Skip to main content

ಬೆಂಗಳೂರಿನಲ್ಲಿ "ಅನಾಥ ಬೆಕ್ಕುಗಳ ಆಶ್ರಯ ಮತ್ತು ದತ್ತು ಕೇಂದ್ರ" ತೆರೆಯಲು ಪ್ರಾಣಾ ಅನಿಮಲ್ ಫೌಂಡೇಶನ್‌ ನೊಂದಿಗೆ ಕೈಜೋಡಿಸಿದೆ

ಬೆಂಗಳೂರಿನಲ್ಲಿ "ಅನಾಥ ಬೆಕ್ಕುಗಳ ಆಶ್ರಯ ಮತ್ತು ದತ್ತು ಕೇಂದ್ರ" ತೆರೆಯಲು ಪ್ರಾಣಾ ಅನಿಮಲ್ ಫೌಂಡೇಶನ್‌ ನೊಂದಿಗೆ ಕೈಜೋಡಿಸಿದೆ...
ಟೆಕಿಯಾನ್ ಮತ್ತು ಪ್ರಾಣಾ ಅನಿಮಲ್ ಫೌಂಡೇಶನ್ ಸಂಸ್ಥೆಗಳು ಒಡಗೂಡಿ ಬೆಂಗಳೂರಿನಲ್ಲಿ "ಅನಾಥ ಬೆಕ್ಕುಗಳ ಆಶ್ರಯ ಮತ್ತು ದತ್ತು ಕೇಂದ್ರ" ತೆರೆದಿವೆ.
ಬೆಂಗಳೂರು, ಭಾರತ - 30.01.2025
ಕ್ಲೌಡ್ ಕಂಪ್ಯೂಟಿಂಗ್ ಸಂಸ್ಥೆ ಟೆಕಿಯಾನ್ ಬೆಂಗಳೂರಿನಲ್ಲಿ "ಅನಾಥ ಬೆಕ್ಕುಗಳ ಆಶ್ರಯ ಮತ್ತು ದತ್ತು ಕೇಂದ್ರ" ತೆರೆಯಲು ಪ್ರಾಣಾ ಅನಿಮಲ್ ಫೌಂಡೇಶನ್‌ ನೊಂದಿಗೆ ಕೈಜೋಡಿಸಿದೆ. ಈ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮವು ಟೆಕಿಯಾನ್ ಸಂಸ್ಥೆಯ ಮುಂದುವರೆಸುತ್ತಿರುವ ಬದ್ಧತೆಯ ಭಾಗವಾಗಿದೆ.  
ಕನಕಪುರ ರಸ್ತೆಯಲ್ಲಿರುವ ಈ ಕೇಂದ್ರವು ಅನಾಥ, ಗಾಯಗೊಂಡ, ರಕ್ಷಿಸಲ್ಪಟ್ಟ ಮತ್ತು ದಿಕ್ಕುದೆಸೆಯಿಲ್ಲದ ಬೆಕ್ಕುಗಳಿಗೆ ಸಮಗ್ರ ಆರೈಕೆ ನೀಡುತ್ತದೆ. ಈ ಸೇವೆಯಲ್ಲಿ ಶಸ್ತ್ರಚಿಕಿತ್ಸೆಯ ನಂತರದ ಆರೈಕೆ, ಆಶ್ರಯ ಮತ್ತು ದತ್ತು ಪಡೆಯುವ ಕ್ರಿಯೆಗಳು ಸೇರಿವೆ.
ಕೇಂದ್ರದ ಸೇವಾ ಸೌಲಭ್ಯಗಳ ಕುರಿತು ಟೆಕಿಯಾನ್‌ ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ರಾಣಾ ರಾಬಿಲಾರ್ಡ್ ಮಾತನಾಡುತ್ತಾ " ಬೆಂಗಳೂರಿನ ದುರ್ಬಲ ಬೆಕ್ಕುಗಳ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲು ಪ್ರಾಣಾ ಅನಿಮಲ್ ಫೌಂಡೇಶನ್‌ನೊಂದಿಗೆ ಪಾಲುದಾರರಾಗಲು ನಾವು ಹೆಮ್ಮೆಪಡುತ್ತೇವೆ ಮತ್ತು ಈ ಕೇಂದ್ರವು ಅಗತ್ಯ ಆರೈಕೆ ಮಾತ್ರವಲ್ಲದೆ ಪ್ರಾಣಿ ಕಲ್ಯಾಣ ಮತ್ತು ಸಾಕುಪ್ರಾಣಿಗಳ ಜವಾಬ್ದಾರಿಯುತ ಮಾಲೀಕತ್ವದ ಬಗ್ಗೆ ಜಾಗೃತಿ ಮೂಡಿಸುತ್ತದೆ" ಎಂದು ಹೇಳಿದರು. 2024 ರಲ್ಲಿ ತುರ್ತು ಸಂದರ್ಭಗಳಲ್ಲಿ 24/7 ಪ್ರಾಣಿಗಳ ಆಂಬ್ಯುಲೆನ್ಸ್ ಸೇವೆಯ ಯಶಸ್ವಿ ಪ್ರಾರಂಭದೊಂದಿಗೆ ಈ ಸಹಯೋಗವು ಕಳೆದ ವರ್ಷದಲ್ಲಿ ಟೆಕಿಯಾನ್ ಮತ್ತು ಪ್ರಾಣಾ ನಡುವಿನ ಮೂರನೇ ಜಂಟಿ ಕಾರ್ಯಕ್ರಮವಾಗಿದೆ.
“ಈ ಕೇಂದ್ರ ತೆರೆಯುತ್ತಿರುವುದು ನನ್ನ ಕನಸನ್ನು ನನಸು ಮಾಡಿದಂತಾಗಿದೆ, ಭಾರತದಲ್ಲಿ ಇದು ಬೆಕ್ಕುಗಳಿಗೆ ಮೊದಲ ಆರೈಕೆ ಕೇಂದ್ರವಾಗಿದೆ, ಅನಾಥ ಬೆಕ್ಕುಗಳ ರಕ್ಷಣೆ ಮಾಡುವ ಸ್ವಯಂ ಸೇವಕವರಿಗೆ ಸಹಾಯವಾಗಲು ಮತ್ತು ದತ್ತು ಪಡೆಯುವವರೆಗೂ ಇರಿಸಿಕೊಳ್ಳಲು ಸ್ಥಳಾವಕಾಶಕ್ಕೆ ಸಹಾಯ ಹಸ್ತ ನೀಡಿದ ಟೆಕಿಯಾನ್ ನಮ್ಮ ಧನ್ಯವಾದಗಳು, ನಾವು ಈಗ ವಿಶೇಷ ಆರೈಕೆ ಒದಗಿಸಬಹುದು ಮತ್ತು ಬೆಕ್ಕುಗಳಿಗೆ ಪ್ರೀತಿಯ ಮನೆಗಳನ್ನು ನೀಡಬಹುದು, ನಾವು ಇನ್ನೂ ಬಹಳ ದೂರ ಸಾಗಬೇಕಾಗಿದೆ, ಪ್ರಾಣಿಗಳಿಗೆ ಸಹಾಯ ಮಾಡುವ ನಮ್ಮ ಧ್ಯೇಯವನ್ನು ಬೆಂಬಲಿಸುವ ಟೆಕಿಯಾನ್ ನೊಂದಿಗೆ ಮುಂದಿನ ಅನೇಕ ಸಹಯೋಗಗಳಿಗಾಗಿ ಉತ್ಸುಕರಾಗಿದ್ದೇವೆ" ಎಂದು ನಟಿ ಹಾಗೂ ಪ್ರಾಣಾ ಅನಿಮಲ್ ಫೌಂಡೇಶನ್‌ನ ಸಂಸ್ಥಾಪಕಿ ಸಂಯುಕ್ತಾ ಹೊರ್ನಾಡ್ ಹೇಳಿದರು. ಕೇಂದ್ರದಲ್ಲಿ ಅಪಘಾತದಿಂದ ಅಥವಾ ಗಾಯಗೊಂಡ ಬೆಕ್ಕುಗಳಿಗೆ ಆರೈಕೆ ಸೌಲಭ್ಯಗಳಿವೆ, ಬೆಕ್ಕುಗಳ ಶಾಶ್ವತ ಜೀವನಕ್ಕಾಗಿ ನಿಯಮಿತವಾಗಿ ದತ್ತು ಸ್ವೀಕಾರ ಕ್ರಿಯೆ ನಡೆಸಲಾಗುತ್ತದೆ.
ಕ್ರಿಯಾತ್ಮಕತೆಯ ಭಾಗವಾಗಿ ಕೇಂದ್ರವು ಕರ್ನಾಟಕ ಚಿತ್ರಕಲಾ ಪರಿಷತ್ತು ಮತ್ತು ಇತರ ಸ್ಥಳೀಯ ಕಲಾ ಕಾಲೇಜುಗಳ ವಿದ್ಯಾರ್ಥಿಗಳು ಚಿತ್ರಿಸಿದ ಬೆಕ್ಕುಗಳ ವಿಷಯದ ಭಿತ್ತಿಚಿತ್ರಗಳನ್ನು ಒಳಗೊಂಡಿದೆ. ಪ್ರಾಣಿಗಳ ಬಗ್ಗೆ ಸಹಾನುಭೂತಿ ಮತ್ತು ಗೌರವವನ್ನು ಉತ್ತೇಜಿಸಲು ಪ್ರಾಣಾ ಫೌಂಡೇಶನ್ ಶಾಲಾ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗಳನ್ನು ಆಯೋಜಿಸುತ್ತದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...