Skip to main content

'ಫ್ಲರ್ಟ್' ಚಿತ್ರದ ಫ್ರೆಂಡ್ ಷಿಪ್ ಹಾಡಿಗೆ ಕಿಚ್ಚ ಸುದೀಪ್ ಗಾಯನ..

'ಫ್ಲರ್ಟ್' ಚಿತ್ರದ ಫ್ರೆಂಡ್ ಷಿಪ್ ಹಾಡಿಗೆ ಕಿಚ್ಚ ಸುದೀಪ್ ಗಾಯನ..
 'ಫ್ಲರ್ಟ್' ಚಂದನ್ ಕುಮಾರ್ ನಟನೆ, ನಿರ್ದೇಶನದ ಶೈಲಿಗೆ ಪ್ರಶಂಸೆಯ ಸುರಿಮಳೆ.. ಯುವ ಸಿಸಿಎಲ್ ಪ್ರತಿಭೆ ಚಂದನ್ ಕೈಲಿ ಅರಳಿದ ಫ್ಲರ್ಟ್ ಕಥಾನಕ 
 ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು 
ಫ್ಲರ್ಟ್ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ. ಕಿಚ್ಚ ಸುದೀಪ್ ಗರಡಿಯ ಹುಡುಗ, ಸಿಸಿಎಲ್ ಸಹಪಾಠಿಯೂ ಆದ ಚಂದನ್ ಕುಮಾರ್ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ಹಾಡೊಂದಕ್ಕೆ ಸುದೀಪ್ ಅವರೇ ದನಿಯಾಗಿದ್ದಾರೆ. ಈ ಫ್ರೆಂಡ್ ಶಿಪ್ ಆಂಥೆಮ್ ನ ಬಿಡುಗಡೆ ಕಾರ್ಯಕ್ರಮ ಸೋಮವಾರ ಸಂಜೆ ನೆರವೇರಿತು.     
   ‌‌‌‌ಫ್ಲರ್ಟ್ ಚಿತ್ರದಲ್ಲಿ ನಟಿಸುವ ಜತೆಗೆ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನೂ ಸಹ ಚಂದನ್ ಕುಮಾರ್ ಅವರೇ ಹೊತ್ತಿದ್ದಾರೆ. ಅಲ್ಲದೆ ಎವರೆಸ್ಟ್ ಪಿಕ್ಚರ್ಸ್ ಬ್ಯಾನರ್ ಅಡಿ ಚಂದನ್ ಅವರ ಪತ್ನಿ ಕವಿತಾಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎ ಪ್ಯೂರ್ ಡವ್ ಸ್ಟೋರಿ ಎಂಬ ಅಡಿಬರಹ ಫ್ಲರ್ಟ್ ಚಿತ್ರಕ್ಕಿದ್ದು, ಇದಕ್ಕೆ ವಿವರಣೆಯನ್ನೂ ಚಂದನ್ ನೀಡಿದ್ದಾರೆ.   
 ವಿಶೇಷವಾಗಿ ಸುದೀಪ್ ಅವರ ಹಾಡಿಗೆ ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಮಾಡಿದ್ದಾರೆ. 
ಹಾಡಿನ ಬಿಡುಗಡೆ ಸಂದರ್ಭದಲ್ಲಿ‌ ‌ಸುದೀಪ್‌ ಅವರು ಚಂದನ್ ಗೆ ವಿಡಿಯೋ ಮೂಲಕ ಶುಭ ಹಾರೈಸಿದರು.
   ಈ ಸಂದರ್ಭದಲ್ಲಿ ನಾಯಕ, ನಿರ್ದೇಶಕ ಚಂದನ್ ಮಾತನಾಡುತ್ತ ಇದೊಂದು ರೋಮ್ ಕಾಮ್ ಸಿನಿಮಾ ಆದರೂ ಫ್ರೆಂಡ್ ಶಿಪ್, ಲವ್, ಹೀಗೆ ಎಲ್ಲಾ ಥರದ ಎಂಟರ್ ಟೈನಿಂಗ್ ಎಲಿಮೆಂಟ್ಸ್ ಒಳಗೊಂಡಿದೆ. ಫ್ಲರ್ಟ್ ಎಂದರೆ ಬರೀ ಚುಡಾಯಿಸುವುದು ಎಂದರ್ಥವಲ್ಲ. ಗಾಢವಾದ ಪ್ರೀತಿಯನ್ನೂ ಸಹ ಫ್ಲರ್ಟ್ ಎಂದೇ ಕರೆಯುತ್ತಾರೆ ಎಂದು ಮಾತು ಆರಂಭಿಸಿದ ಚಂದನ್, ಎಲ್ಲರ ಡವ್ ನಲ್ಲೂ ಒಂದೊಂದು ಲವ್ ಇದೆ ಎನ್ನುತ್ತಾರೆ. ಈ ಚಿತ್ರದಲ್ಲಿ ರೋಮ್ ಕಾಮ್ ಜತೆಗೆ ಸೈಕೋ ಕ್ಯಾರೆಕ್ಟರ್ ಕೂಡ ಇದೆ. ಇಡೀ ಚಿತ್ರ ಎಲ್ಲೂ ಬೋರಾಗದಂತೆ ಫಾಸ್ಟ್ ಆಗಿ ಸಾಗುತ್ತದೆ. ಈಗ ರಿಲಿಸಾಗಿರುವ ಫ್ರೆಂಡ್ ಶಿಪ್ ಆಂಥೆಮ್ ಸಾಂಗನ್ನು ಸುದೀಪ್ ಹಾಡಿದ್ದಾರೆ ಎಂದು ಹೇಳಿದರು.
 ಹಿರಿಯ ನಟಿ ಶೃತಿ, ಸಾಧು ಕೋಕಿಲ ಅವರೂ ಒಂದೊಳ್ಳೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಿರಿ ನನ್ನ ಸ್ನೇಹಿತನಾಗಿ ನಟಿಸಿದ್ದಾರೆ. ಇಬ್ಬರು ನಾಯಕಿಯರಾಗಿ ಅಕ್ಷತಾ ಬೋಪಣ್ಣ ಹಾಗೂ ನಿಮಿಕಾ ರತ್ನಾಕರ್ ನಟಿಸಿದ್ದಾರೆ ಎಂದು ವಿವರಿಸಿದರು.
   ನಟ ಸಾಧು ಕೋಕಿಲ ಮಾತನಾಡುತ್ತ ನಾನು ಸಾಮಾನ್ಯವಾಗಿ ಕಾರ್ಯಕ್ರಮಗಳಿಗೆ ಕೈಕೊಡೋದೇ ಜಾಸ್ತಿ. ಆದರೆ ಈತ ಸಬ್ಜೆಕ್ಟ್ ಮಾಡಿಕೊಂಡಿರುವ ರೀತಿ ನನಗೆ ತುಂಬಾ ಇಷ್ಟವಾಯಿತು. ನಿರ್ದೇಶಕನೇ ನಿರ್ಮಾಪಕನಾದಾಗ ಜವಾಬ್ದಾರಿ ಜಾಸ್ತಿ ಇರುತ್ತದೆ. ಒಂದೊಳ್ಳೇ ಥಾಟ್ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ನನ್ನದೂ ಸಹ ನಾನು ಈವರೆಗೆ ಮಾಡಿರದಂಥ ರೋಲ್,ಅವರ ನಿರ್ದೇಶನದ ಶೈಲಿ ಇಷ್ಟವಾಯಿತು. ನಾನಿಷ್ಟೊತ್ತು ಮಾತಾಡ್ತಿದ್ದೇನೆಂದರೆ ಅದಕ್ಕೆ ಕಾರಣ ಚಂದನ್ ಎಂದು ನಾಯಕ, ನಿರ್ದೇಶಕನನ್ನು ಹಾಡಿ ಹೊಗಳಿದರು.
      ನಾಯಕಿಯರಾದ ನಿಮಿಕಾ ರತ್ನಾಕರ್ ಅಕ್ಷತಾ ಬೋಪಣ್ಣ ಮಾತನಾಡುತ್ತ ಈ ಚಿತ್ರದ ಕಥೆ, ನಿರೂಪಣೆಯೇ ವಿಭಿನ್ನವಾಗಿದೆ. ಇಂಥ ಒಂದು ಚಿತ್ರದ ಭಾಗವಾಗಿರುವುದಕ್ಕೆ ನಮಗೆ ತುಂಬಾ ಖುಷಿಯಾಯ್ತು ಎಂದು ಹೇಳಿಕೊಂಡರು.
    ನಂತರ ಸ್ನೇಹಿತನ‌ ಪಾತ್ರ ಮಾಡಿರೋ ಗಿರಿ, ಮೂಗು ಸುರೇಶ್, ತಂತಮ್ಮ ಕ್ಯಾರೆಕ್ಟರ್ ಬಗ್ಗೆ ಮಾತಾಡಿದರು.
    ಜಸ್ಸಿ ಗಿಫ್ಟ್ ಈ ಚಿತ್ರದ ಸಂಗೀತ ನಿರ್ದೇಶಕರಾಗಿದ್ದು ಉಳಿದ 3 ಹಾಡುಗಳ ಜತೆಗೆ ಹಿನ್ನೆಲೆ ಸಂಗೀತವನ್ನೂ ಅವರೇ ಒದಗಿಸಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...