Skip to main content

'ಕನಸೊಂದು ಶುರುವಾಗಿದೆ' ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ...

'ಕನಸೊಂದು ಶುರುವಾಗಿದೆ' ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ...ಮಾರ್ಚ್ 7ಕ್ಕೆ ಕನಸೊಂದು ಶುರುವಾಗಿದೆ ಸಿನಿಮಾ ರಿಲೀಸ್..
ಟ್ರೇಲರ್ ನಲ್ಲಿ ಕನಸೊಂದು ಶುರುವಾಗಿದೆ..ಸಾಥ್ ಕೊಟ್ಟ ಡಾರ್ಲಿಂಗ್ ಕೃಷ್ಣ-ಲೂಸ್ ಮಾದ ಯೋಗಿ..
ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು ತೆರೆಗೆ ಬರುತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ನಿನ್ನೆ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟರಾದ ಡಾರ್ಲಿಂಗ್ ಕೃಷ್ಣ, ಲೂಸ್ ಮಾದಯೋಗಿ, ಸಾಹಸ ನಿರ್ದೇಶಕರ ಥ್ರಿಲರ್ ಮಂಜು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸ ತಂಡಕ್ಕೆ ಸಾಥ್ ಕೊಟ್ಟರು.
ಡಾರ್ಲಿಂಗ್ ಕೃಷ್ಣ ಮಾತನಾಡಿ, ಟೈಟಲ್ ತುಂಬಾ ಇಷ್ಟವಾಯ್ತು. 'ಕ' ಡಿಸೈನ್ ಮಾಡಿರುವ ರೀತಿ ತುಂಬಾ ಚೆನ್ನಾಗಿದೆ. ಮಂಜೇಶ್ ಅವರಿಗೆ ಒಳ್ಳೆಯದಾಗಲಿ. ಇದು ಅವರ ಎರಡನೇ ಚಿತ್ರ. ಇನ್ನೂ ಹೆಚ್ಚು ಒಳ್ಳೆ ಸಿನಿಮಾ ಮಾಡಲಿ . ನಿರ್ಮಾಪಕರಿಗೂ ಕೂಡ ಒಳ್ಳೆದಾಗಲಿ. ಸಂತು ಲೀಡ್ ಆಕ್ಟಿಂಗ್ ಮಾಡಿದ್ದಾರೆ. ಇದು ದೊಡ್ಡ ಜವಾಬ್ದಾರಿ. ಸಿನಿಮಾ ನಿಲ್ಲಿಸುವುದು ಕಷ್ಟದ ಕೆಲಸ. ಮಾರ್ಚ್ 7ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿಯೇ ಕನಸೊಂದು ಶುರುವಾಗಿದೆ ಸಿನಿಮಾವನ್ನು ನೋಡಿ ಹಾರೈಸಿ ಎಂದು ತಿಳಿಸಿದರು.
ನಟ ಲೂಸ್ ಮಾದಯೋಗಿ ಮಾತನಾಡಿ, ಇಡೀ ಚಿತ್ರತಂಡಕ್ಕೆ ಒಳ್ಳೆದಾಗ್ಲಿ. ಚಿಕ್ಕ ಸಿನಿಮಾ ದೊಡ್ಡ ಸಿನಿಮಾ ಮ್ಯಾಟರ್ ಅಲ್ಲ. ಜನ ನೋಡಬೇಕು. ಚಿಕ್ಕದೋ? ದೊಡ್ಡದೋ? ಅವರು ಡಿಸೈಡ್ ಮಾಡ್ತಾರೆ. ಇವತ್ತಿನ ಪರಿಸ್ಥಿತಿಗೆ ಸಿನಿಮಾ ಮಾಡೋದುವುದು ಸುಲಭ. ಆದರೆ ಅದನ್ನು ತಲುಪಿಸುವುದು ಕಷ್ಟ. ಅದೊಂದು ಫೋಕಸ್ ಆಗಿ ಮಾಡಿ. ಜನರಿಗೆ ರೀಚ್ ಆದರೆ ಸಾಕು. ಆ ಕೆಲಸ ಮಾಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 
ನಿರ್ದೇಶಕರಾದ ಮಂಜೇಶ್ ಭಾಗವತ್ ಮಾತನಾಡಿ, ಇದು ನನ್ನ ಎರಡನೇ ಸಿನಿಮಾ. ಚಿಕ್ಕ ಕಥೆಯಿಂದ ಶುರುವಾದ ಜರ್ನಿ ಇದು. ಅಂದುಕೊಂಡ ಬಜೆಟ್ ಗಿಂತ ಸ್ವಲ್ಪ ಜಾಸ್ತಿ ಬಜೆಟ್ ಆಯ್ತು. ನಿರ್ಮಾಪಕರು ಕೂಡ ಸಾಥ್ ಕೊಟ್ಟರು. ಕನಸೊಂದು ಶುರುವಾಗಿದೆ ಎಂದರೆ ಅಪ್ಪು ಸರ್ ನೆನಪು ಬರ್ತಾರೆ. ಅವರ ಸಿನಿಮಾದ ಹಾಡಿನಲ್ಲಿ ಬರುವ ಲೈನ್ ಇಟ್ಕೊಂಡು ಟೈಟಲ್ ಇಟ್ಟಿದ್ದೇವೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಮೂವೀ. ನೈಜ ಘಟನೆ ಇಟ್ಕೊಂಡು ಸಿನಿಮಾ ಮಾಡಲಾಗಿದೆ ಎಂದು ಹೇಳಿದರು.
KKR ಮೀಡಿಯಾ ಬ್ಯಾನರ್ ನಡಿ ಲಕ್ಷ್ಮೀ ಕಾಂತ್ ರೆಡ್ಡಿ ನಿರ್ಮಿಸಿರುವ 'ಕನಸೊಂದು ಶುರುವಾಗಿದೆ' ಚಿತ್ರದ ಮೂಲಕ ಸಂತೋಷ್ ಬಿಲ್ಲವ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರಿಗೆ ಜೋಡಿಯಾಗಿ ನಟಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ. ಥ್ರಿಲ್ಲರ್ ಮಂಜು, ಕುರಿ ಸುನಿಲ್ , ರಶ್ಮಿ, ರಾಜು ಕಾಲ್ಕುಣಿ, ಕೃಷ್ಣಮೂರ್ತಿ ಕನಕಪುರ, ನಾಗರತ್ನ ಭಟ್ 
ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕನಸೊಂದು ಶುರುವಾಗಿದೆ ಚಿತ್ರವನ್ನು ಬೆಂಗಳೂರು, ಕುಂದಾಪುರ & ಕುಣಿಗಲ್ ಸುತ್ತಮುತ್ತಲ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ.
ಮಂಜೇಶ್ ಭಾಗವತ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದಲ್ಲಿ ಲೋಕೇಂದ್ರ ಸೂರ್ಯ ಕ್ಯಾಮೆರಾ ಹಿಡಿದಿದ್ದು, ಸೂರಜ್ ಜೋಯಿಸ್ ಸಂಗೀತ, ದೀಪಕ್ ಸಿಎಸ್ ಗೌಡ ಸಂಕಲನ ಜವಾಬ್ದಾರಿ ನಿಭಾಯಿಸಿದ್ದಾರೆ. ಶಶಾಂಕ್, ಸಿಂಪಲ್ ಸುನಿ & ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಸೋನು ನಿಗಂ, ರಾಜೇಶ್ ಕೃಷ್ಣನ್ ಹಾಗೂ ವಾಸುಕಿ ವೈಭವ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಮಾಚ್ 7ಕ್ಕೆ ಧೀರಜ್ ರಾಜ್ಯಾದ್ಯಂತ ಕನಸೊಂದು ಶುರುವಾಗಿದೆ ಸಿನಿಮಾವನ್ನು ರಿಲೀಸ್ ಮಾಡಲಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...