Skip to main content

'ಜೊತೆಯಾಗಿ ಹಿತವಾಗಿ' ಪ್ಯೂರ್ ಲವ್ ಸ್ಟೋರಿಗೆ ಮನಸೋತ ಪ್ರೇಕ್ಷಕರು..

'ಜೊತೆಯಾಗಿ ಹಿತವಾಗಿ' ಪ್ಯೂರ್ ಲವ್ ಸ್ಟೋರಿಗೆ ಮನಸೋತ ಪ್ರೇಕ್ಷಕರು..
ಜೊತೆಯಾಗಿ ಹಿತವಾಗಿ ಸಿನಿಮಾದಲ್ಲಿ ಅಪ್ಪ - ಮಗನೇ ಹೈಲೇಟ್..
ಪ್ಯೂರ್ ಲವ್ ಸ್ಟೋರಿಯನ್ನ ಸಿನಿ ಪ್ರೇಮಿಗಳು ಸೋಲಿಸಿದ ಉದಾಹರಣೆಯೇ ಇಲ್ಲ. ತೆರೆಮೇಲಿನ ಪ್ರೀತಿಯನ್ನ ಪ್ರೇಕ್ಷಕರು ಮನಸ್ಸಾರೆ ಅನುಭವಿಸುವುದುಂಟು. ಅಂಥದ್ದೊಂದು ಸಿನಿಮಾ ಈಗ ಪ್ರೇಕ್ಷಕರ ಹೃದಯವನ್ನು ಕೆಣಕುತ್ತಿದೆ. ಅದೇ ಜೊತೆಯಾಗಿ ಹಿತವಾಗಿ ಸಿನಿಮಾ. ಇದೇ ಸೆಪ್ಟೆಂಬರ್ 19ಕ್ಕೆ ತೆರೆಗೆ ಬರ್ತಿದೆ. ಅದಕ್ಕೂ ಮುನ್ನ ಒಂದು ಪ್ರೀಮಿಯರ್ ಶೋ ಮಾಡಲಾಗಿದೆ. ವಿಕ್ಟರಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಮನಸ್ಪೂರ್ತಿಯಾಗಿ ಮೆಚ್ಚಿಕೊಂಡಿದ್ದಾರೆ. ಲವ್ ಸ್ಟೋರಿ, ಅಪ್ಪ ಮಗನ ಸೆಂಟಿಮೆಂಟ್ ಅನ್ನ ಹಾಡಿ ಹೊಗಳಿದ್ದಾರೆ. ಪ್ರೇಕ್ಷಕ ಪ್ರಭುಗಳು ಮೆಚ್ಚಿಕೊಂಡ ಮೇಲೆ ಸಿನಿಮಾ ತಂಡಕ್ಕೆ ಅದಕ್ಕಿಂತ ಇನ್ನೇನಿದೆ ಹೇಳಿ. ಸೆಪ್ಟೆಂಬರ್ 19ಕ್ಕೆ ರಿಲೀಸ್ ಆದ್ಮೇಲೆ ಒಳ್ಳೆ ರೆಸ್ಪಾನ್ಸ್ ಸಿಗುವ ನಿರೀಕ್ಷೆ ಇದೆ. 
ಈ ಜೊತೆಯಾಗಿ ಹಿತವಾಗಿ ಸಿನಿಮಾದ ಟೈಟಲ್ ಶಿವಣ್ಣನ ಮೊದಲ ಆನಂದ್ ಸಿನಿಮಾದ ಹಾಡಿನಲ್ಲಿರುವ ಸಾಲಾಗಿದೆ. ಈ ಹಾಡಿನ ಸಾಲನ್ನೇ ಟೈಟಲ್ ಆಗಿ ಇಡುವುದಕ್ಕೂ ಒಂದು ಕಾರಣವಿದೆ, ಅದುವೇ ಈ ಸಿನಿಮಾದ ನಾಯಕ ಅಗಸ್ತ್ಯ ದೊಡ್ಮನೆಯ ಅಪ್ಪಟ ಅಭಿಮಾನಿ. ಈ ಸಿನಿಮಾ ಒಂದು ಲವ್ ಸಬ್ಜೆಕ್ಟ್ ಇರುವಂತ ಸಿನಿಮಾ. ಹೀಗಾಗಿಯೇ ಆ ಟೈಟಲ್ ಅನ್ನ ಸಿನಿಮಾಗೆ ಇಡಲಾಗಿದೆ. ಕಥೆ ಮಾಡಿಕೊಂಡಾಗ ಒಂದೇ ಒಂದು ಸಲ ಎಂಬ ಟೈಟಲ್ ಇಡಲಾಗಿತ್ತು. ಆದ್ರೆ ಆಮೇಲೆ ಕಥೆಗೆ ತಕ್ಕಂತೆ ಟೈಟಲ್ ಬದಲಾವಣೆ ಮಾಡಲಾಗಿತ್ತು. ಮನೆಯಲ್ಲಿ ತುಂಬಾ ಫ್ರೀಡಂ ಕೊಟ್ಟರೆ ಏನಾಗುತ್ತೆ, ತೀರಾ ರಿಸ್ಟ್ರಿಕ್ಷನ್ ಇದ್ದಾಗ ಏನಾಗಬಹುದು ಎಂಬುದನ್ನ ತೀರಾ ಅದ್ಭುತವಾಗಿ ಹೆಣೆಯಲಾಗಿದೆ. 
ಈ ಮೊದಲು ಜೊತೆಯಾಗಿ ಹಿತವಾಗಿ ಸಿನಿಮಾವನ್ನೇ ಒಂದು ಶಾರ್ಟ್ ಮೂವಿ ಮಾಡಬೇಕು ಎಂದುಕೊಂಡಿದ್ದ ಟೀಂ, ಸಿನಿಮಾದ ಕಥೆ ಸಾಗುತ್ತಾ ಸಾಗುತ್ತಾ ಸಿನಿಮಾವನ್ನೇ ಮಾಡಿಬಿಟ್ಟರು. ಸಿನಿಮಾ ಚೆನ್ನಾಗಿ ಬರಬೇಕು, ಜನಕ್ಕೆ ತೋರಿಸುವಾಗ ಬಹಳ ಮುಖ್ಯವಾಗುತ್ತೆ ಎಂಬ ವಿಚಾರವನ್ನ ತಲೆಯಲ್ಲಿಟ್ಟುಕೊಂಡ ತಂಡ, ಎಷ್ಟೋ ಸೀನ್ ಗಳನ್ನ ರೀಶೂಟ್ ಮಾಡಿದ್ದಾರೆ. ಅಷ್ಟೇ ಅಲ್ಲ ಕಂಪ್ಲೀಟ್ ಬೆಳಗಾವಿಯನ್ನ ಮಲೆನಾಡಿನ ರೀತಿಯಲ್ಲಿ ತೋರಿಸಲಾಗಿದೆ. 
ಈ ಸಿನಿಮಾದಲ್ಲಿ ಅಗಸ್ತ್ಯ ನಾಯಕ ನಟನಾಗಿ ಕಾಣಿಸಿಕೊಂಡಿದ್ದು. ಮೂಲತಃ ಬೆಳಗಾವಿಯವರು. ಸ್ಕೂಲ್ ಸಮಯದಲ್ಲಿದ್ದಾಗಿನಿಂದಲೇ ಸಿನಿಮಾದಲ್ಲಿ ನಾನು ನಟಿಸಬೇಕೆಂಬ ಆಸೆ ಅವರಲ್ಲಿತ್ತು. ಆದ್ರೆ ಸಿನಿಮಾಗೆ ಹೋಗೋದಕ್ಕೆ ಮನೆಯಲ್ಲಿ ಸಪೋರ್ಟ್ ಇರಲಿಲ್ಲ. ಆದ್ರೆ ಒಂದೇ ಒಂದು ಅವಕಾಶಕ್ಕೋಸ್ಕರ ಅಗಸ್ತ್ಯ ಅವರು ಸಿನಿಮಾದ ಟೆಕ್ನಿಕಲ್ ವಿಭಾಗದಲ್ಲಿ ಕಲಿಕೆ ಕಂಡುಕೊಂಡರು. ಎಲ್ಲಾ ಶ್ರಮದ ಫಲವಾಗಿ ಈಗ ಒಂದು ಸಿನಿಮಾದ ಹೀರೋ ಆಗಿದ್ದಾರೆ. 
ಅಗಸ್ತ್ಯ ಹಾಗೂ ಸುವಾರ್ತಾ ನಾಯಕ ನಾಯಕಿಯಾಗಿದ್ದಾರೆ. ಸದ್ಯ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.ಶ್ರೀ ರತ್ನ ಫಿಲಂ ಕಂಪನಿ ನಿರ್ಮಿಸಿರುವ ಈ ಚೊಚ್ಚಲ ಚಿತ್ರವನ್ನು ಎ ಆರ್ ಕೃಷ್ಣ ನಿರ್ದೇಶಿಸಿದ್ದಾರೆ. ಅಪ್ಪನ ಪಾತ್ರಕ್ಕೆ ಆನಂದ್ ನೀನಾಸಂ ಜೀವ ತುಂಬಿದ್ದು, ಇನ್ನುಳಿದಂತೆ ತಾರಾಗಣದಲ್ಲಿ ಚೇತನ್ ದುರ್ಗಾ, ಬಳ್ಳಾರಿ ಅರ್ಜುನ್, ಸಲೋಮಿ ಡಿಸೋಜ, ಭೂಮಿಕಾ ದೇಶಪಾಂಡೆ, ವಿನಾಯಕ್ ಮುಂತಾದವರು ಇದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ...  ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ಮೂಲಕ "ಮಾಂಕ್ ದಿ ಯಂಗ್" ಜನರ ಮನಸ್ಸಿಗೆ ಹತ್ತಿರವಾಗಿದೆ.   ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ...