Skip to main content

Posts

Showing posts from October, 2025

ರಘು ಕೋವಿ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್ರೂಬಿ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಅನಾವರಣ...

ರಘು ಕೋವಿ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್ ರೂಬಿ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಅನಾವರಣ...  ಇದು ರಘು ಕೋವಿ ಚೊಚ್ಚಲ ಪ್ರಯತ್ನ .. ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ರಘು ಕೋವಿ ಅವರು 'ರೂಬಿ' ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಚೊಚ್ಚಲ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬರಹಗಾರ ಹಾಗೂ ನಿರ್ದೇಶಕ ಚಂದ್ರಚೂಡ್ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು. ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಬಳಿಕ‌ ಬರಹಗಾರ ಹಾಗೂ ನಿರ್ದೇಶಕ ಚಂದ್ರಚೂಡ್ ಮಾತನಾಡಿ, ರೂಬಿ ಕಥೆ ಹಾಗೂ ಚಿತ್ರತಂಡ ಚೆನ್ನಾಗಿದೆ. ಒಳ್ಳೊಳ್ಳೆ ಸಿನಿಮಾ ಬರಬೇಕು. ಈ ಹಿಂದೆ ಹಾಡು ಕೇಳಿಸಿದ. ಆ ಹಾಡು ಸೆನ್ಸೇಷನಲ್ ಕ್ರಿಯೇಟ್ ಮಾಡುತ್ತದೆ. ಲಿರಿಕ್ಸ್ ಹಾಗೂ ಮ್ಯೂಸಿಕ್ ಎಲ್ಲವೂ ಚೆನ್ನಾಗಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು. ನಟ ರಾಮ್ ಗೌಡ ಮಾತನಾಡಿ, ರಘು ಅವರು ಬಂದು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯ್ತು. ನನ್ನ ಪಾತ್ರ ಹಾಗೂ ಇಡೀ ತಂಡ ಚೆನ್ನಾಗಿದೆ. ಆರ್ ಪಿ ಸರ್ ಮ್ಯೂಸಿಕ್ ಮಾಡ್ತಾ ಇರುವುದು ನನಗೆ ಖುಷಿಯಾಯ್ತು. ನಿರ್ಮಾಪಕರು ತುಂಬಾ ಫ್ಯಾಷನೇಟ್ ಆಗಿದ್ದಾರೆ. ಚಿತ್ರಕ್ಕೆ ಏನೂ ಬೇಕು ಎಲ್ಲವನ್ನೂ ಕೊಟ್ಟಿದ್ದಾರೆ ಎಂದರು. ನಿರ್ದೇಶಕ ರಘು ಕೋವಿ ಮಾತನಾಡಿ, ನನ್ನ ಕನಸಿಗೆ...

ಇತಿಹಾಸ ನಿರ್ಮಿಸಿದ 'Kantara Chapter 1'!

ಇತಿಹಾಸ ನಿರ್ಮಿಸಿದ 'Kantara Chapter 1'! • ಕರ್ನಾಟಕದಲ್ಲಿ ₹250 ಕೋಟಿ ಗಡಿ ದಾಟಿದ ಮೊದಲ ಕನ್ನಡ ಚಲನಚಿತ್ರ 'ಕಾಂತಾರ' ({₹268 ಕೋಟಿ+} ಗಳಿಕೆ). ಇದು ಕನ್ನಡ ಚಿತ್ರರಂಗಕ್ಕೆ ಒಂದು ಹೆಮ್ಮೆಯ ಕ್ಷಣ. ಅದ್ವಿತೀಯ ಸಾಧನೆ! • ಕರ್ನಾಟಕದ ಚಲನಚಿತ್ರ ಇತಿಹಾಸದಲ್ಲಿ ₹200 ಕೋಟಿಗೂ ಹೆಚ್ಚು ಗಳಿಕೆ ಕಂಡ ಏಕೈಕ ಚಿತ್ರ 'ಕಾಂತಾರ ಚಾಪ್ಟರ್ 1' ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಜಾಗತಿಕ ಯಶಸ್ಸು! • ವಿಶ್ವಾದ್ಯಂತ ಬಾಕ್ಸ್ ಆಫೀಸ್ ಸಂವೇದನೆ ಮುಂದುವರಿದಿದೆ: • ವಿದೇಶಿ ಮಾರುಕಟ್ಟೆಗಳಲ್ಲಿ (Overseas): {₹116 ಕೋಟಿ+} ಗಳಿಕೆ. • ಒಟ್ಟು ವಿಶ್ವವ್ಯಾಪಿ ಗಳಿಕೆ (Worldwide): {₹867 ಕೋಟಿ+} (2025 ರ ಅತಿ ಹೆಚ್ಚು ಗಳಿಕೆಯ ಚಿತ್ರ).

‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾ.ರಾಜ್‌ಕುಮಾರ್ ಚಿತ್ರಗಳಲ್ಲಿ ಬಳಸಿದ್ದ ಲೆನ್ಸ್‌ಗಳನ್ನು ಮರುಕಳಿಸಿದೆ..

‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾ.ರಾಜ್‌ಕುಮಾರ್ ಚಿತ್ರಗಳಲ್ಲಿ ಬಳಸಿದ್ದ ಲೆನ್ಸ್‌ಗಳನ್ನು ಮರುಕಳಿಸಿದೆ.. '666 ಆಪರೇಷನ್ ಡ್ರೀಮ್ ಥಿಯೇಟರ್'ನಲ್ಲಿ ಅಣ್ಣಾವ್ರ ಚಿತ್ರಗಳಲ್ಲಿ‌ ಬಳಸಿದ್ದ ಲೆನ್ಸ್ ಬಳಕೆ.. ಹೇಮಂತ್ ಎಂ ರಾವ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ 1970ರ ದಶಕದ ಚಿತ್ರಗಳಲ್ಲಿ ಬಳಸುತ್ತಿದ್ದ ವಸ್ತ್ರ ವಿನ್ಯಾಸದಿಂದ ಹಿಡಿದು ಆ ಕಾಲದ ಲೆನ್ಸ್‌ಗಳನ್ನೂ ಬಳಸಿ ಚಿತ್ರವನ್ನು ಚಿತ್ರೀಕರಿಸುತ್ತಿದೆ. 1970–1980ರ ದಶಕದಲ್ಲಿ ಡಾ.ರಾಜ್‌ಕುಮಾರ್ ಅವರ ಅನೇಕ ಚಿತ್ರಗಳಲ್ಲಿ ಪರಿಚಯಿಸಲಾದ ‘ವಿಂಟೇಜ್ ಲೊಮೋಸ್’ ಕ್ಯಾಮೆರಾವನ್ನು ಬಳಸಿ ಚಿತ್ರವನ್ನು ಚಿತ್ರೀಕರಿಸಿರುವ ತಂಡ ಈಗಾಗಲೇ ಎರಡು ಹಂತಗಳ ಶೂಟಿಂಗ್‌ನ್ನು ಪೂರ್ಣಗೊಳಿಸಿದೆ. ತಂಡವು ಲೆನ್ಸ್ ಆಯ್ಕೆಗಾಗಿ ಚೆನ್ನೈ, ಮುಂಬೈ ಅಲ್ಲದೆ, ಬೆಂಗಳೂರಿನಲ್ಲೂ ಹುಡುಕಾಟ ನೆಡೆಸಿದೆ . “ಪ್ರತಿಯೊಂದು ಶಾಟ್, ಬೆಳಕು, ಸೆಟ್ ಎಲ್ಲವೂ ಅಣ್ಣಾವ್ರ ಬಾಂಡ್ ಚಿತ್ರಗಳಾದ ‘ಆಪರೇಷನ್ ಡೈಮಂಡ್ ರಾಕೆಟ್’ ಮತ್ತು ‘ಜೇಡರ ಬಲೆ’ ಚಿತ್ರಗಳ ತರ ಕಾಣ್ಬೇಕು ಅನ್ನೋದು ಆರಂಭದಿಂದಲೇ ಚಿತ್ರತಂಡಕ್ಕೆ ಸ್ಪಷ್ಟವಾಗಿ ಗೊತ್ತಿತ್ತು” ಎಂದು ಈ ಚಿತ್ರದ ಛಾಯಾಗ್ರಾಹಕರಾದ ಅದ್ವೈತ್ ಗುರುಮೂರ್ತಿ ಅವರು ಹೇಳಿದರು. ‘666 ಆಪರೇಷನ್ ಡ್ರೀಮ್ ಥಿಯೇಟರ್’ಗಾಗಿ ನಾವು 1970ರ ದಶಕದ ಡಾ. ರಾಜ್‌ಕುಮಾರ್ ಬಾಂಡ್‌ ಚಿತ್ರಗಳಂತೆಯೇ ವಿಶಿಷ್ಟವಾದ ಲುಕ್‌ ಇ...

ಬೆಟ್ಟಿಂಗ್ ಕಥೆಯ ಬ್ರ್ಯಾಟ್ ಸಿನಿಮಾ. ಮನ ಗೆದ್ದ ಡಾರ್ಲಿಂಗ್ ಕೃಷ್ಣ! ನಿರ್ದೇಶಕ ಶಶಾಂಕ್..

🎬 ಬೆಟ್ಟಿಂಗ್ ಕಥೆಯ ಬ್ರ್ಯಾಟ್ ಸಿನಿಮಾ. ಮನ ಗೆದ್ದ ಡಾರ್ಲಿಂಗ್ ಕೃಷ್ಣ! ಚಿತ್ರ: ಬ್ರ್ಯಾಟ್ ನಿರ್ದೇಶನ: ಶಶಾಂಕ್ ನಿರ್ಮಾಣ: ಡಾಲ್ಫಿನ್ ಎಂಟರ್ಟೈನ್ಮೆಂಟ್ ತಾರಾಗಣ: ಡಾರ್ಲಿಂಗ್ ಕೃಷ್ಣ, ಮನೀಷಾ ಕಂದ್ಕೂರ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮೊದಲಾದವರು --- ಡಾರ್ಲಿಂಗ್ ಕೃಷ್ಣ ಮತ್ತು ನಿರ್ದೇಶಕ ಶಶಾಂಕ್ — ಈ ಯಶಸ್ವಿ ಜೋಡಿ ಮತ್ತೆ ಒಂದಾಗಿರುವುದು ಚಿತ್ರರಂಗದ ಅಭಿಮಾನಿಗಳಿಗೆ ಸಿಹಿ ಸುದ್ದಿ. ಸದಭಿರುಚಿಯ ಪ್ರೇಮ ಕಥೆಗಳಿಂದ ಮೆಚ್ಚುಗೆ ಪಡೆದ ಈ ಇಬ್ಬರು, ಈಗ “ಬ್ರ್ಯಾಟ್” ಮೂಲಕ ಹೊಸ ರಂಗಭೂಮಿಗೆ ಕಾಲಿಟ್ಟಿದ್ದಾರೆ. ಈ ಬಾರಿ ಅವರು ಕ್ರಿಕೆಟ್ ಬೆಟ್ಟಿಂಗ್‌ನ ಅಖಾಡದಲ್ಲಿ ‘ಸಿಕ್ಸರ್’ ಬಾರಿಸಿದ್ದಾರೆ ಎನ್ನಬಹುದು! --- 🎭 ಕಥೆ ಮತ್ತು ನಿರೂಪಣೆ ಬಾಲ್ಯದಿಂದಲೇ ಹಣದ ಮಾಯೆಯಲ್ಲಿ ಸಿಲುಕಿದ ಕೃಷ್ಣ, ಜೀವನದ ಸತ್ಯಕ್ಕಿಂತ ಹಣದ ಸಿಹಿಯನ್ನು ಹೆಚ್ಚಾಗಿ ಅನುಭವಿಸುವ ವ್ಯಕ್ತಿ. ಯುವಕನಾದ ಮೇಲೆ “ಕ್ರಿಸ್ಟಿ” ಎನ್ನುವ ಹೆಸರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಲೋಕಕ್ಕೆ ಕಾಲಿಡುತ್ತಾನೆ. ಆದರೆ ಈ ಕ್ರೀಡೆ ಕೇವಲ ಹಣದ ಆಟವಲ್ಲ — ಜೀವನದ ಆಟವಾಗುತ್ತದೆ. ತಂದೆ ಮಹಾದೇವ (ಅಚ್ಯುತ್ ಕುಮಾರ್) — ಪ್ರಾಮಾಣಿಕ ಪೊಲೀಸ್ ಕಾನ್‌ಸ್ಟೇಬಲ್. ಮಗ ತಪ್ಪು ದಾರಿ ಹಿಡಿಯಬಾರದೆಂದು ಹೋರಾಡುವ ತಂದೆಯ ಹೃದಯದಲ್ಲಿ ನೋವು, ಕ್ರಿಸ್ಟಿಯ ಮನಸ್ಸಿನಲ್ಲಿ ವಿರೋಧ — ಇವುಗಳ ಮಧ್ಯೆ ನಡೆಯುವ ನಂಟು–ಘರ್ಷಣೆಗಳ ಆಟವೇ ಚಿತ್ರದ ಹೃದಯ. ಕೊನೆಯ...

ಹೊಂಬಾಳೆ ಫಿಲಂಸ್‌ನ 'ಕಾಂತಾರ ಚಾಪ್ಟರ್ 1': ೨೦೨೫ರ ಅತಿ ದೊಡ್ಡ ಗೆಲುವು, ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಕೊಡುಗೆ!

ಹೊಂಬಾಳೆ ಫಿಲಂಸ್‌ನ 'ಕಾಂತಾರ ಚಾಪ್ಟರ್ 1': ೨೦೨೫ರ ಅತಿ ದೊಡ್ಡ ಗೆಲುವು, ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಕೊಡುಗೆ!  ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಹಾಗೂ ಹೊಂಬಾಳೆ ಫಿಲಂಸ್ ನಿರ್ಮಿಸಿರುವ 'ಕಾಂತಾರ ಚಾಪ್ಟರ್ 1' ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದು, ಭಾರತದಾದ್ಯಂತ ತನ್ನ ಅಬ್ಬರವನ್ನು ಮುಂದುವರೆಸಿದೆ. ಬರೀ ಕರ್ನಾಟಕದಲ್ಲಿಯೇ ₹೨೫೦ ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ, ಈ ಚಿತ್ರವು ಇತಿಹಾಸ ಸೃಷ್ಟಿಸಿದ್ದು, ೨೦೨೫ರ ಅತಿ ದೊಡ್ಡ ಯಶಸ್ಸು ಕಂಡ ಚಲನಚಿತ್ರವಾಗಿ ಹೊರಹೊಮ್ಮಿದೆ. ಕನ್ನಡ ಚಿತ್ರರಂಗಕ್ಕೊಂದು ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಕರ್ನಾಟಕದ ಹೆಮ್ಮೆಯ ಹಬ್ಬವಾದ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ, ಹೊಂಬಾಳೆ ಫಿಲಂಸ್ ಒಂದು ವಿಶೇಷ ಕೊಡುಗೆಯನ್ನು ಘೋಷಿಸಿದೆ: ನಾಳೆಯಿಂದಲೇ (ಅಂದರೆ ಅಕ್ಟೋಬರ್ ೩೧ ರಿಂದ), ಕಾಂತಾರ ಚಾಪ್ಟರ್ 1 ಸಿನಿಮಾದ ಟಿಕೆಟ್ ದರಗಳು ಈ ಕೆಳಗಿನಂತಿವೆ: • ಸಿಂಗಲ್ ಸ್ಕ್ರೀನ್‌ಗಳಲ್ಲಿ (ಏಕಪರದೆ): ಕೇವಲ ₹99/- • ಮಲ್ಟಿಪ್ಲೆಕ್ಸ್‌ಗಳಲ್ಲಿ: ₹150/- ಅಕ್ಟೋಬರ್ ೨, ೨೦೨೫ ರಂದು ಬಿಡುಗಡೆಯಾದ ಈ ಸಿನಿಮಾ, ತನ್ನ ಮಣ್ಣಿನ ಕಥೆ, ಅದ್ಭುತ ದೃಶ್ಯ ವೈಭವ ಹಾಗೂ ಶಕ್ತಿಯುತ ಅಭಿನಯದಿಂದ ಪ್ರೇಕ್ಷಕರ ಮನಸ್ಸನ್ನು ಗೆದ್ದಿದೆ. ಈ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಕರ್ನಾಟಕದ ಅಭಿಮಾನಿಗಳು ಕಡಿಮೆ ಬೆಲೆಯಲ್ಲಿ, ನಮ್ಮ ನಾಡಿನ...

ಮಹಾಕಾಳಿಯಾದ ಭೂಮಿ ಶೆಟ್ಟಿ..ಲೇಡಿ ಸೂಪರ್‌ ಹೀರೋ ಕಥೆ ಹೇಳಲಿದ್ದಾರೆ ಪ್ರಶಾಂತ್‌ ವರ್ಮಾ...

ಮಹಾಕಾಳಿಯಾದ ಭೂಮಿ ಶೆಟ್ಟಿ.. ಲೇಡಿ ಸೂಪರ್‌ ಹೀರೋ ಕಥೆ ಹೇಳಲಿದ್ದಾರೆ ಪ್ರಶಾಂತ್‌ ವರ್ಮಾ... ಹನುಮಾನ್ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಪ್ರಶಾಂತ್ ವರ್ಮಾ ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಜೈ ಹನುಮಾನ್ ಜೊತೆಗೆ ಬಾಲಯ್ಯನ ಸುಪುತ್ರ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದರ ಬೆನ್ನಲ್ಲೇ ಸೂಪರ್‌ಹೀರೋ ಯೂನಿವರ್ಸ್‌ನ ಮೂರನೇ ಸಿನಿಮಾ ಘೋಷಣೆ ಮಾಡಿದ್ದಾರೆ ನಿರ್ದೇಶಕ ಪ್ರಶಾಂತ್‌ ವರ್ಮಾ. ಇದು ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಕಥೆಯನ್ನು ಹೊಂದಿರಲಿದೆ. ಈ ಚಿತ್ರಕ್ಕೆ ಮಹಾಕಾಳಿ ಎಂಬ ಶೀರ್ಷಿಕೆಯನ್ನೂ ಇಟ್ಟಿದ್ದಾರೆ. ಇದೀಗ ಈ ಚಿತ್ರದ‌ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ. ಪ್ರಶಾಂತ್ ವರ್ಮಾ ಕಥೆಯಲ್ಲಿ ಕನ್ನಡದ ಭೂಮಿ‌ ಶೆಟ್ಟಿ.. ಕುಂದಾಪುರದ ಬೆಡಗಿಗೆ ಭೂಮಿ ಶೆಟ್ಟಿ ಮಹಾಕಾಳಿ ಅವತಾರವೆತ್ತಿದ್ದಾರೆ.‌ ಫಸ್ಟ್ ಲುಕ್ ನಲ್ಲಿ ಭೂಮಿ‌ ಶೆಟ್ಟಿ ಮುಖವನ್ನು ಕೆಂಪು ಹಾಗೂ ಗೋಲ್ಡ್ ಬಣ್ಣದಿಂದ ಅಲಂಕಾರಗೊಳಿಸಲಾಗಿದೆ. ಸಾಂಪ್ರದಾಯಿಕ ಆಭರಣಗಳನ್ನು ತೊಟ್ಟು ದೈವಿಕ ಅನುಭವ ನೀಡುವ ಗೆಟಪ್ ನಲ್ಲಿ‌ ಭೂಮಿ ಕಾಣಿಸಿಕೊಂಡಿದ್ದಾರೆ. ಪ್ರಶಾಂತ್ ವರ್ಮಾ ತಮ್ಮದೇ ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಅಡಿ ಮಹಾಕಾಳಿ ಚಿತ್ರ ಮಾಡುತ್ತಿದ್ದಾರೆ. ಮಹಾಕಾಳಿ ಸಿನಿಮಾಗೆ ಪ್ರಶಾಂತ್ ಕಥೆ ಬರೆದಿದ್ದು, ಮಹಿಳಾ ನಿರ್ದೇಶಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವು...

ತನುಷ್ ಶಿವಣ್ಣ ಅಭಿನಯದ "ಬಾಸ್" ಚಿತ್ರಕ್ಕೆ ಚಿತ್ರೀಕರಣ ಪೂರ್ಣ .

ತನುಷ್ ಶಿವಣ್ಣ ಅಭಿನಯದ "ಬಾಸ್" ಚಿತ್ರಕ್ಕೆ ಚಿತ್ರೀಕರಣ ಪೂರ್ಣ .            ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ "ಬಾಸ್" ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   "ಬಾಸ್", ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ. ಕೆಲವೇ ದಿನಗಳಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಡಿಸೆಂಬರ್ ನಲ್ಲಿ ತೆರೆಗೆ ತರುವ ಪ್ರಯತ್ನ ನಡೆಯತ್ತಿದೆ. ತನುಷ್ ಶಿವಣ್ಣ ಚಿತ್ರದ ನಾಯಕನಾಗಿ ನಟಿಸಿದ್ದು, ಮೋನಿಕಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. "ಬಾಸ್" ಚಿತ್ರಕ್ಕೆ "ಸತ್ಯಮೇವ ಜಯತೇ" ಎಂಬ ಅಡಿಬರಹವಿದೆ. ಡೆವಿ ಸುರೇಶ್ ಸಂಗೀತ ನಿರ್ದೇಶನ, ಶರತ್ ಎನ್ ಆರ್ ಪುರ ಛಾಯಾಗ್ರಹಣ, ಮಹೇಶ್ ರೆಡ್ಡಿ ಸಂಕಲನ ಹಾಗೂ ಮಂಜುನಾಥ್ ಮತ್ತು ತೀರ್ಥ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ವಿ.ಲವ ತಿಳಿಸಿದರು.  ಇದು ನಾನು ನಾಯಕನಾಗಿ ನಟಿಸಿರುವ ಐದನೇ ಚಿತ್ರ ಎಂದು ಮಾತನಾಡಿದ ನಾಯಕ ತನುಷ್ ಶಿವಣ್ಣ, ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನ...

ಮೆಜೆಸ್ಟಿಕ್-2 ಚಿತ್ರಕ್ಕೆU/A ನವೆಂಬರ್ ಬಿಡುಗಡೆ..

ಮೆಜೆಸ್ಟಿಕ್-2 ಚಿತ್ರಕ್ಕೆU/A   ನವೆಂಬರ್ ಬಿಡುಗಡೆ.. ‌‌‌ ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ ಕೋಟೆನಾಡು ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ಅದ್ದೂರಿಯಾಗಿ ನಿರ್ಮಿಸಿರುವ ಚಿತ್ರ ಮೆಜೆಸ್ಟಿಕ್-2. ಹಿರಿಯ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯನಟಿ ಶೃತಿ ಅವರು ನಾಯಕನ ತಾಯಿ ಪಾತ್ರವನ್ನು ನಿಭಾಯಿಸಿದ್ದಾರೆ.   ಈಗಾಗಲೇ ಶೂಟಿಂಗ್ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರವನ್ನು ಬರುವ ನವೆಂಬರ್ ನಲ್ಲಿ ರಿಲೀಸ್ ಮಾಡಲು ನಿರ್ಮಾಪಕರು ಸಿದ್ದತೆ ಮಾಡಿಕೊಂಡಿದ್ದಾರೆ‌. ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ U/A ಸರ್ಟಿಫಿಕೇಟ್ ನೀಡಿದೆ. ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಯುವನಟ ಭರತ್ ಕುಮಾರ್, ಸಂಹಿತಾ ವಿನ್ಯಾ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ, ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ಮೆಜೆಸ್ಟಿಕ್-2 ಚಿತ್ರದಲ್ಲಿ ನಿರ್ದೇಶಕ ರಾಮು ಹೇಳಹೊರಟಿದ್ದಾರೆ.      ಈ ಚಿತ್ರಕ್ಕೆ ಬೆಂಗಳೂರಿನ ಮೆಜಸ್ಟಿಕ...

ನವೆಂಬರ್ 28ಕ್ಕೆ ಬೆಳ್ಳಿತೆರೆಗೆ ಅಪ್ಪಳಿಸಲಿರುವ ಓ.ಎಲ್.ಸಿ (ಅಪರೇಷನ್ ಲಂಡನ್ ಕೆಫೆ)!

ನವೆಂಬರ್ 28ಕ್ಕೆ ಬೆಳ್ಳಿತೆರೆಗೆ ಅಪ್ಪಳಿಸಲಿರುವ ಓ.ಎಲ್.ಸಿ (ಅಪರೇಷನ್ ಲಂಡನ್ ಕೆಫೆ)! ಸಿನಿಪ್ರಿಯರ ಬಹಳ ನಿರೀಕ್ಷೆಯ ಅಪರೇಷನ್ ಲಂಡನ್ ಕೆಫೆ ಚಿತ್ರದ ಬಿಡುಗಡೆಯ ದಿನಾಂಕದ ಕೌಂಟ್ಡೌನ್ ಈಗಾಗಲೇ ಶುರುವಾಗಿದೆ. ಇದೇ ಬರುವ ನವೆಂಬರ್ 28ಕ್ಕೆ ಚಿತ್ರ ಬಿಡುಗಡೆಯಾಗುವ ಸಿಹಿ ಸುದ್ಧಿಯನ್ನು ಚಿತ್ರತಂಡ ಪೋಸ್ಟರ್ ಬಿಡುಗಡೆಯ ಮೂಲಕ ಹಂಚಿಕೊಂಡಿದೆ. ಉಡುಪಿ ಮೂಲದ ಇಂಡಿಯನ್ ಫಿಲಂ ಫ್ಯಾಕ್ಟರಿ, ಮರಾಠಿಯ ದೀಪಕ್ ರಾಣೆ ಫಿಲಂಸ್ ಲಾಂಛನದ ಅಡಿಯಲ್ಲಿ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ನಿರ್ಮಾಣ ಮಾಡಿರುವ ಈ ಚಿತ್ರ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗುವ ತರಾತುರಿಯಲ್ಲಿದೆ. ತನ್ನ ಮೊದಲ ಚಿತ್ರ ‘ಜಿಲ್ಕಾ’ ದ ಮೂಲಕ ಲವರ್ ಕಮ್ ಚಾಕಲೇಟ್ ಬಾಯ್ ಆಗಿ ಚಿತ್ರ ರಸಿಕರ ಗಮನ ಸೆಳೆದಿದ್ದ ಕವೀಶ್ ಶೆಟ್ಟಿ ‘ಅಪರೇಷನ್ ಲಂಡನ್ ಕೆಫೆ’ ಯ ಮಾಸ್ ಕಮ್ ಅಕ್ಷನ್ ಪೋಸ್ಟರ್ ಮತ್ತು ಟೀಸರ್ ಮೂಲಕ ಚಿತ್ರರಂಗಕ್ಕೆ ಒಬ್ಬ ಪ್ರತಿಭಾವಂತ ನಟನಾಗುವ ಎಲ್ಲಾ ಭರವಸೆಯನ್ನು ನೀಡಿದ್ದಾರೆ. ಇವರಿಗೆ ಜೊತೆಯಾಗಿ ಕನ್ನಡಿಗರ ಮನೆ ಮಾತಿನ ಬೆಡಗಿ ಮೇಘಾ ಶೆಟ್ಟಿ ಕುತೂಹಲ ಮೂಡಿಸುವ ತಮ್ಮ ಅಪ್ಪಟ ಹಳ್ಳಿ ಸೊಗಡಿನ ಹೈಸ್ಕೂಲು ಹುಡುಗಿಯ ಗೆಟಪ್ಪಿನಲ್ಲಿ ಮಿಂಚುತ್ತಿದ್ದಾರೆ. ತಮ್ಮ ಟೆರ್ರರ್ ಲುಕ್ ಮೂಲಕ ಮರಾಠಿಯ ಶಿವಾನಿ ಸುರ್ವೆ, ವಿರಾಟ್ ಮಡ್ಕೆ ತೆರೆ ಹಂಚಿಕೊಂಡಿದ್ದರೆ ...

ವೆಂಕಟ್ ಭರದ್ವಾಜ್ ನಿರ್ದೇಶನದ “ಹೇ ಪ್ರಭು” – ನವೆಂಬರ್ 7 ರಂದು ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಯಾಗಲಿದೆ!

ವೆಂಕಟ್ ಭರದ್ವಾಜ್ ನಿರ್ದೇಶನದ “ಹೇ ಪ್ರಭು” – ನವೆಂಬರ್ 7 ರಂದು ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಯಾಗಲಿದೆ! ಮನರಂಜನೆಯ ಜೊತೆಗೆ ಬಲವಾದ ಸಾಮಾಜಿಕ ಸಂದೇಶವಿರುವ ಕಾಮಿಡಿ ಎಂಟರ್ಟೈನರ್ ಡಾ ಸುಧಾಕರ್ ಶೆಟ್ಟಿ ಈ ಚಿತ್ರವನ್ನು ಅರ್ಪಿಸುತ್ತಿದ್ದು , ಅಮೃತ ಫಿಲಂ ಸೆಂಟರ್ ಮತ್ತು ೨೪ ರೀಲ್ಸ್ ಸಂಸ್ಥೆ ಜೊತೆಗೂಡಿ ನಿರ್ಮಿಸಿದೆ  ಸಾಮಾಜಿಕ ಅರ್ಥಪೂರ್ಣ ವಿಷಯಗಳನ್ನು ಜನಪ್ರಿಯ ಶೈಲಿಯಲ್ಲಿ ಚಿತ್ರಿಸುವ ಖ್ಯಾತ ನಿರ್ದೇಶಕ ವೆಂಕಟ್ ಭರದ್ವಾಜ್, ತಮ್ಮ ಹೊಸ ಚಿತ್ರ “ಹೇ ಪ್ರಭು” ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಮನರಂಜನೆ, ವ್ಯಂಗ್ಯ ಮತ್ತು ಸಮಾಜದ ಬಲವಾದ ಸಂದೇಶಗಳನ್ನು ಒಟ್ಟುಗೂಡಿಸಿರುವ ಈ ಚಿತ್ರವು ನವೆಂಬರ್ 7, 2025 ರಂದು ಕರ್ನಾಟಕದಾದ್ಯಂತ ಹಾಗೂ ವಿದೇಶಗಳಲ್ಲಿಯೂ ಭವ್ಯವಾಗಿ ಬಿಡುಗಡೆಯಾಗಲಿದೆ. ಅಮೃತ ಫಿಲ್ಮ್ ಸೆಂಟರ್ ನಿರ್ಮಿಸಿರುವ ಹೇ ಪ್ರಭು ಒಂದು ಕಾಮಿಡಿ ಎಂಟರ್ಟೈನರ್, ಆದರೆ ಅದರ ಅಡಿಯಲ್ಲಿ ಭಾರತದ ಔಷಧಿ ಮತ್ತು ವೈದ್ಯಕೀಯ ಕ್ಷೇತ್ರದ ಅಜ್ಞಾತ ಮತ್ತು ಕತ್ತಲು ಮುಖಗಳನ್ನು ಅನಾವರಣಗೊಳಿಸುವ ಗಂಭೀರ ಅಂಶವಿದೆ. ಔಷಧಿ ಕಂಪನಿಗಳ ಲಾಬಿ, ನಕಲಿ ಔಷಧ ಮಾರಾಟ ಮತ್ತು ಕಾರ್ಪೊರೇಟ್ ಲಾಭದ ಹಂಬಲ — ಇವುಗಳ ಪರಿಣಾಮ ಹೇಗೆ ಜನರ ಆರೋಗ್ಯದ ಮೇಲೆ ಬಾಧೆ ಉಂಟುಮಾಡುತ್ತದೆ ಎಂಬುದನ್ನು ಚಿತ್ರ ಮನರಂಜನೆಯ ಹಾಸ್ಯ, ಭಾವನೆ ಮತ್ತು ವಾಸ್ತವಿಕ ಪಾತ್ರಗಳ ಮೂಲಕ ತೋರಿಸುತ್ತದೆ. ಇ...

ನಿರೀಕ್ಷೆ ಹೆಚ್ಚಿಸಿದ ಲವ್ ಯು ಮುದ್ದು ಟ್ರೇಲರ್..

ನಿರೀಕ್ಷೆ ಹೆಚ್ಚಿಸಿದ ಲವ್ ಯು ಮುದ್ದು ಟ್ರೇಲರ್.. ನವೆಂಬರ್ 7ಕ್ಕೆ ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕರ ಹೊಸ ಚಿತ್ರ.. ಕುತೂಹಲ ಹೆಚ್ಚಿಸಿದ ಲವ್ ಯು ಮುದ್ದು ಟ್ರೇಲರ್.. ಇದು ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕರ ಹೊಸ ಪ್ರಯತ್ನ.. ಪ್ರೀತಿಯನ್ನು ಪಡೆದುಕೊಳ್ಳುವ ಶಕ್ತಿ ಇಲ್ಲದೇ ಇದ್ರೆ ಪ್ರೀತಿ ಮಾಡಬಾರದು ಎಂಬ ಎಳೆಯನ್ನು ಇಟ್ಕೊಂಡು ಬರ್ತಿರುವ ಸಿನಿಮಾ ಲವ್ ಯು ಮುದ್ದು. ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕ ಕುಮಾರ್ ಅವರ ಹೊಸ ಪ್ರಯತ್ನದ ಈ ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 7ರಂದು ಲವ್ ಯು ಮುದ್ದು ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿರ್ಮಾಪಕರು ಹಾಗೂ ಖ್ಯಾತ ಛಾಯಾಗ್ರಹಕ ಜೆ ಜಿ ಕೃಷ್ಣ, ನಟಿ ಸಂಜನಾ ಆನಂದ್ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಟ್ರೇಲರ್ ಬಿಡುಗಡೆ ಬಳಿಕ ಖ್ಯಾತ ಛಾಯಾಗ್ರಹಕ ಜೆಜಿ ಕೃಷ್ಣ ಮಾತನಾಡಿ, ಟ್ರೇಲರ್ ನೋಡಿದಾಗ ಹೀರೋ, ಹೀರೋಯಿನ್ ಚೆನ್ನಾಗಿ ನಟಿಸಿದ್ದಾರೆ. ‌ ಡೈರೆಕ್ಟರ್ ಹಾಗೂ ಕ್ಯಾಮೆರಾ ಮೆನ್ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಟ್ರೇಲರ್ ನೋಡಿದಾಗ ಸಿನಿಮಾ ಅದ್ಭುತವಾಗಿ ಇರಲಿದೆ ಎಂಬ ನಂಬಿಕೆ ಇದೆ. ನಿಮ್ಮ ಚಿತ್ರದ ಪ್ರತಿ ಫ್ರೇಮ್ ಸುಂದರವಾಗಿ ಇದೆ. ನಿರ...

ಈ ವಾರ ತೆರೆಗೆ ಬಹು ನಿರೀಕ್ಷಿತ "ಬ್ರ್ಯಾಟ್"(BRAT)...

ಈ ವಾರ ತೆರೆಗೆ ಬಹು ನಿರೀಕ್ಷಿತ "ಬ್ರ್ಯಾಟ್"(BRAT)...       ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ " ಬ್ರ್ಯಾಟ್" ಚಿತ್ರ ಈ ವಾರ ಅಕ್ಟೋಬರ್ 31 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಯಶಸ್ವಿ"ಕೌಸಲ್ಯ ಸುಪ್ರಜಾ ರಾಮ" ಚಿತ್ರದ ನಂತರ ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದಿರುವ "ಬ್ರ್ಯಾಟ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಜನರ ಮನ ಗೆದ್ದಿದೆ. ಟೀಸರ್ ಹಾಗೂ ಟ್ರೇಲರ್ ಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ಕೃಷ್ಣ ಅವರ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರದಲ್ಲಿದ್ದಾರೆ.  "ಫಸ್ಟ್ Rank ರಾಜು" ಚಿತ್ರದ ನಂತರ ಮಂಜುನಾಥ್ ವಿ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಮನಿಶಾ ಕಂದಕೂರ್ ನಟಿಸಿದ್ದಾರೆ. ಅಚ್ಯುತಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.  ಅರ್ಜುನ್ ಜನ್ಯ...

ನವೆಂಬರ್ 14 ರಂದು ಉತ್ತಮ ಸಂದೇಶ ಹೊತ್ತು ಬರಲಿದ್ದಾರೆ "kite ಬ್ರದರ್ಸ್"..

ನವೆಂಬರ್ 14 ರಂದು ಉತ್ತಮ ಸಂದೇಶ ಹೊತ್ತು ಬರಲಿದ್ದಾರೆ "kite ಬ್ರದರ್ಸ್"..  ಭಜರಂಗ ಸಿನೆಮಾ ಲಾಂಛನದಲ್ಲಿ ಮಂಜುನಾಥ್ ಬಿ.ಎಸ್, ರಜನಿಕಾಂತ್ ರಾವ್ ಹಾಗೂ ಮಂಜುನಾಥ್ ಬಗಾಡೆ ನಿರ್ಮಿಸಿರುವ ಹಾಗೂ ವಿರೇನ್ ಸಾಗರ್ ಬಗಾಡೆ ನಿರ್ದೇಶಿಸಿರುವ "KITE ಬ್ರದರ್ಸ್" ಚಿತ್ರ ನವೆಂಬರ್ 14ರಂದು ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   "kite ಬ್ರದರ್ಸ್" ಮಕ್ಕಳ ಚಿತ್ರವಾದರೂ, ಎಲ್ಲಾ ವಯಸ್ಸಿನವರೂ ನೋಡಬೇಕಾದ ಉತ್ತಮ ಸಂದೇಶವಿರುವ ಚಿತ್ರ ಎಂದು ಮಾತನಾಡಿದ ನಿರ್ದೇಶಕ ವಿರೇನ್ ಸಾಗರ್ ಬಗಾಡೆ, ಹಳೆಯ ಸರ್ಕಾರಿ ಶಾಲೆಗಳನ್ನು ಸರ್ಕಾರವೇ ದುರಸ್ತಿ ಮಾಡಿಸಲಿ ಎಂದು ಸಮಾಜ ಕಾಯಬಾರದು. ಆ ಶಾಲೆಯಲ್ಲಿ ಕಲಿತವರು ಸಶಕ್ತರಾಗಿ ಬದುಕು ರೂಪಿಸಿಕೊಂಡಾಗ ಆ ಶಾಲೆಯ ನಿಸ್ಸಹಾಯಕ ಉಪಾಧ್ಯಯರ ಬೆಂಬಲಕ್ಕೆ ನಿಂತು ಆ ಶಾಲೆಯನ್ನು ಸರಿಪಡಿಸಿ ಮುಂದಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ಈ ರೀತಿ ಮನಸ್ಸಿನ ಜನರು ನಮ್ಮ ಸುತ್ತ ಸಾಕಷ್ಟು ಜನರು ಇದ್ದಾರೆ. ಇದೇ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ಚಿತ್ರದ ಕಥೆ ಹೆಣೆಯಲಾಗಿದೆ. ಇನ್ನು ಶೀರ್ಷಿಕೆಯ ಬಗ್ಗೆ ಹೇಳಬೇಕಾದರೆ, ರೈಟ್ ಬ್ರದರ್ಸ್ ಅವರು ಫ್ಲೈಟ್ ಇಂಜಿನಿಯರಿಂಗ್ ನಲ್ಲಿ ಆವಿಷ್ಕಾರ ಮಾಡಿದರೆ ಇಲ್ಲಿ ಇಬ್ಬರು ವಿದ್ಯಾರ್ಥಿಗಳು ದೂರದ ಅಹಮದಾಬಾದ್ ನಲ್ಲಿ ನಡೆಯುವ ಗ...

21 ನೇ ಕಲಾಕಾರ್ ಪುರಸ್ಕಾರಕ್ಕೆ ನಟˌ ನಿರ್ದೇಶಕ ಕಾಸರಗೋಡು ಚಿನ್ನಾ ಆಯ್ಕೆ..

21 ನೇ ಕಲಾಕಾರ್ ಪುರಸ್ಕಾರಕ್ಕೆ ನಟˌ ನಿರ್ದೇಶಕ ಕಾಸರಗೋಡು ಚಿನ್ನಾ ಆಯ್ಕೆ.. ಕುಂದಾಪುರದ ಕಾರ್ವಾಲ್ ಮನೆತನ ಹಾಗೂ ಮಾಂಡ್ ಸೊಭಾಣ್ ಜಂಟಿಯಾಗಿ, ಕೊಂಕಣಿ ಕಲೆ, ಸಂಸ್ಕೃತಿಗೆ ಮಹತ್ತರ ಕೊಡುಗೆ ನೀಡಿದ ಕಲಾವಿದರನ್ನು ಗೌರವಿಸಲು ನೀಡುವ 21 ನೇ ವರ್ಷದ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ ಇವರನ್ನು ಆಯ್ಕೆ ಮಾಡಲಾಗಿದೆ. 2025 ನವೆಂಬರ್ 02 ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 6.00 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ರೂ. 50,000/- ನಗದು ಒಳಗೊಂಡ ಈ ಪುರಸ್ಕಾರವನ್ನು ಪ್ರದಾನ ಮಾಡಲಿರುವರು. ಭಾಷಾ ತಜ್ಞ ಡೊ ಪ್ರತಾಪ್ ನಾಯ್ಕ್, ಮತ್ತು ಮಸ್ಕತ್ ನಲ್ಲಿರುವ ಉದ್ಯಮಿ ಹಾಗೂ ಶ್ರೇಷ್ಟ ಕಲಾಪ್ರೋತ್ಸಾಹಕ ಸ್ಟ್ಯಾನ್ಲಿ ಫೆರ್ನಾಂಡಿಸ್ (ದಾಟ್ಟು) ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಶ್ರೀನಿವಾಸ ರಾವ್ ಎಸ್. (68) ಕಾಸರಗೋಡು ಚಿನ್ನಾ ಎಂದು ರಂಗಲೋಕದಲ್ಲಿ ಪ್ರಸಿದ್ಧರು. ನಟನೆಯಲ್ಲಿ ಚಿನ್ನದ ಪದಕದೊಡನೆ ಡಿ ಎಫ್ ಎ ಪದವಿ ಪಡೆದಿದ್ದಾರೆ. 1969 ರಲ್ಲಿ ರಂಗ ಪ್ರವೇಶ ಮಾಡಿದ ಇವರು ಕೊಂಕಣಿ, ಕನ್ನಡ, ತುಳು, ಮಲಯಾಳಂ ಹಾಗೂ ಇಂಗ್ಲೀಷಿನ 400ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಹಲವು ನಾಟಕಗಳಿಗೆ ನಿರ್ದೇಶನ ನೀಡಿದ್ದಾರೆ. ಭಾಷಾಂತರ ಮಾಡಿದ್ದಾರೆ. ಆಕಾಶವಾಣಿಯಲ್ಲಿ, ದೂರದರ್ಶನದಲ್ಲಿ ತ...

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ರಕ್ಕಿ" ಚಿತ್ರಕ್ಕೆ ಚಾಲನೆ...

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ರಕ್ಕಿ" ಚಿತ್ರಕ್ಕೆ ಚಾಲನೆ... ನಾಯಕನ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ.. ಅಶ್ವಿನಿ ಪುನೀತ್ ರಾಜಕುಮಾರ್ ಅವರ ಆಶೀರ್ವಾದದೊಂದಿಗೆ, ಎಸ್ ಎನ್ ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಾಲಿಗ್ರಾಮ ಸುರೇಶ್ ಅವರು ನಿರ್ಮಿಸುತ್ತಿರುವ, ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ರಕ್ಕಿ ನಾಯಕನಾಗಿ ನಟಿಸುತ್ತಿರುವ "ರಕ್ಕಿ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ‌ಅಶ್ವಿನಿ ಪುನೀತ್ ರಾಜಕುಮಾರ್ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭಫಲಕ ತೋರಿಸುವ ಮೂಲಕ ಚಾಲನೆ ನೀಡಿದರು. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.  ಜರ್ಮನ್ ನಲ್ಲಿ ಹಲವು ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ಮೂಲದ ಸುರೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸುರೇಶ್ ಅವರ ಪುತ್ರ ರಕ್ಕಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಿರ್ಮಾಪಕರಿಗೆ ನಾನು ಮೊದಲು ಎರಡು ಕಥೆ ಹೇಳಿದ್ದೆ. ಅವರು ಈ ಕಥೆಯನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರ ಬಳಿ ಹೇಳಿ. ಅವರು ಒಪ್ಪುವ ಕಥೆಯನ್ನು ಸಿನಿಮಾ ಮಾಡೋಣ ಎಂದರು. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಚಿತ್ರದ ಕಥೆ ಕೇಳಿ ಚೆನ್ನಾಗಿದೆ ಅಂತ ಹೇಳಿದರು. ಚಿತ್ರಕ್ಕೆ ಇಂದು ಅವರೆ ಚಾಲನೆ ನೀಡಿದ್...