Skip to main content

ಉತ್ತರ ಕರ್ನಾಟಕ ಸೊಗಡಿನ ಕಥೆ. ಹಳ್ಳಿಗಳನ್ನು ಉಳಿಸಿದ ಧೀರ..

ಉತ್ತರ ಕರ್ನಾಟಕ ಸೊಗಡಿನ ಕಥೆಹಳ್ಳಿಗಳನ್ನು ಉಳಿಸಿದ ಧೀರ 
"ಹುಲಿ ಬೀರ"ನ ಟೀಸರ್  "ಸೊರಗುತ್ತಿರೋ ಹಳ್ಳಿಗಳಿಗೆ ಮತ್ತೆ ಯುವಕರು ಮರಳುವಂತೆ ಮಾಡಿ ರಾಜಕಳೆ ತಂದನು ಈ ಹುಲಿಬೀರ"
 ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಾಣ ಮಾಡಿರುವ ಚಿತ್ರ ಹುಲಿಬೀರ. ಈ ಹಿಂದೆ ರಂಗ್ ಬಿರಂಗಿ ಚಿತ್ರ ನಿರ್ದೇಶಿಸಿದ್ದ ಮದರಂಗಿ ಮಲ್ಲಿಕಾರ್ಜುನ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. 
 ಯರ್ರಾಬಿರ್ರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ರೂರಲ್ ಸ್ಟಾರ್ ಅಂಜನ್ ಚಿತ್ರದ ನಾಯಕನಾಗಿ ನಟಿಸಿದ್ದು, ಚೈತ್ರ ತೋಟದ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. 
   ಉತ್ತರ ಕರ್ನಾಟಕದ ನೇಟಿವಿಟಿ, ನಾಯಕ, ನಾಯಕಿ, ನಿರ್ಮಾಪಕ, ನಿರ್ದೇಶಕ ಹೀಗೆ ಎಲ್ಲರೂ ಸೇರಿ ಮಾಡಿರುವ ಅದೇ ಸೊಗಡಿನ ಚಿತ್ರವಿದು. ಸೋಮವಾರ ಈ ಚಿತ್ರದಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ವೀರಸಮರ್ಥ ಅವರ ಸಂಗೀತ ಸಂಯೋಜನೆ, ಸನಾತನ ಅವರ ಕ್ಯಾಮೆರಾ ವರ್ಕ್ ಈ ಚಿತ್ರಕ್ಕಿದೆ.
    ಸಾಯಿ ಸ್ಟಾರ್ ಸಿನಿಮಾಸ್ ಮೂಲಕ ದಾವಲ ಸಾಹೇಬ ಹುಣಶೀಮರದ, ಅಶೋಕ್ ಎನ್.(ತುರುವೇಕೆರೆ) ಹಾಗೂ ಸುಜಾತ ಗಿರೀಶ್ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 
     ವೇದಿಕೆಯಲ್ಲಿ ಮಾತನಾಡಿದ ನಿರ್ದೇಶಕ ಮದರಂಗಿ ಮಲ್ಲಿಕಾರ್ಜುನ ಇದು ನನ್ನ ನಿರ್ದೇಶನದ ಐದನೇ ಚಿತ್ರ. 4 ವರ್ಷಗಳ ಹಿಂದೆಯೇ ಈ ಚಿತ್ರ ಪ್ರಾರಂಭವಾಗಿತ್ತು. ಹುಲಿಬೀರ ನಾಯಕನ ಹೆಸರು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎಲ್ಲದಕ್ಕೂ ಧೈರ್ಯದಿಂದ ಮುನ್ನುಗ್ಗುವ ಹುಡುಗರನ್ನು ಅವ ನೋಡು ಹುಲಿಥರ ಇದಾನೆ ಅನ್ನುತ್ತಾರೆ, ನಾಯಕ ಬೀರ ಹಳ್ಳಿಯ ಯಾವುದೇ ಸಮಸ್ಯೆ ಇರಲಿ‌ ಮುಂದೆನಿಂತು ಕೆಲಸ ಮಾಡುತ್ತಾನೆ. ಆತನನ್ನು ಹಳ್ಳಿಯ ಜನರೆಲ್ಲ ಹುಲಿಬೀರ ಅಂತಿರ್ತಾರೆ. ಹಾಗೇ ವಿದ್ಯಾವಂತ ಯುವಕ, ಯುವತಿಯರೆಲ್ಲ ಕೆಲಸ ಅಂತ ಸಿಟಿಗೆ ಹೋದರೆ ಆ ಹಳ್ಳಿಗಳನ್ನು ಬೆಳೆಸೋರು ಯಾರು, ಈ ಸಮಸ್ಯೆಯನ್ನು ಬೀರ ಹೇಗೆ ಬಗೆಹರಿಸುತ್ತಾನೆ. ಅವರೆಲ್ಲ ಮತ್ತೆ ಹೇಗೆ ಹಳ್ಳಿಗೆ ಮರಳುವಂತೆ ಮಾಡಿ, ಹಳ್ಳಿಯನ್ನು ಉದ್ದರಿಸುತ್ತಾನೆ, ಹುಲಿಬೀರ ಎನಿಸಿಕೊಳ್ಳುತ್ತಾನೆ ಎನ್ನುವುದೇ ಈ ಚಿತ್ರದ ಕಾನ್ಸೆಪ್ಟ್. ಕಾಮಿಡಿ, ಸೆಂಟಿಮೆಂಟ್ , ಮನರಂಜನೆಯ ಜತೆಗೆ ಒಂದೊಳ್ಳೆ ಮೆಸೇಜನ್ನು ಈ ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ. ಬಾದಾಮಿ, ಸುತ್ತಮುತ್ತಲ ಗ್ರಾಮಗಳಲ್ಲಿ ಎರಡು ಹಂತಗಳಲ್ಲಿ 51 ದಿನಗಳವರೆಗೆ ಹಾಡು ಹಾಗೂ ಮಾತಿನ ಭಾಗದ ಶೂಟಿಂಗ್ ನಡೆಸಿದ್ದೇವೆ. ರಂಗಾಯಣ ರಘು ಅವರು ಗ್ರಾಮದ ಹಿರಿಯನ ಪಾತ್ರ ಮಾಡಿದ್ದಾರೆ. ಚಿತ್ರವೀಗ ಡಬ್ಬಿಂಗ್ ಹಂತದಲ್ಲಿದ್ದು ನವೆಂಬರ್ ವೇಳೆಗೆ ರಿಲೀಸ್ ಮಾಡೋ ಪ್ಲಾನಿದೆ ಎಂದರು.
    ನಾಯಕ ಅಂಜನ್ ಮಾತನಾಡಿ ನಾನು ಉತ್ತರ ಕರ್ನಾಟಕದ ಕುಂದಗೋಳ ಎಂಬ ಪುಟ್ಟ ಗ್ರಾಮದವನು. ರೀಲ್ಸ್ , ಶಾರ್ಟ್ ಫಿಲಂ ಮಾಡುತ್ತ,
ಸೋಷಿಯಲ್ ಮೀಡಿಯಾ ಮೂಲಕ ಜನರಿಂದ ಗುರ್ತಿಸಿಕೊಂಡೆ. ಯರ್ರಾಬಿರ್ರಿ ಚಿತ್ರದ ಮೂಲಕ ನಾಯಕನಾದೆ. ಹಳ್ಳಿಯ ಯುವಕರೆಲ್ಲ ಓದಿಕೊಂಡು ಕೆಲಸಕ್ಕಾಗಿ ಸಿಟಿಗೆ ಹೋಗ್ತಾರೆ. ಬರೀ ವೃದ್ದರು, ಬಡವರು‌ ಮಾತ್ರ ಉಳಿದುಕೊಳ್ತಾರೆ.
ಹೀಗಾದರೆ ನಮ್ಮ ಹಳ್ಳಿಗಳನ್ನು ಉದ್ಧಾರ ಮಾಡೋ ಯಾರು, ನಾವು ಮೊದಲು ನಮ್ಮ ಊರು, ಹಳ್ಳಿಗಳನ್ನು ಕಾಪಾಡಬೇಕು ಎಂಬ ಸಂದೇಶ ಇಟ್ಟುಕೊಂಡು ಮಾಡಿದ ಚಿತ್ರವಿದು ಎಂದರು.
      ನಾಯಕಿ ಚೈತ್ರ ತೋಟದ ಮಾತನಾಡಿ ಈ ಹಿಂದೆ ಬ್ರಹ್ಮರಾಕ್ಷಸ, ವಿದುರ, ಚೌಕಿದಾರ್ ಚಿತ್ರಗಳಲ್ಲಿ ನಟಿಸಿದ್ದೇನೆ. ಈ ಚಿತ್ರದಲ್ಲಿ ನಾಯಕನ ಅಕ್ಕನ ಮಗಳ ಪಾತ್ರ ಮಾಡಿದ್ದೇನೆ. ಡೈರೆಕ್ಟರ್ ಬರೆದಿರುವ ಒಂದು ಹಾಡು ನನಗೆ ತುಂಬಾ ಇಷ್ಟವಾಯ್ತು ಎಂದು ಹೇಳಿದರು. ವನು ಪಾಟೀಲ್ ಹಾಗೂ ಅಂಜಲಿ ಚಿತ್ರದ ಉಳಿದ ನಾಯಕಿಯರಾಗಿ ನಟಿಸಿದ್ದಾರೆ.
       ಸಂಗೀತ ನಿರ್ದೇಶಕ ವೀರ್ ಸಮರ್ಥ ಮಾತನಾಡಿ ಚಿತ್ರದಲ್ಲಿ ಜನಪದ, ಮಣ್ಣಿನ ಸೊಗಡಿನ ನಾಲ್ಕು ಹಾಡು ಹಾಗೂ 2 ಬಿಟ್ ಗಳಿವೆ, ನಿರ್ದೇಶಕರು 2 ಸಾಂಗ್, ಶಿವು ಬೆರ್ಗಿ, ನಾಗೇಂದ್ರ ಪ್ರಸಾದ್ ಒಂದೊಂದು ಹಾಡು ಬರೆದಿದ್ದಾರೆ, ಸರಿಗಮಪ ಖ್ಯಾತಿಯ ಶಿವಾನಿ ಹಾಡೊಂದಕ್ಕೆ ದನಿಯಾಗಿದ್ದಾರೆ ಎಂದರು. ಧರ್ಮ ವಿಶ್ ಚಿತ್ರಕ್ಕೆ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...