Skip to main content

Posts

Showing posts from November, 2025

ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ 'ಆಜಾದ್ ಭಾರತ್' ಚಿತ್ರ ದೇಶದಾದ್ಯಂತ ಬಿಡುಗಡೆ...

ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ 'ಆಜಾದ್ ಭಾರತ್' ಚಿತ್ರ ದೇಶದಾದ್ಯಂತ ಬಿಡುಗಡೆ... ಇದು ಕನ್ನಡಗರಿಂದ ನಿರ್ಮಾಣವಾಗಿರುವ ದೇಶಪ್ರೇಮ ಸಾರುವ ಹಿಂದಿ ಚಿತ್ರ.. ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ ನಿರ್ದೇಶನದ "ಆಜಾದ್ ಭಾರತ್" ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   'ನೀರಾ ಆರ್ಯ' ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆಯನ್ನು "ಆಜಾದ್ ಭಾರತ್" ಎಂದು ಬದಲಿಸಲಾಗಿದೆ. ಈ ಚಿತ್ರವನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಅರ್ಪಣೆ ಮಾಡಲಾಗಿದೆ.‌ ಸುಭಾಷ್ ಚಂದ್ರ ಬೋಸ್ ಸ್ಥಾಪಿಸಿದ್ದ ಮೊದಲ ಮಹಿಳಾ ಆರ್ಮಿಯ ಕಥೆ 'ಆಜಾದ್ ಭಾರತ್' ಚಿತ್ರದಲ್ಲಿದೆ. ನೇತಾಜಿ ಪಾತ್ರದಲ್ಲಿ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರದಲ್ಲಿ ಮೂರು ಮಹಿಳಾ ಮುಖ್ಯ ಪಾತ್ರಗಳಿದ್ದು, ನಾನು ನೀರಾ ಆರ್ಯ ಪಾತ್ರದಲ್ಲಿ, ಹಿತ ಚಂದ್ರಶೇಖರ್ ದುರ್ಗಾ ಪಾತ್ರದಲ್ಲಿ ನಟಿಸಿದ್ದೇವೆ. ಸರಸ್ವತಿ ರಾಜಾಮಣಿ ಎಂಬ ಪಾತ್ರದಲ್ಲಿ ಜನಪ್ರಿಯ ನಟಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಸುರೇಶ್ ಒಬೆರಾಯ್, ಬಿರಾದಾರ್, ಸುಚೇಂದ್ರ ಪ್ರಸಾದ್, ಜೀ ವಾಹಿನಿಯ ಮುಖ್ಯ...

ಬಿಡುಗಡೆಯಾಯಿತು ನವೀನ್ ಸಜ್ಜು ಅಭಿನಯದ "ಲೋ ನವೀನ" ಚಿತ್ರದ "ಕೋಣಾಣೆ" ಹಾಡು..

ಬಿಡುಗಡೆಯಾಯಿತು ನವೀನ್ ಸಜ್ಜು ಅಭಿನಯದ "ಲೋ ನವೀನ" ಚಿತ್ರದ "ಕೋಣಾಣೆ" ಹಾಡು..   ಜನಪದ ಸೊಗಡಿನ ಈ ಗೀತೆಗೆ ತಲೆದೂಗುತ್ತಿದೆ ಕರುನಾಡು‌‌...  ಗಾಯಕನಾಗಿ ಕನ್ನಡಿಗರ ಮನ ಗೆದ್ದಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಲೋ ನವೀನ". ಇತ್ತೀಚೆಗೆ ಈ ಚಿತ್ರದ "ಕೋಣಾಣೆ" ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮಾಜಿ ಶಾಸಕರಾದ ಎ.ಮಂಜು, ಪುಟ್ಟರಾಜು, ಅಮರನಾಥ ಗೌಡ, ವಿಶ್ವಾಮಿತ್ರ, ಜಿ.ಟಿ‌.ಮಾಲ್ ನ ಆನಂದ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಹಾಡು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್ ಡಿ ಕೋಟೆಯ ಗ್ರಾಮೀಣ ಪ್ರತಿಭೆಗಳಾದ ಚಮ್ಮಮ್ಮ ಹಾಗೂ ಲಕ್ಷಮ್ಮ ಹಾಡಿದ್ದಾರೆ. ನವೀನ್ ಸಜ್ಜು ಸಹ ಗಾಯನಕ್ಕೆ ಜೊತೆಯಾಗಿದ್ದಾರೆ. ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಅರ್ಪಿಸುವ , ಕೀರ್ತಿಸ್ವಾಮಿ ನಿರ್ಮಿಸಿರುವ ಹಾಗೂ ಧನುರ್ಧಾರಿ ಪವನ್ ನಿರ್ದೇಶನದ "ಲೋ ನವೀನ" ಚಿತ್ರದ ಮೊದಲ ಹಾಡು ಇದ್ದಾಗಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಲಭ್ಯವಿದೆ. ಹಾಡು ಬಿಡುಗಡೆ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನನ್ನ ಪ್ರತಿಭೆ ...

ಮೂಷಿಕವಾಹನನ ಸನ್ನಿಧಿಯಲ್ಲಿ ಆರಂಭವಾಯಿತು "ಮುಜುಗರ"...

ಮೂಷಿಕವಾಹನನ ಸನ್ನಿಧಿಯಲ್ಲಿ ಆರಂಭವಾಯಿತು "ಮುಜುಗರ"... ಈ ಚಿತ್ರದ ಮೂಲಕ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ ನಾಯಕನಾಗಿ ಪದಾರ್ಪಣೆ...  ‌ತಮ್ಮ ಜನಪ್ರಿಯ ನಟನೆಯ ಮೂಲಕ ಕನ್ನಡಿಗರ ಜನಮನಸೂರೆಗೊಂಡಿದ್ದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ "ಮುಜುಗರ" ಚಿತ್ರದ ಮೂಲಕ ನಾಯಕನಾಗಿ ಚಂದನವನಕ್ಕೆ ಅಡಿಯಿಟ್ಟಿದ್ದಾರೆ. ಶಾಂತ ಶ್ರೀನಿವಾಸ್ ಡಿ ನಿರ್ಮಿಸುತ್ತಿರುವ ಈ ಚಿತ್ರವನ್ನು ತರುಣ್ ಎನ್ (ಜ್ಯೋತಿಪ್ರಿಯ) ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನೆಟ್ಟಕಲ್ಲಪ್ಪ ಸರ್ಕಲ್ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಟ ಪ್ರಮೋದ್ ಶೆಟ್ಟಿ ಆರಂಭ ಫಲಕ ತೋರಿದರು. ನಿರ್ಮಾಪಕಿ ಶಾಂತ ಶ್ರೀನಿವಾಸ್ ಕ್ಯಾಮೆರಾ ಚಾಲನೆ ಮಾಡಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನನಗೂ, ಚಿತ್ರರಂಗಕ್ಕೂ 20 ವರ್ಷಗಳ ನಂಟು. ನಾಗಾಭರಣ, ಅನಂತರಾಜು, ಅಮರ್ ಹಾಗೂ "ಕಂಠಿ" ಭರತ್ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ಸ್ವತಂತ್ರ ನಿರ್ದೇಶಕನಾಗಿ ಇದು ಮೊದಲ ಚಿತ್ರ. "ಮುಜುಗರ" ಕಾಫಿತೋಟದ ಸುತ್ತ ನಡೆಯುವ ಪ್ರೇಮ ಕಥೆ. ರಾಜೇಶ್ ಅವರ ಮೊಮ್ಮಗ ಸಾಯಿನಂದ್ ನಾಯಕನಾಗಿ, ನಿಮಿಷ್ಕ ಹಾಗೂ ತನು ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ಎರಡನೇ...

ನವೆಂಬರ್ 28ಕ್ಕೆ zee5ನಲ್ಲಿ ಮಲಯಾಳಂ ದಿ ಪೆಟ್ ಡಿಟೆಕ್ಟಿವ್‌ ಸ್ಟ್ರೀಮಿಂಗ್...

ನವೆಂಬರ್ 28ಕ್ಕೆ zee5ನಲ್ಲಿ ಮಲಯಾಳಂ ದಿ ಪೆಟ್ ಡಿಟೆಕ್ಟಿವ್‌ ಸ್ಟ್ರೀಮಿಂಗ್... ಮಲಯಾಳಂನ ಸೂಪರ್ ಹಿಟ್ ಸಿನಿಮಾ ದಿ‌ ಪೆಟ್ ಡಿಟೆಕ್ಟಿವ್ ಒಟಿಟಿಗೆ ಎಂಟ್ರಿ ಕೊಡ್ತಿದೆ. ಇದೇ ತಿಂಗಳ‌ 28ರಿಂದ zee5ನಲ್ಲಿ ಚಿತ್ರ ಸ್ಟ್ರೀಮಿಂಗ್ ಆಗಲಿದೆ. ಮಲಯಾಳಂ ಜೊತೆಗೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿಯೂ‌ ಚಿತ್ರ ವೀಕ್ಷಣೆ ಮಾಡಬಹುದು. ಪ್ರಾಣೀಶ್ ವಿಜಯನ್ ನಿರ್ದೇಶನದ 'ದಿ ಪೆಟ್ ಡಿಟೆಕ್ಟಿವ್' ಚಿತ್ರದಲ್ಲಿ ಶರಫ್ ಯು ಧೀನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.‌ ಅಲ್ಲದೇ ನಿರ್ಮಾಪಕರಾಗಿ ಇದು ಚೊಚ್ಚಲ ಪ್ರಯತ್ನ ಕೂಡ.‌ ವಿನಾಯಕನ್, ವಿನಯ್ ಫೋರ್ಟ್, ಅನುಪಮಾ ಪರಮೇಶ್ವರನ್, ಶ್ಯಾಮ್ ಮೋಹನ್ ಮತ್ತು ಜೋಮನ್ ಜ್ಯೋತಿರ್ ಸೇರಿದಂತೆ ಪ್ರತಿಭಾನ್ವಿತ ತಾರಾಗಣ ಚಿತ್ರದಲ್ಲಿದೆ. ಟೈಟಲ್ ಹೇಳುವಂತೆ ಕಾಣೆಯಾದ ಶ್ವಾನ ಹುಡುಕುತ್ತಾ ಹೋಗುವ ನಾಯಕನ ಸುತ್ತಾ ಸಾಗುವ ಕಥೆ ಇದಾಗಿದೆ.‌ ನೋಡುಗರಿಗೆ ಭರ್ಜರಿ ಮನರಂಜನೆ ರಸದೌತಣ ಬಡಲಿದೆ ದಿ‌ ಪೆಟ್ ಡಿಟೆಕ್ಟಿವ್ ಸಿನಿಮಾ.  ನಿರ್ಮಾಪಕ ಮತ್ತು ನಟ ಶರಫ್ ಯು ಧೀನ್ zee5 ಒಟಿಟಿ ಎಂಟ್ರಿ ಬಗ್ಗೆ ಮಾತನಾಡಿ, "ದಿ ಪೆಟ್ ಡಿಟೆಕ್ಟಿವ್ ನನಗೆ ತುಂಬಾ ವಿಶೇಷ ಸಿನಿಮಾ. ಕೇವಲ ನಟನಾಗಿ ಮಾತ್ರವಲ್ಲ, ನಿರ್ಮಾಪಕನಾಗಿ ನನ್ನ ಚೊಚ್ಚಲ ಪ್ರಯತ್ನ ಇದು. ಪ್ರೇಕ್ಷಕರು ಹೆಚ್ಚು ಯೋಚಿಸದೆ ಸರಳವಾಗಿ ನಗುವಂತಹ ಚಿತ್ರವನ್ನು ನಾವು ಮಾಡಲು ಬಯಸಿದ್ದೇವೆ. ಇದು ವರ್ಣಮಯವಾಗಿದೆ ಮತ್ತು ಹೃ...

ಕವೀಶ್ ಶೆಟ್ಟಿ ಹಾಗೂ ಮೇಘ ಶೆಟ್ಟಿ ಅಭಿನಯದ ಹಾಗೂ ಸಡಗರ ರಾಘವೇಂದ್ರ ನಿರ್ದೇಶನದ "ಓ.ಎಲ್.ಸಿ" ಚಿತ್ರ ನವೆಂಬರ್ 28 ರಂದು ಬಿಡುಗಡೆ...

ಕವೀಶ್ ಶೆಟ್ಟಿ ಹಾಗೂ ಮೇಘ ಶೆಟ್ಟಿ ಅಭಿನಯದ ಹಾಗೂ ಸಡಗರ ರಾಘವೇಂದ್ರ ನಿರ್ದೇಶನದ "ಓ.ಎಲ್.ಸಿ" ಚಿತ್ರ ನವೆಂಬರ್ 28 ರಂದು ಬಿಡುಗಡೆ... ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಹಾಡು ಬಿಡುಗಡೆ ಹಾರೈಸಿದ ನಿರ್ದೇಶಕ ಶಶಾಂಕ್... ಕವೀಶ್ ಶೆಟ್ಟಿ ಮತ್ತು ಮೇಘ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿರುವ 'ಓ.ಎಲ್.ಸಿ'(ಆಪರೇಷನ್ ಲಂಡನ್ ಕೆಫೆ) ಚಿತ್ರ ನವೆಂಬರ್ 28ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಹಿರಿಯ ನಿರ್ದೇಶಕ ಶಶಾಂಕ್ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ವೆಲ್ಕಮ್ ಟು ಜಂಗಲ್" ಹಾಡು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.  ಮೊದಲು ಮಾತನಾಡಿದ ನಿರ್ದೇಶಕ ಸಡಗರ ರಾಘವೇಂದ್ರ, ನಾನು ಶಶಾಂಕ್ ಅವರ ಜೊತೆಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. "ಓ.ಎಲ್.ಸಿ" ನನ್ನ ಮೊದಲ ನಿರ್ದೇಶನದ ಚಿತ್ರ. ಈ ಚಿತ್ರದ ನಾಯಕನಾಗಿ ನಟಿಸಿರುವ ಕವೀಶ್ ಶೆಟ್ಟಿ ನಟಿಸಿದ್ದಾರೆ. ನಾಯಕಿಯಾಗಿ ಮೇಘ ಶೆಟ್ಟಿ ಅಭಿನಯಿಸಿದ್ದಾರೆ. ಮರಾಠಿ ಭಾಷೆಯ ಶಿವಾನಿ ಪ್ರಮುಖಪಾತ್ರದಲ್ಲಿದ್ದಾರೆ. ಇನ್ನೂ, ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ಸಿನಿಮ...

ಗವಿ ಗಂಗಾಧರೇಶ್ವರ ಸನ್ನಿಧಿಯಲ್ಲಿ "ದಿ ರೈಸ್ ಆಫ್ ಅಶೋಕ" ಸಿನಿಮಾದ ಸಾಂಗ್ ಅನಾವರಣ..

ಗವಿ ಗಂಗಾಧರೇಶ್ವರ ಸನ್ನಿಧಿಯಲ್ಲಿ "ದಿ ರೈಸ್ ಆಫ್ ಅಶೋಕ" ಸಿನಿಮಾದ ಸಾಂಗ್ ಅನಾವರಣ.. ಏಳೋ ಏಳೋ ಮಾದೇವ..ಇದು ಸತೀಶ್ ನೀನಾಸಂ ಶಿವ ಪರಾಕಾಷ್ಠೆ.. ದಿ ರೈಸ್ ಆಫ್ ಅಶೋಕ ಸಿನಿಮಾದ ಮೊದಲ ಹಾಡು ರಿಲೀಸ್..ಮಾದೇವನ ಪರಾಕಾಷ್ಠೆಯಲ್ಲಿ ಸತೀಶ್ ನೀನಾಸಂ.. ಅಭಿನಯ ಚತುರ ಸತೀಶ್ ನೀನಾಸಂ ಅವರ ಭತ್ತಳಿಕೆಯಿಂದ‌ ಬರ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿರುವ ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ. ಮಾದೇವನ ಕುರಿತ ಹಾಡನ್ನು ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸ್ವತಃ ಸತೀಶ್ ಏಳೋ ಏಳೋ ಮಹಾದೇವ ಗೀತೆ ಕ್ಯಾಚಿ‌ಮ್ಯಾಚಿ ಪದ ಪೊಣಿಸಿ ಸಾಹಿತ್ಯ ಬರೆದಿದ್ದಾರೆ.  ಹಾಡು ಬಿಡುಗಡೆ ಬಳಿಕ ಭಾವುಕರಾಗಿಯೇ ಮಾತನಾಡಿದ ಸತೀಶ್‌ ನೀನಾಸಂ, ಅಯೋಗ್ಯ ಲೆಕ್ಕ ಅಲ್ಲಾ ನನಗೆ ಮನೇಲಿ ಮಲಗಿದ್ದರು ಜನ ಆ ಸಿನಿಮಾ ನೋಡ್ತಾರೆ. ಅಯೋಗ್ಯ ಬ್ರಾಂಡ್ ಕ್ರಿಯೇಟ್ ಮಾಡಿದೆ. ಪ್ಯಾನ್ ಇಂಡಿಯಾ ಮಾಡೋ ಹುಚ್ಚ ಅಂತಾರೆ? ಒಂದು ಕೆಜಿಎಫ್, ಒಂದು ಕಾಂತಾರ ಮಾಡಬೇಕು ಅನ್ನೋ ಆಸೆ ನನಗಿದೆ. ಒಂದು ರೂಪಾಯಿ ನಾನು ಸೈನಿಂಗ್ ದುಡ್ಡು ತಗೊಂಡಿಲ್ಲ. ನಾಳೆ ಶೂಟಿಂಗ್ ಮಾಡಬೇಕು ಅಂತ ಹೋದ್ರೆ ನಿರ್ದೇಶಕ ಆತ್ಮಹತ್ಯೆ ಮಾಡ್ಕೊಂಡಿದ್ರು. ಅಲ್ಲಿಂದ ಜವಾಬ್ದಾರಿ ಜಾಸ್ತಿ ಆಯ್ತು. ಇಷ್ಟೆಲ್ಲ ಮಾಡಿ ಈ ಸಿ...

ಮಹಾಶಿವರಾತ್ರಿಗೆ ನಿಖಿಲ್ ಸಿದ್ದಾರ್ಥ್ ನಟನೆಯ 'ಸ್ವಯಂಭು' ರಿಲೀಸ್..

ಮಹಾಶಿವರಾತ್ರಿಗೆ ನಿಖಿಲ್ ಸಿದ್ದಾರ್ಥ್ ನಟನೆಯ 'ಸ್ವಯಂಭು' ರಿಲೀಸ್.. ಸ್ವಯಂಭು ಬಿಡುಗಡೆ ದಿನಾಂಕ ಘೋಷಣೆ.. ಮಹಾಶಿವರಾತ್ರಿಗೆ ನಿಖಿಲ್ ಸಿದ್ಧಾರ್ಥ್ ಚಿತ್ರ ರಿಲೀಸ್.. ತೆಲುಗು ಚಿತ್ರರಂಗದ ಉದಯೋನ್ಮುಖ ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಸ್ವಯಂಭು. ಟೈಟಲ್ ಹಾಗೂ ಮೇಕಿಂಗ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮಹಾಶಿವರಾತ್ರಿ ಅಂದರೆ 2026 ಫೆಬ್ರವರಿ 13ಕ್ಕೆ ವಿಶ್ವಾದ್ಯಂತ ಸ್ವಯಂಭು ಚಿತ್ರಮಂದಿರಗಳಿಗೆ ಎಂಟ್ರಿ‌ ಕೊಡಲಿದೆ. ಸ್ಪೆಷಲ್ ವಿಡಿಯೋ ಮೂಲಕ ಚಿತ್ರತಂಡ ಶೂಟಿಂಗ್ ಮುಗಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಬರೋಬ್ಬರಿ ಎರಡು ವರ್ಷದ ಜರ್ನಿ ಇದಾಗಿದ್ದು, 170 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಅಂದಹಾಗೇ ಇದು ನಿಖಿಲ್ ಸಿದ್ದಾರ್ಥ್ ಅವರ 20ನೇ ಚಿತ್ರ. ಪಿಕ್ಸೆಲ್ ಸ್ಟುಡಿಯೋ ಮೂಲಕ ಭುವನ್ ಹಾಗೂ ಶ್ರೀಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದು, ಟ್ಯಾಗೋರೆ ಮಧು ಪ್ರಸ್ತುತಪಡಿಸುತ್ತಿದ್ದಾರೆ. ಸ್ವಯಂಭು ಎಂದರೆ ಸ್ವಯಂ ಹುಟ್ಟು ಎಂದರ್ಥ. ಸಹಸ್ರಮಾನಗಳ ಹಿಂದಿನ ಕಥೆ ಒಳಗೊಂಡಿರುವ ಸ್ವಯಂಭು ಸಿನಿಮಾ ನಿಖಿಲ್ ಸಿದ್ದಾರ್ಥ್ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರವಾಗಿದೆ. ಕೆಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ವಿಜಯ್ ಕಾಮಿಸೆಟ್ಟಿ ಚಿತ್ರಕ್ಕೆ ಸಂಭಾಷಣೆಯನ್ನು ನೀಡಿದ್ದಾರೆ. ತಮ್ಮಿರಾಜು‌ ಸಂಕಲನದ ಜವಾಬ್ದಾರಿ ಹೊ...

ವಿಜಯ್‌ ಸೇತುಪತಿ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ಸಿನಿಮಾದ ಶೂಟಿಂಗ್ ಮುಕ್ತಾಯ..

ವಿಜಯ್‌ ಸೇತುಪತಿ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ಸಿನಿಮಾದ ಶೂಟಿಂಗ್ ಮುಕ್ತಾಯ.. ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಹೊಸ ಸಿನಿಮಾದ ಚಿತ್ರೀಕರಣ ಮುಕ್ತಾಯ.. ನಿರ್ದೇಶಕ ಪುರಿ ಜಗನ್ನಾಥ್‌ ಹಾಗೂ ವಿಜಯ್ ಸೇತು ಪತಿ ಕಾಂಬೋದ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಸ್ಪೆಷಲ್ ವಿಡಿಯೋ‌ ಮೂಲಕ ಚಿತ್ರತಂಡ ಚಿತ್ರೀಕರಣ ಮುಗಿಸಿರುವ ಬಗ್ಗೆ ಮಾಹಿತಿ ನೀಡಿದೆ.  ಮಾಸ್ ಆಕ್ಷನ್ ಎಂಟರ್ ಟೈನರ್ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ಸಂಯುಕ್ತ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಕುಮಾರ್, ಟಬು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬ್ರಹ್ಮನಂದ್ ಹಾಗೂ ವಿಟಿವಿ ಗಣೇಶ್ ಕೂಡ ತಾರಾಬಳಗದಲ್ಲಿದ್ದಾರೆ. ಪುರಿ ಜಗನ್ನಾಥ್ ಅವರು ತಮ್ಮದೇ ಪುರಿ ಕನೆಕ್ಟ್ಸ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಜೆಬಿ ನಾರಾಯಣ್ ರಾವ್ ಕೊಂಡ್ರೊಲ್ಲಾ ಅವರ ಜೆಬಿ ಮೋಷನ್ ಪಿಕ್ಚರ್ಸ್‌ ಬ್ಯಾನರ್‌ ಸಹಯೋಗದಲ್ಲಿ ಚಾರ್ಮಿ ಕೌರ್‌ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಅರ್ಜುನ್ ರೆಡ್ಡಿ, ಅನಿಮಲ್ ಚಿತ್ರಗಳಿಗೆ ಸಂಗೀತ ಒದಗಿಸಿರುವ ಹರ್ಷವರ್ದನ್ ರಾಮೇಶ್ವರ್ ಈ ಚಿತ್ರಕ್ಕೂ ಮ್ಯೂಸಿಕ್ ನೀಡಿದ್ದಾರೆ.  ಸಿನಿಮಾಗೆ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅದನ್ನು ತಿಳಿಯಲು ಕೂಡ ಅಭಿಮಾನಿಗಳಿಗೆ ಕುತೂಹಲ ಇದೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪ್ರಚಾರ ಕಾರ್ಯ ನಡೆಸಲು ಯ...

ಜಾತಿ, ಧರ್ಮದ ಹಿನ್ನೆಲೆಯ ಕಥನ " ಧರ್ಮಂ‌" ಚಿತ್ರದ ಟ್ರೈಲರ್ ಬಿಡುಗಡೆ..

ಜಾತಿ, ಧರ್ಮದ ಹಿನ್ನೆಲೆಯ ಕಥನ " ಧರ್ಮಂ‌" ಚಿತ್ರದ ಟ್ರೈಲರ್ ಬಿಡುಗಡೆ .. "ಜಾತಿಯಲ್ಲಿ ಹಿಂದುಳಿಯುದಲ್ಲ.. ಜೀವನದಲ್ಲಿ ಮುಂದೆ ಬರದಂತೆ ನೋಡಿಕೊಳ್ಳಬೇಕು.. ಇಲ್ಲಿ ನ್ಯಾಯ ನೀತಿ ಧರ್ಮಕ್ಕೆ ಬೆಲೆ ಇಲ್ಲ..." ಅವ್ನಾ ಉಸಿರಾಡೋಕೆ ಬಿಟ್ಟರೆ ನಮಗೇ ತೊಂದರೆ.." ಧರ್ಮ ಉಳಿಬೇಕಂದ್ರೆ ..ನಿನ್ನ ಜಾತಿ ಸಾಯಬೇಕು.." ಹಳ್ಳಿಯ ಹಿನ್ನೆಲೆಯಲ್ಲಿ ರಗಡ್ ಲುಕ್ ನಲ್ಲಿರುವ " ಧರ್ಮಂ " ಚಿತ್ರದ ಖಡಕ್ ಸಂಭಾಷಣೆ ಇರುವ ಟ್ರೈಲರ್ ನಲ್ಲಿ ಶೋಷಣೆ ,ದಬ್ಬಾಳಿಕೆ, ಸೇರಿದಂತೆ ಆಕ್ಷನ್ ಸನ್ನಿವೇಶ ಹದಗೊಳಿಸಿ ಚಿತ್ರವನ್ನು ತೆರೆಗೆ ಕಟ್ಟಿಕೊಡಲಾಗಿದ್ದು ಡಿಸೆಂಬರ್ 5 ರಂದು ಚಿತ್ರ ತೆರೆಗೆ ಬರಲಿದ್ದು ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಕೆರಳಿಸಿದೆ. "ಧರ್ಮಂ‌ " ಚಿತ್ರದ ಟ್ರೈಲರ್ ಅನ್ನು ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ವೇಳೆ ಚಿತ್ರದ ಹಾಡುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಮಾತನಾಡಿ ಪವರ್ ಫುಲ್ ಶೀರ್ಷಿಕೆ , ಡುಯೆಟ್ ಹಾಡು ನೋಡಿ ಚಿತ್ರದ ಬಗ್ಗೆ ಆಕರ್ಷಿತನಾಗಿದ್ದೆ. ಚಿತ್ರದ ಛಾಯಾಗ್ರಾಹಕನಿಗೆ ಒಳ್ಳೆಯ ಭವಿಷ್ಯವಿದೆ. ಟ್ರೈಲರ್ ನೋಡಿದಾಗಲೇ ಚಿತ್ರವನ್ನು ಹಿಡಿದು ಕೂಡಿಸಲಿದೆ.‌ 80ರ ದಶಕದ ಚಿತ್ರವನ್ನು ಅತ್ಯುತ್ತಮವಾಗಿ ಕಟ್ಟಿಕೊಟ್ಟಿದ್ದೀ...

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ "GST" ಚಿತ್ರ ನವೆಂಬರ್ 28ರಂದು ತೆರೆಗೆ..

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ "GST" ಚಿತ್ರ ನವೆಂಬರ್ 28ರಂದು ತೆರೆಗೆ.. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ "GST" ಚಿತ್ರ ಈ ವಾರ ನವೆಂಬರ್ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.   "GST" ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ "GST" ಚಿತ್ರಕ್ಕೆ "ಘೋಸ್ಟ್ ಇನ್ ಟ್ರಬಲ್" ಎಂಬ ಅಡಿಬರಹವಿದೆ. ಸೃಜನ್ ಲೋಕೇಶ್ ಅ...

“ದಿ ರಾಜಾಸಾಬ್‌” ಸಿನಿಮಾದಿಂದ ಹೊರಬಂತು “ರೆಬೆಲ್‌ ಸಾಬ್‌” ಹಾಡು..

“ದಿ ರಾಜಾಸಾಬ್‌” ಸಿನಿಮಾದಿಂದ ಹೊರಬಂತು “ರೆಬೆಲ್‌ ಸಾಬ್‌” ಹಾಡು.. ಕಲರ್‌ಫುಲ್‌ ಹಾಡಿನಲ್ಲಿ ಪ್ರಭಾಸ್‌ ಜಬರ್‌ದಸ್ತ್‌ ಡಾನ್ಸ್‌.. ಜನವರಿ 9ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ.. ಟಾಲಿವುಡ್‌ ರೆಬಲ್‌ ಸ್ಟಾರ್ ಪ್ರಭಾಸ್‌ ನಾಯಕನಾಗಿ ನಟಿಸಿರುವ “ದಿ ರಾಜಾಸಾಬ್” ಸಿನಿಮಾ ಟ್ರೇಲರ್‌ ಮೂಲಕ ಕೌತುಕ ಸೃಷ್ಟಿಸಿದೆ. ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬರುವುದರಿಂದ ಹಿಂದಿ ಬೆಲ್ಟ್‌ನಲ್ಲಿಯೂ ಈ ಚಿತ್ರಕ್ಕೆ ದೊಡ್ಡ ಡಿಮಾಂಡ್‌ ಸೃಷ್ಟಿಯಾಗಿದೆ. ಇದೀಗ ಸಿನಿಮಾದ ಪ್ರಚಾರ ಕೆಲಸದಲ್ಲಿಯೂ ಚಿತ್ರತಂಡ ಬಿಜಿಯಾಗಿದೆ. ಅದರಂತೆ ಇದೀಗ ಇದೇ ಚಿತ್ರದ “ರೆಬೆಲ್‌ ಸಾಬ್” ಹಾಡನ್ನು ಬಿಡುಗಡೆ ಮಾಡಿದೆ ಚಿತ್ರತಂಡ.  ಪಕ್ಕಾ ಟಪ್ಪಾಂಗುಚ್ಚಿ ಶೈಲಿಯಲ್ಲಿ ಮೂಡಿಬಂದಿರುವ “ರೆಬಲ್‌ ಸಾಬ್‌” ಹಾಡಿನಲ್ಲಿ ನಟ ಪ್ರಭಾಸ್‌ ಸಖತ್‌ ಸ್ಟೈಲಿಶ್‌ ಆಗಿ ಕಂಡಿದ್ದಾರೆ. ಕಲರ್‌ ಕಲರ್‌ ಶರ್ಟ್‌ ಧರಿಸಿ, ಹಾಡಿಗೆ ಮಸ್ತ್‌ ಮಸ್ತ್‌ ಡಾನ್ಸ್‌ ಮಾಡಿದ್ದಾರೆ. ಈ ಮೂಲಕ ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದ್ದು, ಅಭಿಮಾನಿ ವಲಯದಲ್ಲಿ ಸಂಭ್ರಮ ಇಮ್ಮಡಿಯಾಗಿದೆ.  ಅಂದಹಾಗೆ, “ದಿ ರಾಜಾಸಾಬ್‌” ಸಿನಿಮಾಕ್ಕೆ ಸಂಗೀತ ನೀಡಿರುವುದು ಖ್ಯಾತ ಸಂಗೀತ ಸಂಯೋಜಕ ಥಮನ್‌ ಎಸ್. ಆದರೆ, ಈ ವರೆಗೂ ಇದೇ ಚಿತ್ರದ ಒಂದೇ ಒಂದು ಹಾಡಿನ ಝಲಕ್‌ ಹೊರಬಿದ್ದಿರಲಿಲ್ಲ. ಇದೀಗ...

ಈ ವಾರ ತೆರೆಗೆ ಹೆದ್ದೂರ್ ಮಂಜುನಾಥ್ ಶೆಟ್ಟಿ ನಿರ್ದೇಶನದ "ಪಾಠಶಾಲಾ"..

ಈ ವಾರ ತೆರೆಗೆ ಹೆದ್ದೂರ್ ಮಂಜುನಾಥ್ ಶೆಟ್ಟಿ ನಿರ್ದೇಶನದ "ಪಾಠಶಾಲಾ"..  ಕೆಲವು ವರ್ಷಗಳ ಹಿಂದೆ "ಗ್ಯಾಪಲ್ಲೊಂದು ಸಿನಿಮಾ" ಮಾಡಿ ನಂತರ "ಓಮಿನಿ" ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ "ಪಾಠಶಾಲಾ" ಎಂಬ ಚಿತ್ರ‌ ನಿರ್ದೇಶನ ಮಾಡಿದ್ದಾರೆ. ಈ‌ ಚಿತ್ರ ನವೆಂಬರ್ 28ರಂದು ಬಿಡುಗಡೆಯಾಗುತ್ತಿದೆ   "MS SQUARE MOVIES" ಲಾಂಛನದಲ್ಲಿ ನಾನು ಹಾಗೂ ನನ್ನ ಪತ್ನಿ ಪ್ರೀತಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ‌. ಹತ್ತಕ್ಕೂ ಅಧಿಕ ಸ್ನೇಹಿತರ ಸಹ ನಿರ್ಮಾಣ ಈ ಚಿತ್ರಕ್ಕಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ನಲವತ್ತಕ್ಕೂ ಆಧಿಕ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಮಕ್ಕಳಿಗೆ ತರಭೇತಿ ನೀಡಿ ಆನಂತರ ಚಿತ್ರೀಕರಣ ಮಾಡಲಾಯಿತು. ತೀರ್ಥಹಳ್ಳಿ ಆಸುಪಾಸಿನ ಮಕ್ಕಳೇ ಇದರಲ್ಲಿ ನಟಿಸಿದ್ದಾರೆ. ಹಿರಿಯರಾದ ಬಾಲಾಜಿ ಮನೋಹರ್, ಸುಧಾಕರ್ ಬನ್ನಂಜೆ, ಕಿರಣ್ ನಾಯಕ್, ನಟನ ಪ್ರಶಾಂತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 80, 90 ರ ಕಾಲಘಟ್ಟದಲ್ಲಿ ಶಿಕ್ಷಕರ ಹಾಗೂ ಮಕ್ಕಳ ನಡುವೆ ಇದ್ದ ಸಂಬಂಧದ ಸುತ್ತಲ್ಲಿನ ಕಥಾಹಂದರವನ್ನು ಈ ಚಿತ್ರ ಹೊಂದಿದೆ. "ಪಾಠಶಾಲಾ" ಚಿತ್ರಕ್ಕೆ "ಓದು ಅಥವಾ ಓಡೋಗು" ಎಂಬ ಅಡಿಬರಹವಿದೆ. ಇದು ಬರೀ ಮಕ್ಕಳ ಚಿತ್ರವಲ್ಲ. ಎಲ್ಲಾ ವಯಸ್ಸಿನವರು ನೋಡಲೇಬೇ...