Skip to main content

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸುಕೃತ ವಾಗ್ಲೆ ಅಭಿನಯದ "ಕಪಟಿ"...

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸುಕೃತ ವಾಗ್ಲೆ ಅಭಿನಯದ "ಕಪಟಿ"...
ದಯಾಳ್ ಪದ್ಮನಾಭನ್ ನಿರ್ಮಾಣದ ಈ ಚಿತ್ರ ಮಾರ್ಚ್ 7 ರಂದು ತೆರೆಗೆ..
 "ಹಗ್ಗದ ಕೊನೆ", "ಆ ಕಾರಾಳ ರಾತ್ರಿ" ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ - ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಕಪಟಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು ಶೆಟ್ಟಿ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 
ನಮ್ಮ ಚಿತ್ರಕ್ಕೆ ನೀವೆಲ್ಲಾ ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ ಎಂದು ಮಾತನಾಡಿದ ಚಿತ್ರದ ನಿರ್ಮಾಪಕ‌ ದಯಾಳ್ ಪದ್ಮನಾಭನ್, ಮೂಲತಃ ಸಾಫ್ಟ್‌ವೇರ್ ಉದ್ಯೋಗಿಗಳಾಗಿರುವ ಹಾಗು ಚಿತ್ರದ ನಿರ್ದೇಶಕರೂ ಆಗಿರುವ ರವಿಕಿರಣ್ ಹಾಗೂ ಚೇತನ್ ಎಸ್ ಪಿ ಮೊದಲು ಈ ಚಿತ್ರದ ನಿರ್ಮಾಣ‌ ಆರಂಭಿಸಿದ್ದರು. ನಂತರ ನನ್ನ ಬಳಿ ಬಂದು ಈ ಚಿತ್ರದ ಬಗ್ಗೆ ಹೇಳಿದರು. ನಾನು ಸಹ ಚಿತ್ರವನ್ನು ನೋಡಿದೆ. ನನಗೆ ಚಿತ್ರ ಇಷ್ಟವಾಯಿತು. ಆನಂತರ ನಾನು ಅವರ ಬಳಿ ಚಿತ್ರಕ್ಕೆ ಸಂಬಂಧಿಸಿದ ಹಾಗೆ ಕೆಲವು ಕಂಡೀಶನ್ ಗಳನ್ನು ಹೇಳಿದೆ. ನನ್ನ ಎಲ್ಲಾ ಕಂಡೀಶನ್ ಗಳಿಗೆ ಅವರು ಒಪ್ಪಿದರು. ಆನಂತರ ಚಿತ್ರದ ಪೂರ್ಣ ನಿರ್ಮಾಣದ ಜವಾಬ್ದಾರಿಯನ್ನು ನಾನು ತೆಗೆದುಕೊಂಡೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಡಾರ್ಕ್ ವೆಬ್ ಜಾನರ್ ನ ಚಿತ್ರವಿದು. ಇಂದು ಟ್ರೇಲರ್ ಬಿಡುಗಡೆಯಾಗಿದೆ‌‌. ಮಾರ್ಚ್ 7 ರಂದು "ಕಪಟಿ" ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದರು.
ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಸಾಮಾನ್ಯ ಜನರಿಗೆ ಮೊಬೈಲ್ ಮಾತ್ರ ಗೊತ್ತು. ಆದರೆ ಅದೇ ಮೊಬೈಲ್ ನಿಂದ ನಾವು ಹೇಗೆ ಮೋಸ ಹೋಗುತ್ತೇವೆ ಎಂಬ ತಿಳುವಳಿಕೆ ನಮಗೆ ಕಡಿಮೆ. ನಮ್ಮ ಚಿತ್ರದಲ್ಲಿ ಕ್ಯಾಬ್ ಡ್ರೈವರ್, ಮೆಡಿಕಲ್ ವಿದ್ಯಾರ್ಥಿ ಹಾಗೂ ಫ್ಯಾಷನ್ ಡಿಸೈನರ್ ಮೂರು ಮುಖ್ಯಪಾತ್ರಗಳಿದ್ದು, ಆ ಪಾತ್ರಗಳನ್ನು ಸಾತ್ವಿಕ್ ಕೃಷ್ಣನ್, ದೇವ್ ದೇವಯ್ಯ ಹಾಗೂ ಸುಕೃತ ವಾಗ್ಲೆ ಮಾಡಿದ್ದಾರೆ. ಇದೊಂದು ಜನಸಾಮಾನ್ಯರ ಕಥೆ. ಆನ್‌ಲೈನ್ ಶೋಷಣೆಯ ಪರಿಣಾಮಗಳು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಜನರಿಗೆ ಹೇಗೆ ಮೋಸ ಮಾಡಬಹುದು ಎಂಬುದನ್ನು ಸಹ ಚಿತ್ರದಲ್ಲಿ ತೋರಿಸಲಾಗಿದೆ. ಇದೊಂದು ತಾಂತ್ರಿಕತೆಯಲ್ಲೂ ಶ್ರೀಮಂತಿಕೆಯಿಂದ ಕೂಡಿರುವ ಚಿತ್ರ ಕೂಡ.‌ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳನ್ನು ನಮ್ಮ ಚಿತ್ರ ಒಳಗೊಂಡಿದೆ.‌‌ ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಬೇಸರ ಮೂಡಿಸದೆ, ಸಂಪೂರ್ಣ ಮನೋರಂಜನೆ ನೀಡುವ ಚಿತ್ರವಿದು ಎಂದು ನಿರ್ದೇಶಕರಾದ ರವಿಕಿರಣ್ ಹಾಗೂ ಚೇತನ್ ಎಸ್ ಪಿ ತಿಳಿಸಿದರು. ‌  
ದಯಾಳ್ ಅವರ ನಿರ್ಮಾಣದ ಚಿತ್ರಗಳೆಂದರೆ ಅದು ಕಂಟೆಂಟ್ ಓರಿಯಂಟೆಡ್ ಚಿತ್ರಗಳೇ ಆಗಿರುತ್ತದೆ. ಒಂದು ಸೂಕ್ಷ್ಮವಾದ ಕಥೆಯನ್ನು ನಿರ್ದೇಶಕ ದ್ವಯರು ತುಂಬಾ ಚೆನ್ನಾಗಿ ನಿರೂಪಣೆ ಮಾಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಸುಕೃತ ವಾಗ್ಲೆ. 
ಪ್ರಮುಖಪಾತ್ರಗಳಲ್ಲಿ ನಟಿಸಿರುವ ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್, ನಟ ಶಂಕರ್ ನಾರಾಯಣ್ ಹಾಗೂ ಛಾಯಾಗ್ರಾಹಕರಾದ ವಿಕ್ರಮ್ ಮತ್ತು ಸತೀಶ್ ರಾಜೇಂದ್ರನ್ "ಕಪಟಿ" ಚಿತ್ರದ ಕುರಿತು ಮಾತನಾಡಿದರು.
 ಸತೀಶ್ ಹೆಚ್ ಎನ್ ಅವರು ವೇದಿಕೆಗೆ ಆಗಮಿಸಿ, ನಮ್ಮನ್ನು ಕೆಲವರು ಆಧುನಿಕ ತಂತ್ರಜ್ಞಾನದ ಮೂಲಕ ಹೇಗೆಲ್ಲಾ ಮೋಸ ಮಾಡುತ್ತಾರೆ ಎಂಬುದನ್ನು ಪರದೆಯ ಮೇಲೆ ತೋರಿಸುತ್ತಾ ವಿವರಿಸಿದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...