Skip to main content

ಅನಂತ ಕಾಲಂ : ಮೈನಡುಗಿಸುತ್ತಿದೆ ಟೀಸರ್.. ಕಥೆಯನ್ನ ನೀವೊಮ್ಮೆ ಊಹಿಸಬಹುದಾ..?

ಅನಂತ ಕಾಲಂ : ಮೈನಡುಗಿಸುತ್ತಿದೆ ಟೀಸರ್.. ಕಥೆಯನ್ನ ನೀವೊಮ್ಮೆ ಊಹಿಸಬಹುದಾ..?
ಟೀಸರ್, ಟ್ರೇಲರ್ ಸಿನಿ ಪ್ರೇಮಿಗಳಿಗೆ ಥಿಯೇಟರ್ ಆಹ್ವಾನ ಕೊಡುವ ಪತ್ರಿಕೆ ಇದ್ದಂತೆ. ಅಲ್ಲಿ ಸಿನಿಮಾ ತಂಡದವರಿಂದ ಮೃಷ್ಟಾನ್ನ ಭೋಜನದ ಸಿಹಿಯ ಸೂಕ್ಷ್ಮತೆ ಸಿಕ್ಕರೆ ಖಂಡಿತ ಥಿಯೇಟರ್ ಗೆ ಜನ ಮಿಸ್ ಮಾಡದೆ ಹೋಗ್ತಾರೆ. ಈ ಮಾತನ್ನ ಯಾಕೆ ಹೇಳ್ತಾ ಇದ್ದೀವಿ ಅಂದ್ರೆ ಅನಂತ ಕಾಲಂ ಟೀಸರ್ ನೋಡಿದ ಕಾರಣಕ್ಕೆ. 
ಸಿನಿಮಾ ವಿಚಾರದಲ್ಲಿ ಒಂದಷ್ಟು ಜಾನರ್ ಗಳು ಇದಾವೆ ಅದರಲ್ಲಿ ಒಂದೊಂದು ಜಾನರ್ ಒಬ್ಬೊಬ್ಬರಿಗೆ ಇಷ್ಟವಾಗುತ್ತದೆ. ಅದರಲ್ಲೂ ಹಾರಾರ್, ಸಸ್ಪೆನ್ಸ್, ಥ್ರಿಲ್ಲರ್ ಜಾನರ್ ಇಷ್ಟ ಪಡುವವರು ಹೆಚ್ಚಾಗಿದ್ದಾರೆ. ಅನಂತ ಕಾಲಂ ಸಿನಿಮಾ ಹಾರಾರ್ ಅಂತ ಹೇಳೋದಕ್ಕೆ ಆಗಲ್ಲ. ಆದ್ರೆ ಪಕ್ಕಾ ಸಸ್ಪೆನ್ಸ್, ಥ್ರಿಲ್ಲರ್ ಅನ್ನೋದನ್ನ ಊಹೆ ಮಾಡಬಹುದು. ಹಾಗಂತ ಅಂತಿಥ ಸಸ್ಪೆನ್ಸ್, ಥ್ರಿಲ್ಲರ್ ಅಲ್ಲ, ನಿಜಕ್ಕೂ ಥ್ರಿಲ್ಲಿಂಗ್ ಆಗಿನೆ ಇದೆ. ಒಮ್ಮೆ ಈ ಟೀಸರ್ ಅನ್ನ ನೀವೂ ನೋಡಿದ್ರೆ ನಿಮ್ಮ ಎದೆ ನಡುಗದೆ ಇರುವುದಕ್ಕೆ ಸಾಧ್ಯವೇ ಇಲ್ಲ. ಮನಸ್ಸೊಳಗೆ ಆ ದೃಶ್ಯಗಳೇ ಕೆಲ ಸೆಕೆಂಡ್ ಗಳು ಆವರಿಸಿ ಬಿಡುತ್ತವೆ.
ಟೀಸರ್ ಶುರುವಾಗುವುದು ಒಂದು ಸಿಗರೇಟ್ ಮ್ಯಾಟರ್ ನಿಂದ. ಪೊಲೀಸ್ ಬಂದ್ರು ಅಂತ ಎಲ್ಲ ಓಡುವಾಗ, ಅವನೊಬ್ಬ ಮೆಸ್ ಒಳಗಡೆ ನೋಡುತ್ತಾ ಸಿಗರೇಟ್ ಸೇದುತ್ತಾ ಇರುತ್ತಾನೆ. ಆದರೆ ಹಿಂದೆ ಯಾವುದೋ ಫೋಟೋ ಒಂದು ಸುಟ್ಟು ಕರಕಲಾಗುತ್ತಿರುತ್ತದೆ. ಸಿಗರೇಟ್ ಮುಗಿದ ಮೇಲೆ ಯಾರೋ ಕರೆದಂತೆ ಭಾಸವಾಗುತ್ತದೆ. ನೋಡಿದರೆ ಯಾರಿಲ್ಲ. ಮತ್ತದೆ ಧ್ವನಿ, ಬಲೂನ್ ತಗೋ ಎಂಬ ವ್ಯಾಘ್ರ ಧ್ವನಿ. ತೆಗೆದುಕೊಳ್ಳಲು ನಿರಾಕರಿಸಿದಾಗ ಭಯಗೊಳಿಸಿದ ಧ್ವನಿಯದು. ಹೆದರಿದ ಹೀರೋ ಬಲೂನ್ ತೆಗೆದುಕೊಂಡರೆ ನಿನ್ನ ಸಾವು ಈಗಲೇ ಬರುತ್ತೆ ಅನ್ನೋದಾ..? ಹಿಂದೆ ತಿರುಗಿ ನೋಡಿದರೆ ಆಕ್ಸಿಡೆಂಟ್ ಆಗಿಯೇ ಬಿಡುತ್ತೆ. ಅಯ್ಯಯ್ಯೋ ಇದೇನಾಯ್ತು ಎಂದುಕೊಳ್ಳುವಾಗಲೇ ಸ್ಟೋರಿ ಉಲ್ಟಾ ಆಗುತ್ತೆ. ಅದು ಅದೊಂದು ಹೊಳೆಯುವ ಖಡ್ಗದಿಂದ. ಟೀಸರ್ ಎಷ್ಟು ಭಯಗೊಳಿಸುವಂತೆ ಇದೆ ಅನ್ನೋದನ್ನ ಟೀಸರ್ ನಲ್ಲಿಯೇ ನೋಡಬೇಕು. 
ಈ ಕುತೂಹಲವಾದ ಕಥೆಗೆ ಆಕ್ಷನ್ ಕಟ್ ಹೇಳಿರುವ ವಿಜಯ್ ಮಂಜುನಾಥ್, ವಿಭಿನ್ನವಾದ ಪಾತ್ರದ ಮೂಲಕ ಪೃಥ್ವಿರಾಜ್ ಶೆಟ್ಟಿಯನ್ನು ಪರಿಚಯ ಮಾಡುತ್ತಿದ್ದಾರೆ. ವ ವಿಲಿಯಂಟ್ ವಿಷನ್ ಕ್ರಿಯೇಷನ್ಸ್ ಸಿನಿಮಾ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಉಳಿದಂತೆ ಗುರುಪ್ರಸಾದ್ ನರ್ನಾಡ್ – ಛಾಯಾಗ್ರಾಹಣ, ಭುವನ್ ಶಂಕರ್ ಮತ್ತು ಸನ್ಸ್ ಕಾರ್ – ಸಂಗೀತ, , ವೆಂಕಟ್ ಪಿ.ಎಸ್ – ಕಥೆ ಬರೆದಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...