Skip to main content

Posts

Showing posts from March, 2025

ಕುತೂಹಲ ಮೂಡಿಸಿದೆ ಬಹು ನಿರೀಕ್ಷಿತ '45" ಚಿತ್ರದ ಟೀಸರ್...

ಕುತೂಹಲ ಮೂಡಿಸಿದೆ ಬಹು ನಿರೀಕ್ಷಿತ '45" ಚಿತ್ರದ ಟೀಸರ್... ಯುಗಾದಿ ಹಬ್ಬದಂದು ಬಿಡುಗಡೆಯಾಯಿತು ಈ ಮಲ್ಟಿಸ್ಟಾರರ್ ಸಿನಿಮಾದ ಮನಮುಟ್ಟುವ ಟೀಸರ್.. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ಹಾಗೂ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ಬಹುನಿರೀಕ್ಷಿತ "45" ಚಿತ್ರದ ಟೀಸರ್ ಯುಗಾದಿ ಹಬ್ಬದ ಶುಭದಿನದಂದು ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟೀಸರ್ ಅನಾವರಣ ಮಾಡಿದರು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟೀಸರ್ ಬಿಡುಗಡೆ ನಂತರ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಡಿ.ಕೆ.ಡಿ ರಿಯಾಲಿಟಿ ಶೋ ಮಾಡುತ್ತಿದ್ದ ಸಮಯದಲ್ಲಿ ಅರ್ಜುನ್ ಜನ್ಯ 4 ರಿಂದ 5 ನಿಮಿಷದಲ್ಲಿ ಈ ಚಿತ್ರದ ಕಥೆ ಹೇಳಿದರು. ಕಥೆ ಕೇಳಿ ಥ್ರಿಲ್ ಆದೆ. ಕಥೆ ಕೊಟ್ಟು ಬಿಡುತ್ತೇನೆ ಯಾರಾದರೂ ನಿರ್ದೇಶನ ಮಾಡಲಿ ಎಂದು ಅರ್ಜುನ್ ಜನ್ಯ ಹೇಳಿದರು. ನೀವು ಕಥೆ ಚೆನ್ನಾಗಿ ಹೇಳಿದ್ದೀರಾ. ನೀವೇ ನಿರ್ದೇಶನ ಮಾಡಿ ಅಂದೆ. ನಂತರ ನಿರ್ಮಾಣಕ್ಕೆ ನಿರ್ಮಾಪಕ ರಮೇಶ್ ರೆಡ್ಡಿ ಮುಂದಾದರು. "ಪ್ರೀತ್ಸೆ...

ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ "ಗೆರಿಲ್ಲಾ WAR" ಚಿತ್ರಕ್ಕೆ "ಮಂಡ್ಯ ಸ್ಟಾರ್" ಲೋಕಿ ನಾಯಕ...

ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ "ಗೆರಿಲ್ಲಾ WAR" ಚಿತ್ರಕ್ಕೆ "ಮಂಡ್ಯ ಸ್ಟಾರ್" ಲೋಕಿ ನಾಯಕ... ಯಗಾದಿ ಹಬ್ಬದ ದಿನದಂದು ತಮ್ಮ 50ನೇ ನಿರ್ದೇಶನದ ಚಿತ್ರದ ಘೋಷಣೆ ಮಾಡಿದ ಜನಪ್ರಿಯ ನಿರ್ದೇಶಕ "AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ "ಗೆರಿಲ್ಲಾ WAR".  "ಮಂಡ್ಯ ಸ್ಟಾರ್" ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ "ಮಂಡ್ಯ ಸ್ಟಾರ್" ಲೋಕಿ ಎಂದೇ ಪ್ರಸಿದ್ಧರಾಗಿರುವ ಲೋಕೇಶ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಯುಗಾದಿ ಹಬ್ಬದ ದಿನದಂದು ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಿರ್ದೇಶಕರು ತಮ್ಮ ನಿರ್ದೇಶನದ 50ನೇ ಚಿತ್ರದ ಘೋಷಣೆ ಮಾಡಿದ್ದಾರೆ.  ಗಂಗಮ್ಮ ಎಂಟರ್ಪ್ರೈಸಸ್ ಲಾಂಛನದಲ್ಲಿ ರಮೇಶ್ ಅಬ್ಬನಕುಪ್ಪೆ(ಬಿಡದಿ) ಹಾಗೂ ಸ್ನೇಹಿತರು ನಿರ್ಮಿಸುತ್ತಿರುವ ಈ ಚಿತ್ರವನ್ನು ಸಿ.ಮಾದೇಶ್(AVVA) ಅವರು ಅರ್ಪಿಸುತ್ತಿದ್ದಾರೆ. ಓಂಪ್ರಕಾಶ್ ರಾವ್ ಅವರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ದೀಪು.ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿ...

ವಿಜಯ್‌ ಸೇತುಪತಿಗೆ ಪುರಿ ಜಗನ್ನಾಥ್‌ ಆಕ್ಷನ್‌ ಕಟ್‌.. ಜೂನ್‌ ನಿಂದ ಶೂಟಿಂಗ್‌ ಶುರು..

ವಿಜಯ್‌ ಸೇತುಪತಿಗೆ ಪುರಿ ಜಗನ್ನಾಥ್‌ ಆಕ್ಷನ್‌ ಕಟ್‌.. ಜೂನ್‌ ನಿಂದ ಶೂಟಿಂಗ್‌ ಶುರು.. ತೆಲುಗಿನ ಡ್ಯಾಷಿಂಗ್‌ ಡೈರೆಕ್ಟರ್‌ ಪುರಿ ಜಗನ್ನಾಥ್ ಮೊದಲ ಬಾರಿಗೆ ಮಕ್ಕಳ್ ಸೆಲ್ವನ್ ಖ್ಯಾತಿಯ ವಿಜಯ್ ಸೇತುಪತಿ ಜೊತೆ ಕೈ ಜೋಡಿಸಿದ್ದಾರೆ. ಯುಗಾದಿ ಹಬ್ಬದ ವಿಶೇಷವಾಗಿ ಪುರಿ ಜಗನ್ನಾಥ್‌ ತಮ್ಮ ಮುಂದಿನ ಚಿತ್ರದ ಬಗ್ಗೆ ಬಿಗ್‌ ಅಪ್‌ ಕೊಟ್ಟಿದ್ದಾರೆ.  ಬಹಳ ದಿನಗಳಿಂದಲೂ ಈ ಡೆಡ್ಲಿ ಕಾಂಬಿನೇಷನ್‌ ಒಂದಾಗಲಿದೆ ಎಂಬ ಮಾತು ಕೇಳಿ ಬಂದಿತ್ತು. ಅದರಂತೆ ಇಂದು ಪುರಿ ಜಗನ್ನಾಥ್‌ ತಮ್ಮ ಮುಂದಿನ ಚಿತ್ರವನ್ನು ವಿಜಯ್‌ ಸೇತುಪತಿ ಜೊತೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ವಿಜಯ್‌ ಸೇತುಪತಿಯವರಿಗಾಗಿಯೇ ಪುರಿ ಒಂದೊಳ್ಳೆ ಅದ್ಭುತ ಕಥೆಯನ್ನು ಸಿದ್ದಪಡಿಸಿಕೊಂಡಿದ್ದು, ಹಿಂದೆಂದೂ ಕಾಣದ ಲುಕ್‌ ನಲ್ಲಿ ಅವರನ್ನು ಪ್ರೇಕ್ಷಕರಿಗೆ ತೋರಿಸಲಿದ್ದಾರೆ.  ಪುರಿ ಕನೆಕ್ಟ್ಸ್‌ ಬ್ಯಾನರ್‌ ನಡಿ ಪುರಿ ಜಗನ್ನಾಥ್‌ ಹಾಗೂ ಚಾರ್ಮಿ ಕೌರ್‌ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದು ಪ್ಯಾನ್‌ ಇಂಡಿಯಾ ಪ್ರಾಜೆಕ್ಟ್‌ ಆಗಿದ್ದು, ಜೂನ್‌ ತಿಂಗಳಿನಿಂದ ಚಿತ್ರೀಕರಣ ಶುರುವಾಗಲಿದೆ. ಇತ್ತೀಚೆಗೆ ವಿಜಯ್‌ ಸೇತುಪತಿ ಅಭಿನಯದ ಮಹಾರಾಜ ಸಿನಿಮಾ ಬಾಕ್ಸಾಫೀಸ್‌ ನಲ್ಲಿ ದಾಖಲೆ ಬರೆದಿತ್ತು. ಹೀಗಾಗಿ ಸೇತುಪತಿ ಮುಂದಿನ ಪ್ರಾಜೆಕ್ಟ್‌ ಏನು ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.

ಅರಮನೆ ನಗರದಲ್ಲಿ ಅದ್ದೂರಿಯಾಗಿ ನೆರವೇರಿತು "KCL" ಮೊದಲ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ..

ಅರಮನೆ ನಗರದಲ್ಲಿ ಅದ್ದೂರಿಯಾಗಿ ನೆರವೇರಿತು "KCL" ಮೊದಲ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ.. ಸ್ಯಾಂಡಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಏಪ್ರಿಲ್28 ರಿಂದ ದುಬೈನ ಶಾರ್ಜಾ ಮೈದಾನದಲ್ಲಿ ಕ್ರಿಕೆಟ್ ಟೂರ್ನಿ.. ದುಬೈನಲ್ಲಿರುವ ಅನಿವಾಸಿ‌ ಕನ್ನಡಿಗರು ಸ್ಯಾಂಡಲ್ ವುಡ್ ನಟನಟಿಯರನ್ನು‌ ಹಾಗೂ ತಂತ್ರಜ್ಞರನ್ನು ಒಂದೇ ವೇದಿಕೆಯಲ್ಲಿ ಕಂಡು ಸಂಭ್ರಮಿಸುವಂತೆ ಮಾಡುವ ಸಲುವಾಗಿ ಕರ್ನಾಟಕ ಸೆಲೆಬ್ರಿಟಿ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದಾರೆ.  ಮೈಸೂರು ನಗರದ ಖಾಸಗಿ ಹೋಟೆಲ್ ನಲ್ಲಿ ತಂಡದ ಆಟಗಾರರ ಹರಾಜು ಪ್ರಕ್ರಿಯೆ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಮೊದಲು  ಶಾಸಕ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಟರಾದ ಡಾರ್ಲಿಂಗ್ ಕೃಷ್ಣ, ರವಿ ಚೇತನ್, ನಿರ್ದೇಶಕ ತರುಣ್ ಸುಧೀರ್, ಪವನ್ ಒಡೆಯರ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.   ನಂತರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅನಿವಾಸಿ ಕನ್ನಡಿಗ ಮಯೂರ್ ಮಾಸ್ಟರ್ ಅವರು ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಒಂದುಗೂಡಿ ಕರ್ನಾಟಕ ಸೆಲೆಬ್ರಿಟಿ ಲೀಗ್(KCL) ಸೀಸನ್ ೧ ಆಯೋಜಿಸುತ್ತಿದ್ದಾರೆ‌. ಏಪ್ರಿಲ್ 28 ರಿಂದ ಮೇ 3 ರವರೆಗೂ ದುಬೈನ‌ ಶಾರ್ಜಾ ಮೈದಾನದಲ್ಲಿ ಪಂದ್ಯಗಳು ನಡೆಯಲಿದೆ. ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರು ಮಾತ್ರ ಭಾಗವಹಿಸಲಿದ್ದಾ...

ಸೆಟ್ಟೇರಿತು ಚಿರಂಜೀವಿ 157 ಸಿನಿಮಾ..ಕ್ಲಾಪ್ ಮಾಡಿ ಶುಭ ಹಾರೈಸಿದ ವಿಕ್ಟರಿ ವೆಂಕಟೇಶ್..

ಸೆಟ್ಟೇರಿತು ಚಿರಂಜೀವಿ 157 ಸಿನಿಮಾ..ಕ್ಲಾಪ್ ಮಾಡಿ ಶುಭ ಹಾರೈಸಿದ ವಿಕ್ಟರಿ ವೆಂಕಟೇಶ್.. ಯುಗಾದಿ ಹಬ್ಬಕ್ಕೆ ಮೆಗಾಸ್ಟಾರ್ ಚಿರಂಜೀವಿ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್ ನಲ್ಲಿಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಿತ್ರಕ್ಕೆ ವಿಕ್ಟರಿ ವೆಂಕಟೇಶ್ ಕ್ಲ್ಯಾಪ್ ಮಾಡಿದರು. ನಿರ್ಮಾಪಕ ಅಲ್ಲು ಅರವಿಂದ್ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಿರ್ದೇಶಕ ಕೆ ರಾಘವೇಂದ್ರ ಫಸ್ಟ್ ಶಾಟ್ ಗೆ ಆಕ್ಷನ್ ಕಟ್ ಹೇಳಿದರು. ಖ್ಯಾತ ನಿರ್ಮಾಪಕರಾದ ದಿಲ್ ರಾಜು ಹಾಗೂ ಸಿರೀಶ್ ಸ್ಕ್ರಿಪ್ಟ್ ಹಸ್ತಾಂತರಿಸಿದರು. ಮುಹೂರ್ತ ಸಮಾರಂಭದಲ್ಲಿ ನಿರ್ದೇಶಕರಾದ ಬಾಬಿ, ವಸಿಷ್ಠ, ಶ್ರೀಕಾಂತ್ ಒಡೆಲಾ, ಖ್ಯಾತ ಕಥೆಗಾರ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಚಿರು 157ನೇ ಚಿತ್ರಕ್ಕೆ ಸಂಕ್ರಾಂತಿಕಿ ವಸ್ತುನ್ನಾಂ ಖ್ಯಾತಿಯ ನಿರ್ದೇಶಕ‌ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ಮೆಗಾ ಸ್ಟಾರ್ ಅವರನ್ನು ಹೊಸ ಅವತಾರದಲ್ಲಿ ಪರಿಚಯಿಸಲು ರೆಡಿಯಾಗಿದ್ದಾರೆ. ಶಂಕರ್ ವರಪ್ರಸಾದ್ ಎಂಬ ಪಾತ್ರದಲ್ಲಿ ಚಿರಂಜೀವಿ ನಟಿಸಲಿದ್ದಾರೆ.‌‌ಅನಿಲ್ ರವಿಪುಡಿ ಮನರಂಜನೆಗೆ ಎಮೋಷನ್ ಟಚ್ ಕೊಟ್ಟು ಕಥೆ ರೂಪಿಸಿದ್ದಾರಂತೆ. ಶೈನ್ ಸ್ಕ್ರೀನ್‌ಗಳು ಮತ್ತು ಗೋಲ್ಡ್ ಬಾಕ್ಸ್ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ನಡಿ ಸಾಹು ಗರಪತಿ ಮತ್ತು ಸುಶ್ಮಿತಾ ಕೊನಿಡೇಲ ಚಿತ್ರ ನಿರ್ಮಾಣ ಮಾಡುತ್...

ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ "ಬ್ರ್ಯಾಟ್".(BRAT)...

ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ "ಬ್ರ್ಯಾಟ್".(BRAT)... ಈ ಚಿತ್ರದ ಮೂಲಕ 5 ವರ್ಷಗಳ ನಂತರ ಮತ್ತೆ ನಿರ್ಮಾಣಕ್ಕೆ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ನಿರ್ಮಾಪಕ‌ ಮಂಜುನಾಥ್ ಕಂದಕೂರ್.. ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ "ಬ್ರ್ಯಾಟ್" ಎಂದು ಹೆಸರಿಡಲಾಗಿದೆ. ಗುರುನಂದನ್ ಅಭಿನಯದ ಯಶಸ್ವಿ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕರ ಸಹೋದರ ಬದರಿನಾಥ್ ಶೀರ್ಷಿಕೆ ಅನಾವರಣ ಮಾಡಿದರು. ‌ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಹಾಗೂ ನಿರ್ದೇಶಕ ಶಶಾಂಕ್ ಅವರು "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ನಂತರ ಈ ಚಿತ್ರ ಮಾಡುತ್ತಿದ್ದೇವೆ. ಆದರೆ ಶಶಾಂಕ್ ಅವರು ಈವರೆಗೂ ನಿರ್ದೇಶನ ಮಾಡಿರದ ಹಾಗೂ ನಾನು ಕೂಡ ...

ಏಪ್ರಿಲ್ 4 ರಂದು ಮೈಸೂರಿನ ಶಿವಾಜಿ ನಿರ್ಮಾಣ, ನಟನೆ ಹಾಗೂ ನಿರ್ದೇಶನದ "ಬೆಂಕಿಯ ಬಲೆ ಪ್ರೀತಿಯ ಕೊಲೆ" ಬಿಡುಗಡೆ..

ಏಪ್ರಿಲ್ 4 ರಂದು ಮೈಸೂರಿನ ಶಿವಾಜಿ ನಿರ್ಮಾಣ, ನಟನೆ ಹಾಗೂ ನಿರ್ದೇಶನದ "ಬೆಂಕಿಯ ಬಲೆ ಪ್ರೀತಿಯ ಕೊಲೆ" ಬಿಡುಗಡೆ.. "ಪರಚಂಡಿ", "ಆಘಾತ್ ಹ್ಯಾಂಗರ್", " ಕುಚುಕು", "ಅಲೆಕ್ಸಾ", "ಕುಂಟೆಬಿಲ್ಲೆ", " ಫಾದರ್" ಮುಂತಾದ ಚಿತ್ರಗಳಲ್ಲಿ ನಟಿಸಿರುವ ನಟ ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಮೈಸೂರಿನ ಶಿವಾಜಿ ನಿರ್ಮಿಸಿ, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರದು ನಿರ್ದೇಶಿಸಿ, ನಟಿಸಿರುವ "ಬೆಂಕಿಯ ಬಲೆ ಪ್ರೀತಿಯ ಕೊಲೆ" ಚಿತ್ರ ಇದೇ ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ.  ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದ ಭಯಂಕರ ಕರೋನ ಲಾಕ್ ಡೌನ್ ನಂತರ ಬೆಂಗಳೂರಿನ ಕಲಾವಿದರ ಸಂಫದಲ್ಲಿ ಪ್ರದರ್ಶನಗೊಂಡ ಮೊದಲ ಕನ್ನಡ ಚಿತ್ರವಿದು. ಅಷ್ಟೇ ಅಲ್ಲ. ರಾಷ್ಟ್ರದ ಹಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಹಾಗೂ ಕುಟುಂಬದವರು ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿರುವುದು ವಿಶೇಷ. ಶಿವಾಜಿ‌ ಅವರು ಗುಜರಾತ್ ನ ಮೋದಿ ಅವರ ನಿವಾಸಕ್ಕೆ ತೆರಳಿದಾಗ ಈ ಚಿತ್ರದ ಬಗ್ಗೆ ವಿವರಿಸಿದ್ದರು. ಚಿತ್ರದ ಬಗ್ಗೆ ತಿಳಿದ ಮೋದಿ ಅವರ ಕುಟುಂಬದ ಚಿತ್ರಕ್ಕೆ ಯಶಸ್ಸನ್ನು ಹಾರೈಸಿದ್ದರು.  ಹೀಗೆ ಹಲವು ವಿಶೇಷಗಳಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವಾಜಿ, ಮಂಡ್ಯ ರಮೇಶ್. ಜಿ.ಬಿ ಸಿದ್ದೇ ಗೌಡ್ರು, ಧೀರಜ, ಮಹಾದೇವಮೂರ್ತಿ, ಶಿವಲಿಂಗೇಗೌಡ. ...

"ಠಾಣೆ" ಚಿತ್ರದ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಹಾಡನ್ನು ಮುಕ್ತಕಂಠದಿಂದ ಶ್ಲಾಘಿಸಿದ ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ.

"ಠಾಣೆ" ಚಿತ್ರದ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಹಾಡನ್ನು ಮುಕ್ತಕಂಠದಿಂದ ಶ್ಲಾಘಿಸಿದ ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ. ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ "ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಟ್ರೆಂಡಿಂಗ್ ನಲ್ಲಿದೆ. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡಿಗೆ ಕನ್ನಡ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ ಅವರಿಗೂ ಸಹ ಈ ಹಾಡು ಅಚ್ಚುಮೆಚ್ಚಂತೆ. ಬಾಲ ಪ್ರತಿಭೆಗಳ ಗಾಯನದಲ್ಲಿ ಮೂಡಿಬಂದಿರುವ ಈ ಹಾಡನ್ನು ಮೆಚ್ಚಿಕೊಂಡ ನಾರಾಯಣ ಗೌಡ ಅವರು ಚಿತ್ರತಂಡದವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದರು.                     ಬಾಲ ಪ್ರತಿಭೆಗಳು ಹಾಡಿರುವ "ಠಾಣೆ" ಚಿತ್ರದ ಅರ್ಥಗರ್ಭಿತ ಈ ಹಾಡನ್ನು ನಾನು ದಿನಕ್ಕೆ ನಾಲ್ಕೈದು ಬಾರಿ ಕೇಳುತ್ತಲೇ ಇರುತ್ತೇನೆ. ಅಷ್ಟು ಇಷ್ಟವಾಗಿದೆ ನನಗೆ ಈ ಹಾಡು. ಮಕ್ಕಳು ತುಂಬಾ ಚೆನ್ನಾಗಿ ಹಾಡಿ...

ಧನ್ವೀರ್ ಅಭಿನಯದ "ವಾಮನ" ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್.

ಧನ್ವೀರ್ ಅಭಿನಯದ "ವಾಮನ" ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್. ಚೇತನ್ ಗೌಡ ನಿರ್ಮಾಣದ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ.. ಇಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ "ವಾಮನ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜಸ್ಥಾನದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಡಿಯೋ ಮೂಲಕ "ವಾಮನ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಪ್ರಸನ್ನ ಚಿತ್ರಮಂದಿರದಲ್ಲಿ ಸಹಸ್ರಾರು ದರ್ಶನ್ ಅವರ ಅಭಿಮಾನಿಗಳು ಈ ಅದ್ದೂರಿ ಸಮಾರಂಭಕ್ಕೆ ಸಾಕ್ಷಿಯಾದರು.  ಧನ್ವೀರ್ ಅಭಿನಯದ ನಾಲ್ಕನೇ ಚಿತ್ರ "ವಾಮನ". ಧನ್ವೀರ್ ಅವರ ಹಿಂದಿನ ಮೂರು ಚಿತ್ರಗಳೂ ವಿಭಿನ್ನವಾಗಿತ್ತು. ಅದರಲ್ಲೂ " ಕೈವಾ" ನನ್ನಿಷ್ಟದ ಚಿತ್ರ. "ವಾಮನ" ಚಿತ್ರ ಕೂಡ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಚಿತ್ರದ "ಮುದ್ದು ರಾಕ್ಷಸಿ" ಹಾಡು ನನಗೆ ಬಹಳ ಇಷ್ಟ. ಇಂದು ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 10ರಂದು ತೆರೆಗೆ ಬರುತ್ತಿದೆ. ದಯವಿಟ್...

ʼಅಜ್ಞಾತವಾಸಿʼಯಿಂದ ಮತ್ತೊಂದು ಹಾಡು..ನೂರು ಕನಸನು ಕಾಣಲು ಸಿದ್ದು ಮೂಲಿಮನಿ ಕುಣಿದಾಗ..

ʼಅಜ್ಞಾತವಾಸಿʼಯಿಂದ ಮತ್ತೊಂದು ಹಾಡು..ನೂರು ಕನಸನು ಕಾಣಲು ಸಿದ್ದು ಮೂಲಿಮನಿ ಕುಣಿದಾಗ.. ಅಜ್ಞಾತವಾಸಿ ಏಪ್ರಿಲ್‌ 11ರಂದು ತೆರೆಗೆ ಬರ್ತಿರುವ ಬಹುನಿರೀಕ್ಷಿತ ಕನ್ನಡ ಸಿನಿಮಾ. ಗುಲ್ಟು ಸೂತ್ರಧಾರ ಜನಾರ್ಧನ್‌ ಚಿಕ್ಕಣ್ಣ ನಿರ್ದೇಶನದ ಈ ಚಿತ್ರ ಈಗಾಗಲೇ ನಾನಾ ಆಂಗಲ್‌ ನಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಟೀಸರ್‌, ಕಲರ್‌ ಫುಲ್‌ ಹಾಡುಗಳ ಮೂಲಕ ಚಿತ್ರತಂಡ ಸಿನಿಮಾಪ್ರೇಮಿಗಳಿಗೆ ಆಹ್ವಾನ ಕೊಟ್ಟಿದೆ. ಇದೀಗ ಅಜ್ಞಾತವಾಸಿ ಅಂಗಳದಿಂದ ಮತ್ತೊಂದು ಸೊಗಸಾದ ಗೀತೆ ಬಿಡುಗಡೆಯಾಗಿದೆ. ನೂರು ಕನಸು ಕಾಣಲು ಎಂಬ ಹಾಡು ಸರಿಗಮ ಕನ್ನಡ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ರಜತ್ ಹೆಗ್ಡೆ ಧ್ವನಿಯಾಗಿದ್ದು, ಚರಣ್ ರಾಜ್ ಟ್ಯೂನ್ ಹಾಕಿರುವ ನೂರು ಕನಸನು ಕಾಣಲು ಹಾಡಿಗೆ ಸಿದ್ದು ಮೂಲಿಮನಿ ಹೆಜ್ಜೆ ಹಾಕಿದ್ದಾರೆ. ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನಾ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ. ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರ...

'ಪೆದ್ದಿ' ಅವತಾರ ತಾಳಿದ ರಾಮ್ ಚರಣ್...

'ಪೆದ್ದಿ' ಅವತಾರ ತಾಳಿದ ರಾಮ್ ಚರಣ್... ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ ಫಿಕ್ಸ್...ಮಾಸ್ ಲುಕ್ ನಲ್ಲಿ ಚೆರ್ರಿ ಅಬ್ಬರ.. ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೊಸ ಅವತಾರ ತಾಳಿದ್ದಾರೆ. ಅವರ ಜನ್ಮದಿನದ ಅಂಗವಾಗಿ RC16 ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು ನಿರ್ದೇಶನದ ಈ ಚಿತ್ರದಲ್ಲಿ ರಾಮ್‌ಚರಣ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ರಾಮ್‌ ಚರಣ್‌ ಹೊಸ ಚಿತ್ರಕ್ಕೆ ಪೆದ್ದಿ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಪೆದ್ದಿ ಚಿತ್ರದ ಎರಡು ಪೋಸ್ಟರ್‌ಗಳು ಬಿಡುಗಡೆ ಆಗಿವೆ. ಒಂದರಲ್ಲಿ ಬೀಡಿ ಸೇದುತ್ತಿದ್ದರೆ, ಇನ್ನೊಂದರಲ್ಲಿ ಕೈಲ್ಲಿ ಬ್ಯಾಟ್‌ ಹಿಡಿದು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.  ಪೆದ್ದಿಯಲ್ಲಿ ರಾಮ್ ಚರಣ್ ಗೆ ಜೋಡಿಯಾಗಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ತಾರಾ ಬಳಗದಲ್ಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ಚಿತ್ರ ತಯಾರಾಗುತ್ತಿದ್ದು, ಎಆರ್ ರೆಹಮಾನ್ ಸಂಗೀತ, ನವೀನ್ ನೂಲಿ‌ ಸಂಕಲನ, ಆರ್ ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.