Skip to main content

ಪ್ರಭಾಸ್ -ಸಂಜಯ್ ದತ್ ನಡುವಿನ ಹೈ ವೋಲ್ಟೇಜ್ ಕಾದಾಟ; ಕುತೂಹಲ ಕೆರಳಿಸಿದ 'ದಿ ರಾಜಾಸಾಬ್' ಟ್ರೈಲರ್ 2.0..

ಪ್ರಭಾಸ್ -ಸಂಜಯ್ ದತ್ ನಡುವಿನ ಹೈ ವೋಲ್ಟೇಜ್ ಕಾದಾಟ; ಕುತೂಹಲ ಕೆರಳಿಸಿದ 'ದಿ ರಾಜಾಸಾಬ್' ಟ್ರೈಲರ್ 2.0..
https://youtu.be/mKjZHJnLTP4?si=hAQsnlfmL60BM9dF kannada rajasaab tralier
ಜನವರಿ 9ಕ್ಕೆ ವಿಶ್ವದಾದ್ಯಂತ ತೆರೆಗೆ ಬರಲಿದೆ ಪ್ಯಾನ್‌ ಇಂಡಿಯನ್‌ ಸಿನಿಮಾ..
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಹಾರರ್ ಫ್ಯಾಂಟಸಿ ಚಿತ್ರ 'ದಿ ರಾಜಾಸಾಬ್'ನ ಟ್ರೈಲರ್ 2.0 ಬಿಡುಗಡೆಯಾಗಿದ್ದು, ಚಿತ್ರದ ಕಥೆ ಮತ್ತು ಭಾವನಾತ್ಮಕ ಆಯಾಮಗಳ ಮೇಲೆ ಹೊಸ ಬೆಳಕು ಚೆಲ್ಲಿದೆ. ರೆಬೆಲ್ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ, ಸಂಮೋಹನ ವಿದ್ಯೆಯ ಮೂಲಕ ಭಯವನ್ನು ನಿಯಂತ್ರಿಸುವ ಶಕ್ತಿಯಾಗಿ ಸೂಪರ್‌ಸ್ಟಾರ್ ಸಂಜಯ್ ದತ್ ಅಬ್ಬರಿಸಿದ್ದಾರೆ.
 ಚಿತ್ರದಲ್ಲಿ ಪ್ರಭಾಸ್ 'ರಾಜಾಸಾಬ್' ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಜ್ಜಿ (ಜರೀನಾ ವಹಾಬ್) ಮೇಲೆ ಅಪಾರ ಪ್ರೀತಿ ಹೊಂದಿರುವ ವ್ಯಕ್ತಿಯಾಗಿ ನಟಿಸಿದ್ದಾರೆ. ತನ್ನ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಹೋದ ನಾಯಕ, ಅಂತಿಮವಾಗಿ ಪಾಳುಬಿದ್ದ ಬಂಗಲೆ ತಲುಪುತ್ತಾನೆ. ಆ ಬಂಗಲೆಯೇ ದಿ ರಾಜಸಾಬ್‌ ಸಿನಿಮಾದ ಕರಾಳ ರಹಸ್ಯಗಳ ತಾಣ. ಅಲ್ಲಿ ಸಂಮೋಹನ ವಿದ್ಯೆಯ ಮೂಲಕ ಮನಸ್ಸನ್ನೇ ಸೆರೆಹಿಡಿಯುವ ವಿಲನ್ ಸಂಜಯ್ ದತ್ ಎದುರಾಗುತ್ತಾರೆ. ದೈಹಿಕ ಬಲಕ್ಕಿಂತ ಹೆಚ್ಚಾಗಿ ಮಾನಸಿಕ ಆಟಗಳ ಮೂಲಕ ಪ್ರಭಾಸ್ ಅವರನ್ನು ಕಟ್ಟಿಹಾಕುವ ವಿಭಿನ್ನ ಪಾತ್ರದಲ್ಲಿ ಸಂಜಯ್ ದತ್ ಮಿಂಚಿದ್ದಾರೆ.

ಪಾತ್ರವರ್ಗ ಮತ್ತು ತಾಂತ್ರಿಕತೆ..
ಬೋಮನ್ ಇರಾನಿ ನಿಗೂಢ ಮನೋವೈದ್ಯ ಮತ್ತು ಪ್ಯಾರಾನಾರ್ಮಲ್ ತನಿಖಾಧಿಕಾರಿಯಾಗಿ ಚಿತ್ರಕ್ಕೆ ಹೊಸ ತಿರುವು ನೀಡಿದ್ದಾರೆ. ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ಕಥೆಗೆ ಗ್ಲಾಮರ್ ಮತ್ತು ಭಾವನಾತ್ಮಕ ಬಲ ತುಂಬಿದ್ದಾರೆ. ಚಿತ್ರವು ಉನ್ನತ ಮಟ್ಟದ VFX ಮತ್ತು ಅದ್ಧೂರಿ ಸೆಟ್‌ಗಳನ್ನು ಹೊಂದಿದ್ದು, ಹಾರರ್ ಪ್ರಿಯರಿಗೆ ಹೊಸ ಅನುಭವ ನೀಡಲಿದೆ.

ನಟ ಪ್ರಭಾಸ್ ಮಾತು..
"ಕಳೆದ ಮೂರು ವರ್ಷಗಳ ಪರಿಶ್ರಮ ಮತ್ತು ಜವಾಬ್ದಾರಿಯು ನಿರ್ದೇಶಕ ಮಾರುತಿ ಅವರ ಕಣ್ಣಲ್ಲಿ ನೀರು ತರಿಸಿದೆ. ಸಾಲು ಸಾಲು ಆಕ್ಷನ್ ಸಿನಿಮಾಗಳ ನಡುವೆ ಪ್ರೇಕ್ಷಕರಿಗೆ ಒಂದು ಪರಿಪೂರ್ಣ ಮನರಂಜನಾ ಸಿನಿಮಾ ನೀಡಬೇಕೆಂಬ ಹಂಬಲದಿಂದ ಈ 'ಹಾರರ್-ಕಾಮಿಡಿ' ಸಿದ್ಧವಾಗಿದೆ. ಈ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಕೇಳಿದಾಗ ನಾನು ಮಾರುತಿ ಅವರ ಬರವಣಿಗೆಯ ಫ್ಯಾನ್ ಆದೆ. 15 ವರ್ಷಗಳ ನಂತರ ನನ್ನ ಅಭಿಮಾನಿಗಳಿಗೆ 'ಡಾರ್ಲಿಂಗ್' ಶೈಲಿಯ ಪೂರ್ಣ ಪ್ರಮಾಣದ ಎಂಟರ್‌ಟೈನ್‌ಮೆಂಟ್ ಸಿಗಲಿದೆ. ಈ ಸಂಕ್ರಾಂತಿಗೆ ಎಲ್ಲ ಸಿನಿಮಾಗಳು ಗೆಲ್ಲಲಿ, ಅದರ ಜೊತೆಗೆ 'ರಾಜಾಸಾಬ್' ಬ್ಲಾಕ್‌ಬಸ್ಟರ್ ಆಗಲಿ" ಎಂದು ಆಶಿಸಿದರು.

ನಿರ್ದೇಶಕ ಮಾರುತಿ ಮಾತು..
"ಪ್ರಭಾಸ್ ಅವರಂತಹ ದೊಡ್ಡ ನಟರಿದ್ದಾಗ ನಿರೀಕ್ಷೆಗಳು ಆಕಾಶ ಮುಟ್ಟಿರುತ್ತವೆ. ಅದಕ್ಕೆ ತಕ್ಕಂತೆ ನಾವು ಕಳೆದ ಮೂರು ವರ್ಷಗಳಿಂದ ಹಗಲಿರುಳು ಶ್ರಮಿಸಿದ್ದೇವೆ. ಈ ಹಾರರ್-ಕಾಮಿಡಿ ಪ್ರಕಾರವು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಸಾಮರ್ಥ್ಯ ಹೊಂದಿದೆ. ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಈ ಸಿನಿಮಾ ಪ್ರೇಕ್ಷಕರಿಗೆ ರಸದೌತಣ ನೀಡಲಿದೆ" ಎಂದರು.

ಮಾರುತಿ ನಿರ್ದೇಶನದ ಹಾಗೂ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ.ಜಿ. ವಿಶ್ವಪ್ರಸಾದ್ ನಿರ್ಮಿಸಿರುವ ಈ ಚಿತ್ರವು 2026ರ ಜನವರಿ 9 ರಂದು ವಿಶ್ವದಾದ್ಯಂತ ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.