Skip to main content

’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಲೋಕಾರ್ಪಣೆ..

’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಲೋಕಾರ್ಪಣೆ..
ಹಿರಿಯ ನಟ ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ ಮಾಡಿರುವ 
’ಪದ್ಮಗಂಧಿ’ ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಅನಾವರಣ ಕಾರ್ಯಕ್ರಮವು ಕಿಕ್ಕಿರದ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಎಂಎಲ್‌ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ ಎಸ್.ಆರ್.ಲೀಲಾ ರಚಸಿ, ನಿರ್ಮಾಣ ಮಾಡಿರುವುದು ಹೊಸ ಅನುಭವ.
      ಶಂಕರ್‌ಶಾನ್‌ಭೋಗ್ ಸೇರಿದಂತೆ ಹಲವು ಗಾಯಕರುಗಳು ಗೀತೆಯ ಸಾಲು ಹಾಡುವುದರ ಮೂಲಕ, ಹಾಗೂ ಕೋಟೆ ರಾಮಚಂದ್ರಭಟ್ ಸಂಸ್ಕ್ರತ ಭಾಷೆಯ ಟ್ರೇಲರ್ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
       ಮುಖ್ಯವಾಗಿ ಜಗದ್ಗುರು ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು, ಪೇಜಾವರ ಮಠಾಧೀಶರು ಪಾದ ಇರಿಸಿದ್ದು ಸಮಾರಂಭಕ್ಕೆ ಭೂಷಣ ತಂದುಕೊಟ್ಟಿತು. ಶ್ರೀ ಪಾದರು ಮಾತನಾಡುತ್ತಾ ಸುಚೇಂದ್ರ ಪ್ರಸಾದ್ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆಂದು ಭಾವಿಸಿದ್ದೇನೆ. ಕನ್ನಡ ಚಿತ್ರರಂಗ ಲಾಭದಾಯಕವಲ್ಲದ ಪರಿಸ್ಥಿತಿಯಲ್ಲಿ ಸಿನಿಮಾ ಮಾಡಿದ್ದಾರೆ. ಸಂಸ್ಕ್ರತ ಅನ್ನುವುದು ದೇಶಾಂತರಕ್ಕೂ ಸಲ್ಲುವ ಭಾಷೆ. ಆದ್ದರಿಂದ ವಿಸ್ಕ್ರತವಾದಂತ ನೋಡುಗರು, ಕೇಳುಗರು ಇರುತ್ತಾರೆ. ಇದರ ಹಿಂದೆ ಕೈ ಜೋಡಿಸಿದ ಎಲ್ಲರಿಗೂ ಶ್ರೇಯಸು ಸಿಗಲೆಂದು ಶುಭ ನುಡಿಗಳನ್ನು ಹೇಳಿದರು.
     ವಿದ್ಯಾರ್ಥಿಯಾಗಿ ಕು.ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖರ್ ಇವರೊಂದಿಗೆ ರಿಯಲ್‌ದಲ್ಲಿ ಹೆಸರು ಮಾಡಿರುವ ಶತಾವಧಾನಿ ಡಾ.ಆರ್.ಗಣೇಶ್, ಡಾ.ಗೌರಿ ಸುಬ್ರಹ್ಮಣ್ಯ (ಧರ್ಮಾಧಿಕಾರಿಗಳು, ಮುಕ್ತಿನಾಗ ದೇವಸ್ಥಾನ), ಡಾ.ಪ್ರೇಮಾ, ಡಾ.ಹೇಮಂತ್‌ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್(ಶಿಲ್ಪಜ್ಞ), ಮೃತ್ಯುಂಜಯಶಾಸ್ತ್ರಿ, ಪಂಡಿತ ಪ್ರಸನ್ನವೈದ್ಯ, ಡಾ.ದೀಪಕ್‌ಪರಮಶಿವನ್, ಹೇಮಂತಕುಮಾರ.ಜಿ ಬಣ್ಣ ಹಚ್ಚಿರುವುದು ಚಿತ್ರಕ್ಕೆ ಹಿರಿಮೆ ತಂದುಕೊಟ್ಟಿದೆ. ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಲಾರ್-ನಾಗರಾಜ್ ಅದ್ವಾನಿ-ಗಿರಿಧರ್‌ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನವಿದೆ.    
 ಈ ಸಂದರ್ಭದಲ್ಲಿ ಕ.ಸುಚೇಂದ್ರಪ್ರಸಾದ ಸಿನಿಮಾ ಹುಟ್ಟಿದ ಬಗ್ಗೆ ಅನುಭವಗಳನ್ನು ಹಂಚಿಕೊಂಡು ಮಾಧ್ಯಮದವರ ಇತ್ಯಾಹ್ಮಕ ಸ್ಪಂದನೆ ಸಿಗಬೇಕಿದೆ. ತಾವುಗಳು ನಮ್ಮ ಮನವಿಯನ್ನು ಒಪ್ಪಿಕೊಳ್ಳಬೇಕೆಂದು ಕೋರಿದರು.
     ಸಿನಿಮಾವು ಹಾದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ. ನಮ್ಮಲ್ಲಿ ದೈವೀಕ ಅನುಭೂತಿ ಸ್ಪುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಧಿಯನ್ನು ವಿಸ್ತಿರಿಸಿಕೊಳ್ಳುತ್ತಾ, ಅದರ ಅಗಾದತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರಯಂತೆ ಭಾಸವಾಗಲಾರಂಭಿಸಿದೆ. ಇದೆಲ್ಲಾವನ್ನು ಸಂಶೋಧಿಸಿ ವಿಷಯಗಳನ್ನು ಸನ್ನಿವೇಶಗಳಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ನನ್ನ ಮನಸ್ಸಿನಲ್ಲಿರುವಂತೆ ತೆರೆ ಮೇಲೆ ತೋರಿಸಿದ್ದಾರೆ. ನೀವುಗಳು ವ್ಯಾಪಕ ಪ್ರಚಾರ ಮಾಡಿದರೆ, ನಮ್ಮ ಶ್ರಮ ಸಾರ್ಥಕವಾದಂತೆ ಎಂದು ನಿರ್ಮಾಪಕಿ ಎಸ್.ಆರ್.ಲೀಲಾ ಅಭಿಪ್ರಾಯಪಟ್ಟರು.
       ದೇಶದ ಪ್ರಮುಖ ವಿದ್ವಾಂಸರು ಸಭೆಯಲ್ಲಿ ಹಾಜರಿದ್ದುದಲ್ಲದೆ, ಅನೇಕ ಮಠಾದೀಶರು ತಮ್ಮ ಅನುಗ್ರಹ ಸಂದೇಶವನ್ನು ಚಿತ್ರಕ್ಕೆ ದಯಪಾಲಿಸಿದ್ದುದು, ಪತ್ರಿಕಾ ಮುಖಾಮುಖಿಯ ವಿಶೆಷವಾಗಿತ್ತು. ನಿರ್ದೇಶಕರ ಅಚ್ಚುಕಟ್ಟಾದ ಯೋಜನೆ, ಆಕಾಶವಾಣಿಯ ಹಿರಿಯ ಉದ್ಗೋಷಕಿ ಸುಮತಿರವರ ನವಿರಾದ ನಿರೂಪಣೆ ಕಾಯಕ್ರಮ ಯಶಸ್ವಿಯಾಗಲು ಸಹಕಾರಿ ಆಯಿತು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...