Skip to main content

"ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ.. ಇದೇ ಶುಕ್ರವಾರ ತೆರೆಗೆ

"ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ.. ಇದೇ ಶುಕ್ರವಾರ ತೆರೆಗೆ
   ಈಗಿನ ಕಾಲದಲ್ಲಿ ಮಹಿಳೆಯರು ಎಂಥದೇ ಆಪತ್ತಿನ ಸಂದರ್ಭ ಎದುರಾದರೂ, ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಕರಾಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ನಾರಾಯಣ ಪೂಜಾರ. ಸೆ.26ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ಮೂಲಕ ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. 
   ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಿರ್ಮಾಪಕರ ಅನೇಕ ಹಿತೈಷಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿದರು. 
 ಕರಾಸ್ತ್ರ ಕುರಿತಂತೆ ಮಾತನಾಡಿದ ನಿರ್ದೇಶಕ ನಾರಾಯಣ ಪೂಜಾರ್, ಹೆಣ್ಣು ಮಕ್ಕಳಿಗೆ ಸ್ವರಕ್ಷಣೆ ಎಷ್ಟು ಮುಖ್ಯ ಎಂಬುದನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ನನ್ನೂರು ಬ್ಯಾಡಗಿ, ಒಬ್ಬ ಕಲಾವಿದನಾಗಬೇಕೆಂದು 2006ರಲ್ಲಿ ಬೆಂಗಳೂರಿಗೆ ಬಂದೆ. ಗುರು ದೇಶಪಾಂಡೆ ಅವರಬಳಿ ಕಲಿತು ಅವರ ಸಿನಿಮಾದಲ್ಲೂ ಅಭಿನಯಿಸಿದೆ. ವಿಜಯ್ ಸೇತುಪತಿ ಅವರ ಮೊದಲ ಕನ್ನಡ ಚಿತ್ರ 'ಹೋರಾಟ'ದಲ್ಲಿ ಪ್ರಮುಖ ಪಾತ್ರ ಮಾಡಿದ್ದೆ. ಆದರೆ ಆ ಚಿತ್ರ ರಿಲೀಸಾಗಲಿಲ್ಲ. ಒಂದಿಬ್ಬರ ಜತೆ ಸಿನಿಮಾ ಮಾಡಲು ಹೋಗಿ ಹಣ ಕಳೆದುಕೊಂಡೆ. ನಂತರ ಪತ್ರಿಕೆಗಳ ಮೂಲಕ ಸಿನಿಮಾ ರಂಗದ ಅಂತರಾಳ ತಿಳಿದುಕೊಂಡು ಕೋವಿಡ್ ಟೈಮಲ್ಲಿ ಈ ಸಿನಿಮಾ ಪ್ರಾರಂಭಿಸಿದ್ದೆ. ಬೇಸಿಕಲಿ ನಾನೊಬ್ಬ ಕರಾಟೆ ಮಾಸ್ಟರ್, ಉತ್ತರ ಕರ್ನಾಟಕದ ಪ್ರತಿಭೆಗಳನ್ನ ಈ ಚಿತ್ರದಲ್ಲಿ ಬಳಸಿಕೊಂಡಿದ್ದೇನೆ. ಒಮ್ಮೆ ಚಿತ್ರದ ಹಾರ್ಡ್ ಡಿಸ್ಕೇ ಹಾಳಾಗಿತ್ತು. ಅದೆಲ್ಲ ಸರಿ ಮಾಡಿಕೊಂಡು ಇದೀಗ ಚಿತ್ರವನ್ನು ರಿಲೀಸ್ ಹಂತಕ್ಕೆ ತಂದಿದ್ದೇವೆ. ಈ ಸಿನಿಮಾ ನನಗೆ ತಪಸ್ಸಿದ್ದ ಹಾಗೆ. ನನ್ನ ಚಿತ್ರದಲ್ಲಿ ಕೆಲಸ ಮಾಡಿದ ಬಹಳಷ್ಟು ಜನ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಮ್ಮ ಚಿತ್ರದಲ್ಲಿ ಕರಾಟೆ ಒಂದು ಭಾಗ. ನಾಯಕಿಗೆ ಒಂದು ಸಮಸ್ಯೆ ಎದುರಾಗುತ್ತದೆ. ಆಕೆ ಅದನ್ನು ಬಗೆಹರಿಸ್ತಾಳಾ ಇಲ್ವಾ ಅನ್ನೋದೆ ಕರಾಸ್ತ್ರ. ಚಿತ್ರದಲ್ಲಿ ನಾನು ಮೂರು ಶೇಡ್ ಇರೋ ಪಾತ್ರ ಮಾಡಿದ್ದೇನೆ ಎಂದರು‌. 
  ನಂತರ ಚಿತ್ರದ ನಾಯಕಿ ಮನಿಷಾ ಕಬ್ಬೂರ ಮಾತನಾಡಿ ಕರಾಸ್ತ್ರ ಒಂದು ಟೀಮ್ ವರ್ಕ್ ಆಗಿದೆ. ಮೊದಲು ನನಗೆ ಕ್ಯಾಮೆರಾ ಹೇಗೆ ಫೇಸ್ ಮಾಡಬೇಕೆಂದು ಗೊತ್ತಿರಲಿಲ್ಲ. ನಿರ್ದೇಶಕರೇ ಹೇಳಿಕೊಟ್ಟರು. ಮಹಿಳೆಯರು ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳೋದನ್ನು ಕಲಿಯಬೇಕು ಎಂಬುದನ್ನು ಈ ಚಿತ್ರದ ಮೂಲಕ ಹೇಳಿದ್ದೇವೆ ಎಂದರು.  
  ಬೇಬಿ ಕೃಷ್ಣವೇಣಿ, ಹೇಮಂತ್, ಚಿತ್ರಕ್ಕೆ ಹಿನ್ನಲೆ ಸಂಗೀತ ನೀಡಿದ ರಾಜ್ ಭಾಸ್ಕರ್ ಕರಾಸ್ತ್ರ ಚಿತ್ರದ ವಿಶೇಷತೆ ಕುರಿತಂತೆ ಮಾತನಾಡಿದರು. ವಿತರಕ ಕುಲಕರ್ಣಿ ಮಾತನಾಡಿ ನಾನು ಸಿನಿಮಾ ನೋಡಿದ್ದೇನೆ. ತುಂಬಾ ಚೆನ್ನಾಗಿ ಬಂದಿದೆ. 25 ರಿಂದ 30 ಥೇಟರ್ ಗಳಲ್ಲಿ ರಿಲೀಸ್ ಮಾಡೋ ಪ್ಲಾನ್ ಮಾಡಿಕೊಂಡಿದ್ದೇವೆ ಎಂದರು. ಉಳಿದ ತಾರಾಗಣದಲ್ಲಿ ಕಾರ್ತೀಕ್ ಪೂಜಾರ್, ಶ್ರೀನಿವಾಸ ಹುಲಕೋಟೆ, ಕ್ಷಿತಿ ವೀರಣ್ಣ, ವಿದ್ಯಾ ಬೆಳಗಾವಿ, ಸ್ಟೆಫಿ ಲೂಯಿಸ್ ಮುಂತಾದವರಿದ್ದಾರೆ.
ಶಂಕರ ಸುಗ್ನಳ್ಳಿ, ಲಕ್ಷ್ಮಣ, ಮೈಲಾರಿ, ಗಗನ್ ಅವರ ಛಾಯಾಗ್ರಹಣ, ಮಹಾರಾಜ್ ಅವರ ಸಂಗೀತ, ರಾಜ್ ಭಾಸ್ಕರ್ ಅವರ ಹಿನ್ನೆಲೆ ಸಂಗೀತ, ಕರಾಟೆ ಮಂಜು, ಶಂಕರ ಶಾಸ್ತ್ರಿ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...