Skip to main content

ಡಿಸೆಂಬರ್ 20 ರಂದು ಅದ್ದೂರಿಯಾಗಿ ನಡೆಯಲಿದೆ "JAM JUNXION" ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್"...

ಡಿಸೆಂಬರ್ 20 ರಂದು ಅದ್ದೂರಿಯಾಗಿ ನಡೆಯಲಿದೆ "JAM JUNXION" ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್"...
 ಒಂದೇ ಸ್ಥಳದಲ್ಲಿ ಆರು ಬೃಹತ್ ವೇದಿಕೆ. ಚಂದನ್ ಶೆಟ್ಟಿ ಅವರ ಬ್ಯಾಂಡ್ ಸೇರಿದಂತೆ ಅನೇಕ ಪ್ರಸಿದ್ದ ಬ್ಯಾಂಡ್ ಗಳಿಂದ ಆರು ಗಂಟೆಗಳ ಕಾಲ ಸಂಗೀತ ರಸಸಂಜೆ..
ಹಲವು ವಿಶೇಷಗಳಿಗೆ ಹೆಸರಾಗಿರುವ ಬೆಂಗಳೂರಿನಲ್ಲಿ ಡಿಸೆಂಬರ್ 20ರಂದು ಮತ್ತೊಂದು ವಿಶೇಷ ನಡೆಯಲಿದೆ. ಹೆಸರಾಂತ "JAM JUNXION" ವತಿಯಿಂದ ಶ್ರೀ ಅವರು ಬೆಂಗಳೂರಿನ ಥಣಿಸಂದ್ರದ ಭಾರತೀಯ ಮಾಲ್ ನಲ್ಲಿ ಬಿಗೆಸ್ಟ್ ಮ್ಯೂಸಿಕಲ್ ನೈಟ್ ಆಯೋಜಿಸಿದ್ದಾರೆ. ಈ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ಶ್ರೀ, ಗಾಯಕ - ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಹಾಗೂ ನವರಸನ್ ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಕುರಿತು ಮಾತನಾಡಿದರು.
"Jam junxion" ವತಿಯಿಂದ ಡಿಸೆಂಬರ್ 20ರಂದು ಬೆಂಗಳೂರಿನ ಥಣಿಸಂದ್ರದ ಭಾರತೀಯ ಮಾಲ್ ನಲ್ಲಿ ಬೃಹತ್ ಮ್ಯೂಸಿಕಲ್ ನೈಟ್ ಹಮ್ಮಿಕೊಳ್ಳಲಾಗಿದೆ. ಇದರ ವಿಶೇಷವೆಂದರೆ ಆರು ಬೃಹತ್ ವೇದಿಕೆಗಳಲ್ಲಿ ಆರು ಪ್ರಸಿದ್ದ ಬ್ಯಾಂಡ್ ನವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಒಂದು ವೇದಿಕೆಯ ಕಾರ್ಯಕ್ರಮ ಆದ ಕೂಡಲೆ ಮತ್ತೊಂದು ವೇದಿಕೆಯ ಕಾರ್ಯಕ್ರಮ ತಕ್ಷಣವೇ ಆರಂಭವಾಗುತ್ತದೆ. ಚಂದನ್ ಶೆಟ್ಟಿ ಅವರ ಬ್ಯಾಂಡ್ ಸೇರಿದಂತೆ ಆರು ಪ್ರಸಿದ್ದ ಬ್ಯಾಂಡ್ ಗಳು ಇದರಲ್ಲಿ‌ ಪಾಲ್ಗೊಳ್ಳಲಿದೆ. ಸಂಜೆ ಐದು ಗಂಟೆಗೆ ಆರಂಭವಾಗುವ ಕಾರ್ಯಕ್ರಮ ಸತತ ಆರು ಗಂಟೆಗಳ ಕಾಲ ನಡೆಯಲಿದೆ. ಕನ್ನಡ, ತೆಲುಗು ಹಾಗೂ ಹಿಂದಿ ಮೂರು ಭಾಷೆಗಳ ಹಾಡುಗಳನ್ನು ಹಾಡಿ ಗಾಯಕರು ರಂಜಿಸಲಿದ್ದಾರೆ. 800 ರೂಪಾಯಿಯಿಂದ ಟಿಕೆಟ್ ದರ ಆರಂಭವಾಗಲಿದೆ. ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ಇರುತ್ತದೆ. ಈ ಹಿಂದೆ ನಾವು ಹೈದರಾಬಾದ್ ಹಾಗೂ ವಿಶಾಖಪಟ್ಟಣದಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದೆವು. ಈಗ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸುತ್ತಿದ್ದೇವೆ. ಟಿಕೆಟ್ ಗಳನ್ನು ಆನ್ ಲೈನ್ ನಲ್ಲಿ ತೆಗೆದುಕೊಳ್ಳಬಹುದು. ನವರಸನ್ ಹಾಗೂ ಚಂದನ್ ಶೆಟ್ಟಿ ಅವರು ನಮಗೆ ಸಹಕಾರ ನೀಡುತ್ತಿದ್ದಾರೆ. ಈ ಕಾರ್ಯಕ್ರಮ ಮಾತ್ರವಲ್ಲದೆ "MY tree" ಎಂಬ ಸಮಾಜಮುಖಿ ಕಾರ್ಯ ಕೂಡ ನಡೆಸುತ್ತಿದ್ದೇನೆ. ನಮಗೆ ನೀವು ಮಿನಿಮಮ್ 10 ರೂಪಾಯಿಯಿಂದ 50, 100 ರೂಪಾಯಿ ನೀಡಬಹುದು. ನಾವು ನಿಮ್ಮ ಹೆಸರಿನಲ್ಲಿ ಒಂದು ಗಿಡ ನೆಡುತ್ತೀವಿ. ಅದರ ಆರೈಕೆ ನಾವೇ ಮಾಡುತ್ತೀವಿ. ಅದರ ಬೆಳವಣಿಗೆ ಕುರಿತು ವಾಟ್ಸ್ ಆಪ್ ನಲ್ಲಿ ಮಾಹಿತಿ ನೀಡಿತ್ತಿರುತ್ತೇವೆ ಎಂದು "Jum junxion" ನ ಮುಖ್ಯಸ್ಥರಾದ ಶ್ರೀ ತಿಳಿಸಿದರು.
"Jum junxion" ಕಾರ್ಯಕ್ರಮವನ್ನು ಎರಡು ಕಡೆ ಯಶಸ್ವಿಯಾಗಿ ಆಯೋಜಿಸಿರುವ ಶ್ರೀ ಅವರು ಈಗ ಬೆಂಗಳೂರಿನಲ್ಲಿ ಡಿಸೆಂಬರ್ 20 ರಂದು ಆಯೋಜಿಸುತ್ತಿದ್ದಾರೆ. 220 ಅಡಿಯ ಆರು ವಿಶಾಲ ವೇದಿಕೆಯಲ್ಲಿ ಆರು ಪ್ರಸಿದ್ದ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ನೀವು ಕೊಟ್ಟ ದುಡ್ಡಿಗೆ ದುಪ್ಪಟ್ಟು ಮನೋರಂಜನೆ ನೀಡುವ ಕಾರ್ಯಕ್ರಮ ಇದಾಗಲಿದೆ. ನಾನು ಈ ಕಾರ್ಯಕ್ರಮ ಒಪ್ಪೊಕೊಳ್ಳಲು ಮುಖ್ಯ ಕಾರಣ ನೆರೆ ರಾಜ್ಯದಿಂದ ಅವರು ಇಲ್ಲಿಗೆ ಬಂದು ಕಾರ್ಯಕ್ರಮ ಆಯೋಜಿಸುತ್ತಿರುವುದು. ಹಾಗೂ ನಾಲ್ಕು ವೇದಿಕೆಗಳಲ್ಲಿ ಕನ್ನಡಿಗರಿಗೆ ಅವಕಾಶ ನೀಡಿರುವುದು. ಈ ಸಮಾರಂಭಕ್ಕೆ ನಿಮ್ಮಲ್ಲರ ಪ್ರೋತ್ಸಾಹವಿರಲಿ ಎಂದರು ಚಂದನ್ ಶೆಟ್ಟಿ. 
ಶ್ರೀ ಅವರು ನನ್ನನ್ನು ಸಂಪರ್ಕಿಸಿ ಈ ಸಮಾರಂಭದ ಬಗ್ಗೆ ಹೇಳಿದರು. ಕೆಲವು ಸಲಹೆಗಳನ್ನು ನೀಡಿದ್ದೇನೆ. ಈ ಸಮಾರಂಭಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನವರಸನ್ ಹೇಳಿದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...