Skip to main content

Posts

Showing posts from July, 2025

ಜೋಗಿ ನಿರ್ಮಾಪಕನ ಹೊಸ ಹೆಜ್ಜೆ..

ಜೋಗಿ ನಿರ್ಮಾಪಕನ ಹೊಸ ಹೆಜ್ಜೆ.. ಸುವರ್ಣ ಸಂಕಲ್ಪ ಅಮೃತಘಳಿಗೆ ನೇತೃತ್ವ ವಹಿಸಿಕೊಂಡ ಜೋಗಿ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್..     ಕಳೆದ ೪೦ ವರ್ಷಗಳಿಂದ ಅಶ್ವಿನಿ ಆಡಿಯೋ ಕಂಪನಿ ನಡೆಸಿಕೊಂಡು ಬರುತ್ತಿರುವ ಅಶ್ವಿನಿ ರಾಮಪ್ರಸಾದ್ ಅವರೀಗ ಕಿರುತೆರೆ ಕ್ಷೇತ್ರಕ್ಕೂ ಎಂಟ್ರಿ ಕೊಟ್ಟಿದ್ದಾರೆ. ದಶಕಗಳ ಹಿಂದೆ ಸಾವಿರಾರು ಜಾನಪದ, ಭಕ್ತಿಗೀತೆಗಳನ್ನು ತಮ್ಮ ಆಡಿಯೋ ಕಂಪನಿ ಮೂಲಕ ಜನರಿಗೆ ಕೇಳಿಸಿದ ರಾಮ್ ಪ್ರಸಾದ್ ಅವರಿಗೆ ಮೊದಲಿಂದಲೂ ಕಿರುತೆರೆ ಬಗ್ಗೆ ಆಸಕ್ತಿಯಿತ್ತು. ಆದಕ್ಕೆ ಸುವರ್ಣ ವಾಹಿನಿ ಒಂದು ವೇದಿಕೆ ಕಲ್ಪಿಸಿಕೊಟ್ಟಿದೆ.    ಶಿವಣ್ಣ, ಪ್ರೇಮ್ ಕಾಂಬಿನೇಶನ್ ನ ಜೋಗಿ ಚಿತ್ರ ನಿರ್ಮಿಸುವ ಮೂಲಕ ದಾಖಲೆ ಬರೆದ ಅಶ್ವಿನಿ ರಾಮ್ ಪ್ರಸಾದ್ ಆನಂತರವೂ ಹಲವಾರು ಯಶಸ್ವೀ ಚಲನಚಿತ್ರಗಳನ್ನು ನಿರ್ಮಿಸಿದ್ದರು. ಅಲ್ಲದೆ ಘಾರ್ಗ ಚಿತ್ರದ ಮೂಲಕ ತಮ್ಮ ಪುತ್ರನನ್ನೂ ಹೀರೋ ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ಇದೀಗ ಧಾರ್ಮಿಕ ಹಾಗೂ ವಾಸ್ತುಶಾಸ್ತ್ರದ ಹಿನ್ನೆಲೆಯ "ಸುವರ್ಣ ಸಂಕಲ್ಪ ಅಮೃತಘಳಿಗೆ" ಕಾರ್ಯಕ್ರಮ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈ ಕಾರ್ಯಕ್ರಮವನ್ನು ಕರ್ನಾಟಕ ಜ್ಯೋತಿಷ್ಯರತ್ನ ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ ಭಾಗವತ ಗುರೂಜಿಯವರು ನಡೆಸಿಕೊಡಲಿದ್ದಾರೆ. ಗಾಯಕಿಯೂ ಆದ ಅಖಿಲಾ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಆಗಸ್ಟ್ 4 ರಿಂದ ಪ್ರ...

ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾದ ಮೆಲೋಡಿ ಹಾಡು ರಿಲೀಸ್..

ತರುಣ್ ಸುಧೀರ್ ನಿರ್ಮಾಣದ 'ಏಳುಮಲೆ' ಸಿನಿಮಾದ ಮೆಲೋಡಿ ಹಾಡು ರಿಲೀಸ್.. ಗಡಿಮೀರಿದ ಪ್ರೇಮಕಥೆ 'ಏಳುಮಲೆ'ಯಿಂದ ಬಂತು ಮೊದಲ ಹಾಡು... ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ ಮೆಲೋಡಿ ಹಾಡು ರಿಲೀಸ್.. ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಅಂತೆಯೇ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಏಳುಮಲೆ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೊದಲ ಹಾಡು ರಿಲೀಸ್‌ ಆಗಿದೆ. ಏಳುಮಲೆ ಚಿತ್ರದ ಯಾವಾಗ ಎಂಬ ಮೆಲೋಡಿ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲಿಯೂ ಗೀತೆಯನ್ನು ಅನಾವರಣ ಮಾಡಲಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದಾರೆ. ಡಿ ಇಮ್ಮನ್ ಸಂಗೀತ ಒದಗಿಸಿದ್ದಾರೆ.  ಕರ್ನಾಟಕ - ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ಏಳುಮಲೆ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶನಾಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್‌ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ...

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ "ಪ್ರೇಮ ಕಾವ್ಯ".

 ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ "ಪ್ರೇಮ ಕಾವ್ಯ". ಜನಪ್ರಿಯ ಧಾರಾವಾಹಿಗಳ ಮೂಲಕ ಜನರ ಮನ ತಲುಪಿರುವ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ಧಾರಾವಾಹಿ " ಪ್ರೇಮ ಕಾವ್ಯ" ಆಗಸ್ಟ್ 4 ರ ಸೋಮವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಎರಡು ಜೋಡಿಗಳ ಪ್ರೇಮಕಥೆಯ ಧಾರಾವಾಹಿ "ಪ್ರೇಮ ಕಾವ್ಯ"ದಲ್ಲಿ ಪ್ರೇಮ ಪಾತ್ರದಲ್ಲಿ ಪ್ರಿಯ ಜೆ ಆಚಾರ್, ಕಾವ್ಯ ಪಾತ್ರದಲ್ಲಿ ವೈಷ್ಣವಿ ನಟಿಸುತ್ತಿದ್ದಾರೆ. "ನಮ್ಮನೆ ಯುವರಾಣಿ" ಖ್ಯಾತಿಯ ರಾಘವೇಂದ್ರ ಹಾಗೂ ವಿಕಾಸ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ರವೀನ್ ಕುಮಾರ್ ಈ ಧಾರಾವಾಹಿಯನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಧಾರಾವಾಹಿಯ ಕಲಾವಿದರು ಹಾಗೂ ನಿರ್ದೇಶಕರು ಮಾಹಿತಿ ನೀಡಿದರು.  ನಾನು ಈ ಧಾರಾವಾಹಿಯಲ್ಲಿ ಪ್ರೇಮ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ತಂದೆ, ತಾಯಿ ಹಾಗೂ ತಂಗಿ ಇದೇ ನನ್ನ ಒಂದು ಪುಟ್ಟ ಪ್ರಪಂಚ. ನಾನು ಹೆಚ್ಚು ವಿದ್ಯಾವಂತೆ ಅಲ್ಲ. ಆದರೆ ತಂಗಿಗೆ ತಾನು ಸೈಂಟಿಸ್ಟ್ ಆಗಬೇಕೆಂಬ ಅಭಿಲಾಷೆ. ಅವಳ ಕನಸಿಗೆ ಸಹಕಾರ ನೀಡುತ್ತಿರುತ್ತೇನೆ. ಜೊತೆಗೆ ಬಾಲ್ಯದ ಗೆಳೆಯ ರಾಮ್ ನನ್ನು ಪ್ರೀತಿಸುತ್ತಿರುತ್ತೇನೆ ಎಂದು ತಮ್ಮ ಪಾತ್ರದ ಬಗ್ಗೆ ನಟಿ ಪ್ರಿಯ ಜೆ ಆಚಾರ್ ಮಾಹಿತಿ ನೀಡಿದರು. ಕಾವ್ಯ ನನ್ನ ಪಾತ್ರದ ...

ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.  ‘ಸಂಕಷ್ಟಕರ ಗಣಪತಿ’ ‘ಫ್ಯಾಮಿಲಿ ಪ್ಯಾಕ್’ ‘ಅಬ್ಬಬ್ಬ!’ ಖ್ಯಾತಿಯ ಲಿಖಿತ್ ಶೆಟ್ಟಿ ಅಭಿನಯದ ‘ಫುಲ್ ಮೀಲ್ಸ್’ ಚಿತ್ರ ನವೆಂಬರ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ನಾಯಕ ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಒಂದು ಸಮಯದಲ್ಲಿ ಉದಯ ಮ್ಯೂಸಿಕ್ ನಲ್ಲಿ ಜನಪ್ರಿಯ ನಿರೂಪಕರಾಗಿದ್ದ ಲಿಖಿತ್ ಶೆಟ್ಟಿ ಈ ಹಿಂದೆ ಸಂಕಷ್ಟಕರ ಗಣಪತಿ, ಪುನೀತ್ ರಾಜ್ ಕುಮಾರ್ ಅವರ ಪಿ. ಆರ್. ಕೆ ಪ್ರೊಡಕ್ಷನ್ ನಲ್ಲಿ ಮೂಡಿಬಂದ ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳ ಮೂಲಕ ನಾಯಕ ನಟರಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಕಳೆದ ವರ್ಷ ತೆರೆಕಂಡ ಕೆ. ಎಮ್. ಚೈತನ್ಯ ನಿರ್ದೇಶನದ ಅಬ್ಬಬ್ಬ ಚಿತ್ರದಲ್ಲಿ ಕೂಡ ನಾಯಕನಾಗಿ ಗಮನ ಸೆಳೆದಿದ್ದರು. ‘ಫುಲ್ ಮೀಲ್ಸ್’ ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಿರ್ಮಾಪಕನಾಗಿ ತೊಡಗಿಸಿಕೊಂಡಿರುವ ಲಿಖಿತ್ ಶೆಟ್ಟಿ ತಮ್ಮ ಹಿಂದಿನ ಸಿನೆಮಾಗಳಿಗಿಂತ ಹೆಚ್ಚಿನ ಯಶಸ್ಸನ್ನು ಕಾಣುವ ನಿರೀಕ್ಷೆಯಲ್ಲಿದ್ದಾರೆ. ಸಿನೆಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಂಪೂರ್ಣವಾಗಿ ಮುಗಿದಿದ್ದು, ಸಿನೆಮಾ ಚೆನ್ನಾಗಿ ಮೂಡಿ ಬಂದಿದೆ ಎಂಬ ಖುಷಿಯಲ್ಲಿ ಚಿತ್ರತಂಡವಿದೆ, ಚಿತ್ರದ ಪ್ರಚಾರ ಕಾರ್ಯದ ಮೊದಲ ಹಂತವಾಗಿ, ನಾಯಕ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ದಿನ ಪೋಸ್ಟರ್ ಜೊತೆ, ಸಿನೆಮಾ ಬಿಡುಗಡೆ ದಿ...

ಅಜನೀಶ್ ಲೋಕನಾಥ್ ನಿರ್ಮಾಣದ "ಜಸ್ಟ್ ಮ್ಯಾರೀಡ್" ಚಿತ್ರವನ್ನು ವಿಶಾಲ ಕರ್ನಾಟಕಕ್ಕೆ ಹೆಸರಾಂತ ವಿ.ಕೆ.ಫಿಲಂಸ್ ವಿತರಣೆ ಮಾಡುತ್ತಿದೆ‌..

ಅಜನೀಶ್ ಲೋಕನಾಥ್ ನಿರ್ಮಾಣದ "ಜಸ್ಟ್ ಮ್ಯಾರೀಡ್" ಚಿತ್ರವನ್ನು ವಿಶಾಲ ಕರ್ನಾಟಕಕ್ಕೆ ಹೆಸರಾಂತ ವಿ.ಕೆ.ಫಿಲಂಸ್ ವಿತರಣೆ ಮಾಡುತ್ತಿದೆ‌..    ಸಿ.ಆರ್ ಬಾಬಿ ನಿರ್ದೇಶನದ ಹಾಗೂ ಶೈನ್ ಶೆಟ್ಟಿ - ಅಂಕಿತ ಅಮರ್ ಅಭಿನಯದ ಈ ಚಿತ್ರ ಆಗಸ್ಟ್ 22ರಂದು ತೆರೆಗೆ ಬರಲಿದೆ            "ಕಾಂತಾರ"ದಂತಹ ವಿಶ್ವಪ್ರಸಿದ್ದ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ "ಜಸ್ಟ್ ಮಾರೀಡ್" ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶೈನ್ ಶೆಟ್ಟಿ ಹಾಗೂ ಅಂಜಕಿ ಅಮರ್ ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರ ಆಗಸ್ಟ್ 22 ರಂದು ತೆರೆಗೆ ಬರುತ್ತಿದೆ. ಅನೇಕ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿರುವ ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ ಫಿಲಂಸ್ ವಿಶಾಲ ಕರ್ನಾಟಕಕ್ಕೆ "ಜಸ್ಟ್ ಮ್ಯಾರೀಡ್" ಚಿತ್ರವನ್ನು ವಿತರಣೆ ಮಾಡಲಿದೆ. ಭಾರತದ ಹೆಸರಾಂತ ಹಾಗೂ ಅನುಭವಿ ಕಲಾವಿದರ ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಮೂಡಿಬಂದಿರುವ "ಜಸ್ಟ್ ಮ್ಯಾರೀಡ್" ಚಿತ್ರವನ್ನು ತೆರೆಯ ಮೇಲೆ ನೋಡಲು ಕನ್ನಡ ಕಲಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್..

ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್.. 'ಹನುಮಾನ್’ ಖ್ಯಾತಿಯ ನಟ ತೇಜ್ ಸಜ್ಜಾ ನಟನೆಯ ‘ಮಿರಾಯ್’ ಚಿತ್ರ ಮೂಲಕ ಬರಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರ ಆದ್ಮೇಲೆ ಮಾಡಿರೋ ಮತ್ತೊಂದು ಸೂಪರ್ ಹೀರೋ ಚಿತ್ರವೇ ಇದಾಗಿದೆ. ಬಹುಭಾಷೆಯಲ್ಲಿಯೇ ಬರುತ್ತಿರುವ ಈ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ವೈಬ್ ಐತೆ ಬೇಬಿ ಎಂದು ನಾಯಕ ತೇಜ್ ಸಜ್ಜಾ ಮತ್ತು ರಿತಿಕಾ ನಾಯಕ್ ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿಯೂ ಈ ಹಾಡು ರಿಲೀಸ್ ಆಗಿದ್ದು, ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ. ಗೌರ ಹರಿ ಸಂಗೀತ ನೀಡಿದ್ದಾರೆ, ವರದರಾಜ್ ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದಾರೆ. 'ಮಿರಾಯ್’ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್‌ಗಳಿವೆ. ಈ ಆ್ಯಕ್ಷನ್ ಚಿತ್ರವನ್ನ ಕಾರ್ತಿಕ್ ಘಟ್ಟಮನೇನಿ ಡೈರೆಕ್ಷನ್ ಮಾಡಿದ್ದಾರೆ. ವಿಶೇಷವಾಗಿ ಈ ಚಿತ್ರ 2ಡಿ ಮತ್ತು 3ಡಿ ರೂಪದಲ್ಲಿಯೇ ಸಿನಿಮಾ ರಿಲೀಸ್ ಆಗುತ್ತಿದೆ. ಅತೀ ದೊಡ್ಡ ಮಟ್ಟದಲ್ಲಿಯೇ ಈ ಚಿತ್ರ ರಿಲೀಸ್ ಆಗುತ್ತಿದೆ. ಸೆಪ್ಟೆಂಬರ್ 5ರಂದು ಮಿರಾಯ್ ಬಿಡುಗಡೆಯಾಗಲಿದೆ. ‘ಮಿರಾಯ್’ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಸಿನಿಮಾ ಹೇಳುತ್ತದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಅಡಿ ಟಿ.ಜಿ.ವಿಶ್ವಪ್ರ...

'ಫ್ಲರ್ಟ್' ಚಿತ್ರದ ಫ್ರೆಂಡ್ ಷಿಪ್ ಹಾಡಿಗೆ ಕಿಚ್ಚ ಸುದೀಪ್ ಗಾಯನ..

'ಫ್ಲರ್ಟ್' ಚಿತ್ರದ ಫ್ರೆಂಡ್ ಷಿಪ್ ಹಾಡಿಗೆ ಕಿಚ್ಚ ಸುದೀಪ್ ಗಾಯನ..  'ಫ್ಲರ್ಟ್' ಚಂದನ್ ಕುಮಾರ್ ನಟನೆ, ನಿರ್ದೇಶನದ ಶೈಲಿಗೆ ಪ್ರಶಂಸೆಯ ಸುರಿಮಳೆ.. ಯುವ ಸಿಸಿಎಲ್ ಪ್ರತಿಭೆ ಚಂದನ್ ಕೈಲಿ ಅರಳಿದ ಫ್ಲರ್ಟ್ ಕಥಾನಕ    ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು  ಫ್ಲರ್ಟ್ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ. ಕಿಚ್ಚ ಸುದೀಪ್ ಗರಡಿಯ ಹುಡುಗ, ಸಿಸಿಎಲ್ ಸಹಪಾಠಿಯೂ ಆದ ಚಂದನ್ ಕುಮಾರ್ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ಹಾಡೊಂದಕ್ಕೆ ಸುದೀಪ್ ಅವರೇ ದನಿಯಾಗಿದ್ದಾರೆ. ಈ ಫ್ರೆಂಡ್ ಶಿಪ್ ಆಂಥೆಮ್ ನ ಬಿಡುಗಡೆ ಕಾರ್ಯಕ್ರಮ ಸೋಮವಾರ ಸಂಜೆ ನೆರವೇರಿತು.         ‌‌‌‌ಫ್ಲರ್ಟ್ ಚಿತ್ರದಲ್ಲಿ ನಟಿಸುವ ಜತೆಗೆ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನೂ ಸಹ ಚಂದನ್ ಕುಮಾರ್ ಅವರೇ ಹೊತ್ತಿದ್ದಾರೆ. ಅಲ್ಲದೆ ಎವರೆಸ್ಟ್ ಪಿಕ್ಚರ್ಸ್ ಬ್ಯಾನರ್ ಅಡಿ ಚಂದನ್ ಅವರ ಪತ್ನಿ ಕವಿತಾಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎ ಪ್ಯೂರ್ ಡವ್ ಸ್ಟೋರಿ ಎಂಬ ಅಡಿಬರಹ ಫ್ಲರ್ಟ್ ಚಿತ್ರಕ್ಕಿದ್ದು, ಇದಕ್ಕೆ ವಿವರಣೆಯನ್ನೂ ಚಂದನ್ ನೀಡಿದ್ದಾರೆ.     ವಿಶೇಷವಾಗಿ ಸುದೀಪ್ ಅವರ ಹಾಡಿಗೆ ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಮಾಡಿದ್ದಾರೆ.  ಹಾಡಿನ ಬಿಡುಗಡೆ ಸಂದರ್ಭದಲ್ಲಿ‌ ‌ಸುದೀಪ್‌ ಅವರು ಚಂದ...

ಕನ್ನಡ ಚಿತ್ರರಂಗದ ದಿಗ್ಗಜರಿಂದ 'ಕಸ್ಟಡಿ' ಹಾಗೂ 'ಪಾಲ್ಗುಣಿ' ಚಿತ್ರಗಳ ಟ್ರೇಲರ್ ಬಿಡುಗಡೆ..

ಕನ್ನಡ ಚಿತ್ರರಂಗದ ದಿಗ್ಗಜರಿಂದ 'ಕಸ್ಟಡಿ' ಹಾಗೂ 'ಪಾಲ್ಗುಣಿ' ಚಿತ್ರಗಳ ಟ್ರೇಲರ್ ಬಿಡುಗಡೆ..  ಇದೇ‌ ಮೊದಲ ಬಾರಿಗೆ ಒಂದೇ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣವಾಗಿರುವ, ಒಬ್ಬರೆ ನಿರ್ದೇಶಕ ನಿರ್ದೇಶಿಸಿರುವ ಎರಡು ಚಿತ್ರಗಳು ಒಂದೇ ದಿನ(ಆಗಸ್ಟ್ 8) ಬಿಡುಗಡೆ.. ನಾಗೇಶ್ ಕುಮಾರ್ ಯು.ಎಸ್ & ಜೆ.ಜೆ.ಶ್ರೀನಿವಾಸ್ ನಿರ್ಮಿಸಿರುವ, ಜೆ.ಜೆ.ಶ್ರೀನಿವಾಸ್ ನಿರ್ದೇಶಿಸಿರುವ "ಕಸ್ಟಡಿ" ಹಾಗೂ "ಪಾಲ್ಗುಣಿ" ಚಿತ್ರಗಳ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡಪರ ಹೋರಾಟಗಾರರಾದ ಸಾ.ರಾ.ಗೋವಿಂದು ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಎರಡು ಚಿತ್ರಗಳ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್, ಗೌ. ಕಾರ್ಯದರ್ಶಿ ಪ್ರವೀಣ್ ಕುಮಾರ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ ಆರ್ ಕೆ ವಿಶ್ವನಾಥ್, ನಿರ್ಮಾಪಕರಾದ ಭಾ.ಮ.ಹರೀಶ್, ಎಂ.ಜಿ.ರಾಮಮೂರ್ತಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. "ಕಸ್ಟಡಿ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೆ, "ಪಾಲ್ಗುಣಿ" ಮಂಡ್ಯದಲ್...

ಉತ್ತರ ಕರ್ನಾಟಕ ಸೊಗಡಿನ ಕಥೆ. ಹಳ್ಳಿಗಳನ್ನು ಉಳಿಸಿದ ಧೀರ..

ಉತ್ತರ ಕರ್ನಾಟಕ ಸೊಗಡಿನ ಕಥೆ .  ಹಳ್ಳಿಗಳನ್ನು ಉಳಿಸಿದ ಧೀರ  "ಹುಲಿ ಬೀರ"ನ ಟೀಸರ್    "ಸೊರಗುತ್ತಿರೋ ಹಳ್ಳಿಗಳಿಗೆ ಮತ್ತೆ ಯುವಕರು ಮರಳುವಂತೆ ಮಾಡಿ   ರಾಜಕಳೆ ತಂದನು ಈ ಹುಲಿಬೀರ"  ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಾಣ ಮಾಡಿರುವ ಚಿತ್ರ ಹುಲಿಬೀರ. ಈ ಹಿಂದೆ ರಂಗ್ ಬಿರಂಗಿ ಚಿತ್ರ ನಿರ್ದೇಶಿಸಿದ್ದ ಮದರಂಗಿ ಮಲ್ಲಿಕಾರ್ಜುನ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.   ಯರ್ರಾಬಿರ್ರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ರೂರಲ್ ಸ್ಟಾರ್ ಅಂಜನ್ ಚಿತ್ರದ ನಾಯಕನಾಗಿ ನಟಿಸಿದ್ದು, ಚೈತ್ರ ತೋಟದ ನಾಯಕಿ ಪಾತ್ರ ನಿರ್ವಹಿಸಿದ್ದಾರೆ.     ಉತ್ತರ ಕರ್ನಾಟಕದ ನೇಟಿವಿಟಿ, ನಾಯಕ, ನಾಯಕಿ, ನಿರ್ಮಾಪಕ, ನಿರ್ದೇಶಕ ಹೀಗೆ ಎಲ್ಲರೂ ಸೇರಿ ಮಾಡಿರುವ ಅದೇ ಸೊಗಡಿನ ಚಿತ್ರವಿದು. ಸೋಮವಾರ ಈ ಚಿತ್ರದಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ವೀರಸಮರ್ಥ ಅವರ ಸಂಗೀತ ಸಂಯೋಜನೆ, ಸನಾತನ ಅವರ ಕ್ಯಾಮೆರಾ ವರ್ಕ್ ಈ ಚಿತ್ರಕ್ಕಿದೆ.     ಸಾಯಿ ಸ್ಟಾರ್ ಸಿನಿಮಾಸ್ ಮೂಲಕ ದಾವಲ ಸಾಹೇಬ ಹುಣಶೀಮರದ, ಅಶೋಕ್ ಎನ್.(ತುರುವೇಕೆರೆ) ಹಾಗೂ ಸುಜಾತ ಗಿರೀಶ್ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.       ವೇದಿಕೆಯಲ್ಲಿ ಮಾತನಾಡಿದ ನಿರ್ದೇಶಕ ಮದರಂಗಿ ಮಲ್ಲಿಕಾರ್ಜುನ ಇದು ನನ್ನ ನಿರ್ದೇಶನದ ಐದನೇ ಚಿತ...

’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಲೋಕಾರ್ಪಣೆ..

’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಲೋಕಾರ್ಪಣೆ.. ಹಿರಿಯ ನಟ ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ ಮಾಡಿರುವ  ’ಪದ್ಮಗಂಧಿ’ ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಅನಾವರಣ ಕಾರ್ಯಕ್ರಮವು ಕಿಕ್ಕಿರದ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಎಂಎಲ್‌ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ ಎಸ್.ಆರ್.ಲೀಲಾ ರಚಸಿ, ನಿರ್ಮಾಣ ಮಾಡಿರುವುದು ಹೊಸ ಅನುಭವ.       ಶಂಕರ್‌ಶಾನ್‌ಭೋಗ್ ಸೇರಿದಂತೆ ಹಲವು ಗಾಯಕರುಗಳು ಗೀತೆಯ ಸಾಲು ಹಾಡುವುದರ ಮೂಲಕ, ಹಾಗೂ ಕೋಟೆ ರಾಮಚಂದ್ರಭಟ್ ಸಂಸ್ಕ್ರತ ಭಾಷೆಯ ಟ್ರೇಲರ್ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.        ಮುಖ್ಯವಾಗಿ ಜಗದ್ಗುರು ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು, ಪೇಜಾವರ ಮಠಾಧೀಶರು ಪಾದ ಇರಿಸಿದ್ದು ಸಮಾರಂಭಕ್ಕೆ ಭೂಷಣ ತಂದುಕೊಟ್ಟಿತು. ಶ್ರೀ ಪಾದರು ಮಾತನಾಡುತ್ತಾ ಸುಚೇಂದ್ರ ಪ್ರಸಾದ್ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆಂದು ಭಾವಿಸಿದ್ದೇನೆ. ಕನ್ನಡ ಚಿತ್ರರಂಗ ಲಾಭದಾಯಕವಲ್ಲದ ಪರಿಸ್ಥಿತಿಯಲ್ಲಿ ಸಿನಿಮಾ ಮಾಡಿದ್ದಾರೆ. ಸಂಸ್ಕ್ರತ ಅನ್ನುವುದು ದೇಶಾಂತರಕ್ಕೂ ಸಲ್ಲುವ ಭಾಷೆ. ಆದ್ದರಿಂದ ವಿಸ್ಕ್ರತವಾದಂತ ನೋಡುಗರು,...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯ... ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರದ ಚಿತ್ರೀಕರಣ‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.  ಇತ್ತೀಚೆಗೆ ಎರಡು ಹಾಡುಗಳ ಚಿತ್ರೀಕರಣ ಬ್ಯಾಂಕಾಕ್ ನಲ್ಲಿ ಮುಗಿಸಿರುವ ಚಿತ್ರತಂಡ ಭಾರತಕ್ಕೆ ಮರಳಿದೆ. ಇದರೊಂದಿಗೆ "ದಿ ಡೆವಿಲ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ದರ್ಶನ್ ಅವರು ಸೇರಿದಂತೆ ಎಲ್ಲಾ ಕಲಾವಿದರ ಡಬ್ಬಿಂಗ್ ಸಹ ಪೂರ್ಣವಾಗಿದೆ. ಸದ್ಯದಲ್ಲೇ ಹಾಡೊಂದನ್ನು ಬಿಡುಗಡೆ ಮಾಡುವುದಾಗಿ ತಿಳಿಸಿರುವ ನಿರ್ದೇಶಕರು ಆದಷ್ಟು ಬೇಗ‌ ಚಿತ್ರವನ್ನು ತೆರೆಗೆ ತರುವುದಾಗಿ ಹೇಳಿದ್ದಾರೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಹಾಗೂ ಈಗಾಗಲೇ ಬಿಡುಗಡೆಯಾಗಿರುವ ದರ್ಶನ್ ಅವರ ಹೊಸ ಲುಕ್ ಗಳ ಪೋಸ್ಟರ್ ಗಳಿಂದ ಜನಮನಸೂರೆಗೊಂಡಿರುವ "ದಿ ಡೆವಿಲ್" ಚಿತ್ರವನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ...

ಕುಂತಲ್ಲೇ ಚಳಿ ಬರಿಸುತ್ತೆ ಈ 'ಒಮೆನ್' ಟ್ರೇಲರ್

ಕುಂತಲ್ಲೇ ಚಳಿ ಬರಿಸುತ್ತೆ ಈ 'ಒಮೆನ್' ಟ್ರೇಲರ್ ಲವ್ ಸ್ಟೋರಿಗಳು ಸದಾ ಕಾಡುವಂತೆ ಹಾರಾರ್ ಸ್ಟೋರಿಗಳನ್ನು ಇಷ್ಟಪಡುವವರ ಸಂಖ್ಯೆ ಸ್ವಲ್ಪ ಜಾಸ್ತಿಯೇ ಇದೆ. ಹಾರಾರ್ ಎಂದಾಕ್ಷಣಾ ಒಂದೇ ರೀತಿಯ ಹಾರಾರ್ ಸಿನಿಮಾ ಕೊಟ್ಟರೆ ಜನಕ್ಕೆ ಅಷ್ಟಾಗಿ ಇಷ್ಟ ಆಗೋದು ಕಷ್ಟ. ಆದರೆ ಅದರಲ್ಲಿಯೇ ಕಥೆಯನ್ನ ವಿಭಿನ್ನವಾಗಿ ಎಣೆಯಬೇಕು. ಆ ಕೆಲಸವನ್ನ ವೈಭವ್ ಎಸ್ ಸಂತೋಷ್ ಅವರು ಮಾಡಿದ್ದಾರೆ. ಅವರದ್ದೇ ನಿರ್ದೇಶನದ ಒಮೆನ್‌ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಹಾರಾರ್ ಅಂದ್ರು ಡೋಂಟ್ ಕೇರ್, ನನಗೆ ಧೈರ್ಯ ಜಾಸ್ತಿ ಅನ್ನೋರು ಕೂಡ ಈ ಟ್ರೇಲರ್ ನೋಡಿ. ಎದೆ ನಡುಗಲಿಲ್ಲ ಅಂದ್ರೆ ಕೇಳಿ.  ಒಮೆನ್ ಸಿನಿಮಾದ ಟ್ರೇಲರ್ ರಿಲೀಸ್ ಬಳಿಕ ಮಾತನಾಡಿದ ನಿರ್ದೇಶಕ ವೈಭವ್ ಸಂತೋಷ್, ಒಮೆನ್ ಅಂದ್ರೆ ಶಕುನಾ ಎಂದು ಅರ್ಥ ಬರುತ್ತೆ. ಭಯಾನಕವಾದ ಸಿನಿಮಾವನ್ನ ಇನ್ನು ಭಯಾನಕವಾಗಿ ಮಾಡಬೇಕೆಂಬ ಉದ್ದೇಶದಿಂದಾನೇ ಒಮೆನ್ ಮಾಡಿದ್ದು. ಫೌಂಡ್ ಫುಟೇಜ್ ಅಂದ್ರೆ ಸುಮಾರು ಜನ ಒಪ್ಪಲ್ಲ. ಹೀರೋನೆ ಕ್ಯಾಮೆರಾ ಇಟ್ಕೊಂಡು ಮಾಡೋ ರಿಸ್ಕ್ ಯಾಕೆ ಅಂತ ಸುಮ್ನಾಗ್ತಾರೆ. ಆದ್ರೆ ನಮ್ಮ ಹೀರೋ ಅಜಯ್ ಕುಮಾರ್ ತುಂಬಾ ಸಪೋರ್ಟ್ ಮಾಡಿದ್ರು. ಮ್ಯೂಸಿಕ್ ಕೂಡ ನಮ್ಮ ಸಿನಿಮಾದಲ್ಲಿ ಬಹಳ ಮುಖ್ಯ ಪಾತ್ರ ವಹಿಸಿದೆ. ನಮ್ಮ ಪ್ರೊಡ್ಯೂಸರ್ ಮಿರುನಳಿನಿ ಬೆಂಬಲ ಜಾಸ್ತಿ ಇದೆ ಎಂದಿದ್ದಾರೆ.  ನಟ ಅಜಯ್ ಕುಮಾರ್ ಮಾತನಾಡಿ, ಈ ಸಿನಿಮಾಗೆ ನಾಯಕ ಅಂತ ಹೇಳ್ಕೊಳೋಕೆ ತುಂ...

ಆಗಸ್ಟ್ 22 ರಂದು ಅಜನೀಶ್ ಲೋಕನಾಥ್ ನಿರ್ಮಾಣದ ಬಹು ನಿರೀಕ್ಷಿತ "ಜಸ್ಟ್ ಮ್ಯಾರೀಡ್" ಚಿತ್ರ ತೆರೆಗೆ..

ಆಗಸ್ಟ್ 22 ರಂದು ಅಜನೀಶ್ ಲೋಕನಾಥ್ ನಿರ್ಮಾಣದ ಬಹು ನಿರೀಕ್ಷಿತ "ಜಸ್ಟ್ ಮ್ಯಾರೀಡ್" ಚಿತ್ರ ತೆರೆಗೆ.. ಸಿ.ಆರ್ ಬಾಬಿ ನಿರ್ದೇಶನದ ಈ ಚಿತ್ರಕ್ಕೆ ಶೈನ್ ಶೆಟ್ಟಿ - ಅಂಕಿತ ಅಮರ್ ನಾಯಕ - ನಾಯಕಿ..                  ಕನ್ನಡದ ಸೂಪರ್ ಹಿಟ್ ಚಿತ್ರಗಳ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ "ಜಸ್ಟ್ ಮಾರೀಡ್" ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆಯ ದಿನಾಂಕ‌ ಘೋಷಣೆಯಾಗಿದ್ದು, ಆಗಸ್ಟ್ 22ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್, ಪೋಸ್ಟರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರವನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.             ಪ್ರೇಮ ಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರದ ನಾಯಕನಾಗಿ "ಬಿಗ್ ಬಾಸ್" ಖ್ಯಾತಿಯ ಶೈನ್ ಶೆಟ್ಟಿ ಹಾಗೂ ನಾಯಕಿಯಾಗಿ ಅಂಕಿತ ಅಮರ್ ಅಭಿನಯಿಸಿದ್ದಾರೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನ...

ಡಾರ್ಲಿಂಗ್ ಕೃಷ್ಣ ಅಭಿನಯದ "ಬ್ರ್ಯಾಟ್"(BRAT) ಚಿತ್ರದ " ನಾನೇ ನೀನಂತೆ " ಹಾಡಿಗೆ ಮೆಚ್ಚುಗೆಯ ಸುರಿಮಳೆ..

ಡಾರ್ಲಿಂಗ್ ಕೃಷ್ಣ ಅಭಿನಯದ "ಬ್ರ್ಯಾಟ್"(BRAT) ಚಿತ್ರದ " ನಾನೇ ನೀನಂತೆ " ಹಾಡಿಗೆ ಮೆಚ್ಚುಗೆಯ ಸುರಿಮಳೆ..  ಸದಭಿರುಚಿಯ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶನದ, ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ " ಬ್ರ್ಯಾಟ್" ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಈ ಚಿತ್ರದ "ನಾನೇ ನೀನಂತೆ" ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಹಾಡನ್ನು ಜನಪ್ರಿಯ ಗಾಯಕ ಸಿದ್ ಶ್ರೀರಾಮ್ ಹಾಡಿದ್ದಾರೆ. ಕನ್ನಡದ ಫಿಮೇಲ್ ವರ್ಷನ್ "ಸರಿಗಮಪ" ಖ್ಯಾತಿಯ ಲಹರಿ ಮಹೇಶ್ ಹಾಡಿದ್ದಾರೆ. ಉಳಿದ ನಾಲ್ಕು ಭಾಷೆಗಳಲ್ಲಿ ಫೀಮೇಲ್ ವರ್ಷನ್ ಸಿರೀಶ ಹಾಡಿದ್ದಾರೆ. ಹಿಂದಿಯಲ್ಲಿ ಮೇಲ್ ವರ್ಷನ್ ನಿಹಾಲ್ ತವ್ರು ಹಾಗೂ ತೆಲುಗು - ತಮಿಳಿನಲ್ಲಿ ಶ್ರೀಕಾಂತ್ ಹರಿಹರನ್ ಹಾಡಿದ್ದಾರೆ. ಈ ಹಿಂದೆ ಶಶಾಂಕ್, ಅರ್ಜುನ್ ಜನ್ಯ ಹಾಗೂ ಸಿದ್ ಶ್ರೀರಾಮ್ ಅವರ ಕಾಂಬಿನೇಶನ್ ನಲ್ಲಿ "ಲವ್ 360" ಚಿತ್ರದ "ಜಗವೇ ನೀನು ಗೆಳತಿಯೇ" ಹಾಡು ಭರ್ಜರಿ ಯಶಸ್ಸು ಕಂಡಿತ್ತು‌. ಈಗ ಈ ಹಾಡಿಗೂ ಎಲ್...