Skip to main content

Posts

Showing posts from August, 2025

ಏಳುಮಲೆ ಟ್ರೇಲರ್ ರಿಲೀಸ್... ಸಾಥ್ ಕೊಟ್ಟ ಡಾಲಿ-ನವೀನ್ ಶಂಕರ್ ಹಾಗೂ ಶರಣ್..

ಏಳುಮಲೆ ಟ್ರೇಲರ್ ರಿಲೀಸ್...  ಸಾಥ್ ಕೊಟ್ಟ ಡಾಲಿ-ನವೀನ್ ಶಂಕರ್ ಹಾಗೂ ಶರಣ್.. ಪ್ರಾಮಿಸಿಂಗ್ ಆಗಿದೆ ಏಳುಮಲೆ ಟ್ರೇಲರ್.. ತರುಣ್ ಸಿನಿಮಾಗೆ ಧನಂಜಯ್-ಶರಣ್-ನವೀನ್.. ಗಡಿನಾಡ ಪ್ರೇಮಕಥೆ ಏಳುಮಲೆ ಟ್ರೇಲರ್ ಅನಾವರಣ...ಸಾಥ್ ಕೊಟ್ಟ ಶರಣ್-ಡಾಲಿ-ನವೀನ್.. ಕರ್ನಾಟಕ - ತಮಿಳುನಾಡು ಗಡಿಭಾಗದ ಪ್ರೇಮಕಥೆ ಏಳುಮಲೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಪ್ರೇಕ್ಷಕರ ಸಮ್ಮುಖದಲ್ಲಿ ಟ್ರೇಲರ್ ರಿಲೀಸ್ ಮಾಡಲಾಯಿತು. ಕಾರ್ಯಕ್ರಮಕ್ಕೆ ನಟರಾದ ಡಾಲಿ ಧನಂಜಯ್, ನವೀನ್ ಶಂಕರ್ ಹಾಗೂ ಶರಣ್ ವಿಶೇಷ ಮೆರುಗು ನೀಡಿದರು.  ಟ್ರೇಲರ್ ಬಿಡುಗಡೆ ಬಳಿಕ ನಟ ಶರಣ್ ಮಾತನಾಡಿ, ಕನ್ನಡದ ಇವೆಂಟ್ ಇಷ್ಟು ಜನರ ಮುಂದೆ ನಡೆಯುತ್ತಿದೆ ಎನ್ನುವುದು ಈ ಚಿತ್ರದ ನಿಜವಾದ ಗೆಲುವು ಇಲ್ಲಿಂದ ಶುರುವಾಗಿದೆ. ಈ ಚಿತ್ರದ ರಿಯಲ್ ಹೀರೋ ತರುಣ್. ಅವರು ಒಂದು ಸಿನಿಮಾದ ಆಯ್ಕೆ ಹೇಗಿದೆ ಅನ್ನೋದಕ್ಕೆ ನನ್ನ ಜರ್ನಿ ಸಾಕ್ಷಿ. ಅವರು ನನ್ನ ಸಿನಿಮಾಗಳ ಕಥೆ ಆಯ್ಕೆ ಮಾಡುತ್ತಾರೆ. ಏಳುಮಲೆ ಟ್ರೇಲರ್ ನೋಡಿದರೆ ಸಿನಿಮಾ ನೋಡ್ಲೇಬೇಕು ಎನಿಸುತ್ತದೆ. ಇದು ಕಂಟೆಂಟ್ ಸಿನಿಮಾ. ಈ ಚಿತ್ರ ದೊಡ್ಡ ಹಿಟ್ ಆಗಲಿದೆ ಎಂಬ ನಂಬಿಕೆ ಇದೆ ಎಂದರು.  ನಟ ಡಾಲಿ ಧನಂಜಯ್ ಮಾತನಾಡಿ, ಏಳುಮಲೆ ಟೀಸರ್ ನೋಡಿದಾಗಿನಿಂದಲೂ ಬಹಳ ಖುಷಿ ಇದೆ. ತರುಣ್, ರಾಣಾಗೆ ಮೆಸೇಜ್ ಮಾಡಿ ಬಹಳ‌ ಎನರ್ಜಿ ಇದೆ ಎಂದಿದ್ದೆ. ತುಂಬಾ ದಿನ ಆಯ್ತು ...

"ಜೈ" ಚಿತ್ರದ ಟೀಸರ್ ಲಾಂಚ್ ಮಾಡಿದ ರೋರಿಂಗ್ ಸ್ಟಾರ್ ಶ್ರೀಮುರಳಿ.

"ಜೈ" ಚಿತ್ರದ ಟೀಸರ್ ಲಾಂಚ್ ಮಾಡಿದ ರೋರಿಂಗ್ ಸ್ಟಾರ್ ಶ್ರೀಮುರಳಿ.  ಗೌರಿ ಗಣೇಶ ಹಬ್ಬದ ವಿಶೇಷ ಸಂದರ್ಭದಲ್ಲಿ ಕರಾವಳಿ ಭಾಗದ ಪ್ರತಿಭೆ ಬಿಗ್ ಬಾಸ್ ಖ್ಯಾತಿಯ ರಾಕ್‌ ಸ್ಟಾರ್‌ ರೂಪೇಶ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವಂತಹ ತುಳು ಹಾಗೂ ಕನ್ನಡ ಚಿತ್ರದ ಟೀಸರ್ ಬಿಡುಗಡೆ ಸಮಾರಂಭವನ್ನು ಆಯೋಜನೆ ಮಾಡಿದ್ದು , ವಿಶೇಷವಾಗಿ ಕರಾವಳಿ ಚಂಡೆ ವಾದ್ಯದ ಮೂಲಕ ರೋರಿಂಗ್ ಸ್ಟಾರ್ ಶ್ರೀ ಮುರಳಿಯನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಂಡು ದೀಪವನ್ನು ಬೆಳಗುವುದರ ಮೂಲಕ ಚಾಲನೆ ನೀಡಿದರು. ಇನ್ನು ವಿಶೇಷವಾಗಿ ಮೈಸೂರು ಮೂಲದ ರಾಪ್ ಗಾಯಕರು ಜೈ ಚಿತ್ರಕ್ಕೆ ಸೈ ಎಂಬ ಹಿಪಪ್ ರಾಪ್ ಸಾಂಗ್ ಮೂಲಕ ಗಮನ ಸೆಳೆದರು. ಇನ್ನು ಈ ಚಿತ್ರದ ಮುಖ್ಯ ಅತಿಥಿಯಾಗಿ ಆಗಮಿಸಿದ ನಟ ಶ್ರೀಮುರಳಿ ಚಿತ್ರದ ಟೀಸರ್ ಅನ್ನ ಬಿಡುಗಡೆ ಮಾಡಿದರು.  ನಂತರ ಅತಿಥಿ ರೋರಿಂಗ್ ಸ್ಟಾರ್ ನಟ ಶ್ರೀಮುರಳಿ ಮಾತನಾಡುತ್ತಾ ಚಿತ್ರದ ಟೀಸರ್ ಬಹಳ ಅದ್ಭುತವಾಗಿ ಮೂಡಿ ಬಂದಿದೆ. ತಂಡದ ಶ್ರಮ ಕಾಣುತ್ತದೆ. ನಟ ರೂಪೇಶ್ ಶೆಟ್ಟಿ ಬಹಳ ಸುಂದರವಾದ ನಾಯಕ. ತುಳು ಭಾಷೆಯ ಸಂಸ್ಕೃತಿ , ಆಚಾರ ವಿಚಾರದ ಬಗ್ಗೆ ಅಪಾರ ಪ್ರೀತಿಯನ್ನು ಇಟ್ಟುಕೊಂಡು ಸಿನಿಮಾ ಮಾಡುತ್ತಾ ಬಂದಿದ್ದಾರೆ. ನಾನು ಅವರನ್ನ ಬಿಗ್ ಬಾಸ್ ನಿಂದ ನೋಡುತ್ತಾ ಬಂದಿದ್ದೇನೆ. ಈ ಚಿತ್ರದಲ್ಲಿ ನಾಯಕನಾಗಿ ಜೊತೆಗೆ ನಿರ್ದೇಶನವನ್ನ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಅದರಲ್ಲೂ ವಿಶೇಷವಾಗಿ ಸುನ...

ಅಭಿಮಾನ್ ಸ್ಟುಡಿಯೋ ಜಾಗಕ್ಕೆ ಸಂಬಂಧಿಸಿದಂತೆ ಕೆವಿಯೆಟ್ ದಾಖಲಿಸಲು ಡಾ. ವಿಷ್ಣು ಸೇನಾ ಸಮಿತಿ ಒತ್ತಾಯ.

ಅಭಿಮಾನ್ ಸ್ಟುಡಿಯೋ ಜಾಗಕ್ಕೆ ಸಂಬಂಧಿಸಿದಂತೆ ಕೆವಿಯೆಟ್ ದಾಖಲಿಸಲು ಡಾ. ವಿಷ್ಣು ಸೇನಾ ಸಮಿತಿ ಒತ್ತಾಯ. ಅಭಿಮಾನ್ ಸ್ಟುಡಿಯೋವನ್ನು ಸರ್ಕಾರವು ಅರಣ್ಯ ಪ್ರದೇಶವೆಂದು ಘೋಷಿಸಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿರುವುದು ಸರಿಯಷ್ಟೇ. ಈ ಪ್ರಕ್ರಿಯೆ ಹೊಸದಲ್ಲ. ಈ ಹಿಂದೆಯೂ ನಡೆದಿತ್ತು. ಆದರೆ ಸರ್ಕಾರದ ವತಿಯಿಂದ ಸರಿಯಾದ ರೀತಿಯಲ್ಲಿ ವಾದ ಮಂಡನೆ ಆಗದ ಕಾರಣದಿಂದ ಅಭಿಮಾನ್ ಸ್ಟುಡಿಯೋದ ಮಾಲೀಕರು ಆ ಪ್ರಕ್ರಿಯೆ ವಿರುದ್ಧ ತಡೆಯಾಜ್ಞೆ ತಂದು ಅದನ್ನು ಖಾಸಗಿ ಸ್ವತ್ತು ಎಂದು ಬಿಂಬಿಸಿ ಅವ್ಯವಹಾರ ನಡೆಸುತ್ತಿದ್ದರು. ಈ ಬಾರಿಯೂ ಅದೇ ಮರುಕಳಿಸಬಾರದೆಂದು ಸರ್ಕಾರವನ್ನು ಎಚ್ಚರಿಸಲು ಇಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ವಿಷ್ಣುಸೇನಾ ಸಮಿತಿಯ ರಾಜ್ಯಾಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬಾಲಕೃಷ್ಣ ಅವರ ಮಕ್ಕಳು ಸರ್ಕಾರದ ಈ ಮುಟ್ಟುಗೋಲು ಪ್ರಕ್ರಿಯೆಗೆ ತಡೆಯಾಜ್ಞೆ ತರಲು ಉದ್ದೇಶಿಸಿರುವುದರಿಂದ ಕೂಡಲೆ ಕೆವಿಎಟ್ ಅನ್ನು ದಾಖಲಿಸಬೇಕೆಂದು ಕೋರಿದರು. ಜೊತೆಗೆ ಅರಣ್ಯ ಭೂಮಿ ಎಂದು ಘೋಷಿಸಿದ ನಂತರವೂ ಅಲ್ಲಿ ಡಾ. ವಿಷ್ಣುವರ್ಧನ್ ಮತ್ತು ಬಾಲಕೃಷ್ಣ ಅವರ ಪುಣ್ಯಭೂಮಿ ಅಥವಾ ಪರಿಸರ ಸ್ನೇಹಿ ಸ್ಮಾರಕ ನಿರ್ಮಾಣಕ್ಕೆ ಅವಕಾಶವನ್ನು ಕಲ್ಪಿಸಬೇಕೆಂದು ವಿನಂತಿಸಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಸಚಿವರು ಅಭಿಮಾನ್ ಸ್ಟುಡಿಯೋವನ್ನು ಸರ್ಕಾರ ಅಧೀನಕ್ಕೆ ತೆ...

ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ರಿತನ್ಯಾ ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ "ಲ್ಯಾಂಡ್ ಲಾರ್ಡ್" ಚಿತ್ರತಂಡ...

ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ರಿತನ್ಯಾ ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ "ಲ್ಯಾಂಡ್ ಲಾರ್ಡ್" ಚಿತ್ರತಂಡ... ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ.ಕೆ.ಎಸ್ ಅವರು "ಸಾರಥಿ ಫಿಲಂಸ್" ಮೂಲಕ ನಿರ್ಮಾಣ‌ ಮಾಡುತ್ತಿರುವ, "ಗುರುಶಿಷ್ಯರು" ಚಿತ್ರದ ನಿರ್ದೇಶಕ‌ ಹಾಗೂ "ಕಾಟೇರ" ಚಿತ್ರದ ಕಥಾ ಲೇಖಕ ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಆಭಿಮಾನಿಗಳ ಮನ ಗೆದ್ದಿರುವ ದುನಿಯಾ ವಿಜಯ್, ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ಲ್ಯಾಂಡ್ ಲಾರ್ಡ್" ಚಿತ್ರದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ಆಗಸ್ಟ್ 30 ರಿತನ್ಯ ಅವರ ಜನ್ಮದಿನ. ಅಂದು ರಿತನ್ಯಾ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ "ಲ್ಯಾಂಡ್ ಲಾರ್ಡ್" ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ರಿತನ್ಯಾ ವಿಜಯ್ ಅವರು ಭಾಗ್ಯ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. "ಲ್ಯಾಂಡ್ ಲಾರ್ಡ್" ಚಿತ್ರದ ರಿತನ್ಯ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ ಹಾಗೂ ಕುತೂಹಲ ಮೂಡಿಸಿದೆ‌.  ...

ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ ಟ್ರೇಲರ್..

ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ ಟ್ರೇಲರ್..  ಗ್ರಾಮೀಣಾ ಸೊಗಡಿನ ಈ ಕಾಮಿಡಿ‌ ಕಥಾನಕ ಸೆಪ್ಟೆಂಬರ್ 19ರಂದು ಬಿಡುಗಡೆ.. ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ "ಫ್ರೆಂಚ್ ಬಿರಿಯಾನಿ" ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಯುವ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮಸಾಲ ಜಯರಾಮ್, ಸುಬ್ರಹ್ಮಣ್ಯ, ರೂಪಾಲಿ,ನಿರ್ಮಾಪಕರಾದ ನವರಸನ್, ರಮೇಶ್, ಸುರೇಶ್, ನಟಿ ಕಾರುಣ್ಯ ರಾಮ್ ಹಾಗೂ ನಿರ್ದೇಶಕರಾದ ಗುರು ದೇಶಪಾಂಡೆ, ಜಡೇಶ್ ಕೆ ಹಂಪಿ, ಎಸ್ ಗೋವಿಂದ್,ಸುಕೇಶ್ ಶೆಟ್ಟಿ, ದೇವನೂರು ಚಂದ್ರು, ಜಾಕಿ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಯುವ ರಾಜಕುಮಾರ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಪ್ರತಿಯೊಬ್ಬ ಗಣ್ಯರಿಗೂ ಧನ್ಯವಾದ. ನನಗೆ ದೊಡ್ಮನೆಯವರಿಂದ ಟ್ರೇಲರ್ ಅನಾವರಣ ಮಾಡಿಸುವ ಆಸೆಯಿತ್ತು. ನಮ್ಮ ಚಿತ್ರದ ಶೀರ್ಷಿಕೆಯನ್ನು ರಾಘವೇಂದ್ರ ರಾಜಕುಮ...

ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್... ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್...ಅಭಿಮಾನಿಯಿಂದ ರಾಕಿ ಕಟ್ಟಿಸಿಕೊಂಡ ಚಿರಂಜೀವಿ...

ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್... ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್... ಅಭಿಮಾನಿಯಿಂದ ರಾಕಿ ಕಟ್ಟಿಸಿಕೊಂಡ ಚಿರಂಜೀವಿ... ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತು ನಟ... ತೆರೆಮೇಲೆ ಮಾತ್ರವಲ್ಲದೆ ತೆರೆಹಿಂದೆಯೂ ಮೆಗಾ ಸ್ಟಾರ್ ಚಿರಂಜೀವಿ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ರಾಜೇಶ್ವರಿ ಎಂಬುವವರು ಚಿರು ಅವರ ಡೈಹಾರ್ಡ್ ಫ್ಯಾನ್. ಮೆಗಾ ಸ್ಟಾರ್ ಮೇಲಿನ ಅಭಿಮಾನದಿಂದಾಗಿ ಸುಮಾರು 300 ಕಿಲೋಮೀಟರ್ ಸೈಕಲ್ ತುಳಿದು‌ ತನ್ನಷ್ಟಿದ ತಾರೆಯನ್ನು ಭೇಟಿಯಾಗಿ ಖುಷಿಪಟ್ಟಿದ್ದಾರೆ. ರಾಜೇಶ್ವರಿಯವರು ಅದೋನಿಯವರು. ಅದೋನಿಯಿಂದ ಹೈದ್ರಾಬಾದ್ ಗೆ ಸೈಕಲ್ ನಲ್ಲಿ ಆಗಮಿಸಿದ್ದಾರೆ. ಬರೋಬ್ಬರಿ 300‌ಕಿಲೋಮೀಟರ್ ಸೈಕಲ್ ಸವಾರಿಯಲ್ಲಿ ಬಂದ ರಾಜೇಶ್ವರಿಯವರನ್ನು ಅಷ್ಟೇ ಪ್ರೀತಿಯಿಂದ ಚಿರಂಜೀವಿ ತಮ್ಮ ಮನೆಗೆ ಸ್ವಾಗತಿಸಿದ್ದಾರೆ. ಅಭಿಮಾನಿ ರಾಜೇಶ್ವರಿ ಅವರ ಅಭಿಮಾನ ಕಂಡು ಚಿರಂಜೀವಿಯೇ ಪುಳಕಿತರಾಗಿದ್ದಾರೆ. ತನ್ನ‌ ಇಷ್ಟದ ಅಭಿಮಾನಿಯಿಂದ ರಾಕಿ ಕಟ್ಟಿಸಿಕೊಂಡ ಮೆಗಾ ಸ್ಟಾರ್ ಅಣ್ಣನ ಸ್ಥಾನ ನೀಡಿದ್ದಾರೆ.   ರಾಜೇಶ್ವರಿಯಂತಹ ಅಪರೂಪದ ಅಭಿಮಾನಕ್ಕೆ ಚಿರಂಜೀವಿ ಚಿಕ್ಕ ಕಾಣಿಕೆ ಕೂಡ ನೀಡಿದ್ದಾರೆ. ರಾಜೇಶ್ವರಿಗೆ ಸೀರೆ ಕೊಟ್ಟ ಸತ್ಕರಿಸಿದ್ದಾರೆ. ಇನ್ನೊಂದು ಹೆಜ್ಜೆ ಮುಂದೆ ಇಟ್ಟ ಚಿರಂಜೀವಿ ರಾಜೇಶ್ವರಿ ಅವರ ಇಬ್ಬರ ಮಕ್ಕಳ ಶಿಕ್ಷಣದ ಜವಾಬ್ದಾರಿ ಕೂಡ ಹೊತ್ತು ಕೊಂಡಿದ್ದಾರೆ. ಇದಪ್ಪ ಅಭಿಮಾನದ ಪರಾಕಾಷ್ಠೆ. ಒಬ್ಬ ಅಭಿಮಾನ...

ಹೊಸ ಸಿನಿಮಾ ಘೋಷಿಸಿದ ಕೆವಿಎನ್..ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್..

ಹೊಸ ಸಿನಿಮಾ ಘೋಷಿಸಿದ ಕೆವಿಎನ್.. ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್.. ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆ ಮೊದಲ ಬಾರಿ ಕೈಜೋಡಿಸಿದ ಕೆವಿಎನ್..  ಕೆವಿಎನ್ ಹಾಗೂ ಒಡೆಯರ್ ಮೂವೀಸ್ ನಿರ್ಮಾಣ.. .. ವೆಂಕಟ್ ಕೊನಂಕಿ-ಶಿವಣ್ಣ-ಪವನ್ ಒಡೆಯರ್- ಕಾಂಬಿನೇಷನ್ ನಲ್ಲಿ ಸಿನಿಮಾ.. ಸೆಪ್ಟೆಂಬರ್ 3ರಿಂದ ಶೂಟಿಂಗ್ ಶುರು .. ಕೆವಿಎನ್-ಪವನ್ ಒಡೆಯರ್ ಹಾಗೂ ನಿರ್ಮಾಣದಲ್ಲಿ ಶಿವಣ್ಣ ಹೊಸ ಸಿನಿಮಾ.. ಸ್ಟಾರ್ ನಟರ ಜೊತೆ ದೊಡ್ಡ ದೊಡ್ಡ ಸಿನಿಮಾಗಳ ನಿರ್ಮಾಣದಲ್ಲಿ ಕೆವಿಎನ್ ಸಂಸ್ಥೆ ಹೆಸರು ಮಾಡಿದೆ.‌‘ಟಾಕ್ಸಿಕ್’, ‘ಕೆಡಿ’, ‘ಜನ ನಾಯಗನ್’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ಆ ಮೂಲಕ ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ಈ‌ ಸಂಸ್ಥೆಯ ಶಿವಣ್ಣ ಜೊತೆ ಕೈ ಜೋಡಿಸಿದೆ. ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಣ‌ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ‌ಯಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಸಾರಥಿ. ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್‌ ಒಡೆಯರ್‌ ಪುನೀತ್‌ ರಾಜ್‌ಕುಮಾರ್‌ಗೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಶಿವರಾಜ್‌ಕುಮಾರ್‌ ಅವರಿಗೆ ಇದೇ ಮೊದಲ ಬಾರಿಗೆ ಆ್...

ಚೌಕಿದಾರ್ ಓ ಮೈ ಬ್ರೋ ಸಾಂಗ್ ಭರ್ಜರಿ ರೆಸ್ಪಾನ್ಸ್..

ಚೌಕಿದಾರ್ ಓ ಮೈ ಬ್ರೋ ಸಾಂಗ್ ಭರ್ಜರಿ ರೆಸ್ಪಾನ್ಸ್.. ಚೌಕಿದಾರ್ ಓ ಮೈ ಬ್ರೋ ಸಾಂಗ್ ಸಖತ್ ರೆಸ್ಪಾನ್ಸ್... ಒಂದು ಮಿಲಿಯನ್ ವೀಕ್ಷಣೆ... ನಿರ್ದೇಶಕ ಚಂದ್ರಶೇಖರ್ ಸಾರಥ್ಯದ ಚೌಕಿದಾರ್ ಸಿನಿಮಾ ಈಗಾಗಲೇ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಹಾಡುಗಳು ಈಗಾಗಲೇ ಹಿಟ್ ಲೀಸ್ಟ್ ಸೇರಿವೆ. ಇತ್ತೀಚಿಗೆ ಬಿಡುಗಡೆಯಾಗಿದ್ದ ಓ ಮೈ ಬ್ರೋ ಸಾಂಗ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಎಂಆರ್ ಟಿ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದ ಈ ಹಾಡು ಈಗ ಒಂದು ಮಿಲಿಯನ್ ಜನರನ್ನು ತಲುಪಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಿಡುಗಡೆಯಾಗಿದ್ದ ಓ ಮೈ ಬ್ರೋ ಸಾಂಗ್ ಸಂಗೀತ ಪ್ರಿಯರ ಮೆಚ್ಚುಗೆ ಪಡೆದುಕೊಂಡಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಓ ಮೈ ಬ್ರೋ ಗೀತೆಗೆ ಖ್ಯಾತ ಗಾಯಕ ಕೈಲಾಸ್ ಖೇರ್ ಧ್ವನಿಯಾಗಿದ್ದಾರೆ. ಸಚಿನ್ ಬಸ್ರೂರ್ ಮ್ಯೂಸಿಕ್ ಒಳಗೊಂಡಿರುವ ಈ ಹಾಡಿಗೆ ನಾಯಕ ಪೃಥ್ವಿ ಅಂಬಾರ್ ಹಾಗೂ ಹಿರಿಯ ನಟ ಸಾಯಿಕುಮಾರ್ ಬಿಂದಾಸ್ ಆಗಿ ಕುಣಿದಿದ್ದಾರೆ. ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ವಿದ್ಯಾದೇವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಧನ್ಯಾ ರಾಮ್‌ಕುಮಾರ್ ನಾಯಕ ನಟಿಯಾಗಿ ನಟಿಸಿದ್ದಾರೆ. ಚಿತ್ರರಂಗದಲ್ಲಿ ಐವತ್ತು ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ಚೌಕಿದಾರ್ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ...

ಸೆಪ್ಟೆಂಬರ್ 5 ರಂದು ಶಿವ ಕಾರ್ತಿಕೇಯನ್ - ರುಕ್ಮಿಣಿ ವಸಂತ್ ನಟನೆಯ ಸೆಪ್ಟೆಂಬರ್ ‌ "ಮದರಾಸಿ" ಚಿತ್ರ ತೆರೆಗೆ..

ಸೆಪ್ಟೆಂಬರ್ 5 ರಂದು ಶಿವ ಕಾರ್ತಿಕೇಯನ್ - ರುಕ್ಮಿಣಿ ವಸಂತ್ ನಟನೆಯ ಸೆಪ್ಟೆಂಬರ್ ‌ "ಮದರಾಸಿ" ಚಿತ್ರ ತೆರೆಗೆ.. ತಮಿಳು ಚಿತ್ರರಂಗದ ಖ್ಯಾತ ನಟ ಶಿವ ಕಾರ್ತಿಕೇಯನ್ ಹಾಗೂ ಕನ್ನಡದ ನಟಿ ರಕ್ಮಿಣಿ ವಸಂತ್ ನಾಯಕ- ನಾಯಕಿಯಾಗಿ ನಟಿಸಿರುವ, A.R ಮುರುಗದಾಸ್ ನಿರ್ದೇಶನದ "ಮದರಾಸಿ" ಸೆಪ್ಟೆಂಬರ್ 5 ರಂದು ಬಹುಭಾಷೆಯಲ್ಲಿ ಬಿಡುಗಡೆಯಾಗಲಿದೆ. ಬೆಂಗಳೂರಿನ ಕೋರಮಂಗಲದ ನಕ್ಸಸ್ ಮಾಲ್‌ನಲ್ಲಿ ಹಮ್ಮಿಕೊಂಡಿದ್ದ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು. ಅಭಿಮಾನಿಗಳ ಹರ್ಷೋದ್ಗಾರ ಮತ್ತು ಸಂಭ್ರಮದ ನಡುವೆ ಕನ್ನಡ, ತೆಲುಗು, ತಮಿಳು ಸೇರಿದಂತೆ ಎಲ್ಲಾ ಭಾಷೆಗಳ ಟ್ರೇಲರ್ ಪ್ರದರ್ಶನ ಮಾಡಲಾಯಿತು. ಶಿವ ಕಾರ್ತಿಕೇಯನ್, ರುಕ್ಮಿಣಿ ವಸಂತ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. "ಅಮರನ್" ಚಿತ್ರದ ಬಳಿಕ ಬೆಂಗಳೂರಿನಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಿವ ಕಾರ್ತಿಕೇಯನ್, ಬೆಂಗಳೂರಿನ ಅಭಿಮಾನಿಗಳ‌ ಅಭಿಮಾನದ ಮಳೆಯಲ್ಲಿ ಮಿಂದರು. ಈ ವೇಳೆ "ಮದರಾಸಿ" ಚಿತ್ರದ ಹುಕ್ ಸ್ಟೆಪ್‌ ಗೆ ಹೆಜ್ಕೆ ಹಾಕಿ ಅಭಿಮಾನಿಗಳ‌ ಜೊತೆ ಸಂಭ್ರಮಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ನಟ ಶಿವ ಕಾರ್ತಿಕೇಯನ್, ರುಕ್ಮಿಣಿ ವಸಂತ್ ಅವರಂತಹ ನಟಿಯನ್ನು ತಮಿಳಿಗೆ ನೀಡಿದ ಬೆಂಗಳೂರಿಗೆ ಧನ್ಯವಾದಗಳು. ನನ್ನ ಹಿಂದಿನ ಚಿತ್...

ಮಿರಾಯ್ ಟ್ರೇಲರ್ ರಿಲೀಸ್.. ಸೂಪರ್ ಯೋಧನಾಗಿ ಬಂದ ತೇಜ ಸಜ್ಜಾ..

ಮಿರಾಯ್ ಟ್ರೇಲರ್ ರಿಲೀಸ್.. ಸೂಪರ್ ಯೋಧನಾಗಿ ಬಂದ ತೇಜ ಸಜ್ಜಾ.. ನಿರೀಕ್ಷೆ ಹೆಚ್ಚಿಸಿದ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೇಲರ್... ಭರ್ಜರಿ ವಿಷ್ಯುವಲ್ ಟ್ರೀಟ್.. ಹನುಮಾನ್ ಚಿತ್ರದ ಮೂಲಕ ಬಾಕ್ಸ್ ಆಫೀಸ್ ಶೇಕ್ ಮಾಡಿದ್ದ ತೇಜ ಸಜ್ಜಾ ಈಗ ಸೂಪರ್ ಯೋಧನಾಗಿ ಮತ್ತೆ ಎಂಟ್ರಿ‌ ಕೊಟ್ಟಿದ್ದಾರೆ. ಬಹು ನಿರೀಕ್ಷಿತ ಮಿರಾಯ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಪ್ರೇಕ್ಷಕರಿಗೆ ಭರ್ಜರಿ ವಿಷ್ಯುವಲ್ ಟ್ರೀಟ್ ನೀಡಿದ್ದಾರೆ. ಮೂರು ನಿಮಿಷ ಏಳು ಸೆಕೆಂಡ್ ಇರುವ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸೂಪರ್ ಯೋಧನಾಗಿ ಜನರನ್ನು ರಕ್ಷಿಸಲು ತೇಜ ಸಜ್ಜಾ ಹೋರಾಟ ಮಾಡ್ತಾರೆ. ಅವರ ವಿರುದ್ಧ ಮಂಚು ಮನೋಜ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಜೊತೆಗೆ ಪುರಾಣದ ಕಥೆಯನ್ನು ಸೊಗಸಾಗಿ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಧರ್ಮ ರಕ್ಷಕನಾಗಿ ತೇಜ ಸಜ್ಜಾ ಹೋರಾಟ ನಡೆಸುತ್ತಾರೆ. ಟ್ರೇಲರ್ ಕೊನೆಯಲ್ಲಿ ಬರುವ ಭಗವಾನ್ ಶ್ರೀರಾಮ ಝಲಕ್ ಪ್ರೇಕ್ಷಕರಿಗೆ ರೋಮಾಂಚನ ನೀಡಲಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡಿದ್ದಾರೆ. ರಿತಿಕಾ ನಾಯಕ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಮಿರಾಯ್ಗೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.  ಮಣಿಬಾಬು ಕರಣಂ ಸಂಭಾಷ...

ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ ಫ್ರೆಂಡ್ ಸಿನಿಮಾದ ಹೊಸ ಹಾಡು ರಿಲೀಸ್..

ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ ಫ್ರೆಂಡ್ ಸಿನಿಮಾದ ಹೊಸ ಹಾಡು ರಿಲೀಸ್.. ಯಾವ ಕಡೆಗೆ ಕಥೆ.. ಗರ್ಲ್ ಫ್ರೆಂಡ್ ಸಿನಿಮಾದ ಹೊಸ ಹಾಡು ರಿಲೀಸ್.. ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅಭಿಯದ ದಿ ಗರ್ಲ್‌ಫ್ರೆಂಡ್ ಸಿನಿಮಾದ ಹೊಸ ಹಾಡು ರಿಲೀಸ್ ಆಗಿದೆ. ಯಾವ ಕಡೆ ಕಥೆ ಎಂಬ ಮೆಲೋಡಿ ಗೀತೆ ಟೀ-ಸಿರೀಸ್ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ಅನಾವರಣಗೊಂಡಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ಚಿನ್ಮಯಿ ಶ್ರೀಪಾದ ಹಾಗೂ ಹೇಶಾಮ್ ಅಬ್ದುಲ್ ವಹಾಬ್ ಹಾಡಿಗೆ ಧ್ವನಿಯಾಗಿದ್ದಾರೆ. ಹೇಶಾಮ್ ಅಬ್ದುಲ್ ವಹಾಬ್ ಸಾಹಿತ್ಯ ಕೂಡ ಒದಗಿಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ನಡುವಿನ ಆನ್ ಸ್ಕ್ರೀನ್ ಕೆಮಿಸ್ಟ್ರಿ ಹಾಡಿನ ಮೋಡಿಗೆ ಮತ್ತಷ್ಟು ಮೆರುಗು ನೀಡಿದೆ. ದಿ ಗರ್ಲ್‌ಫ್ರೆಂಡ್ ಚಿತ್ರ ಬಹುಭಾಷೆಯಲ್ಲಿಯೇ ರಿಲೀಸ್ ಆಗುತ್ತಿದೆ. ಹೀಗಾಗಿ ಕನ್ನಡ, ತೆಲುಗು, ತಮಿಳು ಹೀಗೆ ಬಹುಭಾಷೆಯಲ್ಲಿಯೇ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ದಿ ಗರ್ಲ್ ಫ್ರೆಂಡ್ ನಿನಿಮಾವನ್ನು ರಾಹುಲ್ ರವೀಂದ್ರನ್ ಅವರು ನಿರ್ದೇಶನ ಮಾಡುತ್ತಿದ್ದಾರೆ.  ಧೀರಜ್ ಮೊಗಿಲಿನೇನಿ ಮತ್ತು ವಿದ್ಯಾ ಕೊಪ್ಪಿನೀಡಿ ಚಿತ್ರಕ್ಕೆ ಹಣ ಹೂಡಿದ್ದಾರೆ. ಟೈಟಲ್ಲೇ ಹೇಳುವಂತೆ ಇದು ಲವ್ ಸ್ಟೋರಿ ಸಿನಿಮಾ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ದಿ ಗರ್ಲ್ ಫ್ರೆಂಡ್’ ಸಿನಿಮಾ ತೆರೆಗೆ ಬರಲಿದೆ. ಕೃಷ್ಣನ್ ವಸಂತ್ ಛಾಯಾಗ್ರಹಣ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ಚಿತ...

ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ ಫ್ರೆಂಡ್ ಸಿನಿಮಾದ ಹೊಸ ಹಾಡು ರಿಲೀಸ್..

ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ ಫ್ರೆಂಡ್ ಸಿನಿಮಾದ ಹೊಸ ಹಾಡು ರಿಲೀಸ್.. ಯಾವ ಕಡೆಗೆ ಕಥೆ.. ಗರ್ಲ್ ಫ್ರೆಂಡ್ ಸಿನಿಮಾದ ಹೊಸ ಹಾಡು ರಿಲೀಸ್.. ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅಭಿಯದ ದಿ ಗರ್ಲ್‌ಫ್ರೆಂಡ್ ಸಿನಿಮಾದ ಹೊಸ ಹಾಡು ರಿಲೀಸ್ ಆಗಿದೆ. ಯಾವ ಕಡೆ ಕಥೆ ಎಂಬ ಮೆಲೋಡಿ ಗೀತೆ ಟೀ-ಸಿರೀಸ್ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ಅನಾವರಣಗೊಂಡಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ಚಿನ್ಮಯಿ ಶ್ರೀಪಾದ ಹಾಗೂ ಹೇಶಾಮ್ ಅಬ್ದುಲ್ ವಹಾಬ್ ಹಾಡಿಗೆ ಧ್ವನಿಯಾಗಿದ್ದಾರೆ. ಹೇಶಾಮ್ ಅಬ್ದುಲ್ ವಹಾಬ್ ಸಾಹಿತ್ಯ ಕೂಡ ಒದಗಿಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ನಡುವಿನ ಆನ್ ಸ್ಕ್ರೀನ್ ಕೆಮಿಸ್ಟ್ರಿ ಹಾಡಿನ ಮೋಡಿಗೆ ಮತ್ತಷ್ಟು ಮೆರುಗು ನೀಡಿದೆ. ದಿ ಗರ್ಲ್‌ಫ್ರೆಂಡ್ ಚಿತ್ರ ಬಹುಭಾಷೆಯಲ್ಲಿಯೇ ರಿಲೀಸ್ ಆಗುತ್ತಿದೆ. ಹೀಗಾಗಿ ಕನ್ನಡ, ತೆಲುಗು, ತಮಿಳು ಹೀಗೆ ಬಹುಭಾಷೆಯಲ್ಲಿಯೇ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ದಿ ಗರ್ಲ್ ಫ್ರೆಂಡ್ ನಿನಿಮಾವನ್ನು ರಾಹುಲ್ ರವೀಂದ್ರನ್ ಅವರು ನಿರ್ದೇಶನ ಮಾಡುತ್ತಿದ್ದಾರೆ.  ಧೀರಜ್ ಮೊಗಿಲಿನೇನಿ ಮತ್ತು ವಿದ್ಯಾ ಕೊಪ್ಪಿನೀಡಿ ಚಿತ್ರಕ್ಕೆ ಹಣ ಹೂಡಿದ್ದಾರೆ. ಟೈಟಲ್ಲೇ ಹೇಳುವಂತೆ ಇದು ಲವ್ ಸ್ಟೋರಿ ಸಿನಿಮಾ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ದಿ ಗರ್ಲ್ ಫ್ರೆಂಡ್’ ಸಿನಿಮಾ ತೆರೆಗೆ ಬರಲಿದೆ. ಕೃಷ್ಣನ್ ವಸಂತ್ ಛಾಯಾಗ್ರಹಣ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ಚಿತ...

ಮೈಸೂರಿನಲ್ಲಿ ಪೆದ್ದಿ ಶೂಟಿಂಗ್.. 1000 ಡ್ಯಾನ್ಸರ್ಸ್ ಜೊತೆ ರಾಮ್ ಚರಣ್ ಸ್ಟೆಪ್ಸ್..

ಮೈಸೂರಿನಲ್ಲಿ ಪೆದ್ದಿ ಶೂಟಿಂಗ್.. 1000 ಡ್ಯಾನ್ಸರ್ಸ್ ಜೊತೆ ರಾಮ್ ಚರಣ್ ಸ್ಟೆಪ್ಸ್.. ಶೂಟಿಂಗ್ ಅಖಾಡದಲ್ಲಿ ಪೆದ್ದಿ...ಮೈಸೂರಿನಲ್ಲಿ ರಾಮ್ ಚರಣ್ ಸಿನಿಮಾದ ಶೂಟಿಂಗ್.. ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಪೆದ್ದಿ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಚಿತ್ರತಂಡ ಗೌರಿ ಗಣೇಶ ಹಬ್ಬದ ನಡುವೆಯೇ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದೆ.  ಮೈಸೂರಿನಲ್ಲಿ ರಾಮ್ ಚರಣ್ ನಾಯಕನಾಗಿ ಅಭಿನಯಿಸುತ್ತಿರುವ ಪೆದ್ದಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ ವೊಂದನ್ನು ಶೂಟಿಂಗ್ ನಡೆಸಲಾಗಿದೆ. 1000 ಡ್ಯಾನ್ಸರ್ಸ್ ಜೊತೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಡಿಗೆ ಹೆಜ್ಜೆ ಹಾಕ್ತಿದ್ದು, ಖ್ಯಾತ ಡ್ಯಾನ್ಸ್ ಮಾಸ್ಟರ್ ಜಾನಿ ಈ ಹಾಡಿಗೆ ಕೊರಿಯಾಗ್ರಾಫ್ ಮಾಡುತ್ತಿದ್ದಾರೆ. ಬಹಳ ಅದ್ಧೂರಿಯಾಗಿ ದೊಡ್ಡ ಬಜೆಟ್ ನಲ್ಲಿ ಈ ಸಾಂಗ್ ಚಿತ್ರೀಕರಣ ನಡೆಸಲಾಗುತ್ತಿದೆ. ಉಪ್ಪೇನ ನಿರ್ದೇಶಕ ಬುಚ್ಚಿಬಾಬು ಸನಾ ನಿರ್ದೇಶನ ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಕಥಾಹಂದರವೊಂದಿದೆ. ರಾಮ್ ಚರಣ್‌ಗೆ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  ಈ ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ನೀಡುತ್ತಿದ್ದು, ವೃದ್ಧಿ ಸಿನ...

ಸ್ಟಾರ್ಟಪ್ ಉದ್ಯಮಿ ಅನಿಲ್ ಶೆಟ್ಟಿ ಅವರ ಮೊದಲ ಚಿತ್ರ ಲಂಬೋದರ 2.0.. “ಟೈಟಲ್ ಬಿಡುಗಡೆ...

ಸ್ಟಾರ್ಟಪ್ ಉದ್ಯಮಿ ಅನಿಲ್ ಶೆಟ್ಟಿ ಅವರ ಮೊದಲ ಚಿತ್ರ ಲಂಬೋದರ 2.0.. “ಟೈಟಲ್ ಬಿಡುಗಡೆ... ಗಣೇಶ ಚತುರ್ಥಿಯ ದಿನದಂದು ವಿಭಿನ್ನ ವಿಡಿಯೋ ಟೀಸರ್ ಬಿಡುಗಡೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟೈಟಲ್ ಹಂಚಿಕೊಂಡ ಅನಿಲ್ ಶೆಟ್ಟಿ.   ಗಣೇಶನ ಹೆಸರಿನಲ್ಲಿ ಸಿನೆಮಾಗಳು ಬರದೆ ಕೆಲವು ವರ್ಷ ಆಯಿತು ನೀವು ಮತ್ತೆ ಯಾವಾಗ ಬರುತ್ತೀಯ ಎನ್ನುವ ಭಕ್ತರ ಪ್ರಶ್ನೆಗೆ ಉತ್ತರಿಸುವ ಗಣೇಶ “ ನಾನು ಹೈ ಟೆಕ್ ಆಗಿ ಅಪ್ಡೇಟ್ ಆಗಿದ್ದೀನಿ. ನಿಮ್ಮ ಬಳಿ ಒಬ್ಬನ್ನು ಕಳುಹಿಸುತ್ತಿದ್ದೇನೆ ಆದರೆ ನಿಮ್ಮ ಮೊಬೈಲ್ ಪಾಸ್ವರ್ಡ್ ಗೆ ನೀವೇ ಜವಾಬ್ದಾರರು “ ಎಂದು ಭಕ್ತರನ್ನು ಎಚ್ಚರಿಸುವ ಟೈಟಲ್ ಟೀಸರ್ ಇದೀಗ ವೈರಲ್ ಆಗಿದೆ.  ಅನಿಲ್ ಶೆಟ್ಟಿ ಅವರ ಹೋಂ ಬ್ಯಾನರ್ ಮಾಸ್ ಪ್ರೊಡಕ್ಷನ್ ಕಂಪನಿ ನಿರ್ಮಾಣ ಮಾಡುತ್ತಿರುವ ಸಿನಿಮಾ “ ಲಂಬೋಧರ 2.0 “ ದಲ್ಲಿ ಅನಿಲ್ ನಾಯಕ ನಟನಾಗಿ ಅಭಿನಯಿಸುತ್ತಿದ್ದು ಒಂದು ಒಳ್ಳೆ ಸಿನಿಮಾ ಮಾಡಲು ಸೃಜನಶೀಲ ತಾಂತ್ರಿಕ ತಂಡವನ್ನು ಕಟ್ಟುತ್ತಿದ್ದಾರೆ. “ ಬ್ಯಾಚುಲರ್ ಪಾರ್ಟಿ “ ಚಿತ್ರ ನಿರ್ದೇಶಕ ಅಭಿಜಿತ್ ಮಹೇಶ್ ಚಿತ್ರಕಥೆ ಮತ್ತು ಸಂಭಾಷಣೆ ಬರೆಯುತ್ತಿದ್ದು ಸದ್ಯದಲ್ಲೇ ಇಡಿ ಚಿತ್ರ ತಂಡ ಘೋಷಣೆಯಾಗಲಿದೆ.   ಲಂಬೋಧರ 2.0, ಹ್ಯಾಪಿನೆಸ್ ಲೋಡಿಂಗ್ …

ತೇಜ ಸಜ್ಜಾ ನಟನೆಯ ಮಿರಾಯ್ ಸಿನಿಮಾ ಸೆಪ್ಟೆಂಬರ್ 12ಕ್ಕೆ ರಿಲೀಸ್..

ತೇಜ ಸಜ್ಜಾ ನಟನೆಯ ಮಿರಾಯ್ ಸಿನಿಮಾ ಸೆಪ್ಟೆಂಬರ್ 12ಕ್ಕೆ ರಿಲೀಸ್.. ಸೆ.12ಕ್ಕೆ ತೇಜ ಸಜ್ಜಾ ನಟನೆಯ ಮಿರಾಯ್ ತೆರೆಗೆ ಎಂಟ್ರಿ.. 'ಹನುಮಾನ್'​ ಮೂಲಕ ಸಾಕಷ್ಟು ಜನಪ್ರಿಯರಾಗಿರುವ ಟಾಲಿವುಡ್​​ ನಟ ತೇಜ ಸಜ್ಜಾ ನಟನೆಯ ಬಹು ನಿರೀಕ್ಷಿತ ಸಿನಿಮಾ ಮಿರಾಯ್. ಹನುಮಾನ್​​​ ಚಿತ್ರದ ಬಳಿಕ ತೇಜ ಒಪ್ಪಿಕೊಂಡಿರುವ ಮತ್ತೊಂದು ಸೂಪರ್ ಹೀರೋ ಚಿತ್ರ ಇದಾಗಿದೆ. ಸ್ಯಾಂಪಲ್ಸ್ ಮೂಲಕ ನಿರೀಕ್ಷೆ ಹೆಚ್ಚಿರುವ ಮಿರಾಯ್ ಸಿನಿಮಾ ಸೆಪ್ಟೆಂಬರ್ 12ರಂದು ತೆರೆಗೆ ಬರ್ತಿದೆ. ನಾಳೆ‌ ಟ್ರೇಲರ್ ರಿಲೀಸ್.. ಮಿರಾಯ್ ಸಿನಿಮಾದ ಥಿಯೇಟರಿಕಲ್ ಟ್ರೇಲರ್ ನ್ನು ಚಿತ್ರತಂಡ ನಾಳೆ‌ ರಿಲೀಸ್ ಮಾಡಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡಿದೆ. ರಾಕಿಂಗ್ ಸ್ಟಾರ್ ಮನೋಜ್ ಮಂಚು ಖಳನಾಯಕನಾಗಿ ಮತ್ತು ರಿತಿಕಾ ನಾಯಕ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಸೂಪರ್ ಯೋಧಾ ಪಾತ್ರದಲ್ಲಿ ತೇಜ ಸಜ್ಜಾ ಅಭಿನಯಿಸಿದ್ದಾರೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಮಿರಾಯ್‌ಗೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ ಚಿತ್ರಕ್ಕಿದ್ದು, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರು. ಕೃತಿ ಪ್ರಸಾದ್ ಕ್ರಿಯೇಟಿವ್...

ಸೆನ್ಸಾರ್ ಪಾಸಾದ 'ಏಳುಮಲೆ'.ಸೆಪ್ಟೆಂಬರ್ 5ಕ್ಕೆ ಚಿತ್ರ ರಿಲೀಸ್..

ಸೆನ್ಸಾರ್ ಪಾಸಾದ 'ಏಳುಮಲೆ'.ಸೆಪ್ಟೆಂಬರ್ 5ಕ್ಕೆ ಚಿತ್ರ ರಿಲೀಸ್.. ಸೆನ್ಸಾರ್ ಪಾಸ್ ಆದ 'ಏಳುಮಲೆ'ಗೆ ಸಿಕ್ತು ಯು/ಎ ಸರ್ಟಿಫಿಕೇಟ್.. ಕರ್ನಾಟಕ - ತಮಿಳುನಾಡು ಗಡಿಭಾಗದ ಪ್ರೇಮಕಥೆ ಏಳುಮಲೆ ಸಿನಿಮಾ ತನ್ನ ಕಂಟೆಂಟ್‌ನಿಂದ ಗಮನಸೆಳೆಯುತ್ತಿದ್ದು, ಇದೀಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚೀಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು/ಎ ಪ್ರಮಾಣ ಪತ್ರ ತನ್ನದಾಗಿಸಿಕೊಂಡಿದೆ. ಕ್ರಿಯೇಟಿವ್ ಡೈರೆಕ್ಟರ್​ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡಿರುವ ಬಹುನಿರೀಕ್ಷಿತ ಸಿನಿಮಾ 'ಏಳುಮಲೆ' ಸೆಪ್ಟಂಬರ್ 5ರಂದು ಬಿಡುಗಡೆಯಾಗುತ್ತಿದೆ. ಹಾಡುಗಳು ಹಾಗೂ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ.  'ಏಕ್ ಲವ್ ಯಾ' ಚಿತ್ರದ ಬಳಿಕ ಖ್ಯಾತ ನಟಿ ರಕ್ಷಿತಾ ಸಹೋದರ ರಾಣಾ ನಾಯಕನಾಗಿ ನಟಿಸಿರುವ ಎರಡನೇ ಚಿತ್ರ ಇದಾಗಿದೆ. ಚಿತ್ರದಲ್ಲಿ ರಾಣಾಗೆ ನಾಯಕಿಯಾಗಿ ಮಹಾನಟಿ ಖ್ಯಾತಿಯ ಪ್ರಿಯಾಂಕಾ ಆಚಾರ್ ಸಾಥ್ ಕೊಟ್ಟಿದ್ದಾರೆ. ಉಳಿದಂತೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಏಳುಮಲೆಯ ಭಾಗವಾಗಿದ್ದಾರೆ. ಕರ್ನಾಟಕ - ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯನ್ನು ಹೊಂದಿರುವ ಈ ಪ್ರಾಜೆಕ್ಟ್ ಗೆ ತರುಣ್ ಕಿಶೋರ್ ಸುಧೀರ್ ಅವರು ಬಂಡವಾಳ ಹೂಡಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಸಹ...

ಅನುಷ್ಕಾ ಶೆಟ್ಟಿ ಅಭಿನಯದ "ಘಾಟಿ" ಚಿತ್ರದ ಮೂಲಕ ವಿತರಣಾ ವಲಯಕ್ಕೆ ಅಡಿಯಿಟ್ಟ "ಕೊತ್ತಲವಾಡಿ" ಚಿತ್ರದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್..

ಅನುಷ್ಕಾ ಶೆಟ್ಟಿ ಅಭಿನಯದ "ಘಾಟಿ" ಚಿತ್ರದ ಮೂಲಕ ವಿತರಣಾ ವಲಯಕ್ಕೆ ಅಡಿಯಿಟ್ಟ "ಕೊತ್ತಲವಾಡಿ" ಚಿತ್ರದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್.. ಇತ್ತೀಚೆಗೆ ತೆರೆಕಂಡ "ಕೊತ್ತಲವಾಡಿ" ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್, ಈಗ ವಿತರಣಾ ವಲಯಕ್ಕೆ ಅಡಿಯಿಟ್ಟಿದ್ದಾರೆ. PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ "ಘಾಟಿ" ಚಿತ್ರವನ್ನು ಪುಷ್ಪ ಅರುಣ್ ಕುಮಾರ್ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 5 ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. "ಫಾಟಿ" ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದೆ ಕೂಡ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು PA ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ಚಿತ್ರ ನಿರ್ಮಾಣಕ್ಕೆ ಬಂದಾಗ ತಾವು ತೋರಿದ ಪ್ರೀತಿಗೆ ಅನಂತ ಧನ್ಯವಾದ. ಈಗ ವಿತರಕಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದೇನೆ. ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಪುಷ್ಪ ಅರುಣ್ ಕುಮಾರ್ ತಿಳಿಸಿದ್ದಾರೆ. ...

ಹೆಸರಾಂತ ನಿರ್ದೇಶಕ ಸಿಂಪಲ್ ಸುನಿ ಅವರಿಂದ ಅನಾವರಣವಾಯಿತು 'ಓಂ ಶಿವಂ' ಚಿತ್ರದ ಟ್ರೇಲರ್..

ಹೆಸರಾಂತ ನಿರ್ದೇಶಕ ಸಿಂಪಲ್ ಸುನಿ ಅವರಿಂದ ಅನಾವರಣವಾಯಿತು 'ಓಂ ಶಿವಂ' ಚಿತ್ರದ ಟ್ರೇಲರ್.. ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಸೆಪ್ಟೆಂಬರ್ 5 ರಂದು ತೆರೆಗೆ.. ಚಿತ್ರರಂಗದೊಂದಿಗೆ ಹಲವು ವರ್ಷಗಳ ನಂಟಿರುವ ಅಲ್ವಿನ್ ನಿರ್ದೇಶನದ, ದೀಪಾ ಮೂವೀಸ್ ಲಾಂಛನದಲ್ಲಿ ಕೆ.ಎನ್.ಕೃಷ್ಣ ಅವರು ನಿರ್ಮಿಸಿರುವ ಹಾಗೂ ಭಾರ್ಗವ ಕೃಷ್ಣ ಮತ್ತು ವಿರಾನಿಕ ಶೆಟ್ಟಿ ನಾಯಕ - ನಾಯಕಿಯಾಗಿ ನಟಿಸಿರುವ "ಓಂ ಶಿವಂ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಹೆಸರಾಂತ ನಿರ್ದೇಶಕ ಸಿಂಪಲ್ ಸುನಿ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುನಿ ಅವರಿಗೆ ಧನ್ಯವಾದ ಎಂದು ಮಾತನಾಡಿದ ನಿರ್ದೇಶಕ ಆಲ್ವಿನ್, ನಮ್ಮ ಚಿತ್ರಕ್ಕೆ ಆರಂಭದ ದಿನದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಈಗಾಗಲೇ ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲಿ ಅವರು ಸಂಗೀತ ನೀಡಿರುವ ನಮ್ಮ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದೆ. ನಾಲ್ಕನೇ ಹಾಡನ್ನು ಲೂಸ್ ಮಾದ ಯೋಗಿ ಅವರು ಸೆಪ್ಟೆಂಬರ್ 1 ರಂದು ಬಿಡುಗಡೆ ಮಾಡಲಿದ್ದಾರೆ. ಇಂದು ಟ್ರೇಲರ್ ಅನಾವರಣವಾಗಿದೆ. ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿದೆ. ಸೆಪ್ಟೆಂಬರ್ 5 ರಂದು ಚಿತ್ರ ...