Skip to main content

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ "ಪ್ರೇಮ ಕಾವ್ಯ".

 ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ "ಪ್ರೇಮ ಕಾವ್ಯ".
ಜನಪ್ರಿಯ ಧಾರಾವಾಹಿಗಳ ಮೂಲಕ ಜನರ ಮನ ತಲುಪಿರುವ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ಧಾರಾವಾಹಿ " ಪ್ರೇಮ ಕಾವ್ಯ" ಆಗಸ್ಟ್ 4 ರ ಸೋಮವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಎರಡು ಜೋಡಿಗಳ ಪ್ರೇಮಕಥೆಯ ಧಾರಾವಾಹಿ "ಪ್ರೇಮ ಕಾವ್ಯ"ದಲ್ಲಿ ಪ್ರೇಮ ಪಾತ್ರದಲ್ಲಿ ಪ್ರಿಯ ಜೆ ಆಚಾರ್, ಕಾವ್ಯ ಪಾತ್ರದಲ್ಲಿ ವೈಷ್ಣವಿ ನಟಿಸುತ್ತಿದ್ದಾರೆ. "ನಮ್ಮನೆ ಯುವರಾಣಿ" ಖ್ಯಾತಿಯ ರಾಘವೇಂದ್ರ ಹಾಗೂ ವಿಕಾಸ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ.
ರವೀನ್ ಕುಮಾರ್ ಈ ಧಾರಾವಾಹಿಯನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಧಾರಾವಾಹಿಯ ಕಲಾವಿದರು ಹಾಗೂ ನಿರ್ದೇಶಕರು ಮಾಹಿತಿ ನೀಡಿದರು. 
ನಾನು ಈ ಧಾರಾವಾಹಿಯಲ್ಲಿ ಪ್ರೇಮ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ತಂದೆ, ತಾಯಿ ಹಾಗೂ ತಂಗಿ ಇದೇ ನನ್ನ ಒಂದು ಪುಟ್ಟ ಪ್ರಪಂಚ. ನಾನು ಹೆಚ್ಚು ವಿದ್ಯಾವಂತೆ ಅಲ್ಲ. ಆದರೆ ತಂಗಿಗೆ ತಾನು ಸೈಂಟಿಸ್ಟ್ ಆಗಬೇಕೆಂಬ ಅಭಿಲಾಷೆ. ಅವಳ ಕನಸಿಗೆ ಸಹಕಾರ ನೀಡುತ್ತಿರುತ್ತೇನೆ. ಜೊತೆಗೆ ಬಾಲ್ಯದ ಗೆಳೆಯ ರಾಮ್ ನನ್ನು ಪ್ರೀತಿಸುತ್ತಿರುತ್ತೇನೆ ಎಂದು ತಮ್ಮ ಪಾತ್ರದ ಬಗ್ಗೆ ನಟಿ ಪ್ರಿಯ ಜೆ ಆಚಾರ್ ಮಾಹಿತಿ ನೀಡಿದರು.
ಕಾವ್ಯ ನನ್ನ ಪಾತ್ರದ ಹೆಸರು ಎಂದು ಮಾತನಾಡಿದ ನಟಿ ವೈಷ್ಣವಿ, ನಾನು ಈ ಧಾರಾವಾಹಿಯಲ್ಲಿ ಬಹಳ ವಿದ್ಯಾವಂತೆ. ಬಾಹ್ಯಾಕಾಶ ವಿಜ್ಞಾನಿ ಆಗಬೇಕೆಂಬ ಆಸೆ. ಹಳ್ಳಿಯಲ್ಲಿ ಹೆಚ್ಚು ಇರಲ್ಲ. ನಗರದಲ್ಲೇ ಹೆಚ್ಚು ವಾಸ್ತವ್ಯ. ಸೌಮ್ಯ ಸ್ವಾಭಾವದ ಹುಡುಗಿ ಎಂದರು.  
  "ನಮ್ಮನೆ ಯುವರಾಣಿ" ಧಾರಾವಾಹಿಯಲ್ಲಿ ಸಾಕೇತ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ಈಗ ಈ ಧಾರಾವಾಹಿಯಲ್ಲಿ ಮಾದೇವನಾಗಿ ನಿಮ್ಮ ಮುಂದೆ ಬರಲಿದ್ದೇನೆ. ಮಾತು ಬಾರದ ತಂಗಿ. ಅವಳೆ ನನಗೆ ಪ್ರಪಂಚ. ಇನ್ನೂ ಅಮ್ಮನ ಮಾತೇ ವೇದವಾಕ್ಯ. ಕೆಟ್ಟದ್ದರ ಹಾಗೂ ಕೆಟ್ಟವರ ವಿರುದ್ಧ ಹೋರಾಡುತ್ತೇನೆ. ಮುಂಗೋಪಿ. ಹಾಗಾಗಿ ಎಲ್ಲರೂ ನನ್ನನ್ನು ಕೆಟ್ಟವನನ್ನಾಗಿ ನೋಡುತ್ತಾರೆ ಎಂದು ತಮ್ಮ ಪಾತ್ರದ ಕುರಿತು ನಟ ರಾಘವೇಂದ್ರ ಹೇಳಿದರು.  
ಮೊದಲ ಬಾರಿಗೆ ಈ ಧಾರಾವಾಹಿಯ ಮೂಲಕ ನಾಯಕನಾಗಿ ನಟಿಸುತ್ತಿದ್ದೇನೆ. ರಾಮ್ ನನ್ನ ಪಾತ್ರದ ಹೆಸರು. ಮೃದು ಸ್ವಭಾವದವನು. ವೃತ್ತಿಯಲ್ಲಿ ವೈದ್ಯ. ಮಾದೇವನ ದೊಡ್ಡಮ್ಮನ ಮಗ. ದೊಡ್ಡಮ್ಮನಿಗೆ ನಾನಿ ಊರಿನಲ್ಲೇ ಆಸ್ಪತ್ರೆ ಕಟ್ಟಿ ವೈದ್ಯನಾಗಿರಬೇಕೆಂಬ ಆಸೆ‌. ದೊಡ್ಡಮ್ಮನ ಆಸೆಯೇ ನನ್ನ ಆಸೆ ಕೂಡ ಎಂದು ನವ ನಟ ವಿಕಾಸ್ ತಿಳಿಸಿದರು. 
ಧಾರಾವಾಹಿ ನಿರ್ಮಾಣ ಹಾಗೂ ನಿರ್ದೇಶನಕ್ಕೆ ಅವಕಾಶ ಕೊಟ್ಟವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ದೇಶಕ ರವೀನ್ ಕುಮಾರ್, "ಪ್ರೇಮ ಕಾವ್ಯ" ಒಂದು ಸುಂದರ ದೃಶ್ಯ ಕಾವ್ಯವಾಗಿ ಇದೇ ಆಗಸ್ಟ್ 4 ರಿಂದ ಸಂಜೆ 6.30 ಕ್ಕೆ ನಿಮ್ಮ ಮುಂದೆ ಬರಲಿದೆ. ಈಗಾಗಲೇ ಶೀರ್ಷಿಕೆ ಗೀತೆ ಹಾಗೂ ಪ್ರೋಮೊ ಜನರನ್ನು ತಲುಪಿದೆ. ನಮ್ಮ ಧಾರಾವಾಹಿಗೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...