Skip to main content

Posts

Showing posts from September, 2025

ಇಂದು ಮ,12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ 'ಕಾಂತಾರ ಅಧ್ಯಾಯ 1' ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು.

ನಾಡಿನ ಜನತೆಗೆ ದಸರಾ ಹಬ್ಬದ  ಹಾರ್ದಿಕ ಶುಭಾಶಯಗಳು...  ಇಂದು ಮ,12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ 'ಕಾಂತಾರ ಅಧ್ಯಾಯ 1' ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು.   ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಅವರಿಂದ, ವಿಶ್ವವೇ ಎದುರು ನೋಡುತ್ತಿರುವ ಕಾಂತಾರ ಅಧ್ಯಾಯ 1' ಚಿತ್ರದ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆಯಾಯಿತು.  ಆರಂಭದಿಂದಲೂ ಸಾಕಷ್ಟು ಕುತೂಹಲ, ಕಾತುರ ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣ ಹಾಗೂ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ, ವಿಶ್ವವೇ ಎದುರು ನೋಡುತ್ತಿರುವ, ಬಹು ನಿರೀಕ್ಷಿತ "ಕಾಂತಾರ ಅಧ್ಯಾಯ 1" ಚಿತ್ರವು ಸಪ್ತ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನ ಸೆ.22ರ ಸೋಮವಾರ ಮಧ್ಯಾಹ್ನ 12:45ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಟ್ರೇಲರನ್ನು ಆಯಾ ಭಾಷೆಗಳ ಸ್ಟಾರ್ ನಟರುಗಳು ಬಿಡುಗಡೆ ಮಾಡಿದರು. ಹಿಂದಿ ಟ್ರೇಲರ್ ಅನ್ನು ಹೃತಿಕ್ ರೋಶನ್, ತಮಿಳಿನ ಟ್ರೇಲರ್ ಅನ್ನು ಶಿವಕಾರ್ತಿಕೇಯನ್, ಮಲಯಾಳಂ ಟ್ರೇಲರ್ ಅನ್ನು ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯ ಟ್ರೇಲರ್ ಅನ್ನು ಪ್ರಭಾಸ್ ಅವರು ಅನಾವರಣ ಮಾಡಿದರು.  ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ "ಕಾಂತಾರ...

"ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ.. ಇದೇ ಶುಕ್ರವಾರ ತೆರೆಗೆ

"ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ ..  ಇದೇ ಶುಕ್ರವಾರ ತೆರೆಗೆ    ಈಗಿನ ಕಾಲದಲ್ಲಿ ಮಹಿಳೆಯರು ಎಂಥದೇ ಆಪತ್ತಿನ ಸಂದರ್ಭ ಎದುರಾದರೂ, ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಕರಾಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ನಾರಾಯಣ ಪೂಜಾರ. ಸೆ.26ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ಮೂಲಕ ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.     ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಿರ್ಮಾಪಕರ ಅನೇಕ ಹಿತೈಷಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿದರು.   ಕರಾಸ್ತ್ರ ಕುರಿತಂತೆ ಮಾತನಾಡಿದ ನಿರ್ದೇಶಕ ನಾರಾಯಣ ಪೂಜಾರ್, ಹೆಣ್ಣು ಮಕ್ಕಳಿಗೆ ಸ್ವರಕ್ಷಣೆ ಎಷ್ಟು ಮುಖ್ಯ ಎಂಬುದನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ನನ್ನೂರು ಬ್ಯಾಡಗಿ, ಒಬ್ಬ ಕಲಾವಿದನಾಗಬೇಕೆಂದು 2006ರಲ್ಲಿ ಬೆಂಗಳೂರಿಗೆ ಬಂದೆ. ಗುರು ದೇಶಪಾಂಡೆ ಅವರಬಳಿ ಕಲಿತು ಅವರ ಸಿನಿಮಾದಲ್ಲೂ ಅಭಿನಯಿಸಿದೆ. ವಿಜಯ್ ಸೇತುಪತಿ ಅವರ ಮೊದಲ ಕನ್ನಡ ಚಿತ್ರ 'ಹೋರಾಟ'ದಲ್ಲಿ ಪ್ರಮುಖ ಪಾತ್ರ ಮಾಡಿದ್ದೆ. ಆದರೆ ಆ ಚಿತ್ರ ರಿಲೀಸಾಗಲಿಲ್ಲ. ಒಂದಿಬ್...

ಸೆಪ್ಟೆಂಬರ್ 22ರಂದು ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಭಾಸ್ ಅವರಿಂದ ಅನಾವರಣವಾಗಲಿದೆ ವಿಶ್ವವೇ ಎದುರು ನೋಡುತ್ತಿರುವ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರದ ಟ್ರೇಲರ್

ಸೆಪ್ಟೆಂಬರ್ 22ರಂದು ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಭಾಸ್ ಅವರಿಂದ ಅನಾವರಣವಾಗಲಿದೆ ವಿಶ್ವವೇ ಎದುರು ನೋಡುತ್ತಿರುವ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರದ ಟ್ರೇಲರ್  ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ಹಾಗೂ ನಿರ್ದೇಶನದ ಈ ಚಿತ್ರದ ಕನ್ನಡದ ಟ್ರೇಲರ್ ಕನ್ನಡ ಕಲಾಭಿಮಾನಿಗಳಿಂದಲೇ ಬಿಡುಗಡೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಹಾಗೂ ವಿಶ್ವವೇ ಎದುರು ನೋಡುತ್ತಿರುವ, ಬಹು ನಿರೀಕ್ಷಿತ "ಕಾಂತಾರ ಅಧ್ಯಾಯ ೧" ಚಿತ್ರ ಸಪ್ತ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಸೆಪ್ಟೆಂಬರ್ 22 ರ ಸೋಮವಾರ ಮಧ್ಯಾಹ್ನ 12:45ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಟ್ರೇಲರ್ ಅನಾವರಣವಾಗಲಿದೆ. ಹಿಂದಿ ಟ್ರೇಲರ್ ಅನ್ನು ಹೃತಿಕ್ ರೋಶನ್, ತಮಿಳಿನ ಟ್ರೇಲರ್ ಅನ್ನು ಶಿವಕಾರ್ತಿಕೇಯನ್, ಮಲಯಾಳಂನ ಟ್ರೇಲರ್ ಅನ್ನು ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯ ಟ್ರೇಲರ್ ಅನ್ನು ಪ್ರಭಾಸ್ ಅವರು ಅನಾವರಣ ಮಾಡಲಿದ್ದಾರೆ. ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ "ಕಾಂತಾರ" ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿರುವುದು ವಿಶೇಷ. ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ...

"ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ..

"ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ.. ಸದಭಿರುಚಿಯ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ಜನಪ್ರಿಯ ನಟ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ "ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ವರ್ಷ ಬೊಳ್ಳಮ್ಮ ಅಭಿನಯಿಸುತ್ತಿದ್ದಾರೆ. ತಮಿಳಿನ "ಬಿಗಿಲ್", "96" ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಹಾಗೂ ತೆಲುಗು, ಮಲೆಯಾಳಂ ಚಿತ್ರಗಳಲ್ಲೂ‌ ನಟಿಸಿರುವ ವರ್ಷ ಬೊಳ್ಳಮ್ಮ ಅವರು ನಟಿಸುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದೆ. "ಮಹಾನ್" ಚಿತ್ರದ ಬಗ್ಗೆ ವರ್ಷ ಬೊಳ್ಳಮ್ಮ ಅವರು ಈ ರೀತಿ ಹೇಳುತ್ತಾರೆ. ಮೂಲತಃ ಕನ್ನಡದವಳಾದ ನಾನು ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ "ಮಹಾನ್" ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. "ಮಾಹಾನ್" ಒಂದು ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ನಾನು ಪಿ.ಸಿ.ಶೇಖರ್ ...

"ಗೆರಿಲ್ಲಾ WAR" ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ - ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ..

"ಗೆರಿಲ್ಲಾ WAR" ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ - ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ.. ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ.. "AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ "ಗೆರಿಲ್ಲಾ WAR". ಈ ಚಿತ್ರದ ನಾಯಕರಾಗಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ "ಗೆರಿಲ್ಲಾ WAR" ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.  ಪ್ರಸ್ತುತ ಓಂಪ್ರಕಾಶ್ ರಾವ್ ನಿರ್ದೇಶನದ ಬಹು ನಿರೀಕ್ಷಿತ "ತ್ರಿಶೂಲಂ" ಚಿತ್ರದಲ್ಲೂ ಉಪೇಂದ್ರ ಅವರು ನಟಿಸಿದ್ದು, "ಗೆರಿಲ್ಲಾ WAR" ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರವಾಗಿದೆ.                          ಬೇಬಿ ಇಂಚರ ಅರ್ಪಿಸುವ, ಎನ್ ಎಸ್ ರಾವ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಹಾಗೂ ಆರ್ ವಾಸುದೇವ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಸದ್ಯ...

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಡ್ಯಾಡ್‍’ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ ಎರಡನೇ ಹಂತದ ಚಿತ್ರೀಕರಣ...

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಡ್ಯಾಡ್‍’ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ ಎರಡನೇ ಹಂತದ ಚಿತ್ರೀಕರಣ... ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ "ಡ್ಯಾಡ್" ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು.‌ ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆಯತ್ತಿದೆ. ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.   ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್‍. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.   ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚ...

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ ಬಹು ನಿರೀಕ್ಷಿತ "45" ಚಿತ್ರತಂಡ...

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ ಬಹು ನಿರೀಕ್ಷಿತ "45" ಚಿತ್ರತಂಡ... ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಹಲವು ವಿಶೇಷಗಳಿಂದ "45" ಎಲ್ಲರ ಗಮನ ಸೆಳೆದಿದೆ. ಚಿತ್ರದ ನಾಯಕರಲ್ಲೊಬ್ಬರಾದ ಉಪೇಂದ್ರ ಅವರ ಹುಟ್ಟುಹಬ್ಬದ ದಿನ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಶೇಷವಾದ ಬೈಕ್ ಅನಾವರಣ ಮಾಡುವ ಮೂಲಕ "45" ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಈ ಬೈಕ್ "45" ಚಿತ್ರದಲ್ಲಿ ಉಪೇಂದ್ರ ಅವರು ಓಡಿಸುವ ಬೈಕ್ ಆಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಟ ಉಪೇಂದ್ರ ಅವರು ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ಇಂದು ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಅನಾವರಣಗೊಂಡಿರುವ ಈ ವಿಶೇಷ ಬೈಕ್ ಅನ್ನು ನಮ್ಮ ಚಿತ್ರದಲ್...

ಶ್ರತಿ-50 ಕಾರ್ಯಕ್ರಮದಲ್ಲಿ "ಕೊರಗಜ್ಜ" ಚಿತ್ರತಂಡ

ಶ್ರತಿ-50*ಕಾರ್ಯಕ್ರಮದಲ್ಲಿ "ಕೊರಗಜ್ಜ" ಚಿತ್ರತಂಡ --------------------------------- ಬಿಡುಗಡೆಗೆ ಕ್ಷಣಗಣನೆ ಎಣಿಸುತ್ತಿರುವ ಬಹುನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ  "ಕೊರಗಜ್ಜ" ಚಿತ್ರದಲ್ಲಿ, ಕೊರಗಜ್ಜನ ಸಾಕುತಾಯಿ 'ಬೈರಕ್ಕೆ' ಯ ವಿಶೇಷ ರೀತಿಯ ಪಾತ್ರ ನಿರ್ವಹಿಸಿರುವ ನಟಿ ಶ್ರತಿ ಯವರ 50ನೆಯ ಜನ್ಮ ದಿನ ಕಾರ್ಯಾಕ್ರಮದಲ್ಲಿ ಚಿತ್ರದ   ನಿರ್ದೇಶಕ ಸುಧೀರ್ ಅತ್ತಾವರ್, ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ ಸಪಲ್ಯ , ಕಾರ್ಯಕಾರಿ ನಿರ್ಮಾಪಕ ಮತ್ತು ಎಡಿಟರ್ ವಿದ್ಯಾಧರ್ ಶೆಟ್ಟಿ‌ ಮೊದಲಾದವರು ಕಾರ್ಯಾಕ್ರಮದಲ್ಲಿ ಪಾಲ್ಗೊಂಡು ನೆನಪಿನ ಕಾಣಿಕೆ ಮತ್ತು ಹೂಗುಚ್ಚಗಳೊಂದಿಗೆ ಶುಭ ಹಾರೈಸಿದರು. "ಕೊರಗಜ್ಜ" ಸಿನಿಮಾದ ಬಗ್ಗೆ ಇಂಡಸ್ಟ್ರಿಯ ಹಲವಾರು ನಟರು, ನಿರ್ದೇಶಕರು ನಿರ್ಮಾಪಕರು ಶ್ರುತಿ ಯವರ ಈ ಕಾರ್ಯಕ್ರಮಾದಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಿ, ಕೊರಗಜ್ಜ ಸಿನಿಮಾದ ಬಗ್ಗೆ ತಮಗಿರುವ ತಮಗಿರುವ ಕುತೂಹಲ ಹೊರಹಾಕಿದರು.ಸುಮಾರು 2 ಕೋಟಿ ರೂಪಾಯಿಗಳಷ್ಟು ಖರ್ಚಾಗಿರುವ ವಿ ಎಫ್ ಎಕ್ಸ್ ಮತ್ತು ಗ್ರಾಫಿಕ್ಸ ಕೆಲಸ ವಿಳಂಬ ಗೊಂಡಿರುವುದೇ ಚಿತ್ರ ಬಿಡುಗಡೆ ಮುಂದೂಡಲು ಕಾರಣ. ಈಗ ಸಿನಿಮಾದ ಎಲ್ಲಾ ವಿಭಾಗದ ಕೆಲಸಗಳು‌ ಮುಗಿದು ಬಿಡುಗಡೆಗೆ ಸಿದ್ಧವಾಗಿದೆ. ಶ್ರುತಿ ಯವರ ಬೈರಕ್ಕೆ ಪಾತ್ರ ಅವರ ಲೈಫ್ ಟೈಮ್ ಪರ್ಫಾರ್ಮೆನ್ಸ್ ಎಂಬ ಮಾತು ಕೇಳಿಬರುತ್ತಿದೆ. ಅವರು ಅಭಿನಯಿಸಿ...

ಹೊಂಬಾಳೆ ಫಿಲಂಸ್ ನಿಂದ 'ಕಾಂತಾರ ಅಧ್ಯಾಯ 1' ಟ್ರೇಲರ್ ಬಿಡುಗಡೆ ದಿನಾಂಕ ಪ್ರಕಟ..

ಹೊಂಬಾಳೆ ಫಿಲಂಸ್ ನಿಂದ 'ಕಾಂತಾರ ಅಧ್ಯಾಯ 1' ಟ್ರೇಲರ್ ಬಿಡುಗಡೆ ದಿನಾಂಕ ಪ್ರಕಟ.. ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಸಿನಿಮಾದ ಟ್ರೇಲರ್ ಇದೇ ಸೆಪ್ಟೆಂಬರ್ 22, 2025 ರಂದು ಮಧ್ಯಾಹ್ನ 12:40ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ ಇಂದು ಘೋಷಿಸಿದೆ. ಈ ಚಿತ್ರವು ಅಕ್ಟೋಬರ್ 2, 2025 ರಂದು ವಿಶ್ವಾದ್ಯಂತ ಅದ್ದೂರಿಯಾಗಿ ತೆರೆ ಕಾಣಲಿದೆ. ರಿಷಬ್ ಶೆಟ್ಟಿ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವು, ಜಾಗತಿಕ ಮಟ್ಟದಲ್ಲಿ ಯಶಸ್ಸು ಕಂಡ 'ಕಾಂತಾರ' ಚಿತ್ರದ ಪ್ರೀಕ್ವೆಲ್ ಆಗಿದೆ.  ಕರಾವಳಿ ಕರ್ನಾಟಕದ ಅತೀಂದ್ರಿಯ ಲೋಕವನ್ನು ಅನಾವರಣಗೊಳಿಸುವ ಈ ಚಿತ್ರವು, ಪುರಾಣ, ಭಕ್ತಿ ಮತ್ತು ಅದೃಷ್ಟದ ನಡುವಿನ ಪೌರಾಣಿಕ ಕಥೆಯನ್ನು ಹೇಳುತ್ತದೆ. ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಅವರ ಅದ್ಭುತ ಸಂಗೀತ, ಛಾಯಾಗ್ರಾಹಕ ಅರವಿಂದ್ ಎಸ್. ಕಶ್ಯಪ್ ಅವರ ದೃಶ್ಯ ವೈಭವ ಮತ್ತು ವಸ್ತ್ರ ವಿನ್ಯಾಸಕಿ ಪ್ರಗತಿ ಶೆಟ್ಟಿ ಅವರ ವಿಶಿಷ್ಟ ಕಲಾಕೃತಿಗಳು ಚಿತ್ರಕ್ಕೆ ಮೆರುಗು ನೀಡಲಿವೆ.  ರಿಷಬ್ ಶೆಟ್ಟಿ, ಜೊತೆಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 'ಕಾಂತಾರ ಅಧ್ಯಾಯ 1' ಚಿತ್ರವು ಕಲೆ, ಭಕ್ತಿ ಮತ್ತು ಶಕ್ತಿಯನ್ನು ಒಳಗೊಂಡಿದ್ದು, ಮತ್ತೊಮ್ಮೆ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ.

ಅಕ್ಟೋಬರ್ 31ರಂದು "ಮಾರುತ"ನ ಆಗಮನ...ಎಸ್ ನಾರಾಯಣ್ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ "ದುನಿಯಾ" ವಿಜಯ್ ಹಾಗೂ ಶ್ರೇಯಸ್ ಮಂಜು ನಟನೆ..

ಅಕ್ಟೋಬರ್ 31ರಂದು "ಮಾರುತ"ನ ಆಗಮನ... ಎಸ್ ನಾರಾಯಣ್ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ "ದುನಿಯಾ" ವಿಜಯ್ ಹಾಗೂ ಶ್ರೇಯಸ್ ಮಂಜು ನಟನೆ.. ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ "ಮಾರುತ" ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ 31ರಂದು ಬಿಡುಗಡೆಯಾಗಲಿದೆ‌‌.   ಹೆಸರಾಂತ ನಿರ್ಮಾಪಕರಾದ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣದಲ್ಲಿ, ಸದಭಿರುಚಿ ಚಿತ್ರಗಳ ನಿರ್ದೇಶಕ ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ, ತಮ್ಮ ಅಮೋಘ ನಟನೆಯ ಮೂಲಕ ಜನಮನಸೂರೆಗೊಂಡಿರುವ ದುನಿಯಾ ವಿಜಯ್ ಹಾಗೂ ಉತ್ಸಾಹಿ ಯುವನಟ ಶ್ರೇಯಸ್ ಮಂಜು ಅವರ ಸಮಾಗಮದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ "ಮಾರುತ" ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿರುವ "ಮಾರುತ" ಚಿತ್ರಕ್ಕೆ ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದೆ. ಸಂಗೀತ ಸಂಯೋಜನೆಯನ್ನು ಎಸ್ ನಾರಾಯಣ್ ಅವರೆ ಮಾಡಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗ...

ಚಂದನ್ ಶೆಟ್ಟಿ ಹಾಗೂ ಆರ್ ಚಂದ್ರು ಅವರಿಂದ ಅನಾವರಣವಾಯಿತು "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ "ಪೋಸ್ಟ್ ಕಾರ್ಡ್" ಹಾಡು..

ಚಂದನ್ ಶೆಟ್ಟಿ ಹಾಗೂ ಆರ್ ಚಂದ್ರು ಅವರಿಂದ ಅನಾವರಣವಾಯಿತು "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ "ಪೋಸ್ಟ್ ಕಾರ್ಡ್" ಹಾಡು.. ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರ ಸೆಪ್ಟೆಂಬರ್ 19ರಂದು ಬಿಡುಗಡೆ.. ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ "ಫ್ರೆಂಚ್ ಬಿರಿಯಾನಿ" ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರಕ್ಕಾಗಿ ವಿಕ್ರಮ್ ವಸಿಷ್ಠ ಅವರು ಬರೆದಿರುವ,‌ ನಿತಿನ್ ರಾಜರಾಮ್ ಶಾಸ್ತ್ರಿ ಹಾಗೂ "ಜೋಗಿ" ಸುನಿತಾ ಅವರು ಹಾಡಿರುವ ಮತ್ತು ಪ್ರವೀಣ್ - ಪ್ರದೀಪ್ ಸಂಗೀತ ನೀಡಿರುವ "ಪೋಸ್ಟ್ ಕಾರ್ಡ್" ಹಾಡು ಬಿಡುಗಡೆ ಹಾಗೂ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಚಂದನ್ ಶೆಟ್ಟಿ ಹಾಗೂ ಆರ್ ಚಂದ್ರು ಅವರು ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಿರ್ಮಾಪಕರಾದ ನವರಸನ್, ಸಂಜಯ್ ಗೌಡ, ಚೇತನ್ ಗೌಡ ಹಾಗೂ ವಿತರಕರಾದ ಜಗದೀಶ್ ಗೌಡ, ಕೃಷ್ಣ ಸಾರ್ಥಕ್, ಗುರುದೇವ್ ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿ "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಕನ್ನಡದ ಜನರು ಉತ್ತಮ ಕಂಟೆ...

ಕ್ಯಾಸೆಟ್ ನಲ್ಲಿ ಹಾಡು ಬಿಡುಗಡೆ ಮಾಡಿದ ಫುಲ್ ಮೀಲ್ಸ್ ಚಿತ್ರತಂಡ..

ಕ್ಯಾಸೆಟ್ ನಲ್ಲಿ ಹಾಡು ಬಿಡುಗಡೆ ಮಾಡಿದ ಫುಲ್ ಮೀಲ್ಸ್ ಚಿತ್ರತಂಡ..  ಒಂದು ಕಾಲದಲ್ಲಿ ಚಿತ್ರದ ಆಡಿಯೊ ಹಿಟ್ ಆಯಿತೊ ಇಲ್ಲವೋ ಎಂದು ನಿರ್ಧಾರವಾಗುತ್ತಿದ್ದದ್ದು ಎಷ್ಟು ಕ್ಯಾಸೆಟ್ ಗಳು ಮಾರಾಟವಾಯಿತು ಎಂಬುದರ ಆಧಾರದ ಮೇಲೆ. ಅದರೆ ಕಾಲ ಬದಲಾದಂತೆ  ಕ್ಯಾಸೆಟ್ ಗಳನ್ನು ಬಹುತೇಕ ಎಲ್ಲರೂ ಮರೆತು ಹೋಗಿರುವ ಸಂದರ್ಭದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ ತಮ್ಮ ಚಿತ್ರದ ‘ವಾಹ್ ಏನೋ ಹವಾ’ ಹಾಡನ್ನು ಕ್ಯಾಸೆಟ್ ನಲ್ಲಿ ಬಿಡುಗಡೆ ಮಾಡುವ ಮೂಲಕ ಎಲ್ಲರನ್ನೂ ಹಳೆಯ ನೆನಪುಗಳಿಗೆ ದೂಡುವುದರೊಂದಿಗೆ ತಮ್ಮ ಕ್ರಿಯಾತ್ಮಕ ಪ್ರಯತ್ನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ..  ವಿಜಯ ನಗರದ ಮಾರುತಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಫುಲ್ ಮೀಲ್ಸ್ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರಿಗೂ ಆಶ್ಚರ್ಯ ಕಾದಿತ್ತು.. ಚಿತ್ರದ ಸಂಗಿತ ನಿರ್ದೇಶಕ ಗುರುಕಿರಣ್, ನಾಯಕ ಲಿಖಿತ್ ಶೆಟ್ಟಿ, ನಿರ್ದೇಶಕ ಎನ್ ವಿನಾಯಕ ನಾಯಕಿಯರಾದ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ ಹಾಡಿನ ಕ್ಯಾಸೆಟ್ ಅನ್ನು ಪ್ರದರ್ಶಿಸಿ ವಿಭಿನ್ನವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಗುರು ಕಿರಣ್ ಟೇಪ್ ರೆಕಾರ್ಡರ್ ನಲ್ಲಿ ಹಾಡನ್ನು ಹಾಕುವ ಮುಖಾಂತರ ಹಾಡನ್ನು ಲೋಕಾರ್ಪಣೆ ಮಾಡಿ, ನೆರೆದಿದ್ದ ಎಲ್ಲರೂ ಕೆಲಕಾಲ ಹಳೆಯ ನೆನಪುಗಳನ್ನು ಮೆಲಕು ಹಾಕುವಂತೆ ಮಾಡಿದರು.. ಬಿಡುಗಡೆಯಾದ ‘ವಾಹ್ ಏನೋ ಹವಾ’ ಮೆಲೋಡಿ ಪ್ರೇಮಗೀತೆ ಎಲ್ಲರ ಗಮನ ಸೆಳೆಯಿತು.....

ಸಿನಿಮಾವಾಗುತ್ತಿದೆ ಆದಿತ್ಯ ವಿನೋದ್ 'ಕೆಂದಾವರೆ' ಕಾದಂಬರಿ...

ಸಿನಿಮಾವಾಗುತ್ತಿದೆ ಆದಿತ್ಯ ವಿನೋದ್ 'ಕೆಂದಾವರೆ' ಕಾದಂಬರಿ... ಯಾರು ನಿರ್ದೇಶಕರು? ಆದಿತ್ಯ ವಿನೋದ್ ಬರೆದ ಕೆಂದಾವರೆ ಪುಸ್ತಕ ಬಿಡುಗಡೆ ಮಾಡಿದ ನಾಗಲಕ್ಷ್ಮಿ ಚೌದರಿ... ಸಿನಿಮಾ ರೂಪ ತಾಳುತ್ತಿದೆ ಕೆಂದಾವರೆ... ಆದಿತ್ಯ ವಿನೋದ್ ಬರೆದ ಕೆಂದಾವರೆ ಪುಸ್ತಕಕ್ಕೆ ಸಿನಿಮಾ ಟಚ್.. ಬರಹಗಾರ, ಸಂಗೀತಗಾರ ಹಾಗೂ ನಟ ಆದಿತ್ಯ ವಿನೋದ್ ಅವರು ಬರೆದ ಪುಸ್ತಕವೀಗ ಸಿನಿಮಾ ರೂಪ ತಾಳುತ್ತಿದೆ. ಕಡಲ ತೀರ ಭಾರ್ಗವ ಸಿನಿಮಾ ನಿರ್ದೇಶಿಸಿದ್ದ ಪನ್ನಗ ಸೋಮಶೇಖರ್ ಕಾದಂಬರಿ ಆಧಾರಿತವಾದ ಕೆಂದಾವರೆ ಪುಸ್ತಕಕ್ಕೆ ಸಿನಿಮಾ ಟಚ್ ಕೊಡಲಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಪುಸ್ತಕ ಬಿಡುಗಡೆ .. ಇತ್ತೀಚೆಗೆ ಕೆಂದಾವರೆ ಪುಸ್ತಕವನ್ನು ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅನಾವರಣ ಮಾಡಿದರು. ನಿರುತ ಪಬ್ಲಿಕೇಷನ್ ಪುಸ್ತಕ ಪ್ರಕಟಿಸಿದೆ. ಆದಿತ್ಯ ವಿನೋದ್ ಅವರು ಬರೆದ ಈ ಪುಸ್ತಕ ಮಕ್ಕಳ ಕಳ್ಳತನದ ಸುತ್ತ ಸಾಗುವ ಕಥೆಯನ್ನು ಒಳಗೊಂಡಿದೆ. ತಾರಾ ಬಳಗದ ಯಾರೆಲ್ಲಾ ಇದ್ದಾರೆ? ಕೆಂದಾವರೆ ಪುಸ್ತಕದ ಟೈಟಲ್ ನ್ನೇ ಸಿನಿಮಾಗೆ ಇಡಲಾಗಿದೆ. ಪನ್ನಗ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಆದಿತ್ಯ ವಿನೋದ್ ನಟಿಸುತ್ತಿದ್ದು, ನಾಯಕಿಯಾಗಿ ದಿಯಾ ಸಾಥ್ ಕೊಡುತ್ತಿದ್ದಾರೆ. ಉಳಿದಂತೆ ಅಕ್ಷತಾ ಶ್ರೀಧರ್ ಶಾಸ್ತ್ರೀ, ಪ್ರಕಾಶ್ ತುಮ್ಮಿನಾಡು, ಶ್ರವಣ್ ಜಗದೀಶ...

ಕುಮಾರ್ ನಿರ್ದೇಶನದ 'ಲವ್ ಯು ಮುದ್ದು' ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್....

ಕುಮಾರ್ ನಿರ್ದೇಶನದ 'ಲವ್ ಯು ಮುದ್ದು' ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್.... ಕೆಮಿಸ್ಟ್ರಿ ಆಫ್‌ ಕರಿಯಪ್ಪ ನಿರ್ದೇಶಕರ ಪ್ರೇಮಕಥೆ ಲವ್ ಯು ಮುದ್ದು ಚಿತ್ರದ ಟೈಟಲ್ ಟ್ರ್ಯಾಕ್ ಅನಾವರಣ.. ಹಾಡಿನಲ್ಲಿ ಲವ್ ಯು ಮುದ್ದು..ಬಿಂದಾಸ್ ಆಗಿ ಕುಣಿದ ಸಿದ್ದು-ರೇಷ್ಮಾ.. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಖ್ಯಾತಿಯ ಕುಮಾರ್ ಸಾರಥ್ಯದ ಹೊಸ ಸಿನಿಮಾ ಲವ್ ಯು ಮುದ್ದು ಈಗಾಗಲೇ ಟೈಟಲ್ ಮೂಲಕವೇ ನಿರೀಕ್ಷೆ ಹೆಚ್ಚಿಸಿದೆ.‌ಇದೀಗ ಈ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ಎಂಟಿಆರ್ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಲವ್ ಯು ಮುದ್ದು ಚಿತ್ರದ ಮೆಲೋಡಿ ಗೀತೆ ರಿಲೀಸ್ ಆಗಿದೆ. ಅನಿರುದ್ಧ್ ಶಾಸ್ತ್ತೀ ಸಾಹಿತ್ಯ ಬರೆದು ಸಂಗೀತ ನೀಡಿರುವ ಹಾಡಿಗೆ ಸೋನು ನಿಗಮ್, ಐಶ್ವರ್ಯ ರಂಗರಾಜನ್ ಹಾಗೂ ಸುರಭಿ ಭಾರದ್ವಾಜ್ ಕಂಠ ಕುಣಿಸಿದ್ದಾರೆ. ಲವ್ ಯು ಮುದ್ದು ಅಂತಾ ನಾಯಕ ಸಿದ್ದು ಕುಣಿದಿದ್ದು, ನಾಯಕಿ ರೇಷ್ಮಾ ಹಾಡಿನಲ್ಲಿ ಮಿಂಚಿದ್ದಾರೆ.  ಲವ್ ಯು ಮುದ್ದು ಮಹಾರಾಷ್ಟ್ರದಲ್ಲಿ ನಡೆದ ನೈಜ ಪ್ರೇಮ ಕಥಾ ಹಂದರ ಒಳಗೊಂಡಿದೆ. ಕಿರುತೆರೆ ಮತ್ತು ಅಜ್ಞಾತವಾಸಿ ಸಿನಿಮಾ ಖ್ಯಾತಿಯ ಸಿದ್ದು ನಾಯಕನಾಗಿ, ಯುವನಟಿ ರೇಷ್ಮಾ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ರಾಜೇಶ್ ನಟರಂಗ, ತಬಲಾ ನಾಣಿ, ಗಿರೀಶ್ ಶಿವಣ್ಣ, ಶ್ರೀವತ್ಸ ಮತ್ತು ಉಷಾ ಚಿತ್ರದಲ್ಲಿದ್ದಾರೆ. ಕಿಶನ್ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಕಿಶನ್ ಟಿಎನ್ ಚಿತ್ರ ನಿರ್ಮಾಣ ...

ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಪಿದಾಯಿ ಆಯ್ಕೆ..

ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಪಿದಾಯಿ ಆಯ್ಕೆ.. ಈ ವರ್ಷದ ಮೈಸೂರು ದಸರಾ ಉತ್ಸವದ ಅಂಗವಾಗಿ ನಡೆಯುವ ಚಲನಚಿತ್ರೋತ್ಸವಕ್ಕೆ ಪಿದಾಯಿ ಆಯ್ಕೆಯಾಗಿದ್ದು ಚಿತ್ರವು *ಮೈಸೂರಿನಲ್ಲಿ ಸೆಪ್ಟೆಂಬರ್‌ 18, ಗುರುವಾರದಂದು ಮಧ್ಯಾಹ್ನ 1:15ಕ್ಕೆ* ಪ್ರದರ್ಶನಗೊಳ್ಳಲಿದೆ.  ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ಅವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ಪಿದಾಯಿ ಸೆಪ್ಟೆಂಬರ್ 12ನೇ ತಾರೀಕಿನಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದ್ದು ವೀಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಅದೇ ಸಂದರ್ಭದಲ್ಲಿ ಈ ಸಂತೋಷದ ವಿಷಯವನ್ನೂ ಚಿತ್ರತಂಡದವರು ಹಂಚಿಕೊಂಡರು.  ಪಿದಾಯಿ ಚಿತ್ರವು ಕೊಲ್ಕತ್ತ, ಸಿಮ್ಲಾ, ಜಾರ್ಖಂಡ್‌ ಹಾಗೂ ಕ್ಯಾಲಿಫೋರ್ನಿಯಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆಯಾಗುವುದರ ಜೊತೆಗೆ, 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮಬಾರಿಗೆ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳ‌ಲ್ಲಿ ಸ್ಪರ್ಧೆಯಲ್ಲಿದ್ದು ಅಂತಿಮವಾಗಿ ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಮೈಸೂರು ದಸರಾ ಚಲನಚಿತ್ರೋತ್ಸವಕ್ಕೂ ಆಯ್ಕೆಯಾಗಿದೆ.  ಈ ಚಿತ್ರದ ಮುಖ್ಯ ಭೂಮಿಕೆ...

ಬಿಡುಗಡೆಯಾಯಿತು ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ "ಬ್ರ್ಯಾಟ್"(BRAT) ಚಿತ್ರದ "ಗಂಗಿ ಗಂಗಿ" ಹಾಡು...

ಬಿಡುಗಡೆಯಾಯಿತು ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ "ಬ್ರ್ಯಾಟ್"(BRAT) ಚಿತ್ರದ "ಗಂಗಿ ಗಂಗಿ" ಹಾಡು...    ಬಾಳು ಬೆಳಗುಂದಿ ಸಾಹಿತ್ಯ ಹಾಗೂ ಗಾಯನಕ್ಕೆ ಅಭಿಮಾನಿಗಳು ಫಿದಾ‌..                     ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ, ಜನಪ್ರಿಯ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ "ಬ್ರ್ಯಾಟ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಎಲ್ಲರ ಗಮನ ಸೆಳೆದಿದೆ. ಪ್ರಸ್ತುತ ಈ ಚಿತ್ರದ ಮತ್ತೊಂದು ಮನಮೋಹಕ ಹಾಡು "ಗಂಗಿ ಗಂಗಿ" ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ನೆರೆದಿದ್ದ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಹಾಗೂ ಚಿತ್ರತಂಡದ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಉತ್ತರ ಕರ್ನಾಟಕದ ಪ್ರತಿಭೆ ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್ ಹಾಡಿರುವ ಈ ಹಾಡನ್ನು ಬಾಳು ಬೆಳಗುಂದಿ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಅನೈರಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಾಳು ಬೆಳಗುಂದಿ ಅವರ ಗಾಯನಕ್ಕೆ ಹಾಗೂ ಸಾಹಿತ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ‌‌. ಹಾಡು ಬಿಡುಗಡೆ ನಂತರ ಚಿತ್ರತಂಡ...