸಿಕೊಂಡಿದೆ. ಹೊಂಬಾಳೆ ಫಿಲ್ಮ್ಸ್ ಕೇವಲ ಒಂದೇ ರೀತಿಯ ಚಿತ್ರಗಳನ್ನು ನಿರ್ಮಿಸಿಲ್ಲ, ಬದಲಾಗಿ, ವಿಭಿನ್ನ ಯೂನಿವರ್ಸ್‌...

ಸಿತಾರ ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಲ್ಲಿ ಐತಿಹಾಸಿಕ ಸಿನಿಮಾ ನಿರ್ಮಾಣ: ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಾಯಕ..

ಸಿತಾರ ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಲ್ಲಿ ಐತಿಹಾಸಿಕ ಸಿನಿಮಾ ನಿರ್ಮಾಣ: ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಾಯಕ.. ಕನ್ನಡ, ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಣ.. ಸಾಲು ಸಾಲು ಹಿಟ್‌ ಸಿನಿಮಾಗಳನ್ನು ನೀಡುತ್ತಿರುವ ತೆಲುಗಿನ ಖ್ಯಾತ ಚಿತ್ರನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೈನ್‌ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಪ್ರಾಜೆಕ್ಟ್‌ ಜೊತೆಗೆ ಆಗಮಿಸುತ್ತಿದೆ. "ಪ್ರೊಡಕ್ಷನ್‌ ನಂಬರ್‌ 36" ಹೆಸರಿನ ಬಿಗ್‌ ಬಜೆಟ್‌ ಸಿನಿಮಾ ಘೋಷಣೆ ಮಾಡಿದೆ, ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಐತಿಹಾಸಿಕ ಆಕ್ಷನ್‌ ಡ್ರಾಮಾ ಹಿನ್ನೆಲೆಯ ಈ ಸಿನಿಮಾದಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ನಾಯಕನಾಗಿ ನಟಿಸಲಿದ್ದಾರೆ. ಚಿತ್ರದ ಅನೌನ್ಸ್‌ಮೆಂಟ್‌ ಪೋಸ್ಟರ್‌ ಸಹ ರಿಲೀಸ್‌ ಆಗಿದೆ.  "ಕಾಂತಾರ" ಸಿನಿಮಾದ ಮೂಲಕ ಭಾರತೀಯ ಚಿತ್ರರಂಗವನ್ನೇ ಬೆರಗುಗೊಳಿಸಿದ ನಟ ರಿಷಬ್‌ ಶೆಟ್ಟಿ, ಈಗ "ಕಾಂತಾರ 2" ಚಿತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಈ ನಡುವೆಯೇ ಸಿತಾರ ಎಂಟರ್‌ಟೈನ್‌ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನೆಮಾಸ್ ಜಂಟಿಯಾಗಿ ಹೊಸ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿದ್ದು, 18ನೇ ಶತಮಾನದ ಕಥೆ ಹೇಳಲು ಮುಂದಾಗಿದ್ದಾರೆ. ಈ ಐತಿಹಾಸಿಕ ಸಿನಿಮಾದ ನಿರ್ದೇಶನದ ಹೊಣೆ ಹೊತ್ತಿರುವವರು ನಿರ್ದೇಶಕ ಅಶ್ವಿನ್ ಗಂಗರಾಜು. "ಪ್ರೊಡಕ್ಷನ್‌ ನಂ 36"...

ಜೋಗಿ ನಿರ್ಮಾಪಕನ ಹೊಸ ಹೆಜ್ಜೆ..

ಜೋಗಿ ನಿರ್ಮಾಪಕನ ಹೊಸ ಹೆಜ್ಜೆ.. ಸುವರ್ಣ ಸಂಕಲ್ಪ ಅಮೃತಘಳಿಗೆ ನೇತೃತ್ವ ವಹಿಸಿಕೊಂಡ ಜೋಗಿ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್..     ಕಳೆದ ೪೦ ವರ್ಷಗಳಿಂದ ಅಶ್ವಿನಿ ಆಡಿಯೋ ಕಂಪನಿ ನಡೆಸಿಕೊಂಡು ಬರುತ್ತಿರುವ ಅಶ್ವಿನಿ ರಾಮಪ್ರಸಾದ್ ಅವರೀಗ ಕಿರುತೆರೆ ಕ್ಷೇತ್ರಕ್ಕೂ ಎಂಟ್ರಿ ಕೊಟ್ಟಿದ್ದಾರೆ. ದಶಕಗಳ ಹಿಂದೆ ಸಾವಿರಾರು ಜಾನಪದ, ಭಕ್ತಿಗೀತೆಗಳನ್ನು ತಮ್ಮ ಆಡಿಯೋ ಕಂಪನಿ ಮೂಲಕ ಜನರಿಗೆ ಕೇಳಿಸಿದ ರಾಮ್ ಪ್ರಸಾದ್ ಅವರಿಗೆ ಮೊದಲಿಂದಲೂ ಕಿರುತೆರೆ ಬಗ್ಗೆ ಆಸಕ್ತಿಯಿತ್ತು. ಆದಕ್ಕೆ ಸುವರ್ಣ ವಾಹಿನಿ ಒಂದು ವೇದಿಕೆ ಕಲ್ಪಿಸಿಕೊಟ್ಟಿದೆ.    ಶಿವಣ್ಣ, ಪ್ರೇಮ್ ಕಾಂಬಿನೇಶನ್ ನ ಜೋಗಿ ಚಿತ್ರ ನಿರ್ಮಿಸುವ ಮೂಲಕ ದಾಖಲೆ ಬರೆದ ಅಶ್ವಿನಿ ರಾಮ್ ಪ್ರಸಾದ್ ಆನಂತರವೂ ಹಲವಾರು ಯಶಸ್ವೀ ಚಲನಚಿತ್ರಗಳನ್ನು ನಿರ್ಮಿಸಿದ್ದರು. ಅಲ್ಲದೆ ಘಾರ್ಗ ಚಿತ್ರದ ಮೂಲಕ ತಮ್ಮ ಪುತ್ರನನ್ನೂ ಹೀರೋ ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ಇದೀಗ ಧಾರ್ಮಿಕ ಹಾಗೂ ವಾಸ್ತುಶಾಸ್ತ್ರದ ಹಿನ್ನೆಲೆಯ "ಸುವರ್ಣ ಸಂಕಲ್ಪ ಅಮೃತಘಳಿಗೆ" ಕಾರ್ಯಕ್ರಮ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈ ಕಾರ್ಯಕ್ರಮವನ್ನು ಕರ್ನಾಟಕ ಜ್ಯೋತಿಷ್ಯರತ್ನ ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ ಭಾಗವತ ಗುರೂಜಿಯವರು ನಡೆಸಿಕೊಡಲಿದ್ದಾರೆ. ಗಾಯಕಿಯೂ ಆದ ಅಖಿಲಾ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಆಗಸ್ಟ್ 4 ರಿಂದ ಪ್ರ...

ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾದ ಮೆಲೋಡಿ ಹಾಡು ರಿಲೀಸ್..

ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾದ ಮೆಲೋಡಿ ಹಾಡು ರಿಲೀಸ್.. ಗಡಿಮೀರಿದ ಪ್ರೇಮಕಥೆ 'ಏಳುಮಲೆ'ಯಿಂದ ಬಂತು ಮೊದಲ ಹಾಡು... ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ ಮೆಲೋಡಿ ಹಾಡು ರಿಲೀಸ್.. ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಅಂತೆಯೇ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಏಳುಮಲೆ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೊದಲ ಹಾಡು ರಿಲೀಸ್‌ ಆಗಿದೆ. ಏಳುಮಲೆ ಚಿತ್ರದ ಯಾವಾಗ ಎಂಬ ಮೆಲೋಡಿ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲಿಯೂ ಗೀತೆಯನ್ನು ಅನಾವರಣ ಮಾಡಲಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದಾರೆ. ಡಿ ಇಮ್ಮನ್ ಸಂಗೀತ ಒದಗಿಸಿದ್ದಾರೆ.  ಕರ್ನಾಟಕ - ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ಏಳುಮಲೆ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶನಾಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್‌ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ...

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ "ಪ್ರೇಮ ಕಾವ್ಯ".

 ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ "ಪ್ರೇಮ ಕಾವ್ಯ". ಜನಪ್ರಿಯ ಧಾರಾವಾಹಿಗಳ ಮೂಲಕ ಜನರ ಮನ ತಲುಪಿರುವ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ಧಾರಾವಾಹಿ " ಪ್ರೇಮ ಕಾವ್ಯ" ಆಗಸ್ಟ್ 4 ರ ಸೋಮವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಎರಡು ಜೋಡಿಗಳ ಪ್ರೇಮಕಥೆಯ ಧಾರಾವಾಹಿ "ಪ್ರೇಮ ಕಾವ್ಯ"ದಲ್ಲಿ ಪ್ರೇಮ ಪಾತ್ರದಲ್ಲಿ ಪ್ರಿಯ ಜೆ ಆಚಾರ್, ಕಾವ್ಯ ಪಾತ್ರದಲ್ಲಿ ವೈಷ್ಣವಿ ನಟಿಸುತ್ತಿದ್ದಾರೆ. "ನಮ್ಮನೆ ಯುವರಾಣಿ" ಖ್ಯಾತಿಯ ರಾಘವೇಂದ್ರ ಹಾಗೂ ವಿಕಾಸ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ರವೀನ್ ಕುಮಾರ್ ಈ ಧಾರಾವಾಹಿಯನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಧಾರಾವಾಹಿಯ ಕಲಾವಿದರು ಹಾಗೂ ನಿರ್ದೇಶಕರು ಮಾಹಿತಿ ನೀಡಿದರು.  ನಾನು ಈ ಧಾರಾವಾಹಿಯಲ್ಲಿ ಪ್ರೇಮ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ತಂದೆ, ತಾಯಿ ಹಾಗೂ ತಂಗಿ ಇದೇ ನನ್ನ ಒಂದು ಪುಟ್ಟ ಪ್ರಪಂಚ. ನಾನು ಹೆಚ್ಚು ವಿದ್ಯಾವಂತೆ ಅಲ್ಲ. ಆದರೆ ತಂಗಿಗೆ ತಾನು ಸೈಂಟಿಸ್ಟ್ ಆಗಬೇಕೆಂಬ ಅಭಿಲಾಷೆ. ಅವಳ ಕನಸಿಗೆ ಸಹಕಾರ ನೀಡುತ್ತಿರುತ್ತೇನೆ. ಜೊತೆಗೆ ಬಾಲ್ಯದ ಗೆಳೆಯ ರಾಮ್ ನನ್ನು ಪ್ರೀತಿಸುತ್ತಿರುತ್ತೇನೆ ಎಂದು ತಮ್ಮ ಪಾತ್ರದ ಬಗ್ಗೆ ನಟಿ ಪ್ರಿಯ ಜೆ ಆಚಾರ್ ಮಾಹಿತಿ ನೀಡಿದರು. ಕಾವ್ಯ ನನ್ನ ಪಾತ್ರದ ...