Skip to main content

Posts

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಫೌಜಿ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ: ಡಿಸೆಂಬರ್ 3 ರಂದು ಬೆಳ್ಳಿಪರದೆ ಮೇಲೆ ಅಬ್ಬರ!

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಫೌಜಿ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ: ಡಿಸೆಂಬರ್ 3 ರಂದು ಬೆಳ್ಳಿಪರದೆ ಮೇಲೆ ಅಬ್ಬರ! ಭಾರತೀಯ ಚಿತ್ರರಂಗದ ಸ್ಟಾರ್ ನಟ ಪ್ರಭಾಸ್ ಅಭಿನಯದ, ನಿರ್ದೇಶಕ ಹನು ರಾಘವಪುಡಿ ಅವರ ಮಹತ್ವಾಕಾಂಕ್ಷೆಯ ಚಿತ್ರ 'ಫೌಜಿ'ಯ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಚಿತ್ರತಂಡವು ಆಕರ್ಷಕ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ, ಈ ಚಿತ್ರವು ಇದೇ ವರ್ಷದ ಡಿಸೆಂಬರ್ 3 ರಂದು ಪ್ರಪಂಚದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ ಎಂದು ಖಚಿತಪಡಿಸಿದೆ. 'ಅಜ್ಞಾತಪರ್ವ ಎಂಡ್ಸ್' ಎಂಬ ಕುತೂಹಲಕಾರಿ ಘೋಷಣೆಯೊಂದಿಗೆ, ಚಿತ್ರದ ನಿರ್ಮಾಪಕರು 'ದಿ ರೆಬೆಲಿಯನ್ ಬಿಗಿನ್ಸ್' ಎಂದು ಸಾರಿದ್ದಾರೆ. ಈ ಘೋಷಣೆಯು ಪ್ರೇಕ್ಷಕರಲ್ಲಿ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಭಾಸ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಸ್ಟರ್, ಚಿತ್ರದ ತೀವ್ರತೆಯನ್ನು ಎತ್ತಿ ತೋರಿಸುತ್ತದೆ. ರಕ್ತಸಿಕ್ತವಾದ ಉಡುಪಿನಲ್ಲಿ, ಸುತ್ತಲೂ ಶವಗಳ ನಡುವೆ ಕಲ್ಲಿನ ಮೇಲೆ ಕುಳಿತು ಗನ್ ಹಿಡಿದಿರುವ ಪ್ರಭಾಸ್ ಅವರ ಲುಕ್‌, ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದೆ. 'ಬಾಹುಬಲಿ'ಯ ನಂತರ ಪ್ರಭಾಸ್ ಮತ್ತೊಮ್ಮೆ ಒಂದು ಬೃಹತ್ ಪೀರಿಯಡ್ ಡ್ರಾಮಾ ಕಥೆಯೊಂದಿಗೆ ಬೆಳ್ಳಿಪರದೆಗೆ ಮರಳುತ್ತಿದ್ದಾರೆ. "ಎ ಬೆಟಾಲಿಯನ್‌ ಹೂ ಫೈಟ್ಸ್‌ ಅಲೋನ್‌" ಎ...
Recent posts

ಎಜೆ ಶೆಟ್ಟಿ ನಿರ್ದೇಶನದಲ್ಲಿ 'ಭೂರಮೆ' ವಿಡಿಯೋ ಸಾಂಗ್...

ಎಜೆ ಶೆಟ್ಟಿ ನಿರ್ದೇಶನದಲ್ಲಿ 'ಭೂರಮೆ' ವಿಡಿಯೋ ಸಾಂಗ್... ಹೊಸಬರಿಗೆ ಸಾಥ್ ಕೊಟ್ಟ ಸ್ಟಾರ್ ಡೈರೆಕ್ಟರ್ಸ್.. 'ಭೂರಮೆ' ವಿಡಿಯೋ ಸಾಂಗ್ ರಿಲೀಸ್... ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ? ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್ ಕ್ಯಾಪ್ ತೊಟ್ಟು‌ ನಿರ್ದೇಶಿಸಿರುವ ಚೊಚ್ಚಲ ಆಲ್ಬಂ ಸಾಂಗ್ ಭೂರಮೆ. ಯುವ ಪ್ರತಿಭೆಗಳಾದ ಅರ್ಥವ ವಿಶ್ವನಾಥ್ ಹಾಗೂ ಸುಷ್ಮಿತಾ ಶೆಟ್ಟಿ ನಟನೆಯ ಈ ಸಾಂಗ್ ಬಿಡುಗಡೆ ಕಾರ್ಯಕ್ರಮ AMBಯಲ್ಲಿ ನಿನ್ನೆ ಜರುಗಿತು. ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ಸ್ ಗಳಾದ ಎಪಿ ಅರ್ಜುನ್, ಚೇತನ್ ಕುಮಾರ್ ಹಾಗೂ ಪವನ್ ಒಡೆಯರ್ ವಿಶೇಷ ಅಥಿತಿಗಳಾಗಿ ಆಗಮಿಸಿ ಹೊಸಬರಿಗೆ ಸಾಥ್ ಕೊಟ್ಟರು. ಈ ಸಂದರ್ಭದಲ್ಲಿ ಯುವ ನಟ ಅಥರ್ವ ವಿಶ್ವನಾಥ್ ಮಾತನಾಡಿ, ಅರ್ಜುನ್ ಸರ್, ಪವನ್ ಸರ್ ಹಾಗೂ ಚೇತನ್ ಸರ್ ಹೊಸಬರಿಗೆ ಈ ರೀತಿ ಸಪೋರ್ಟ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಭೂರಮೆ ಇಷ್ಟು ಕ್ವಾಲಿಟಿಯಲ್ಲಿ ಬರಲು ಕಾರಣ ನನ್ನ ಎಲ್ಲಾ ಸ್ನೇಹಿತರು. ನಾನು ಈ ರೀತಿ ಹೆಜ್ಜೆ ಇಟ್ಟಾಗ ನನ್ನ ತಂದೆ ತಾಯಿ ಜೊತೆಯಾಗಿ ನಿಂತರು. ಭೂರಮೆ ಎನ್ನುವುದು ನಮ್ಮ ಕನಸು. ಸಿನಿಮಾ ಮಾಡಲು ಹೊರಟಿರುವ ನಾವು ತೆಗೆದುಕೊಂಡು ಮೊದಲ ಹೆಜ್ಜೆ ಇದು. ಈ ಸಾಂಗ್ ಗಾಗಿ ಎಜೆ ಶೆಟ್ಟಿಯವರು ಸಾಕಷ್ಟು ವರ...

ರುಕ್ಮಿಣಿ ರಾಧಾಕೃಷ್ಣ 2 ಹಾಡುಗಳ ಬಿಡುಗಡೆ..

ರುಕ್ಮಿಣಿ ರಾಧಾಕೃಷ್ಣ 2 ಹಾಡುಗಳ ಬಿಡುಗಡೆ..    ಉಮೇಶ್ ಫಿಲಂಸ್ ಲಾಂಛನದಲ್ಲಿ ಎನ್. ಹನುಮಂತರಾಜು, ಎನ್.ಹೆಚ್.ಉಮೇಶ್ ನಿರ್ಮಿಸುತ್ತಿರುವ 'ರುಕ್ಮಿಣಿ ರಾಧಾಕೃಷ್ಣ ಚಿತ್ರಕ್ಕೆ ಪ್ರಾಣ್ ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ. ಸುನಾದ್ ಗೌತಂ ಅವರ ಸಂಗೀತ ನಿರ್ದೇಶನವಿರುವ ೨ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್, ಪಾರು ಖ್ಯಾತಿಯ ಮೋಕ್ಷಿತಾ ಪೈ, ರಿಯಾ ಸಚ್ ದೇವ್ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  ಆಡಿಯೋ ರಿಲೀಸ್ ಮಾಡಿದ ಲಹರಿ ವೇಲು ಮಾತನಾಡುತ್ತ ಈ ಚಿತ್ರದಲ್ಲಿ ೫ ಸುಂದರ ಹಾಡುಗಳಿದ್ದು, ಅವುಗಳನ್ನು ಅಷ್ಟೇ ಅದ್ಭುತವಾಗಿ ಪಿಚ್ಚರೈಜೇಷನ್ ಮಾಡಿದ್ದಾರೆ. ನಾನು ಕೂಡ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದರು. ಸಾಹಿತಿ ಕೆ.ಕಲ್ಯಾಣ್ ಮಾತನಾಡಿ ನಿರ್ಮಾಪಕರಲ್ಲಿರುವ ಸಿದ್ದತೆ, ನಿರ್ದೇಶಕರಲ್ಲಿರುವ ಬದ್ದತೆ ಹಾಡುಗಳಲ್ಲಿ ಎದ್ದು ಕಾಣುತ್ತದೆ. ನಾಯಕಿ ಪಾತ್ರಕ್ಕೆ ತಮಿಳು ಹಿನ್ನೆಲೆ ಇರುತ್ತದೆ. ಹಾಗಾಗಿ ತಮಿಳು, ಕನ್ನಡ ಸೇರಿಸಿ ಒಂದು ಹಾಡನ್ನು ರಚಿಸಿದ್ದೇನೆ ಎಂದರು.             ನಾಯಕ ಭರತ್ ಕುಮಾರ್ ಮಾತನಾಡುತ್ತ ಲಹರಿ ವೇಲು ಅವರ ಬಳಿ ಹೋದಾಗ ಬಹಳ ಅರ್ಥ ಪೂರ್ಣವಾದ ಸಾಲುಗಳನ್ನು ಹಾಕಿದ್ದೀರಿ ಎಂದು ಪ್ರಶಂಸಿಸಿದರು. ಅಲ್ಲದೆ ಒಳ್ಳೆಯ ಮೊತ್ತಕ್ಕೆ ಆಡಿಯೋ ಮಾಡಿಕೊಟ್ಟರು. ೨ ಭಾಷೆಯ ...

ಕರ್ನಾಟಕ ಅರಸು ಮತ್ತು ರಾಜುಕ್ಷತ್ರಿಯ ಪ್ರತಿಷ್ಠಾನ ಪ್ರತಿಭಾ ಪುರಸ್ಕಾರ ಸಮಾರಂಭ..

ಕರ್ನಾಟಕ ಅರಸು ಮತ್ತು ರಾಜುಕ್ಷತ್ರಿಯ ಪ್ರತಿಷ್ಠಾನ ಪ್ರತಿಭಾ ಪುರಸ್ಕಾರ ಸಮಾರಂಭ.. ಶ್ರೀಮನ್ ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅರಸು ಮತ್ತು ರಾಜುಕ್ಷತ್ರಿಯ ಪ್ರತಿಷ್ಠಾನ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದ ಕಲಾ ದಂಪತಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಅವರನ್ನು ಸನ್ಮಾನಿಸಲಾಯಿತು, ಕಂಠೀರವಾ ಸ್ಟುಡಿಯೋ ಮಾಜಿ ಅಧ್ಯಕ್ಷರು ಶ್ರೀಮತಿ ವಿಜಯ ಲಕ್ಷ್ಮೀ ಅರಸು ಹಾಗೂ ತಿಪಟೂರು ಮಾಧ್ಯಮ ಸಂಚಾಲಕರು ಶ್ರೀ ದಯಾನಂದ ಸಾಗರ್ ಇದ್ದರು.

"ಲಂಕೆ" ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಅವರ ಮುಂದಿನ ಚಿತ್ರ "ಡೀಟಾಕ್ಸ್"...

"ಲಂಕೆ" ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಅವರ ಮುಂದಿನ ಚಿತ್ರ "ಡೀಟಾಕ್ಸ್"...  ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರದ ಪ್ರಮುಖಪಾತ್ರದಲ್ಲಿ ಬಹಭಾಷಾ ನಟ ಕಿಶೋರ್ ಕುಮಾರ್..   ಈ ಹಿಂದೆ "ಲಂಕೆ" ಚಿತ್ರವನ್ನು ನಿರ್ದೇಶಿಸಿದ್ದ, "ಬಣ್ಣಬಣ್ಣದ ಲೋಕ" ಚಿತ್ರದಲ್ಲಿ ನಟನೆಯನ್ನೂ ಮಾಡಿದ್ದ ರಾಮಪ್ರಸಾದ್ ದಾಸಪ್ಪ ನಿರ್ದೇಶನದ ಎರಡನೇ ಚಿತ್ರ "ಡೀಟಾಕ್ಸ್". ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.                 ನಾನು ಸಾಮಾನ್ಯವಾಗಿ ಚಿತ್ರ ಮುಗಿದ ಮೇಲೆ ಚಿತ್ರದ ಕುರಿತು ಮಾತನಾಡುತ್ತೇನೆ. ಏಕೆಂದರೆ ನಾವು ಮಾತನಾಡಬಾರದು. ನಮ್ಮ ಕೆಲಸ ಮಾತನಾಡಬೇಕು ಎಂಬುದರಲ್ಲಿ ನಂಬಿಕೆ ಇಟ್ಟಿರುವವನು ನಾನು. ಈ ಚಿತ್ರದ ಚಿತ್ರೀಕರಣ ಕೂಡ ಈಗ ಮುಕ್ತಾಯ ಹಂತ ತಲುಪಿದೆ. ಸೆಪ್ಟೆಂಬರ್ ಕೊನೆಯಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಇನ್ನೂ, "ಡೀಟಾಕ್ಸ್" ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಏಳರಿಂದ ಎಪ್ಪತ್ತರ ವಯಸ್ಸಿನ ಹ...

‘ನಾಗಬಂಧಂ’ ಮೂಲಕ ನಭಾ ನಟೇಶ್ ಭರ್ಜರಿ ಕಮ್‌ಬ್ಯಾಕ್: ‘ಸ್ವಯಂಭು’ ಚಿತ್ರದ ಮೇಲೆ ಹೆಚ್ಚಿದ ನಿರೀಕ್ಷೆ..

‘ನಾಗಬಂಧಂ’ ಮೂಲಕ ನಭಾ ನಟೇಶ್ ಭರ್ಜರಿ ಕಮ್‌ಬ್ಯಾಕ್: ‘ಸ್ವಯಂಭು’ ಚಿತ್ರದ ಮೇಲೆ ಹೆಚ್ಚಿದ ನಿರೀಕ್ಷೆ.. ಕನ್ನಡತಿ, ಪಟಾಕಿ ಪೋರಿ ನಭಾ ನಟೇಶ್ ಸದ್ಯ ಟಾಲಿವುಡ್ ಮತ್ತು ಬಾಲಿವುಡ್ ಅಂಗಳದಲ್ಲಿ ಭರ್ಜರಿ ಸೌಂಡು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ಅವರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ನಾಗಬಂಧಂ’ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದ್ದು, ನಭಾ ಅವರ ಅಭಿನಯ ಮತ್ತು ನೃತ್ಯಕ್ಕೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಹಾಗೂ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಮೇಲ್ನೋಟಕ್ಕೆ ಇದೊಂದು ಸಂಪೂರ್ಣ ಆಧ್ಯಾತ್ಮಿಕ ಹಿನ್ನೆಲೆಯ ಸಿನಿಮಾ ಎಂದು ಅನಿಸಿದರೂ, ಕಮರ್ಷಿಯಲ್ ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಮನರಂಜನಾತ್ಮಕ ಅಂಶಗಳೂ ಈ ಚಿತ್ರದಲ್ಲಿವೆ. ಬ್ರೇಕ್‌ನ ನಂತರ ಕಮ್‌ಬ್ಯಾಕ್ ಮಾಡಿದ ನಟಿ ವರ್ಷಗಳ ಹಿಂದೆ ನಭಾ ನಟೇಶ್ ಅವರಿಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಅವರ ಎಡ ಭುಜದ ಮೂಳೆ ಮುರಿದು ಗಂಭೀರವಾದ ಪೆಟ್ಟಾಗಿತ್ತು. ಇದಕ್ಕಾಗಿ ಅವರು ಪದೇ ಪದೇ ಸರಣಿ ಶಸ್ತ್ರಚಿಕಿತ್ಸೆಗಳಿಗೂ ಒಳಗಾಗಬೇಕಾಯಿತು. ಗಾಯದ ತೀವ್ರತೆಯಿಂದಾಗಿ ಸುದೀರ್ಘ ಕಾಲ ಚೇತರಿಸಿಕೊಳ್ಳುತ್ತಿದ್ದ ಅವರು, ಅನಿವಾರ್ಯವಾಗಿ ಚಿತ್ರರಂಗದಿಂದ ಕೆಲವು ಕಾಲ ಸಂಪೂರ್ಣ ದೂರ ಉಳಿದಿದ್ದರು. ಇದೀಗ ಎಲ್ಲ ನೋವುಗಳನ್ನು ಮೆಟ್ಟಿ ನಿಂತು ‘ನಾಗಬಂಧಂ’ ಮೂಲಕ ಭರ್ಜರಿ ಸಕ್ಸಸ್‌ ಜೊತೆಗೆ ಕಮ್‌ಬ್ಯಾಕ್ ಮಾಡಿರುವ ನಭಾಗೆ, ಪ್ರೇಕ್ಷಕರು ನೀಡ...

ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ "ಫಾರೆವರ್"ಗೆ ಅದ್ದೂರಿ ಚಾಲನೆ..

ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ "ಫಾರೆವರ್"ಗೆ ಅದ್ದೂರಿ ಚಾಲನೆ.. ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭಕೋರಿದ ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾ..  ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಲೂಸ್ ಮಾದ ಯೋಗಿ ಅಭಿನಯದ 51 ನೇ ಚಿತ್ರ "ಫಾರೆವರ್". ಸುಪ್ರೀಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಎಂ.ವೆಂಕಟನಾರಾಯಣ್(ಠಾಗೋರ್ ಕೃಷ್ಣ) ನಿರ್ಮಾಣದ, "ಚಂದ್ರಿಕ" ಖ್ಯಾತಿಯ ಯೋಗೇಶ್ ಎಂ ನಿರ್ದೇಶಿಸುತ್ತಿರುವ "ಫಾರೆವರ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಆರಂಭ ಫಲಕ ತೋರಿದರು. ಶಾಸಕ ಕೃಷ್ಣಪ್ಪ ಅವರು ಕ್ಯಾಮೆರಾ ಚಾಲನೆ ಮಾಡಿದರು. "ನಾಗರಹಾವು" ಚಿತ್ರದ ನಿರ್ಮಾಪಕ‌ ಸಾಜಿದ್ ಖುರೇಶಿ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಿದರು. ಗಣ್ಯರೆಲ್ಲರು ಸೇರಿ ಟ್ಯಾಂಕರ್ ಮೇಲಿದ್ದ ಶೀರ್ಷಿಕೆಯನ್ನು ಅನಾವರಣ ಮಾಡಿದ್ದು ವಿಶೇಷವಾಗಿತ್ತು. ಚಿತ್ರರಂಗ ಸಾಕಷ್ಟು ಗಣ್ಯರು ಹಾಗೂ ಸಹಸ್ರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.          ನಾನು ಹಾಗೂ ಧ್ರುವ ಸರ್ಜಾ ಒಂದೇ ಸ್ಕೂಲ್ ನಲ್ಲಿ ಓದಿದವರು. ಮೆಚ್ಚಿನ ಗೆಳೆಯ ಅವರು. ಅವರು ಬಂದು ನಮ್ಮ ಚಿತ್ರಕ್ಕೆ ಕ್ಲಾಪ್ ಮಾಡಿದ್ದು ಖುಷಿಯಾ...