Skip to main content

ಕುಂತಲ್ಲೇ ಚಳಿ ಬರಿಸುತ್ತೆ ಈ 'ಒಮೆನ್' ಟ್ರೇಲರ್

ಕುಂತಲ್ಲೇ ಚಳಿ ಬರಿಸುತ್ತೆ ಈ 'ಒಮೆನ್' ಟ್ರೇಲರ್
ಲವ್ ಸ್ಟೋರಿಗಳು ಸದಾ ಕಾಡುವಂತೆ ಹಾರಾರ್ ಸ್ಟೋರಿಗಳನ್ನು ಇಷ್ಟಪಡುವವರ ಸಂಖ್ಯೆ ಸ್ವಲ್ಪ ಜಾಸ್ತಿಯೇ ಇದೆ. ಹಾರಾರ್ ಎಂದಾಕ್ಷಣಾ ಒಂದೇ ರೀತಿಯ ಹಾರಾರ್ ಸಿನಿಮಾ ಕೊಟ್ಟರೆ ಜನಕ್ಕೆ ಅಷ್ಟಾಗಿ ಇಷ್ಟ ಆಗೋದು ಕಷ್ಟ. ಆದರೆ ಅದರಲ್ಲಿಯೇ ಕಥೆಯನ್ನ ವಿಭಿನ್ನವಾಗಿ ಎಣೆಯಬೇಕು. ಆ ಕೆಲಸವನ್ನ ವೈಭವ್ ಎಸ್ ಸಂತೋಷ್ ಅವರು ಮಾಡಿದ್ದಾರೆ. ಅವರದ್ದೇ ನಿರ್ದೇಶನದ ಒಮೆನ್‌ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಹಾರಾರ್ ಅಂದ್ರು ಡೋಂಟ್ ಕೇರ್, ನನಗೆ ಧೈರ್ಯ ಜಾಸ್ತಿ ಅನ್ನೋರು ಕೂಡ ಈ ಟ್ರೇಲರ್ ನೋಡಿ. ಎದೆ ನಡುಗಲಿಲ್ಲ ಅಂದ್ರೆ ಕೇಳಿ. 
ಒಮೆನ್ ಸಿನಿಮಾದ ಟ್ರೇಲರ್ ರಿಲೀಸ್ ಬಳಿಕ ಮಾತನಾಡಿದ ನಿರ್ದೇಶಕ ವೈಭವ್ ಸಂತೋಷ್, ಒಮೆನ್ ಅಂದ್ರೆ ಶಕುನಾ ಎಂದು ಅರ್ಥ ಬರುತ್ತೆ. ಭಯಾನಕವಾದ ಸಿನಿಮಾವನ್ನ ಇನ್ನು ಭಯಾನಕವಾಗಿ ಮಾಡಬೇಕೆಂಬ ಉದ್ದೇಶದಿಂದಾನೇ ಒಮೆನ್ ಮಾಡಿದ್ದು. ಫೌಂಡ್ ಫುಟೇಜ್ ಅಂದ್ರೆ ಸುಮಾರು ಜನ ಒಪ್ಪಲ್ಲ. ಹೀರೋನೆ ಕ್ಯಾಮೆರಾ ಇಟ್ಕೊಂಡು ಮಾಡೋ ರಿಸ್ಕ್ ಯಾಕೆ ಅಂತ ಸುಮ್ನಾಗ್ತಾರೆ. ಆದ್ರೆ ನಮ್ಮ ಹೀರೋ ಅಜಯ್ ಕುಮಾರ್ ತುಂಬಾ ಸಪೋರ್ಟ್ ಮಾಡಿದ್ರು. ಮ್ಯೂಸಿಕ್ ಕೂಡ ನಮ್ಮ ಸಿನಿಮಾದಲ್ಲಿ ಬಹಳ ಮುಖ್ಯ ಪಾತ್ರ ವಹಿಸಿದೆ. ನಮ್ಮ ಪ್ರೊಡ್ಯೂಸರ್ ಮಿರುನಳಿನಿ ಬೆಂಬಲ ಜಾಸ್ತಿ ಇದೆ ಎಂದಿದ್ದಾರೆ. 
ನಟ ಅಜಯ್ ಕುಮಾರ್ ಮಾತನಾಡಿ, ಈ ಸಿನಿಮಾಗೆ ನಾಯಕ ಅಂತ ಹೇಳ್ಕೊಳೋಕೆ ತುಂಬಾ ಖುಷಿ ಪಡ್ತೀನಿ. ಆದ್ರೆ ನಿರ್ಮಾಪಕ ಅಂತ ಹೇಳಿಕೊಳ್ಳೋದಕ್ಕೆ ಭಯ. ಅದು ತುಂಬಾ ದೊಡ್ಡ ಪದ. ಇಂಡಸ್ಟ್ರಿಗೆ ನಮ್ಮ ಕಡೆಯಿಂದ ಏನಾದ್ರು ಕೊಡುಗೆ ಕೊಡಬೇಕು. ಇದು ಕಂಪ್ಲೀಟ್ ಹೊಸಬರ ಸಿನಿಮಾ ಅನ್ನೋದಕ್ಕಿಂತ ಈ ತಂಡದಲ್ಲಿರುವವರು ಸಿನಿಮಾದ ಹಿರಿಯರ ಜೊತೆಗೆ ಕೆಲಸ ಮಾಡಿ ಅನುಭವವಿದೆ ಎಂದಿದ್ದಾರೆ. 
ಈ ಸಿನಿಮಾವನ್ನು ವಿತರಣೆ ಮಾಡ್ತಾ ಇರೋದು ವಿಜಯ್ ಸಿನಿಮಾಸ್. ಒಮೆನ್ ಬಗ್ಗೆ ಮಾತನಾಡಿದ ವಿಜಯ್ ಅವರು,ಒಮೆನ್ ಅತಿ ಶೀಘ್ರದಲ್ಲಿ ರಿಲೀಸ್ ಆಗ್ತಾ ಇದೆ. ಅಜಯ್ ಅವರು ನಮ್ಮ ಕ್ರ್ಯಾಕ್ ಸಿನಿಮಾದಲ್ಲಿ ವರ್ಕ್ ಮಾಡ್ತಾ ಇದ್ರು. ಅದನ್ನ ಬಿಟ್ರೆ ಆಮೇಲೆ ಕಾಂಟ್ಯಾಕ್ಟ್ ಇರಲಿಲ್ಲ. ಆದರೆ ಇತ್ತೀಚೆಗೆ ಬಂದು ನಮ್ಮದೊಂದು ಸಿನಿಮಾ ಬರ್ತಾ ಇದೆ. ಸಪೋರ್ಟ್ ಮಾಡಿ ಅಂದ್ರು ಅದಕ್ಕೆ ಜೊತೆಗೆ ನಿಂತಿದ್ದೀನಿ ಅಂದ್ರು. 
ಶೀಘ್ರದಲ್ಲಿಯೇ ಒಮೆನ್ ಸಿನಿಮಾ ರಿಲೀಸ್ ಆಗ್ತಾ ಇದೆ. ವೈಭವ್ ಸಂತೋಷ್ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಎಡಿಟಿಂಗ್ ಕೆಲಸವನ್ನು ಮಾಡಿದ್ದಾರೆ. ಇನ್ನು ಅಜಯ್ ಕುಮಾರ್ ನಟನೆ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ನಿಶ್ಮಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಭುವನ್ ಶಂಕರ್, ಸಂಸ್ಕಾರ್ ಮ್ಯೂಸಿಕ್ ನೀಡಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...