Skip to main content

ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ "ಬ್ರ್ಯಾಟ್".(BRAT)...

ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ "ಬ್ರ್ಯಾಟ್".(BRAT)...ಈ ಚಿತ್ರದ ಮೂಲಕ 5 ವರ್ಷಗಳ ನಂತರ ಮತ್ತೆ ನಿರ್ಮಾಣಕ್ಕೆ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ನಿರ್ಮಾಪಕ‌ ಮಂಜುನಾಥ್ ಕಂದಕೂರ್..
ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ "ಬ್ರ್ಯಾಟ್" ಎಂದು ಹೆಸರಿಡಲಾಗಿದೆ. ಗುರುನಂದನ್ ಅಭಿನಯದ ಯಶಸ್ವಿ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕರ ಸಹೋದರ ಬದರಿನಾಥ್ ಶೀರ್ಷಿಕೆ ಅನಾವರಣ ಮಾಡಿದರು. ‌ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಾನು ಹಾಗೂ ನಿರ್ದೇಶಕ ಶಶಾಂಕ್ ಅವರು "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ನಂತರ ಈ ಚಿತ್ರ ಮಾಡುತ್ತಿದ್ದೇವೆ. ಆದರೆ ಶಶಾಂಕ್ ಅವರು ಈವರೆಗೂ ನಿರ್ದೇಶನ ಮಾಡಿರದ ಹಾಗೂ ನಾನು ಕೂಡ ಈವರೆಗೂ ಮಾಡಿರದ ವಿಭಿನ್ನ ಕಥೆಯುಳ್ಳ ಚಿತ್ರ "ಬ್ರ್ಯಾಟ್". ನನ್ನ ಪ್ರಕಾರ ಕನ್ನಡದಲ್ಲಿ ತೀರ ಅಪರೂಪವಾದ ಕಥಾಹಂದರ ಹೊಂದಿರುವ ಚಿತ್ರವಿದು. ಪ್ರೇಮಕಥೆಗಳು, ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರಗಳಲ್ಲಿ ನಟಿಸುತ್ತಿದ್ದ ನನಗೆ ಇದು ಹೊಸ ತರಹದ ಚಿತ್ರ. ಈ ಚಿತ್ರಕ್ಕಾಗಿ ನಾನು ಮೊದಲ ಬಾರಿಗೆ ವರ್ಕ್ ಶಾಪ್ ಸಹ ಮಾಡಿದ್ದೇನೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮನಿಶಾ ಅವರು‌ ಕನ್ನಡದವರೆ ಆಗಿದರೂ ಮೊದಲ ಬಾರಿಗೆ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಯಾವುದೇ ಕೊರತೆ ಇಲ್ಲದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡುತ್ತಿದ್ದಾರೆ. ಅದ್ಭುತ ‌ಕಲಾವಿದರ ಹಾಗೂ ಅನುಭವಿ ತಂತ್ರಜ್ಞರ ದಂಡೇ ನಮ್ಮ ಚಿತ್ರದಲ್ಲಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.
ಅತೀ ಹೆಚ್ಚು ತರಲೆ ಮಾಡುವ ಹುಡುಗರನ್ನು ಸಾಮಾನ್ಯವಾಗಿ "ಬ್ರ್ಯಾಟ್" ಎಂದು ಕರೆಯುತ್ತಾರೆ. ಅದರಲ್ಲೂ ಹದಿನಾರು ವರ್ಷದ ಒಳಗಿರುವ ಮಕ್ಕಳಿಗೆ ಈ ಪದ ಬಳಸುವುದು ಹೆಚ್ಚು. ನಮ್ಮ ಚಿತ್ರದ ಕಥೆಯೂ ಸಹ ಯುವಜನತೆಗೆ ಹತ್ತಿರವಾಗಿರುವುದರಿಂದ ಈ ಶೀರ್ಷಿಕೆ ಸೂಕ್ತವೆನಿಸಿತು. ಕನ್ನಡದಲ್ಲಿ ಶೀರ್ಷಿಕೆ ಇಡೋಣ ಎಂದು ಕೊಂಡು ನೋಡಿದಾಗ ಸಾಕಷ್ಟು ಈಗಾಗಲೇ ಬಂದಿರುವ ಚಿತ್ರಗಳ ಶೀರ್ಷಿಕೆಗಳೆ ದೊರಕಿತು. ಹಾಗಾಗಿ, ಹೇಗಿದರೂ ಇದು ಕನ್ನಡ ಸೇರಿದಂತೆ ಐದು‌ ಭಾಷೆಗಳಲ್ಲಿ ಬರುತ್ತಿರುವ ಚಿತ್ರವಾಗಿರುವುದರಿಂದ "ಬ್ರ್ಯಾಟ್" ಶೀರ್ಷಿಕೆಯೇ ಸರಿ ಎನಿಸಿತು. ಈವರೆಗೂ‌ ಈ ಹೆಸರಿನಲ್ಲಿ ಯಾವ ಭಾಷೆಗಳಲ್ಲೂ ಸಿನಿಮಾ ಬಂದಿಲ್ಲ. ನಮ್ಮದೇ ಮೊದಲು. ಇನ್ನೂ ಕೃಷ್ಣ ಅವರು ಹೇಳಿದ ಹಾಗೆ, ನಾನು ಸಾಮಾನ್ಯವಾಗಿ ಒಂದೇ ತರಹದ ಚಿತ್ರಗಳನ್ನು ಮಾಡಲು ಇಷ್ಟಪಡುವುದಿಲ್ಲ. ಬೇರೆ ಬೇರೆ ತರಹ ಚಿತ್ರಗಳನ್ನು ನಿರ್ದೇಶಿಸಲು ಇಷ್ಟ ಪಡುತ್ತೇನೆ. ಈ ಚಿತ್ರ ಕೂಡ ನಾನು ಈವರೆಗೂ ಮಾಡಿರದ ಬೇರೆ ಜಾನರ್‌ನ ಚಿತ್ರ.“ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕರಾದ ಮಂಜುನಾಥ್ ಈ ಕಥೆಯನ್ನು ಮೆಚ್ಚಿಕೊಂಡು ಮತ್ತೆ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಚಿತ್ರ ಅದ್ದೂರಿಯಾಗಿ ಮೂಡಿಬರಲು ಅವರ ಸಹಕಾರವೇ ಕಾರಣ. ಇನ್ನೂ, ಸಾಮಾನ್ಯವಾಗಿ ಎಲ್ಲರೂ ಶೀರ್ಷಿಕೆಯನ್ನು ವಿಡಿಯೋ ತುಣಕಿನಲ್ಲೂ‌ ಅಥವಾ ಪೋಸ್ಟರ್ ನಲ್ಲೂ ಬಿಡುಗಡೆ ಮಾಡುತ್ತಾರೆ. ಆದರೆ ನಮ್ಮ ಚಿತ್ರದ ಶೀರ್ಷಿಕೆಯನ್ನು ವಿಶೇಷವಾಗಿ ಹಾಡೊಂದರ ಮೂಲಕ ಅನಾವರಣ ಮಾಡಿದ್ದೇವೆ. ಐದು‌ ಭಾಷೆಗಳಲ್ಲಿ ಈ ಶೀರ್ಷಿಕೆಗೀತೆ ಇರುತ್ತದೆ. ರಾಪರ್ ರಾಹುಲ್ ಡಿಟೋ ಈ ಹಾಡನ್ನು ಹಾಡಿದ್ದಾರೆ. ಈ ಹಾಡು ಚಿತ್ರದಲ್ಲಿರುವುದಿಲ್ಲ‌. ಚಿತ್ರದಲ್ಲಿ‌ ಅರ್ಜುನ್ ಜನ್ಯ ಸಂಗೀತ ನೀಡಿರುವ ಮೂರು ಹಾಡುಗಳಿರುತ್ತದೆ. ಈಗಾಗಲೇ ಆನಂದ್ ಆಡಿಯೋದವರು ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ. "ಬ್ರ್ಯಾಟ್" ಇದು ಅಪ್ಪ - ಮಗನ ಸಂಘರ್ಷ. ಅಪ್ಪನಿಗೆ ಮಗನೇ "ಬ್ರ್ಯಾಟ್". ಅಪ್ಪನ ಪಾತ್ರದಲ್ಲಿ ಅಚ್ಯುತ ಕುಮಾರ್ ಅಭಿನಯಿಸುತ್ತಿದ್ದಾರೆ. ಮನೀಶ ನಾಯಕಿ. ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈಗಾಗಲೇ ಶೇಕಡಾ 80 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ ಎಂದು ನಿರ್ದೇಶಕ ಶಶಾಂಕ್ ತಿಳಿಸಿದರು.
ನಮ್ಮ “ಫಸ್ಟ್ ರ‍್ಯಾಂಕ್ ರಾಜು” ಚಿತ್ರಕ್ಕೆ ನೀವೆಲ್ಲರೂ ನೀಡಿದ ಪ್ರೋತ್ಸಾಹ ಅಪಾರ. ಶಶಾಂಕ್ ಅವರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ಐದು ವರ್ಷಗಳ ನಂತರ ‌ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್. 
ನಾನು ಕನ್ನಡದವಳು. ಈಗಾಗಲೇ ತೆಲುಗಿನ ಒಂದು ಚಿತ್ರದಲ್ಲಿ ನಟಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಇದರಲ್ಲಿ ನನ್ನದು ಮಧ್ಯಮ ವರ್ಗದ ಹುಡುಗಿ ಪಾತ್ರ ಎಂದರು ನಾಯಕಿ ಮನಿಶಾ ಕಂದಕೂರ್.
ಶೀರ್ಷಿಕೆ ಗೀತೆ ಹಾಡಿರುವ ರಾಹುಲ್ ಡಿಟೋ, ಆನಂದ್ ಆಡಿಯೋ ಶ್ಯಾಮ್, ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ರಮೇಶ್ ಇಂದಿರ, ಡ್ಯಾಗನ್ ಮಂಜು, ನಾಯಕನ ಸ್ನೇಹಿತರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಶ್ರೀವತ್ಸ, ತೇಜಸ್, ಗೌರವ್ ಶೆಟ್ಟಿ ಸಂಚಿತ್ ಹಾಗೂ ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ "ಬ್ರ್ಯಾಟ್" ಚಿತ್ರದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...