Skip to main content

Posts

Showing posts from February, 2025

ಗೋಲ್ಡನ್‌ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್...

ಗೋಲ್ಡನ್‌ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್... ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು ಸಾಮಾನ್ಯವಾಗಿ‌ ನನ್ನ ಚಿತ್ರದ ಹೊರತು ಬೇರೆ ಸಮಾರಂಭಗಳಿಗೆ ಹೋಗುವುದು ಕಡಿಮೆ.‌ ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ರಾಜಶೇಖರ್ ಅವರ ಪುತ್ರಿ ಈ ಚಿತ್ರದ ನಿರ್ದೇಶಕರು ಎಂದು ತಿಳಿದು ಸಂತೋಷವಾಯಿತು. ಆ ಕಾರಣಕ್ಕಾಗಿ ಹಾಗೂ ಸ್ನೇಹಿತರಾದ ದಾಸೇಗೌಡರ ಪ್ರೀತಿಯ ಆಹ್ವಾನಕ್ಕಾಗಿ ಇಲ್ಲಿಗೆ ಬಂದಿದ್ದೇನೆ.‌ ಟ್ರೇಲರ್ ನೋಡಿದಾಗ ವಿಭಿನ್ನ ಕಂಟೆಂಟ್ ವುಳ್ಳ ಚಿತ್ರ ಎಂದು ತಿಳಿಯುತ್ತದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.         ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಸಿಂಧು ಗೌಡ, ನಮ್ಮ ಅಪ್ಪನ ಕಾರ್ಯವೈಖರಿ ನೋಡಿ ನಿರ್ದೇಶನ ಕಲಿತ್ತಿದ್ದೇನೆ. ನಟಿಯಾ...

ಜನ ಮೆಚ್ಚಿದ ಚಿತ್ರ... "ಶಾನುಭೋಗರ ಮಗಳು"

ಜನ ಮೆಚ್ಚಿದ ಚಿತ್ರ...  "ಶಾನುಭೋಗರ ಮಗಳು" ಸ್ವಾತಂತ್ರ್ಯ ಪೂರ್ವದಲ್ಲಿ ನಡೆಯುವ ಸಾಧ್ವಿ ಹೆಣ್ಣುಮಗಳು ಶರಾವತಿಯ ಕಥೆಯನ್ನು ನಿರ್ದೇಶಕ ಕೂಡ್ಲು ರಾಮಕೃಷ್ಣ ಅವರು "ಶಾನುಭೋಗರ ಮಗಳು" ಚಿತ್ರದ ಮೂಲಕ ತೆರೆಮೇಲೆ ತಂದಿದ್ದಾರೆ. ಪತ್ರಕರ್ತೆ ಹಾಗೂ 33ಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಂತಹ ಭಾಗ್ಯ ಕೃಷ್ಣಮೂರ್ತಿ ಅವರ ಇದೇ ಹೆಸರಿನ ಕಾದಂಬರಿಯನ್ನಾಧರಿಸಿ "ಶಾನುಭೋಗರ ಮಗಳು" ಚಿತ್ರ ತಯಾರಾಗಿದೆ. ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ‌ ನಟಿ ರಾಗಿಣಿ ಪ್ರಜ್ವಲ್, ಕಿಶೋರ್, ನಿರಂಜನ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಕಳೆದವಾರ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಡೆದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ ಚಿತ್ರತಂಡ ಮಾಹಿತಿ ಹಂಚಿಕೊಂಡಿತು.  ಚಿತ್ರ ನೋಡಿದ ಎಲ್ಲರೂ ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ‌ ಎಂದೇ ಹೇಳುತ್ತಿದ್ದಾರೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಬರುತ್ತಿಲ್ಲ ಎಂದು ನಿರ್ದೇಶಕ ಕೂಡ್ಲು ರಾಮಕೃಷ್ಣ ಹೇಳಿದರು.  ಲೇಖಕಿ ಭಾಗ್ಯಕೃಷ್ಣಮೂರ್ತಿ ಕೂಡ ಅದೇ ಮಾತನ್ನು ಹೇಳಿ ಮಾಧ್ಯಮದವರು ಪ್ರೋತ್ಸಾಹಿಸಿದರೆ ನಮ್ಮ ಚಿತ್ರ ಇನ್ನಷ್ಟು ಜನರಿಗೆ ತಲುಪುತ್ತದೆ. ಅದಕ್ಕೆ ನಿಮ್ಮ ಸಹಕಾರ ಬೇಕೆಂದು ಕೇಳಿಕೊಂಡರು. ಹೆಣ್ಣನ್ನು ಕೇಂದ್ರವಾಗಿಟ್ಟುಕೊಂಡು ಬರುತ್ತಿರುವ...

ಹೈ- ಆಕ್ಟೇನ್ ಆಕ್ಷನ್ ಥ್ರಿಲ್ಲರ್ 'ತಲ್ವಾರ್' ಗ್ಲಿಂಪ್ಸ್ ಬಿಡುಗಡೆ; ಪುರಿ ಜಗನ್ನಾಥ್‌ ಪುತ್ರನ ಹೊಸ ಅವತಾರ..

ಹೈ- ಆಕ್ಟೇನ್ ಆಕ್ಷನ್ ಥ್ರಿಲ್ಲರ್ 'ತಲ್ವಾರ್' ಗ್ಲಿಂಪ್ಸ್ ಬಿಡುಗಡೆ; ಪುರಿ ಜಗನ್ನಾಥ್‌ ಪುತ್ರನ ಹೊಸ ಅವತಾರ ... ಟಾಲಿವುಡ್‌ ನಿರ್ದೇಶಕ ಪುರಿ ಜಗನ್ನಾಥ್‌ ಒಂದೇ ಭಾಷೆಗೆ ಸೀಮಿತವಾದ ನಿರ್ದೇಶಕರಲ್ಲ. ಭಾರತೀಯ ಚಿತ್ರೋದ್ಯಮದಲ್ಲಿ ದೊಡ್ಡ ಹೆಸರು ಮಾಡಿದ್ದಾವರು. ಇದೀಗ ಇದೇ ಪುರಿ ಜಗನ್ನಾಥ್‌ ಅವರ ಮಗ ಆಕಾಶ್‌ ಜಗನ್ನಾಥ್‌, ಅಪ್ಪನಂತೆ ಬಣ್ಣದ ಲೋಕದಲ್ಲಿ ಹೆಸರು ಮಾಡುವ ನಿಟ್ಟಿನಲ್ಲಿ ಮುಂದುವರಿಯುತ್ತಿದ್ದಾರೆ. ಬಾಲ ಕಲಾವಿದನಾಗಿ ನಟನಾ ಪ್ರಯಾಣ ಆರಂಭಿಸಿದ ಆಕಾಶ್‌, ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಇದೀಗ ತಲ್ವಾರ್‌ ಚಿತ್ರದಲ್ಲಿ ಆಕ್ಷನ್‌-ಪ್ಯಾಕ್ಡ್ ಅವತಾರದ ಮೂಲಕ ಅಭಿಮಾನಿಗಳನ್ನು ಮೋಡಿ ಮಾಡಲು ಸಜ್ಜಾಗಿದ್ದಾರೆ.  ELV ಗ್ರೂಪ್ ಆಫ್ ಕಂಪನಿಸ್ ಮತ್ತು ವಾರ್ನಿಕ್ ಸ್ಟುಡಿಯೋಸ್‌ನ ಸ್ಥಾಪಕ ಮತ್ತು ಅಧ್ಯಕ್ಷ ಡಾ. ಭಾಸ್ಕರ್ ELV, ಬಿಗ್‌ ಬಜೆಟ್‌ನಲ್ಲಿ ನಿರ್ಮಿಸಿದ ಸಿನಿಮಾವಾಗಿದೆ. ಇದೇ ತಲ್ವಾರ್‌ ಸಿನಿಮಾವನ್ನು ಕಾಸಿ ಪರಸುರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಇದೇ ಚಿತ್ರದ ಮೊದಲ ಗ್ಲಿಂಪ್ಸ್‌ ಬಿಡುಗಡೆ ಆಗಿದ್ದು, ಅಭಿಮಾನಿಗಳು ಮತ್ತು ವೀಕ್ಷಕರನ್ನು ಸೆಳೆದಿದೆ. 'ತಲ್ವಾರ್' ಪ್ಯಾನ್-ಇಂಡಿಯನ್ ಚಿತ್ರವಾಗಿ ನಿರ್ಮಾಣವಾಗುತ್ತಿದೆ. ಜೂನ್ ವೇಳೆಗೆ ಶೂಟಿಂಗ್‌ ಮುಗಿಸಿಕೊಂಡು, ಸೆಪ್ಟೆಂಬರ್- ಅಕ್ಟೋಬರ್‌ ವೇಳೆಗೆ ಆಡಿಯೋ ಬಿಡುಗಡೆ ಆಗಲಿದೆ. ಈ ವರ್ಷದ ಅಂತ್ಯಕ್ಕೆ ಚಿತ್ರಮಂದಿರಗಳಲ್...

ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸ್ಸಿನ ಕಥೆ "ಮಿಥ್ಯ"

ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸ್ಸಿನ ಕಥೆ "ಮಿಥ್ಯ" ರಕ್ಷಿತ್ ಶೆಟ್ಟಿ ನಿರ್ಮಾಣದ ‌ಹಾಗೂ ಸುಮಂತ್ ಭಟ್ ನಿರ್ದೇಶನದ ಈ ಚಿತ್ರದ ಟ್ರೇಲರ್ ಬಿಡುಗಡೆ.* ಮಾರ್ಚ್ 7 ರಂದು ಸಿನಿಮಾ ತೆರೆಗೆ...       ತಮ್ಮ ಅಭಿನಯದ ಮೂಲಕ‌‌ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ ಪರಂವಃ ಸ್ಟುಡಿಯೋಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಿಥ್ಯ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ "ಮಿಥ್ಯ" ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ.            "ಏಕಂ" ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಅವರಿಗೆ "ಮಿಥ್ಯ", ಬೆಳ್ಳಿತೆರೆಯಲ್ಲಿ ಮೊದಲ ನಿರ್ದೇಶನದ ಚಿತ್ರ. ‌                    ‌‌     ತನ್ನ ಹನ್ನೊಂದನೇ ವಯಸ್ಸಿಗೆ ತಂದೆ ತಾಯಿಯನ್ನು ಕಳೆದುಕೊಂಡ ಹುಡುಗ ಮಿಥುನ್ ಮುಂಬೈನಿಂದ ಉಡುಪಿಗೆ ಬಂದು ತನ್ನ ಚಿಕ್ಕಪ್ಪ, ಚಿಕ್ಕಮ್ಮನ ಆಶ್ರಯ ಪಡೆಯುತ್ತಾನೆ. ಆನಂತರ ಹೊಸ ಪ್ರಪಂಚದ ಹುಡುಕಾಟ, ಹಳೆಯ ಸಂಬಂಧಗಳಲ್ಲಿ ಹೊಸತನವನ್ನು ಕಾಣುವ ಹಾಗೂ ಹೊಸ ಸ್ನೇಹಿತರಲ್...

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸುಕೃತ ವಾಗ್ಲೆ ಅಭಿನಯದ "ಕಪಟಿ"...

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸುಕೃತ ವಾಗ್ಲೆ ಅಭಿನಯದ "ಕಪಟಿ"... ದಯಾಳ್ ಪದ್ಮನಾಭನ್ ನಿರ್ಮಾಣದ ಈ ಚಿತ್ರ ಮಾರ್ಚ್ 7 ರಂದು ತೆರೆಗೆ..  "ಹಗ್ಗದ ಕೊನೆ", "ಆ ಕಾರಾಳ ರಾತ್ರಿ" ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ - ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಕಪಟಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು ಶೆಟ್ಟಿ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.  ನಮ್ಮ ಚಿತ್ರಕ್ಕೆ ನೀವೆಲ್ಲಾ ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ ಎಂದು ಮಾತನಾಡಿದ ಚಿತ್ರದ ನಿರ್ಮಾಪಕ‌ ದಯಾಳ್ ಪದ್ಮನಾಭನ್, ಮೂಲತಃ ಸಾಫ್ಟ್‌ವೇರ್ ಉದ್ಯೋಗಿಗಳಾಗಿರುವ ಹಾಗು ಚಿತ್ರದ ನಿರ್ದೇಶಕರೂ ಆಗಿರುವ ರವಿಕಿರಣ್ ಹಾಗೂ ಚೇತನ್ ಎಸ್ ಪಿ ಮೊದಲು ಈ ಚಿತ್ರದ ನಿರ್ಮಾಣ‌ ಆರಂಭಿಸಿದ್ದರು. ನಂತರ ನನ್ನ ಬಳಿ ಬಂದು ಈ ಚಿತ್ರದ ಬಗ್ಗೆ ಹೇಳಿದರು. ನಾನು ಸಹ ಚಿತ್ರವನ್ನು ನೋಡಿದೆ. ನನಗೆ ಚಿತ್ರ ಇಷ್ಟವಾಯಿತು. ಆನಂತರ...

ಬಹುನಿರೀಕ್ಷಿತ ಪ್ಯಾನ್- ಇಂಡಿಯಾ ಮಹಾಕಾವ್ಯ 'ಕಣ್ಣಪ್ಪ' ಚಿತ್ರದ ಟೀಸರ್ ಬಿಡುಗಡೆ ಮಾಡಿದ ಅಕ್ಷಯ್ ಕುಮಾರ್, ವಿಷ್ಣು ಮಂಚು...

ಬಹುನಿರೀಕ್ಷಿತ ಪ್ಯಾನ್- ಇಂಡಿಯಾ ಮಹಾಕಾವ್ಯ 'ಕಣ್ಣಪ್ಪ' ಚಿತ್ರದ ಟೀಸರ್ ಬಿಡುಗಡೆ ಮಾಡಿದ ಅಕ್ಷಯ್ ಕುಮಾರ್, ವಿಷ್ಣು ಮಂಚು.. ಮಾರ್ಚ್‌ 1ರಂದು ವೀಕ್ಷಣೆಗೆ ಸಿಗಲಿದೆ ಟೀಸರ್; ಏಪ್ರಿಲ್‌ 25ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ.. ಕಣ್ಣಪ್ಪನ ಪೌರಾಣಿಕ ಕಥೆಯನ್ನು ಆಧರಿಸಿದ ಮಹಾಕಾವ್ಯ ಚಿತ್ರ 'ಕಣ್ಣಪ್ಪ' ಚಿತ್ರದ ಬಹುನಿರೀಕ್ಷಿತ ಟೀಸರ್ ಅನ್ನು ಮುಂಬೈನಲ್ಲಿ ನಡೆದ ವಿಶೇಷ ಮಾಧ್ಯಮ ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಯಿತು. ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್, ನಾಯಕ ನಟ ವಿಷ್ಣು ಮಂಚು, ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್ ಸೇರಿ ಚಿತ್ರತಂಡದ ಹಲವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಈ ಕಾರ್ಯಕ್ರಮವನ್ನು ಚಿತ್ರದ ಕಾರ್ಯನಿರ್ವಾಹಕ ನಿರ್ಮಾಪಕ ಶ್ರೀ ವಿನಯ್ ಮಹೇಶ್ವರಿ ಅವರ ಗೌರವಯುತ ಮಾತುಗಳಿಂದ ಗೌರವಿಸಲಾಯಿತು. ಗಮನಾರ್ಹ ಸಂಚಲನ ಮೂಡಿಸಿರುವ ಈ ಟೀಸರ್ ಭಕ್ತಿ, ತ್ಯಾಗ ಮತ್ತು ಭವ್ಯತೆಯ ಐತಿಹಾಸಿಕ ನಿರೂಪಣೆಯ ಒಂದು ನೋಟವನ್ನು ನೀಡುತ್ತದೆ. ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಮತ್ತು ಎಂ. ಮೋಹನ್ ಬಾಬು ನಿರ್ಮಾಣದ ಕಣ್ಣಪ್ಪ ಚಿತ್ರವು, ಪೌರಾಣಿಕ ಕಥೆಯಾದರೂ, ಆಧುನಿಕ ನಿರ್ಮಾಣ ತಂತ್ರಗಳೊಂದಿಗೆ ಸಂಯೋಜಿಸಿ, ಪ್ರೇಕ್ಷಕರನ್ನು ದೃಶ್ಯ ಮತ್ತು ಭಾವನಾತ್ಮಕ ಪ್ರಯಾಣಕ್ಕೆ ಕರೆದೊಯ್ಯುವ ಗುರಿಯನ್ನು ಹೊಂದಿದೆ. ಶಿವನ ಪಾತ್ರ ಮಾಡಿರುವ ಅಕ್ಷಯ್ ಕುಮಾರ್ ಮಾತನಾಡಿದರು. “ಮೊದಲ...

ಮಹಾ ಶಿವರಾತ್ರಿಯಂದು ಬಿಡುಗಡೆಯಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಪಿನಾಕ" ಚಿತ್ರದ ಪೋಸ್ಟರ್...

ಮಹಾ ಶಿವರಾತ್ರಿಯಂದು ಬಿಡುಗಡೆಯಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಪಿನಾಕ" ಚಿತ್ರದ ಪೋಸ್ಟರ್... ಗಣೇಶ್ ಅವರ ಹೊಸ ನೋಟಕ್ಕೆ ಅಭಿಮಾನಿಗಳು ಫಿದಾ... ಪ್ರತಿಷ್ಟಿತ ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ಟಿ.ಜಿ.ವಿಶ್ವ ಅವರು ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕರಾಗಿ ಜನಪ್ರಿಯರಾಗಿರುವ ಬಿ.ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಪಿನಾಕ" ಚಿತ್ರದ ಪೋಸ್ಟರ್ ಮಹಾ ಶಿವರಾತ್ರಿ ದಿನದಂದು ಬಿಡುಗಡೆಯಾಗಿದೆ. "ಪಿನಾಕ" ಚಿತ್ರದ ವಿಭಿನ್ನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಚಿತ್ರತಂಡ ಮಹಾ ಶಿವರಾತ್ರಿ ಶುಭಾಶಯ ತಿಳಿಸಿದೆ. ಪೋಸ್ಟರ್ ನಲ್ಲಿ ತ್ರಿಶೂಲ ಹಿಡಿದು ನಿಂತಿರುವ ಗಣೇಶ್ ಅವರ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.       "ಪಿನಾಕ" ಎಂದರೆ‌ ಶಿವನ ತ್ರಿಶೂಲ. ಈ ಚಿತ್ರದ ಶೀರ್ಷಿಕೆಯೂ ಹೌದು. ಗಣೇಶ್ ಅವರು ಸಹ ಈ ಚಿತ್ರದಲ್ಲಿ ಕ್ಷುದ್ರ ಹಾಗೂ ರುದ್ರ ಎಂಬ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಟೀಸರ್ ಗೆ ಮಹಾಪೂರವೇ ಹರಿದು ಬಂದಿದೆ.

ಮಹಾ ಶಿವರಾತ್ರಿ ದಿನದಂದು ಬಿಡುಗಡೆಯಾಯಿತು ಶಿವ ಭಕ್ತನ ಕಥಾಹಂದರ ಹೊಂದಿರುವ "ದೈವ" ಚಿತ್ರದ ವಿಶೇಷ ಪೋಸ್ಟರ್...

ಮಹಾ ಶಿವರಾತ್ರಿ ದಿನದಂದು ಬಿಡುಗಡೆಯಾಯಿತು ಶಿವ ಭಕ್ತನ ಕಥಾಹಂದರ ಹೊಂದಿರುವ "ದೈವ" ಚಿತ್ರದ ವಿಶೇಷ ಪೋಸ್ಟರ್...  ಮಂಜುನಾಥ್ ಜಯರಾಜ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಈ ಚಿತ್ರ ತೆರೆಗೆ ಬರಲು ಸಿದ್ದ.   ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿರುವ ಹಾಗೂ ಮಂಜುನಾಥ್ ಜಯರಾಜ್ ಅವರು ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ದೈವ" ಚಿತ್ರದ ವಿಶೇಷ ಪೋಸ್ಟರ್ ಮಹಾ ಶಿವರಾತ್ರಿ ಶುಭದಿನದಂದು ಬಿಡುಗಡೆಯಾಗಿದೆ.       "ದೈವ" ಚಿತ್ರದಲ್ಲಿ ಕಾಲಭೈರವನ ಆರಾಧಕನಾಗಿ ಜೋಗಯ್ಯನ ಪಾತ್ರದಲ್ಲಿ ಎರಡು ಗೆಟಪ್ ಗಳಲ್ಲಿ ನಾನು ಅಭಿನಯಿಸಿದ್ದೇನೆ. ಶಿವ ಭಕ್ತನ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದ ವಿಶೇಷ ಪೋಸ್ಟರ್ ಮಹಾ ಶಿವರಾತ್ರಿಯ ದಿನದಂದೆ ಅನಾವರಣ ಮಾಡಲಾಗಿದೆ ಎಂದು ಮಂಜುನಾಥ್ ಜಯರಾಜ್ ತಿಳಿಸಿದ್ದಾರೆ. ಖ್ಯಾತ ನಿರ್ದೇಶಕ ರವಿಶ್ರೀವತ್ಸ ರವರ ಬಳಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಮಂಜುನಾಥ್ ಜಯರಾಜ್ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ನಿರ್ದೇಶಕ ಹಾಗೂ ನಾಯಕನಾಗಿ ಮಂಜುನಾಥ್ ಅವರಿಗೆ ಇದು ಮೊದಲ ಚಿತ್ರ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ...

ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕೆ ಮೆಚ್ಚುಗೆ....

ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕೆ ಮೆಚ್ಚುಗೆ.... ಯಶಸ್ಸಿನ ಹಾದಿಯಲ್ಲಿ ಗುರುನಂದನ್ ಅಭಿನಯದ ಚಿತ್ರ...  ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರ ಫೆಬ್ರವರಿ 14 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚಿಗೆ ಯು.ಕೆ‌ ಹಾಗೂ ಯು.ಎಸ್ ನಲ್ಲೂ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲಿನ ಜನರು ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ವಿವರಣೆ ನೀಡಿದರು.  "ರಾಜು ಜೇಮ್ಸ್ ಬಾಂಡ್" ಚಿತ್ರವನ್ನು ಮೆಚ್ಚಿಕೊಂಡ ಇಲ್ಲಿನ‌ ಹಾಗೂ ವಿದೇಶದಲ್ಲಿರುವ ಎಲ್ಲಾ ಕನ್ನಡ ಕಲಾಭಿಮಾನಿಗಳಿಗೆ ಧನ್ಯವಾದ‌‌ ಎಂದು ಮಾತನಾಡಿದ ನಿರ್ದೇಶಕ ದೀಪಕ್ ಮಧುವನಹಳ್ಳಿ, ಇದು ನನ್ನೊಬ್ಬನ ಗೆಲುವಲ್ಲ. ನಮ್ಮ ತಂಡದ ಗೆಲುವು. ಚಿತ್ರವನ್ನು ಅಂದುಕೊಂಡ ಹಾಗೆ ತರಲು ಸಹಕಾರ ನೀಡಿದ ನಿರ್ಮಾಪಕರಿಗೆ, ಪಾತ್ರಗಳಿಗೆ ಜೀವ ತುಂಬಿದ ಕಲಾವಿದರಿಗೆ , ಉತ್ತಮವಾಗಿ ಕಾರ್ಯ ನಿರ್ವಹಿಸಿದ ತಂತ್ರಜ್ಞರಿಗೆ ಹಾಗೂ ವಿತರಕ ಸತ್ಯಪ್ರಕಾಶ್ ಅವರಿಗೆ ಧನ್ಯವಾದ ಎಂದರು.  ಇದು ನಾವು ದುಡ್ಡಿಗಿಂತ, ಆಸೆಪಟ್ಟು ಮಾಡಿದ...

ಮಾರ್ಚ್ 7ಕ್ಕೆ 'ರಾಕ್ಷಸ' ರಿಲೀಸ್... ತಾಂತ್ರಿಕ ಸಮಸ್ಯೆಯಿಂದ ಮುಂದೂಡಿಕೆ..

ಮಾರ್ಚ್ 7ಕ್ಕೆ 'ರಾಕ್ಷಸ' ರಿಲೀಸ್...  ತಾಂತ್ರಿಕ ಸಮಸ್ಯೆಯಿಂದ ಮುಂದೂಡಿಕೆ.. ಮಾ‌.7ಕ್ಕೆ ಪ್ರಜ್ವಲ್ ದೇವರಾಜ್ ನಟನೆಯ 'ರಾಕ್ಷಸ' ಬಿಡುಗಡೆ.. ಶಾನ್ವಿ ಎಂಟರ್‌ಟೇನ್ಮೆಂಟ್ ಮೂಲಕ ದೀಪು ಬಿ.ಎಸ್ ನಿರ್ಮಿಸಿರುವ, ನವೀನ್ ಮತ್ತು ಮಾನಸಾ ಕೆ‌ ಸಹ ನಿರ್ಮಾಣದಲ್ಲಿ ಮೂಡಿ ಬಂದಿರುವ ಸಿನಿಮಾ ರಾಕ್ಷಸ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇವತ್ತು ಶಿವರಾತ್ರಿ ಹಬ್ಬದ ವಿಶೇಷವಾಗಿ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ರಾಕ್ಷಸ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಮಾರ್ಚ್ 7ಕ್ಕೆ ರಾಕ್ಷಸನಾಗಿ ಪ್ರಜ್ವಲ್ ದೇವರಾಜ್ ದರ್ಶನ ಕೊಡಲಿದ್ದಾರೆ. ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ರಾಕ್ಷಸ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ. ಬಹಳ ವಿಭಿನ್ನವಾದ ಪಾತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಕಾಣಿಸಿಕೊಂಡಿದ್ದಾರೆ. ಲೋಹಿತ್ ಎಚ್ ನಿರ್ದೇಶನದಲ್ಲಿ ಟೈಮ್ ಲೂಪ್ ಹಾರರ್ ಚಿತ್ರದಲ್ಲಿ ಸೋನಲ್ ಮೊಂಥೆರೋ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಶೋಭಾರಾಜ್, ವತ್ಸಲಾಮೋಹನ್, ಸಿದ್ಲಿಂಗು ಶ್ರೀಧರ್, ಆರ್ನ ರಾಥೋಡ್ ಹೀಗೆ ಇನ್ನು ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಜೇಬಿನ್ ಪಿ ಜೋಕಬ್ ಕ್ಯಾಮರಾವರ್ಕ್ ಮಾಡಿದ್ದಾರೆ. ವಿನೋದ್ ಸಾಹಸ ನಿರ್ದೇಶನ ಇದೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ. ಕನ್ನಡದ ಈ ಚಿತ್ರವನ್ನ ಹೈದ್ರಾಬಾದ್ ಅಲ್ಲಿ...

'ಕನಸೊಂದು ಶುರುವಾಗಿದೆ' ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ...

'ಕನಸೊಂದು ಶುರುವಾಗಿದೆ' ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ ... ಮಾರ್ಚ್ 7ಕ್ಕೆ ಕನಸೊಂದು ಶುರುವಾಗಿದೆ ಸಿನಿಮಾ ರಿಲೀಸ್.. ಟ್ರೇಲರ್ ನಲ್ಲಿ ಕನಸೊಂದು ಶುರುವಾಗಿದೆ..ಸಾಥ್ ಕೊಟ್ಟ ಡಾರ್ಲಿಂಗ್ ಕೃಷ್ಣ-ಲೂಸ್ ಮಾದ ಯೋಗಿ.. ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು ತೆರೆಗೆ ಬರುತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ನಿನ್ನೆ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟರಾದ ಡಾರ್ಲಿಂಗ್ ಕೃಷ್ಣ, ಲೂಸ್ ಮಾದಯೋಗಿ, ಸಾಹಸ ನಿರ್ದೇಶಕರ ಥ್ರಿಲರ್ ಮಂಜು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸ ತಂಡಕ್ಕೆ ಸಾಥ್ ಕೊಟ್ಟರು. ಡಾರ್ಲಿಂಗ್ ಕೃಷ್ಣ ಮಾತನಾಡಿ, ಟೈಟಲ್ ತುಂಬಾ ಇಷ್ಟವಾಯ್ತು. 'ಕ' ಡಿಸೈನ್ ಮಾಡಿರುವ ರೀತಿ ತುಂಬಾ ಚೆನ್ನಾಗಿದೆ. ಮಂಜೇಶ್ ಅವರಿಗೆ ಒಳ್ಳೆಯದಾಗಲಿ. ಇದು ಅವರ ಎರಡನೇ ಚಿತ್ರ. ಇನ್ನೂ ಹೆಚ್ಚು ಒಳ್ಳೆ ಸಿನಿಮಾ ಮಾಡಲಿ . ನಿರ್ಮಾಪಕರಿಗೂ ಕೂಡ ಒಳ್ಳೆದಾಗಲಿ. ಸಂತು ಲೀಡ್ ಆಕ್ಟಿಂಗ್ ಮಾಡಿದ್ದಾರೆ. ಇದು ದೊಡ್ಡ ಜವಾಬ್ದಾರಿ. ಸಿನಿಮಾ ನಿಲ್ಲಿಸುವುದು ಕಷ್ಟದ ಕೆಲಸ. ಮಾರ್ಚ್ 7ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿಯೇ ಕನಸೊಂದು ಶುರುವಾಗಿದೆ ಸಿನಿಮಾವನ್ನು...

ಆದಿ ಪೆನಿಸೆಟ್ಟಿ ಹಾಗೂ ಲೈಲಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ 'ಶಬ್ದಂ' ಈ ವಾರ ತೆರೆಗೆ...

ಆದಿ ಪೆನಿಸೆಟ್ಟಿ ಹಾಗೂ ಲೈಲಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ 'ಶಬ್ದಂ' ಈ ವಾರ ತೆರೆಗೆ... ಕರ್ನಾಟಕದಲ್ಲಿ ವಿ.ಕೆ.ಫಿಲಂಸ್ ಮೂಲಕ ವಿತರಣೆ... ಖ್ಯಾತ ನಟ‌ ಆದಿ ಪಿನಿಸೆಟ್ಟಿ ನಾಯಕನಾಗಿ, ಕನ್ನಡದ "ತಂದೆಗೆ ತಕ್ಕ ಮಗ", "ರಾಮಕೃಷ್ಣ", "ದೇವರಮಗ" ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಲೈಲಾ ಅಭಿನಯದ, ಹಾರರ್, ಸೈನ್ಸ್ ಫಿಕ್ಷನ್, ಪ್ಯಾನ್ ಇಂಡಿಯಾ ಚಿತ್ರ ಶಬ್ದಂ ಫೆ.28ರಂದು ಕನ್ನಡ ತಮಿಳು, ತೆಲುಗು ಭಾಷೆಗಳಲ್ಲಿ ತೆರೆ ಕಾಣುತ್ತಿದೆ.   ಈ ಚಿತ್ರಕ್ಕೆ ಅರಿವಝಗನ್ ವೆಂಕಟಾಚಲಂ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ವಿ.ಕೆ. ಫಿಲಂಸ್ ಕರ್ನಾಟಕದಾದ್ಯಂತ ವಿತರಣೆಯ ಜವಾಬ್ದಾರಿ ಹೊತ್ತಿದೆ. ಪತ್ರಿಕಾ ಗೋಷ್ಠಿಯಲ್ಲಿ ಸಿನಿಮಾ ಬಿಡುಗಡೆ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತು. ಚಿತ್ರದ ನಾಯಕ ಆದಿ ಪಿನಿಸೆಟ್ಟಿ ಮಾತನಾಡುತ್ತ 'ಶಬ್ದಂ' ಪ್ಯಾರಾನಾರ್ಮಲ್ ಆ್ಯಕ್ಟಿವಿಟೀಸ್ ಮತ್ತು ಸೈನ್ಸ್ ಫಿಕ್ಷನ್ ಕಾನ್ಸೆಪ್ಟ್ ಮೇಲೆ ಮಾಡಿರುವ ಹಾರರ್ ಚಿತ್ರ. ಅದ್ಭುತವಾದ ಮೇಕಿಂಗ್ ಅಲ್ಲದೆ ಕಥೆಯೇ ಚಿತ್ರದ ಹೀರೋ. ತಮಿಳು ತೆಲುಗಲ್ಲಿ ನಾನೇ ಡಬ್ ಮಾಡಿದ್ದೇನೆ. ನಿರ್ದೇಶಕರ ಜತೆ 15 ವರ್ಷದ ಹಿಂದೆ "ವೈಶಾಲಿ" ಎಂಬ ಸಿನಿಮಾ ಮಾಡಿದ್ದೆ. ನಿರ್ದೇಶಕರಿಗಾಗೇ ಈ ಸಿನಿಮಾ ಒಪ್ಪಿಕೊಂಡೆ, ನಾನು ಕೆಲವು...

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಪ್ರತ್ಯರ್ಥ"..

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಪ್ರತ್ಯರ್ಥ".. ಕಥೆ ಮೆಚ್ಚಿಕೊಂಡ ತಮಿಳಿನ‌ ಖ್ಯಾತ ಸಂಸ್ಥೆಯಿಂದ "ಪ್ರತ್ಯರ್ಥ" ಚಿತ್ರವನ್ನು ತಮಿಳಿನಲ್ಲೂ ರೀಮೇಕ್ ಮಾಡಲು ಆಹ್ವಾನ... ಉಡುಪಿ ಪ್ರಾಂತ್ಯದ ಅನೇ‌ಕ ಹೊಸಪ್ರತಿಭೆಗಳು ಸೇರಿ ನಿರ್ಮಿಸಿರುವ "ಪ್ರತ್ಯರ್ಥ" ಚಿತ್ರ ಈ ವಾರ(ಫೆಬ್ರವರಿ 28) ರಾಜ್ಯಾದ್ಯಂತ ಬಿಡುಯಾಗುತ್ತಿದೆ.‌ ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದರು. ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಈ ಚಿತ್ರದ ಕಥೆಯನ್ನು ಮೆಚ್ಚಿಕೊಂಡಿರುವ ತಮಿಳುನಾಡಿನ ಖ್ಯಾತ ಟ್ಯೂಬ್ ಲೈಟ್ ಫಿಲಂಸ್ ಸಂಸ್ಥೆಯು ಕನ್ನಡದಲ್ಲಿ ನಿರ್ಮಾಣವಾಗಿರುವ "ಪ್ರತ್ಯರ್ಥ" ಚಿತ್ರವನ್ನು ತಮಿಳಿಗೂ ರೀಮೇಕ್ ಮಾಡಲು ನಿರ್ದೇಶಕರಿಗೆ ಆಹ್ವಾನ‌ ನೀಡಿದೆ. ಕಾರ್ಕಳ ಮೂಲದ ಅರ್ಜುನ್ ಕಾಮತ್ ನಿರ್ದೇಶಿಸಿರುವ ಈ ಚಿತ್ರ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ‌ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಲ್ಲಿರುವ ಈ ಚಿತ್ರಕ್ಕೆ ಅರ್ಜುನ್ ಕಾಮತ್ ಹಾಗೂ ರಾಮ್ ಸೇರಿ ಕಥೆ ಚಿತ್ರಕಥೆ ಬರೆದು ಅರ್ಜುನ್ ಕಾಮತ್ ನಿರ್ದೇಶನ ಮಾಡಿದ್ದಾರೆ.  ಸ್ಯಾಂಡಲ್ವುಡ್ ಸಂಸ್ಥೆಯ ನಾಗೇಶ್ ಎಂ ಹಾಗೂ ವ...

ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರ ಯಶಸ್ವಿಯಾಗಲೆಂದು ಗ್ರಾಮಸ್ಥರಿಂದ ಪಾದಯಾತ್ರೆ...

ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರ ಯಶಸ್ವಿಯಾಗಲೆಂದು ಗ್ರಾಮಸ್ಥರಿಂದ ಪಾದಯಾತ್ರೆ...    ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರ ಈಗಾಗಲೇ ಫಸ್ಟ್ ಲುಕ್ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನ ತಲುಪಿದೆ.‌  ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಅನೇಕ ಕಡೆಗಳಿಂದ ಪಾದಯಾತ್ರೆ ಮೂಲಕ ತಲುಪಿ ದೇವರ ದರ್ಶನ ಮಾಡುವ ವಾಡಿಕೆ ಇದೆ. ಅದೇ ರೀತಿ ಹಾಸನ ಜಿಲ್ಲೆಯ ಮಡೆನೂರಿನಿಂದಲೂ ಅನೇಕ‌ ಜನರು ಧರ್ಮಸ್ಥಳಕ್ಕೆ ಪಾದಾಯಾತ್ರೆ ಹೊರಟಿದ್ದಾರೆ. ಪಾದಯಾತ್ರೆ ಹೊರಟಿರುವ ಪಾದಾಯಾತ್ರಿಗಳು ತಮ್ಮೂರಿನ ಹುಡುಗ ನಾಯಕನಾಗಿ ಅಭಿನಯಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೊ" ಚಿತ್ರ ಯಶಸ್ವಿಯಾಗಲೆಂದು ಚಿತ್ರದ ಪೋಸ್ಟರ್ ಹಿಡಿದು ಹಾರೈಸಿದ್ದಾರೆ. ಪಾದಯಾತ್ರಿಗಳಿಗೆ ಮಡೆನೂರ್ ಮನು ಮತ್ತು ಸ್ನೇಹಿತರು ನೀರು ಮಜ್ಜಿಗೆ, ಪಾನಕ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ.

ಈ ವಾರ ತೆರೆಗೆ ಬರುತ್ತಿದೆ ಹೊಸತಂಡದ ಹೊಸಪ್ರಯತ್ನ "ಮಾಂಕ್ ದಿ ಯಂಗ್"....

ಈ ವಾರ ತೆರೆಗೆ ಬರುತ್ತಿದೆ ಹೊಸತಂಡದ ಹೊಸಪ್ರಯತ್ನ "ಮಾಂಕ್ ದಿ ಯಂಗ್".        ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ಈ ವಾರ ಫೆಬ್ರವರಿ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ ಸ್ಟುಡಿಯೋಸ್ ಅವರು ವಿತರಣೆ ಮಾಡುತ್ತಿದ್ದಾರೆ.              ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಜನರ ಮನ ತಲುಪಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.   ಈವರೆಗೂ ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.  ನಿವೃತ್ತ ಆರ್ಮಿ ಆಫೀಸರ್ ಕರ್ನಲ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಗೋಪಿಚಂದ್, ಲಾಲ್ ಚಂದ್ ಖತಾರ್ ಮತ್ತು ಸರೋವರ್ ಐದು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ...