ಚಿತ್ರೀಕರಣ ಮುಗಿಸಿದ ಮತ್ತೆ ಮಳೆ ಹೊಯ್ಯುತ್ತಿದೆ.. ತಂತ್ರಜ್ಘರು ಹೊರತುಪಡಿಸಿ, ಕಲಾವಿದರೆಲ್ಲರೂ ಹೊಸಬರಾಗಿರುವ *ಮತ್ತೆ ಮಳೆ ಹೊಯ್ಯುತ್ತಿದೆ* ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದರಿಂದ ಅನುಭವಗಳನ್ನು ಹಂಚಿಕೊಳ್ಳಲು ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ *ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ*. ಶೃತಿ ಅನಿಲ್ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ *ಪರಮ್ಗುಬ್ಬಿ ನಿರ್ದೇಶನ* ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ಅವರದಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮತ್ತು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿರ್ಮಾಪಕರ ಮಗ ಜಿ.ಲಿಖಿತ್ ಮತ್ತು ಎರಡು ಶೇಡ್ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ನಾಯಕರ...
ಯಶಸ್ಸಿನ ಸಂಭ್ರಮದಲ್ಲಿ ಲಕ್ಷ್ಮಿ 26 ಅಂತರರಾಷ್ಟ್ರೀಯ ಪ್ರಶಸ್ತಿ ಗಳಿಸಿದ ಕಿರುಚಿತ್ರ .. ಕಿರುತೆರೆಯ ಸಾಕಷ್ಟು ವಿಭಾಗಗಳಲ್ಲಿ ಕೆಲಸಮಾಡಿ ಅನುಭವ ಪಡೆದ ಅಭಿಜಿತ್ ಪುರೋಹಿತ್ ಕಳೆದ ವರ್ಷ "ಲಕ್ಷ್ಮಿ" ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದರು. ಆ ಚಿತ್ರವು ಇದೀಗ ದೇಶ ವಿದೇಶಗಳ ಫಿಲಂ ಫೆಸ್ಟಿವಲ್ ಗಳಲ್ಲಿ ಭಾಗವಹಿಸಿ ಪ್ರಶಂಸೆಯ ಜತೆ ಅಭಿನಯ, ನಿರ್ದೇಶನ, ಸಂಗೀತ, ಛಾಯಾಗ್ರಹಣ ಸೇರಿದಂತೆ ನಾನಾ ವಿಭಾಗಗಳಲ್ಲಿ 27 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ಸಂಭ್ರಮವನ್ನು ನಿರ್ದೇಶಕ ಅಭಿಜಿತ್ ಮಾಧ್ಯಮದೊಂದಿಗೆ ಹಂಚಿಕೊಳ್ಳಲು ಪತ್ರಿಕಾ ಗೋಷ್ಟಿ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ತನ್ನ ತಾಯಿಯ ಮೇಲೆ ಅಪಾರ ಪ್ರೀತಿ ಗೌರವ ಇಟ್ಟುಕೊಂಡಿರುವ ಅಭಿಜಿತ್ ತಾಯಿ ನಳಿನಿ ಅವರ 70ನೇ ಹುಟ್ಟುಹಬ್ಬವನ್ನು "ನಳಿನಿ at 70” ಅಡುಗೆ ಮನೆಯಿಂದ ರೆಡ್ ಕಾರ್ಪೆಟ್ ವರೆಗೆ" ಶೀರ್ಷಿಕೆಯಡಿ ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿದರು. ಎಐ ತಂತ್ರಜ್ಞಾನದ ಮೂಲಕ ತಾಯಿ ನಳಿನಿ ಅವರಿಗೆ ಅವರ ಪತಿ, ತಂದೆ, ತಾಯಿ ಶುಭ ಹಾರೈಸುವ ವಿಡಿಯೋ ತೋರಿಸಿದರು. ಈ ಅನಿರೀಕ್ಷಿತ ಅಚ್ಚರಿ ಕಂಡು ನಳಿನಿ ಅವರ ಕಣ್ಣಿಂದ ಆನಂದ ಭಾಷ್ಪ ಹರಿಯಿತು. ವೇದಿಕೆಯಲ್ಲಿ ಮಾತನಾಡಿದ ಆಭಿಜಿತ್ ಈ ಸಮಾರಂಭಕ್ಕೆ ಗಿರಿಜಮ್ಮ ಅವರೇ ಸೂಕ್ತ ವ್ಯಕ್ತಿ ಎಂದು ಅವರನ...