Skip to main content

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಪ್ರತ್ಯರ್ಥ"..

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಪ್ರತ್ಯರ್ಥ"..
ಕಥೆ ಮೆಚ್ಚಿಕೊಂಡ ತಮಿಳಿನ‌ ಖ್ಯಾತ ಸಂಸ್ಥೆಯಿಂದ "ಪ್ರತ್ಯರ್ಥ" ಚಿತ್ರವನ್ನು ತಮಿಳಿನಲ್ಲೂ ರೀಮೇಕ್ ಮಾಡಲು ಆಹ್ವಾನ...
ಉಡುಪಿ ಪ್ರಾಂತ್ಯದ ಅನೇ‌ಕ ಹೊಸಪ್ರತಿಭೆಗಳು ಸೇರಿ ನಿರ್ಮಿಸಿರುವ "ಪ್ರತ್ಯರ್ಥ" ಚಿತ್ರ ಈ ವಾರ(ಫೆಬ್ರವರಿ 28) ರಾಜ್ಯಾದ್ಯಂತ ಬಿಡುಯಾಗುತ್ತಿದೆ.‌ ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದರು. ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. 
ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಈ ಚಿತ್ರದ ಕಥೆಯನ್ನು ಮೆಚ್ಚಿಕೊಂಡಿರುವ ತಮಿಳುನಾಡಿನ ಖ್ಯಾತ ಟ್ಯೂಬ್ ಲೈಟ್ ಫಿಲಂಸ್ ಸಂಸ್ಥೆಯು ಕನ್ನಡದಲ್ಲಿ ನಿರ್ಮಾಣವಾಗಿರುವ "ಪ್ರತ್ಯರ್ಥ" ಚಿತ್ರವನ್ನು ತಮಿಳಿಗೂ ರೀಮೇಕ್ ಮಾಡಲು ನಿರ್ದೇಶಕರಿಗೆ ಆಹ್ವಾನ‌ ನೀಡಿದೆ.
ಕಾರ್ಕಳ ಮೂಲದ ಅರ್ಜುನ್ ಕಾಮತ್ ನಿರ್ದೇಶಿಸಿರುವ ಈ ಚಿತ್ರ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ‌ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಲ್ಲಿರುವ ಈ ಚಿತ್ರಕ್ಕೆ ಅರ್ಜುನ್ ಕಾಮತ್ ಹಾಗೂ ರಾಮ್ ಸೇರಿ ಕಥೆ ಚಿತ್ರಕಥೆ ಬರೆದು ಅರ್ಜುನ್ ಕಾಮತ್ ನಿರ್ದೇಶನ ಮಾಡಿದ್ದಾರೆ. 
ಸ್ಯಾಂಡಲ್ವುಡ್ ಸಂಸ್ಥೆಯ ನಾಗೇಶ್ ಎಂ ಹಾಗೂ ವಿಶಿಷ್ಟ ಫಿಲ್ಮ್ ಸಂಸ್ಥೆಯ ಜಯ್ ಆರ್ ಪ್ರಭು ನಿರ್ಮಿಸಿರುವ ಈ ಚಿತ್ರಕ್ಕೆ ನಿತ್ಯಾನಂದ ಪೈ , ಪ್ರೇಮಕುಮಾರ್ ವಿ ಮತ್ತು ಭರತ್ ಶೆಟ್ಟಿ ಅವರ ಸಹ ನಿರ್ಮಾಣವಿದೆ. 
ನಾಯಕರಾಗಿ ರಾಮ್, ಅಕ್ಷಯ್ ಕಾರ್ಕಳ ನಟಿಸಿದ್ದಾರೆ. ನಾಯಕಿಯಾಗಿ ಶೃತಿ ಚಂದ್ರಶೇಖರ್ ಅಭಿನಯಿಸಿದ್ದಾರೆ. ಸುಮನ್ ತಲ್ವಾರ್, ನವೀನ್ ಡಿ ಪಡೀಲ್, ರಮೇಶ್ ಭಟ್, ದೀಪಕ್ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ವಿನುತ್ ಛಾಯಾಗ್ರಾಹಕರಾಗಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...