Skip to main content

ಡಾರ್ಲಿಂಗ್ ಕೃಷ್ಣ ಅಭಿನಯದ "ಬ್ರ್ಯಾಟ್"(BRAT) ಚಿತ್ರದ " ನಾನೇ ನೀನಂತೆ " ಹಾಡಿಗೆ ಮೆಚ್ಚುಗೆಯ ಸುರಿಮಳೆ..

ಡಾರ್ಲಿಂಗ್ ಕೃಷ್ಣ ಅಭಿನಯದ "ಬ್ರ್ಯಾಟ್"(BRAT) ಚಿತ್ರದ " ನಾನೇ ನೀನಂತೆ " ಹಾಡಿಗೆ ಮೆಚ್ಚುಗೆಯ ಸುರಿಮಳೆ..
 ಸದಭಿರುಚಿಯ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶನದ, ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ " ಬ್ರ್ಯಾಟ್" ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಈ ಚಿತ್ರದ "ನಾನೇ ನೀನಂತೆ" ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಹಾಡನ್ನು ಜನಪ್ರಿಯ ಗಾಯಕ ಸಿದ್ ಶ್ರೀರಾಮ್ ಹಾಡಿದ್ದಾರೆ. ಕನ್ನಡದ ಫಿಮೇಲ್ ವರ್ಷನ್ "ಸರಿಗಮಪ" ಖ್ಯಾತಿಯ ಲಹರಿ ಮಹೇಶ್ ಹಾಡಿದ್ದಾರೆ. ಉಳಿದ ನಾಲ್ಕು ಭಾಷೆಗಳಲ್ಲಿ ಫೀಮೇಲ್ ವರ್ಷನ್ ಸಿರೀಶ ಹಾಡಿದ್ದಾರೆ. ಹಿಂದಿಯಲ್ಲಿ ಮೇಲ್ ವರ್ಷನ್ ನಿಹಾಲ್ ತವ್ರು ಹಾಗೂ ತೆಲುಗು - ತಮಿಳಿನಲ್ಲಿ ಶ್ರೀಕಾಂತ್ ಹರಿಹರನ್ ಹಾಡಿದ್ದಾರೆ. ಈ ಹಿಂದೆ ಶಶಾಂಕ್, ಅರ್ಜುನ್ ಜನ್ಯ ಹಾಗೂ ಸಿದ್ ಶ್ರೀರಾಮ್ ಅವರ ಕಾಂಬಿನೇಶನ್ ನಲ್ಲಿ "ಲವ್ 360" ಚಿತ್ರದ "ಜಗವೇ ನೀನು ಗೆಳತಿಯೇ" ಹಾಡು ಭರ್ಜರಿ ಯಶಸ್ಸು ಕಂಡಿತ್ತು‌. ಈಗ ಈ ಹಾಡಿಗೂ ಎಲ್ಲಾ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯೂ ಆಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 
"ಕೌಸಲ್ಯ ಸುಪ್ರಜಾ ರಾಮ" ಚಿತ್ರದ ನಂತರ ನನ್ನ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರ "ಬ್ರ್ಯಾಟ್". ನನ್ನ ಈ ಚಿತ್ರದ ಲುಕ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣರಾದ ನಿರ್ದೇಶಕ ಶಶಾಂಕ್ ಹಾಗೂ ತಂಡಕ್ಕೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಿದ್ ಶ್ರೀರಾಮ್ ಹಾಗೂ ಲಹರಿ ಅವರ ಗಾಯನ ಹಾಡಿಗೆ ಪೂರಕವಾಗಿದೆ. ಮುಂದಿನ ತಿಂಗಳು ಚಿತ್ರದ ಇನ್ನೊಂದು ಹಾಡು ಬಿಡುಗಡೆಯಾಗಲಿದೆ. ಆ ಹಾಡಂತೂ ನನ್ನ ಮಗಳಿಗೆ ಬಹಳ ಇಷ್ಟ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು.  
ನನ್ನ ಹಾಗೂ ಅರ್ಜುನ್ ಜನ್ಯ ಅವರ ಕಾಂಬಿನೇಶನ್ ನಲ್ಲಿ ಬಂದಿರುವ ಎಲ್ಲಾ ಹಾಡುಗಳು ಅತೀ ಹೆಚ್ಚು ಜನಪ್ರಿಯವಾಗಿದೆ. ಈಗ ಆ ಸಾಲಿಗೆ "ನಾನೇ ನೀನಂತೆ" ಹಾಡು ಕೂಡ ಸೇರಲಿದೆ. ನನ್ನ ಸಿನಿ ಜರ್ನಿಯಲ್ಲೇ ಅತೀ ಹೆಚ್ಚು ವೆಚ್ಚದಲ್ಲಿ ಮೂಡಿಬಂದಿರುವ ಹಾಡಿದು. ಈ ಹಾಡಿನ ಟ್ಯೂನ್ ಅಂತಿಮಗೊಳಿಸಲು ಸುಮಾರು 6 ತಿಂಗಳ ಸಮಯ ಬೇಕಾಯಿತು. ನಿರ್ಮಾಪಕ ಮಂಜುನಾಥ್ ಅವರಂತೂ ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಸಿದ್ ಶ್ರೀರಾಮ್ ಅವರ ಧ್ವನಿಯಂತೂ ಹೇಳಿ ಮಾಡಿಸಿದ ಹಾಗಿದೆ. ಹಿಂದಿಯಲ್ಲಿ ಕನ್ನಡದ ಹುಡುಗ ನಹಾಲ್ ತವ್ರು , ತಮಿಳು, ಮಲೆಯಾಳಂ ನಲ್ಲಿ ಶ್ರೀಕಾಂತ್ ಹರಿಹರನ್ ಈ ಹಾಡನ್ನು ಹಾಡಿದ್ದಾರೆ‌. ಕನ್ನಡದಲ್ಲಿ ಫೀಮೇಲ್ ವರ್ಷನ್ ಲಹರಿ ಮಹೇಶ್ ಹಾಡಿದ್ದು , ಉಳಿದ ನಾಲ್ಕು ಭಾಷೆಗಳಲ್ಲಿ ಹೆಣ್ಣು ಧ್ವನಿ ಸಿರೀಶ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಕನ್ನಡದಲ್ಲಿ ಈ ಹಾಡನ್ನು ನಾನೇ ಬರೆದಿದ್ದೇನೆ. ಆನಂದ್ ಆಡಿಯೋ ಮೂಲಕ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದೆ. ಸದ್ಯದಲ್ಲೇ ಉಳಿದ ಹಾಡುಗಳು ಸಹ ಬಿಡುಗಡೆಯಾಗಲಿದೆ. ಅಂದುಕೊಂಡ ಹಾಗೆ ಆದರೆ ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಶಶಾಂಕ್ ತಿಳಿಸಿದರು.             ನಮ್ಮ ಮೊದಲ ನಿರ್ಮಾಣದ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ಗೆಲುವಿಗೆ ನೀವೆಲ್ಲಾ ನೀಡಿದ ಪ್ರೋತ್ಸಾಹವೇ ಕಾರಣ. ಇದು ನಮ್ಮ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರ. ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿರುವ ಈ ಹಾಡು ಸುಮಧುರವಾಗಿದೆ‌. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್. 
ನಾನು ಕನ್ನಡದವಳು. ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮವರ್ಗದ ಹುಡುಗಿ ಪಾತ್ರ. ಚಿತ್ರದಲ್ಲೂ ನನ್ನ ಪಾತ್ರದ ಹೆಸರು ಮನಿಶಾ. ಇಂದು ಬಿಡುಗಡೆಯಾಗಿರುವ "ನಾನೇ ನೀನಂತೆ" ನನ್ನ ಇಷ್ಟದ ಹಾಡು ಎಂದರು ನಾಯಕಿ ಮನಿಶಾ ಕಂದಕೂರ್.  
ಗಾಯಕಿ ಲಹರಿ, ಆನಂದ್ ಆಡಿಯೋ ಶ್ಯಾಮ್, ನೃತ್ಯ ನಿರ್ದೇಶಕ‌ ಕಲೈ ಮಾಸ್ಟರ್ ಹಾಗೂ ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಸಹ "ನಾನೇ ನೀನಂತೆ" ಹಾಡಿನ ಕುರಿತು ಮಾತನಾಡಿದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...