Skip to main content

"ಫ್ರಾಡ್‍ ಋಷಿ" ಬಗ್ಗೆ ನಮ್‍ ಋಷಿ ಮಾತು..ಚಿತ್ರದ ಎರಡನೇ ಹಾಡನ್ನು ಬಿಡುಗಡೆ ಮಾಡಿ ಹಾರೈಸಿದ ನಿರ್ಮಾಪಕ ಕೆ.ಮಂಜು..

"ಫ್ರಾಡ್‍ ಋಷಿ" ಬಗ್ಗೆ ನಮ್‍ ಋಷಿ ಮಾತು..
ಚಿತ್ರದ ಎರಡನೇ ಹಾಡನ್ನು ಬಿಡುಗಡೆ ಮಾಡಿ ಹಾರೈಸಿದ ನಿರ್ಮಾಪಕ ಕೆ.ಮಂಜು..
'ಒಳಿತು ಮಾಡು ಮನುಸ" ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ "ಫ್ರಾಡ್ ಋಷಿ" ಚಿತ್ರದ ಎರಡನೇ ಹಾಡು "ಇವನೇ ಇವನೇ ಫ್ರಾಡು ಋಷಿ" ಇತ್ತೀಚೆಗೆ ಬಿಡುಗಡೆಯಾಗಿದೆ. ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.
ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ, ಒಳ್ಳೆಯ ತಂಡ ಬೇಕು. ಒಳ್ಳೆಯ ತಂಡವೆಂದರೆ, ಒಬ್ಬರನ್ನೊಬ್ಬರು ಪ್ರೀತಿಸುವಂತಿರಬೇಕು. ಅವರು ಬೆಳೆದರೆ ನಾವು ಖುಷಿಪಡಬೇಕು. ನಾವು ಬೆಳೆದರೆ ಅವರು ಖುಷಿಪಡಬೇಕು. ಸಣ್ಣ ವಿಷಯಗಳಿಗೆ ಕಿತ್ತಾಟಗಳಾಗುತ್ತವೆ. ಅದನ್ನೆಲ್ಲಾ ಮೀರಿದ ಒಂದು ತಂಡವಿರಬೇಕು. ಮಧು, ಸೋಮಶೇಖರ್, ಹರಿಕೃಷ್ಣ, ಮಂಜುನಾಥ್‍ ಮುಂತಾದವರ ಸಹಕಾರದಿಂದ ಈ ಚಿತ್ರ ರೂಪುಗೊಳ್ಳುತ್ತಿದೆ. ನಾನು ಕಲಾವಿದರಿಗೆ ದುಡ್ಡು ಕೊಟ್ಟು ನಟನೆ ಮಾಡಿಸುವುದಿಲ್ಲ. ಕಲಾವಿದರಲ್ಲಿ ಎರಡು ತರಹದ ಕಲಾವಿದರಿರುತ್ತಾರೆ. ಕೆಲವರು ವೃತ್ತಿಪರ ಕಲಾವಿದರು. ಇನ್ನೂ, ಕೆಲವರು ಪ್ಯಾಶನ್‍ಗಾಗಿ ಅಭಿನಯ ಮಾಡುತ್ತಾರೆ. ಅವರಿಗೆ ಹಣದ ಅವಶ್ಯಕತೆ ಇರುವುದಿಲ್ಲ. ವೃತ್ತಿಪರ ಕಲಾವಿದರಿಗೆ ದುಡ್ಡು ಕೊಡಬೇಕಾಗುತ್ತದೆ. ಆದರೆ, ಇನ್ನೊಂದು ಪ್ಯಾಶನ್ ಇರುವವರನ್ನು ಆಯ್ಕೆ ಮಾಡಿಕೊಂಡರೆ, ಅವರಿಗೆ ಹಣ ನೀಡದಿದ್ದರೂ ಆಗುತ್ತದೆ. ಜೊತೆಗೆ ಅವರಿಂದ ಸಹಕಾರವೂ ಸಿಗುತ್ತದೆ. ನಾನು ಅಂಥವರನ್ನೇ ಆಯ್ಕೆ ಮಾಡಿಕೊಂಡು ಚಿತ್ರ ಮಾಡುತ್ತಿದ್ದೇನೆ.
ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದೆ. ಅಕ್ಟೋಬರ್ 10ರಿಂದ ಚಿತ್ರೀಕರಣ ಶುರುವಾಗಲಿದೆ. ಇದು ದೊಡ್ಡ ಬಜೆಟ್‍ ಚಿತ್ರವಲ್ಲ. ಆದರೆ, ಕಂಟೆಂಟ್‍ ಬಹಳ ಚೆನ್ನಾಗಿದೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ನನ್ನ ಮೂರು ಯಶಸ್ವಿ ಹಾಡುಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಕಡಿಮೆ ಬಜೆಟ್‍ನಲ್ಲಿ ಈ ಚಿತ್ರ ಮಾಡುತ್ತಿದ್ದೇನೆ. ಶಂಕರ್ ಛಾಯಾಗ್ರಹಣ ಮತ್ತು ಶ್ರೀಗುರು ಸಂಗೀತ ಈ ಚಿತ್ರಕ್ಕಿದೆ. ಒಂದೊಳ್ಳೆಯ ತಂಡ ಕಟ್ಟಿದ್ದೇನೆ. ಚಿತ್ರದಲ್ಲಿ ನಾಲ್ವರು ನಾಯಕಿಯರಿದ್ದಾರೆ. ಯಾಕೆ ಅಷ್ಟೊಂದು ಜನ ಎಂದು ಚಿತ್ರ ನೋಡಿದರೆ ಗೊತ್ತಾಗುತ್ತದೆ. ಇದುವರೆಗೂ ಯಾರೂ ಮುಟ್ಟದ ಮತ್ತು ಎಲ್ಲರೂ ಹೇಳುವುದಕ್ಕೆ ಹೆದರುವ ಒಂದು ವಿಷಯವನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಇದೊಂದು ಸೂಕ್ಷ್ಮ ವಿಷಯವಿರುವ ಕಥೆ. ಜನರಿಗೆ ಚಿತ್ರ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ.
‘ಫ್ರಾಡ್‍ ಋಷಿ’ ಎಂದು ಏಕೆ ಇಟ್ಟಿದ್ದೇವೆ? ಎಂದು ಚಿತ್ರ ನೋಡಿದರೆ ಗೊತ್ತಾಗುತ್ತದೆ. ಫ್ರಾಡ್‍ ಅಂದರೆ ಮೋಸ ಮಾಡುವವರು ಅಂತ. ನಾವು ಬೇರೆಯವರು ಬದಲಾಯಿಸುವುದಕ್ಕೆ ಪ್ರಯತ್ನಿಸುತ್ತೇವೆ. ಆದರೆ, ನಾವು ಬೇರೆಯವರಿಗೆ ಬುದ್ಧಿ ಹೇಳುವುದಕ್ಕಿಂತ ನಾವೆಷ್ಟು ಬದಲಾಗಿದ್ದೇವೆ ಎಂಬುದನ್ನು ತಿಳಿದುಕೊಳ್ಳಬೇಕು. ಬೇರೆಯವರನ್ನು ಫ್ರಾಡ್‍ ಎಂದು ಕರೆದರೆ ಸಮಾಜ ಒಪ್ಪುವುದಿಲ್ಲ. ಅದೇ ನಮ್ಮನ್ನು ನಾವು ಫ್ರಾಡ್‍ ಎಂದು ಕರೆದರೆ ಯಾರೂ ಪ್ರಶ್ನೆ ಮಾಡುವುದಿಲ್ಲ ಎಂದು ಈ ಹೆಸರಿಟ್ಟಿದ್ದೇನೆ. ಈ ಚಿತ್ರದಲ್ಲೊಂದು ಒಳ್ಳೆಯ ಸಂದೇಶವಿದೆ. ಚಿತ್ರೀಕರಣದ ಪೂರ್ವಭಾವಿಯಾಗಿ ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿದೆ. ಹಾಡುಗಳಿಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಕೆ.ಮಂಜು ಅವರಿಗೆ ಧನ್ಯವಾದ ಎಂದು ನಮ್ ಋಷಿ ಹೇಳಿದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...