Skip to main content

Posts

ಟ್ರೇಲರ್ ನಲ್ಲೇ ಗಮನ ಸೆಳೆದ "ಕ್ಷಮೆಯಿರಲಿ ತಂದೆ"..

ಟ್ರೇಲರ್ ನಲ್ಲೇ ಗಮನ ಸೆಳೆದ "ಕ್ಷಮೆಯಿರಲಿ ತಂದೆ"..   ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ...  ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರಕ್ಕೆ " ಕ್ಷಮೆಯಿರಲಿ ತಂದೆ" ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿ ಜೂನ್ 12ರಂದು ತೆರೆಗೆ ಬರಲು‌ ಸಿದ್ದವಾಗಿರುವ ಈ ಚಿತ್ರದ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ರಾಮಕೃಷ್ಣ (ಮೇಕಪ್) ಮುಖ್ಯ ಅತಿಥಿಗಳಾಗಿ ಆಗಮಿಸಿ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಅನಾವರಣ ಮಾಡಿದರು. ಚಿತ್ರದ ಟ್ರೇಲರ್ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ. ಎಂ ಎನ್ ಸುರೇಶ್ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಗೆಲ್ಲಲಿ ಎಂದು ಅತಿಥಿಗಳು ಹಾರೈಸಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ಸಮಾರಂಭಕ್ಕೆ ಆಗಮಿಸಿದ ಅತಿಥಿಗಳಿಗೆ ಧನ್ಯವಾದ ತಿಳಿಸಿ ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಹ...
Recent posts

'ಹಲ್ಕಾ ಡಾನ್' ಅಂಗಳಕ್ಕೆ ಎಂಟ್ರಿ ಕೊಟ್ಟ ಬಹುಭಾಷಾ ನಟ ಜಾನ್ ವಿಜಯ್..

'ಹಲ್ಕಾ ಡಾನ್' ಅಂಗಳಕ್ಕೆ ಎಂಟ್ರಿ ಕೊಟ್ಟ ಬಹುಭಾಷಾ ನಟ ಜಾನ್ ವಿಜಯ್.. 'ಟಗರು’, ‘ಸಲಗ’ ಹಾಗೂ ‘ಯುಐ’ ಚಿತ್ರಗಳನ್ನು ನಿರ್ಮಿಸಿರುವ ಕೆ.ಪಿ.ಶ್ರೀಕಾಂತ್ 'ಹಲ್ಕಾ ಡಾನ್' ಎಂಬ ಮತ್ತೊಂದು ಚಿತ್ರ ನಿರ್ಮಾಣ ಮಾಡುತ್ತಿರುವುದು ಗೊತ್ತಿರುವ ಸಂಗತಿ. ವೀನಸ್ ಎಂಟರ್‌ಟೈನರ್ ಬ್ಯಾನರ್ ಅಡಿಯಲ್ಲಿ‌ ಮೂಡಿಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದೆ. ಈ ಸಿನಿಮಾದಲ್ಲಿ ಪ್ರಮೋದ್ ನಾಯಕನಾಗಿ, ಅಮೃತಾ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಹಲ್ಕಾ ಡಾನ್ ಅಂಗಳಕ್ಕೆ ಬಹುಭಾಷಾ ನಟ ಜಾನ್ ವಿಜಯ್ ಎಂಟ್ರಿ ಕೊಟ್ಟಿದ್ದಾರೆ. ತಮಿಳು, ತೆಲುಗು ಹಾಗೂ ಹಿಂದಿಯ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಜಾನ್ ವಿಜಯ್ ಹಲ್ಕಾ ಡಾನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಂದಹಾಗೇ ಜಾನ್ ಈ‌ ಹಿಂದಿ ಪೃಥ್ವಿ ಹಾಗೂ ಗಜಕೇಸರಿ‌ ಸಿನಿಮಾಗಳಲ್ಲಿ ನಟಿಸಿದ್ದರು. ಇದೀಗ ಬಹಳ ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಸ್ಪೆಷಲ್ ಪೋಸ್ಟರ್ ಮೂಲಕ ಜಾನ್ ವಿಜಯ್ ಅವರನ್ನು ಚಿತ್ರತಂಡ ಸ್ವಾಗತಿಸಿದೆ. ಕೂಲಿಂಗ್ ಗ್ಲಾಸ್ ಹಾಕಿ, ಸಿಗರೇಟ್ ಸಿದುತ್ತಾ ರಗಡ್ ಆಗಿ ಜಾನ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಚಲ ಈ ಸಿನಿಮಾಗೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಸಿನಿಮಾಗೆ ‘ಸಾಯಿ ಕುಮಾರ್‌ ಫ್ಯಾನ್‌’ ಎಂಬ ಅಡಿಬರಹವಿದ್ದು, ಸಾಯಿಕುಮಾರ್‌ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ...

ಬೆಂಗಳೂರಿನಲ್ಲಿ 'ಪೆದ್ದಿ' ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ..

ಬೆಂಗಳೂರಿನಲ್ಲಿ 'ಪೆದ್ದಿ' ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ.. ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ ಬೆಂಗಳೂರಿನಲ್ಲಿ ಸಿನಿಮಾದ ಪ್ರಚಾರ ನಡೆದಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿ ಗೋಷ್ಟಿ ನಡೆಯಿತು. ನಟ ರಾಮ್ ಚರಣ್ ತೇಜಾಗೆ ನಟಿ ಜಾಹ್ನವಿ ಕಪೂರ್ ಹಾಗೂ ಈ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿರುವ ಶಿವರಾಜ್ ಕುಮಾರ್ ಸಾಥ್ ನೀಡಿದರು. ನಟ ರಾಮ್ ಚರಣ್ ತೇಜಾ ಮಾತನಾಡಿ, ಪೆದ್ದಿ ಸಿನಿಮಾದಲ್ಲಿ ಶಿವಣ್ಣ ಸಾರ್ ನನ್ನ ಗುರು ಪಾತ್ರ ಮಾಡಿದ್ದಾರೆ. ಅವರು ಈ ಪಾತ್ರ ಮಾಡಿದ್ದು ನನಗೆ ಬಹಳ ಖುಷಿಯಾಯಿತು. ಯಾಕೆಂದರೆ ಅವರು ಬಿಟ್ಟು ಬೇರೆಯವರು ಮಾಡಿದ್ರೆ ಅಷ್ಟು ಚೆನ್ನಾಗಿ ಇರ್ತಾ ಇರಲಿಲ್ಲ. ಇವತ್ತು ಈ ಕಾರ್ಯಕ್ರಮಕ್ಕೆ ಶಿವಣ್ಣ ಸರ್ ಬಂದಿರೋದಿಕ್ಕೆ ನನಗೆ ಬಹಳ ಸಂತೋಷ ಆಗುತ್ತಿದೆ. ಅಷ್ಟೇ ಅಲ್ಲದೆ ನಮ್ಮ ಚಿತ್ರದ ನಿರ್ದೇಶಕ ಬುಚ್ಚಬಾಬು, ಜಾಹ್ನವಿ ಕಪೂರ್, ಜಗಪತಿ ಬಾಬು, ಬೊಮ್ಮನ್ ಇರಾನಿ ಸೇರಿದಂತೆ ಸಾಕಷ್ಟು ಕಲಾವಿದರು ಇದ್ದಾರೆ. ಈ ಚಿತ್ರವನ್ನ ಇದೇ ಜೂನ್ 4ಕ್ಕೆ ರಿಲೀಸ್ ಆಗುತ್ತಿದೆ ಅಂತಾ ರಾಮ್ ಚರಣ್ ತೇಜಾ ಅಭಿಮಾನಿಗಳಿಗೆ ಮನವಿ ಮಾಡಿಕೊಂಡರು. ಬಳಿಕ ಮಾತನಾಡಿದ ಶಿವರಾಜ್ ಕುಮಾರ್, ಚಿರಂಜೀವಿ ಸರ್ ಕುಟುಂಬಕ್...

ಲೋ ನವೀನ ತಂಡಕ್ಕೆ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅಭಿನಂದನೆ..

ಲೋ ನವೀನ ತಂಡಕ್ಕೆ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅಭಿನಂದನೆ.. ಬೆಂಗಳೂರು : ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿರುವ ಲೋ ನವೀನ ಸಿನಿಮಾಗೆ ಇದೀಗ ದೊಡ್ಮನೆ ಕುಟುಂಬದಿಂದಲೂ ಪ್ರಶಂಸೆ ವ್ಯಕ್ತವಾಗಿದೆ. ಚಿತ್ರವನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, ಸಿನಿಮಾ ತಂಡದೊಂದಿಗೆ ದೀರ್ಘಕಾಲ ಚರ್ಚೆ ನಡೆಸಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಚಿತ್ರದ ಕಥೆ, ಸಹಜ ಅಭಿನಯ ಹಾಗೂ ಮನರಂಜನಾತ್ಮಕ ನಿರೂಪಣೆಯ ಬಗ್ಗೆ ಮಾತನಾಡಿದ ಅವರು, “ಸರಳ ಕಥೆಯನ್ನು ಜನರ ಮನಸ್ಸಿಗೆ ತಲುಪುವ ರೀತಿಯಲ್ಲಿ ಹೇಳಿರುವುದು ಚಿತ್ರದ ದೊಡ್ಡ ಶಕ್ತಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟ ನವೀನ್ ಸಜ್ಜು ಹಾಗೂ ಚಿತ್ರತಂಡದ ಪರಿಶ್ರಮವನ್ನು ಶ್ಲಾಘಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, ಮುಂದಿನ ದಿನಗಳಲ್ಲಿ ಚಿತ್ರದ ಬೆಳವಣಿಗೆ ಹೇಗಿರಬೇಕು, ಯಾವ ರೀತಿಯ ಹೆಜ್ಜೆ ಇಡಬೇಕು ಎಂಬುದರ ಕುರಿತು ಸಹ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಮಂಡ್ಯ ಶೈಲಿಯ ಭಾಷೆ ಮತ್ತು ನೈಜ ಜೀವನಕ್ಕೆ ಹತ್ತಿರವಾಗಿರುವ ಪಾತ್ರಗಳು ಚಿತ್ರದ ವಿಶೇಷತೆ ಎಂದು ಹೇಳಿದ ಅವರು, “ಕನ್ನಡ ಚಿತ್ರರಂಗಕ್ಕೆ ನಿಮ್ಮಂತ ಪ್ರತಿಭಾವಂತ ಯುವ ಕಲಾವಿದರು ಅಗತ್ಯ” ಎಂದು ತಂಡಕ್ಕೆ ಶುಭ ಹಾರೈಸಿದ್ದಾರೆ. ಸಿನಿಮಾ ಬಿಡುಗಡೆಯಾದ ನಂತರ ದಿನದಿಂದ ದಿನಕ್ಕೆ ಪ್ರೇಕ್ಷಕರ ಮೆಚ್ಚುಗೆ ಹೆಚ್ಚುತ್ತಿರುವ ನಡುವೆ, ದೊಡ್ಮನೆ ಕುಟುಂಬದಿಂದ ಬಂದ ಈ ಪ್ರಶಂಸೆ ಲೋ ನ...

ರಾಯರ ದಯೆಯಿಂದ ಯಶಸ್ವಿಯಾಗಿ ಪೂರ್ಣಗೊಂಡಿದೆ "NH 66" ಚಿತ್ರದ ಚಿತ್ರೀಕರಣ...

ರಾಯರ ದಯೆಯಿಂದ ಯಶಸ್ವಿಯಾಗಿ ಪೂರ್ಣಗೊಂಡಿದೆ "NH 66" ಚಿತ್ರದ ಚಿತ್ರೀಕರಣ... ರಾಯರ ದಯೆಯಿಂದ "NH66" ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ... ಮಂಗಳೂರು ಮತ್ತು ಮುಂಬೈ ನಡುವಿನ ಅನೇಕ ಸ್ಥಳಗಳಲ್ಲಿ ವ್ಯಾಪಿಸಿರುವ ವ್ಯಾಪಕ ಶೂಟಿಂಗ್ ಶೆಡ್ಯೂಲ್ ನಂತರ, ಇಡೀ ಪ್ರಧಾನ ಛಾಯಾಗ್ರಹಣವು ಈಗ ಮುಕ್ತಾಯಗೊಂಡಿದೆ. ಕಳೆದ ತಿಂಗಳು ರಾಯರ ಸನ್ನಿಧಿಯಲ್ಲಿ ಈ ಚಿತ್ರಕ್ಕೆ ಚಾಲನೆ ದೊರಕಿತ್ತು. ಈ ಕಥೆಯನ್ನು ಜೀವಂತಗೊಳಿಸಲು ಅವಿಶ್ರಾಂತವಾಗಿ ಶ್ರಮಿಸಿದ ಪ್ರತಿಭಾನ್ವಿತ ಪಾತ್ರವರ್ಗ ಪ್ರಮೋದ್ ಶೆಟ್ಟಿ, ರಾಜೇಶ್ ನಟರಂಗ, ಶ್ರುತಿ ಹರಿಹರನ್ ಮತ್ತು ತಂಡವನ್ನು ಈ ಚಿತ್ರವು ಒಟ್ಟುಗೂಡಿಸುತ್ತದೆ. ನಿರ್ದೇಶಕ ಮತ್ತು ನಿರ್ಮಾಪಕ ಮಂಜುನಾಥ ಟಿ ಆರ್ ಅವರ ನಾಯಕತ್ವದಲ್ಲಿ, ಈ ಚಿತ್ರವು ಪ್ರೇಕ್ಷಕರಿಗೆ ಆಕರ್ಷಕವಾದ ಸಿನಿಮೀಯ ರೋಡ್ ಥ್ರಿಲ್ಲರ್ ಕಥಾ ಅನುಭವವನ್ನು ನೀಡುವ ಭರವಸೆ ನೀಡುತ್ತದೆ ಎಂದು ಹೇಳುತ್ತಾರೆ.  "ಈ ಪ್ರಧಾನ ಛಾಯಾಗ್ರಹಣವು ಉತ್ಸಾಹ, ಸಮರ್ಪಣೆ ಮತ್ತು ಒಳಗೊಂಡಿರುವ ಪ್ರತಿಯೊಬ್ಬರ ಕಠಿಣ ಪರಿಶ್ರಮದಿಂದ ತುಂಬಿದ ಅದ್ಭುತ ಪ್ರಯಾಣವಾಗಿದೆ. ಈ ಮೂಲಕ ನಾನು ಅವರಿಗೆ ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಧನ್ಯವಾದ ಹೇಳುತ್ತೇನೆ ಎನ್ನುತ್ತಾರೆ ನಿರ್ದೇಶಕ ಮಂಜುನಾಥ ಟಿ ಆರ್. ಪೋಸ್ಟ್-ಪ್ರೊಡಕ್ಷನ್‌ಗೆ ಹೋಗಲು ನಾವು ಉತ್ಸುಕರಾಗಿದ್ದೇವೆ ಮತ...

ಮೇ 30 ಕ್ರೇಜಿಸ್ಟಾರ್ ರವಿಚಂದ್ರನ್ ಹುಟ್ಟುಹಬ್ಬದಂದು ಅದ್ದೂರಿಯಾಗಿ ನೆರವೇರಲಿದೆ ‘ಕ್ರೇಜಿ - ಬ್ರಹ್ಮ’ ರೀಯೂನಿಯನ್ ಮೆಗಾ ಇವೆಂಟ್..

ಮೇ 30 ಕ್ರೇಜಿಸ್ಟಾರ್ ರವಿಚಂದ್ರನ್ ಹುಟ್ಟುಹಬ್ಬದಂದು ಅದ್ದೂರಿಯಾಗಿ ನೆರವೇರಲಿದೆ ‘ಕ್ರೇಜಿ - ಬ್ರಹ್ಮ’ ರೀಯೂನಿಯನ್ ಮೆಗಾ ಇವೆಂಟ್.. ಸಮಾರಂಭದ ಸ್ಥಳದ ಮುಂದೆ ರವಿಚಂದ್ರನ್-ಹಂಸಲೇಖರ 80 ಅಡಿ ಕಟೌಟ್ ಅನಾವರಣ.. ಕನ್ನಡ ಚಿತ್ರರಂಗ ಕಂಡ ಅದ್ಭುತ ಜೋಡಿ ಎಂದರೆ ರವಿಚಂದ್ರನ್‍ ಮತ್ತು ಹಂಸಲೇಖ ಅವರದ್ದು. 80-90ರ ದಶಕದಲ್ಲಿ ರವಿಚಂದ್ರನ್‍ ನಿರ್ದೇಶನದ ಮತ್ತು ಹಂಸಲೇಖ ಸಂಗೀತ ನಿರ್ದೇಶನದ ಚಿತ್ರಗಳು ದೊಡ್ಡ ಮಟ್ಟಿಗೆ ಯಶಸ್ಸು ಕಂಡಿದ್ದು ಎಲ್ಲರಿಗೂ ತಿಳಿದ ವಿಷಯ. ಹದಿನಾರು ವರ್ಷಗಳ ಕಾಲ ಒಟ್ಟಾಗಿ ಈ ಜೋಡಿ ಮಾಡಿದ ಮೋಡಿಗೆ ಮನ ಸೋಲದವರಿಲ್ಲ. ಇಂತಹ ದಿಗ್ಗಜ ಜೋಡಿಯ ಸಾಧನೆಯನ್ನು ಸಂಭ್ರಮಿಸುವ ಸಲುವಾಗಿ ಮೇ 30ರಂದು ಕೆಂಗೇರಿ ಬಳಿಯ ಜೆ.ಕೆ.ಗ್ರಾಂಡ್ ಅರೆನಾದಲ್ಲಿ "ಕ್ರೇಜಿ - ಬ್ರಹ್ಮ" ರೀಯೂನಿಯನ್ ಮೆಗಾ ಇವೆಂಟ್ ಅನ್ನು ಪ್ರಸ್ತುತತ್‍ ಇನ್ನೋವೇಟಿವ್‍ ಕ್ರಿಯೇಷನ್ಸ್ ಮತ್ತು ಸಲ್ಯೂಷನ್ಸ್ನ ವ್ಯವಸ್ಥಾಪಕ ನಿರ್ದೇಶಕ ನ.ವಿನಯ್ ಹಾಗೂ ಕಲಾಲೂಹ ಸಂಸ್ಥಾಪಕಿ ಡಾ.ಚೇತನಾ‌ಆರ್. ಎಸ್ ಅವರು ಆಯೋಜಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.  ರವಿಚಂದ್ರನ್ ಮತ್ತು ಹಂಸಲೇಖ ಜೋಡಿ ಹದಿನಾರು ವರ್ಷಗಳ ಕಾಲ ಒಟ್ಟಾಗಿ ಮಾಡಿರುವ ಕಲಾಸೇವೆಯನ್ನು ನೆನಪು ಮಾಡಿಕೊಂಡು, ಆ ಜೋಡಿಯನ್ನು ಗೌರವಿಸುವ ಸಮಾರಂಭವೇ "ಕ್ರೇಜಿ - ಬ್ರಹ್ಮ". ಮೇ.30 ರ ಸಂಜೆ 6 ಗಂಟೆಗೆ ಕೆ...

ಹಾಡುಗಳ ಮುದ್ರಣ ಪೂರ್ಣಗೊಳಿಸಿದ ‘ಡಿಯರ್ ಹಸ್ಬೆಂಡ್’..

ಹಾಡುಗಳ ಮುದ್ರಣ ಪೂರ್ಣಗೊಳಿಸಿದ ‘ಡಿಯರ್ ಹಸ್ಬೆಂಡ್’.. ಸದ್ದಿಲ್ಲದೆ ‘ಡಿಯರ್ ಹಸ್ಬೆಂಡ್’ ಸಾಂಗ್ಸ್ ರೆಕಾರ್ಡಿಂಗ್ ಕಂಪ್ಲೀಟ್.. ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ಹೊಸಚಿತ್ರ ‘ಡಿಯರ್ ಹಸ್ಬೆಂಡ್’.. ’ಡಿಯರ್ ಹಸ್ಬೆಂಡ್’ ಹಾಡಿಗೆ ಧ್ವನಿಯಾದ ಗಾಯಕ ನಕಾಶ್.. ಸೂರಜ್-ಶರಣ್ಯಾ-ಪ್ರವೀಣ್ ಹೊಸ ರೊಮ್ಯಾಂಟಿಕ್ ಕ್ರೈಂ-ಥ್ರಿಲ್ಲರ್ ಕಹಾನಿ... ಬೆಂಗಳೂರು, ಮೇ. 23; ‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ‘ಡಿಯರ್ ಹಸ್ಬೆಂಡ್’ ಚಿತ್ರದ ತೆರೆ ಹಿಂದಿನ ಕೆಲಸಗಳು ಭರದಿಂದ ನಡೆಯುತ್ತಿದೆ. ಈಗಾಗಲೇ ಸದ್ದಿಲ್ಲದೆ, ‘ಡಿಯರ್ ಹಸ್ಬೆಂಡ್’ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಹಾಡುಗಳ ಧ್ವನಿ ಮುದ್ರಣ ಕಾರ್ಯವನ್ನೂ ಕೂಡ ಮಾಡಿ ಮುಗಿಸಿದೆ.  ಇನ್ನು ‘ಡಿಯರ್ ಹಸ್ಬೆಂಡ್’ ಚಿತ್ರದ ಕೊನೆಯ ಹಾಡಿಗೆ ಬಾಲಿವುಡ್ ನ ಖ್ಯಾತ ಗಾಯಕ ನಕಾಶ್ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಸ್ಟುಡಿಯೋ ಒಂದರಲ್ಲಿ ಈ ಹಾಡಿನ ಧ್ವನಿಮುದ್ರಣ ಕಾರ್ಯ ನಡೆಯಿತು. ವೀರ್ ಸಮರ್ಥ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಮಾಲಾಶ್ರೀ ಸಿಕ್ಕಳೋ… ಮೆಲ್ಲನೆ ನಕ್ಕಳೋ…’ ಎಂದು ಆರಂಭವಾಗುವ ಟಪೋರಿ ಶೈಲಿಯ ಈ ಹಾಡಿನ ಸಾಲುಗಳಿಗೆ ಪ್ರಮೋದ ಮರವಂತೆ ಸಾಹಿತ್ಯವಿದ್ದು, ಮುಂಬೈನಿಂದ ಬೆಂಗಳೂರಿಗೆ ಬಂದ ಬಾಲಿವುಡ್ ನ ಖ್...