Skip to main content

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ
“ಮ್ಯಾಕ್ಸ್” ಚಿತ್ರತಂಡದಿಂದ ಆಯೋಜಿಸಲಾಗಿದ್ದ “ಥ್ಯಾಂಕ್ಸ್ ಗಿವಿಂಗ್” ಸಮಾರಂಭದಲ್ಲಿ ಕಿಚ್ಚ ಸುದೀಪ್ ಹೇಳಿಕೆ
ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ನಾಯಕರಾಗಿ ನಟಿಸಿರುವ "ಮ್ಯಾಕ್ಸ್" ಚಿತ್ರ ಡಿಸೆಂಬರ್ 25ರಂದು ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತೋಷವನ್ನು ಸಂಭ್ರಮಿಸಲು ಥ್ಯಾಂಕ್ಸ್ ಗಿವಿಂಗ್ ಸಮಾರಂಭ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ಎರಡೂವರೆ ವರ್ಷದ ಬಳಿಕ ನನ್ನ ಚಿತ್ರ ಬಿಡುಗಡೆಯಾಗಿದೆ. ಮ್ಯಾಕ್ಸ್ ಚಿತ್ರ ಯಶಸ್ಸು ಕಂಡಿದೆ. ಅಭಿಮಾನಿಗಳ ಹಾಗೂ ಚಿತ್ರತಂಡದವರ ಮುಖದಲ್ಲಿ ಗೆಲುವಿನ ನಗು ಮೂಡಿದೆ. ಆ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ. ನಾನು ಸದ್ಯ ಈ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿದ್ದೇನೆ. ಪ್ರೀಕ್ವೆಲ್, ಸೀಕ್ವೆಲ್ ಯಾವುದರ ಬಗ್ಗೆ ಸದ್ಯಕ್ಕೆ ಗಮನ ಹರಿಸಿಲ್ಲ.ನಿರ್ದೇಶಕ ರಾಜಮೌಳಿ ಅವರು ಸಿನಿಮಾ ನೋಡುವುದಾಗಿ ಹೇಳಿದ್ದಾರೆ. ಅದು ಇನ್ನಷ್ಟು ಖುಷಿಯ ಸಂಗತಿ. ತಮಿಳಿನಲ್ಲಿ ಅದ್ಬುತ ಪ್ರದರ್ಶನ ಕಾಣುತ್ತಿದೆ. ನಿರ್ಮಾಪಕರು,ನಿರ್ದೇಶಕರು ಅಲ್ಲಿಯವರೆ ಆಗಿರುವುದರಿಂದ ಅವರ ಮುಖದಲ್ಲಿ ಖುಷಿ ಕಾಣುತ್ತಿದೆ. ನಟನಾಗಿ ನನಗೂ ಹೆಮ್ಮೆ ಇದೆ. ತಮಿಳಿನಲ್ಲಿ ಕಲಾವಿದರು ಚಿತ್ರ ನೋಡುತ್ತಿದ್ದಾರೆ‌.
'ಮ್ಯಾಕ್ಸ್' ಚಿತ್ರದ ಯಶಸ್ಸಿನ ನಂತರ ನನ್ನ ಸ್ನೇಹಿತರ ಬಳಗ ಇನ್ನಷ್ಟು ಹೆಚ್ಚಾಗಿದೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬಳಸಲಾಗಿದ್ದ ಕಾಸ್ಟೂಮ್ ಎತ್ತಿ ಇಟ್ಟಿದ್ದೇನೆ. ಅದು ನೆನಪು. ಪ್ರತೀ ಸಿನಿಮಾದಲ್ಲಿ ಈ ರೀತಿ ಮಾಡುವ ಅಭ್ಯಾಸವಿದೆ ಎಂದರು.
ಮ್ಯಾಕ್ಸ್ ಸಿನಿಮಾವನ್ನು ಅಪ್ಪ ನೋಡಿ ಖುಷಿ ಪಟ್ಟಿದ್ದಾರೆ. ಕೆಲವೊಂದು ಸನ್ನಿವೇಶಗಳನ್ನು ಅಮ್ಮನ ನೆನಪಾಗಿ ನೋಡಲು ಆಗಲಿಲ್ಲ, ಹೀಗಾಗಿ ನಾನು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಿನಿಮಾ ನೋಡಿಲ್ಲ. ಈ ಚಿತ್ರದ ಮೂಲಕ ಮಗಳು ಸಾನ್ವಿಯನ್ನು ಗಾಯಕಿಯಾಗಿ ಪರಿಚಯ ಮಾಡಿದ್ದೇನೆ, ಅದರ ಸಂಪೂರ್ಣ ಕ್ರೆಡಿಟ್ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರಿಗೆ ಸಲ್ಲಬೇಕು ಎಂದರು.
ನನ್ನ ಮೊದಲ ಕನ್ನಡದ ನಿರ್ಮಾಣದ ಚಿತ್ರ ಗೆದ್ದಿರುವುದು ಖುಷಿಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರಿಗೆ, ಕನ್ನಡ ಕಲಾಭಿಮಾನಿಗಳಿಗೆ ಹಾಗೂ ವಿಶೇಷವಾಗಿ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. 
ಚಿತ್ರ ಗೆದ್ದಿದೆ. ಈ ಗೆಲವು ತಂಡದ್ದು.‌ ಅವಕಾಶ ನೀಡಿದ ನಿರ್ಮಾಪಕರಿಗೆ, ಕಿಚ್ಚ ಸುದೀಪ್ ಅವರಿಗೆ ಹಾಗೂ ಇಡೀ ತಂಡಕ್ಕೆ ನಿರ್ದೇಶಕ ವಿಜಯ್ ಕಾರ್ತಿಕೇಯ ಧನ್ಯವಾದ ತಿಳಿಸಿದರು. 
ಕೆ.ಆರ್.ಜಿ ಸಂಸ್ಥೆಯ ಕಾರ್ತಿಕ್ ಗೌಡ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಛಾಯಾಗ್ರಾಹಕ ಶೇಖರ್ ಚಂದ್ರ, ಕಲಾ ನಿರ್ದೇಶಕ ಶಿವಕುಮಾರ್, ಸಂಕಲನಕಾರ ಗಣೇಶ್, ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯ, ಕಲಾವಿದರಾದ ಸುಧಾ ಬೆಳವಾಡಿ, ಕರಿ ಸುಬ್ಬು, ಕೃಷ್ಣ ಹೆಬ್ಬಾಳೆ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ, ಜಿ.ಜಿ, ವಿಜಯ್ ಚಂಡೂರ್, ಪ್ರವೀಣ್ ಮುಂತಾದವರು ಚಿತ್ರದ ಗೆಲುವಿನ ಸಂತಸವನ್ನು ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...