Skip to main content

ವಾರಣಾಸಿ(ಕಾಶಿ) ಯ ಪ್ರಾಚೀನ, ಆಧ್ಯಾತ್ಮಿಕ ನಗರದಲ್ಲಿ ದೈಜಿ ಸಿನೆಮಾ ಚಿತ್ರೀಕರಣ – ಪ್ರಮುಖ ಅತಿಥಿ ಪಾತ್ರದಲ್ಲಿ ಕನ್ನಡದ ಖ್ಯಾತ ನಿರ್ದೇಶಕ ಗುರು ದೇಶಪಾಂಡೆ ನಟನೆ.

ವಾರಣಾಸಿ(ಕಾಶಿ) ಯ ಪ್ರಾಚೀನ, ಆಧ್ಯಾತ್ಮಿಕ ನಗರದಲ್ಲಿ ದೈಜಿ ಸಿನೆಮಾ ಚಿತ್ರೀಕರಣ – ಪ್ರಮುಖ ಅತಿಥಿ ಪಾತ್ರದಲ್ಲಿ ಕನ್ನಡದ ಖ್ಯಾತ ನಿರ್ದೇಶಕ ಗುರು ದೇಶಪಾಂಡೆ ನಟನೆ.
ಈಗಾಗಲೇ ಟೀಸರ್ ನಿಂದ ಕುತೂಹಲ ಕೆರಳಿಸಿರುವ ಸೂಪರ್ ನ್ಯಾಚುರಲ್ ಥ್ರಿಲ್ಲರ್ – ’ದೈಜಿ’ ಸಿನೆಮಾ ತಂಡವು ಮಹತ್ತರವಾದ ಚಿತ್ರೀಕರಣ ಒಂದನ್ನು ಭಾರತದ ಅತ್ಯಂತ ಪ್ರಾಚೀನ, ಅಧ್ಯಾತ್ಮಿಕ ನಗರವಾದ ವಾರಣಾಸಿಯಲ್ಲಿ ಚಿತ್ರೀಕರಿಸಿಕೊಂಡು ಹಿಂದಿರುಗಿದೆ. ವಾರಾಣಸಿಯ, ಅಲೌಕಿಕತೆ, ಅಧ್ಯಾತ್ಮಿಕತೆ, ಅಲ್ಲಿನ ಘಾಟ್ ಗಳು, ಅಲ್ಲಿಯ ಕಾಲಾತೀತತೆಯಿಂದ ಕೂಡಿದ ಜೀವನ ಇವುಗಳು ದೈಜಿ ಸಿನೆಮಾದ ಮುಖ್ಯ ವಿಷಯವಾದ ಅಗೋಚರ, ಅತೀಂದ್ರಿಯ ಶಕ್ತಿ, ನಂಬಿಕೆ, ಮನುಷ್ಯನ ಕಾಡುವ ಈ ಶಕ್ತಿಗಳ ಬಗೆಗಿನ ಕಥೆಗೆ ಸರಿಯಾದ ಒಂದು ವಾತಾವರಣ ಒದಗಿಸಿ ಕೊಟ್ಟಿತು. ಶಿವಾಜಿ ಸೂರತ್ಕಲ್ ೧ ಮತ್ತು ೨ ಯಶಸ್ವಿ ಚಿತ್ರಗಳನ್ನು ಕೊಟ್ಟ ನಿರ್ದೇಶಕ ಆಕಾಶ್ ಶ್ರೀವತ್ಸ ರವರ ನಿರ್ದೇಶನ ಹಾಗೂ ವಿಭಾ ಕಶ್ಯಪ್ ಪ್ರೋಡಕ್ಷನ್ಸ್ ನ ಅಡಿಯಲ್ಲಿ ನಿರ್ಮಿಸುತ್ತಿರುವ ನಿರ್ಮಾಪಕ ರವಿ ಕಶ್ಯಪ್ ರವರ ಈ ಸಿನಿಮಾ ದೈಜಿ ಯು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು ಇದು ಮನುಷ್ಯ ಹಾಗೂ ಅಲೌಕಿಕ, ಅತೀಂದ್ರಿಯ, ಅಗೋಚರ ಶಕ್ತಿಗಳ ನಡುವಿನ ಸಂಕೀರ್ಣ ಸಂಬಂಧಗಳ ಅನ್ವೇಷಣೆಯೇ ಇದರ ತಿರುಳು.
ಚಿತ್ರತಂಡವು ಸತತವಾಗಿ ಮೂರು ದಿನಗಳ ಕಾಲ ರಾತ್ರಿಯಲ್ಲಿ ಚಿತ್ರೀಕರಣ ಮಾಡಿದ್ದು, ಇಲ್ಲಿಯ ಘಾಟ್ ಗಳು, ಸಣ್ಣ ಸಣ್ಣ ಓಣಿಗಳು, ಗಂಗಾ ಆರತಿ, ಅಧ್ಯಾತ್ಮಿಕತೆಯಿಂದ ಕೂಡಿದ ಭಕ್ತ ಸಮೂಹದ ಅನಿಯಂತ್ರಿತ ವಾತವರಣದಲ್ಲೇ, ಜನಜಂಗುಳಿಗಳ ಮಧ್ಯೆ ಸಿನಿಮಾದ ಮಹತ್ತರದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಈ ರೀತಿಯ ಚಿತ್ರೀಕರಣದಿಂದ ಸಿನಿಮಾಗೆ ಬೇಕಾದ ಕಚ್ಚಾ, ವೈವಿಧ್ಯಮಯ ಹಾಗೂ ರೋಮಾಂಚಕತೆಯ ದೃಶ್ಯಾವಳಿಗಳು ದೈಜಿ ಕಥೆಗೆ ಸರಿಯಾಗಿ ಹೊಂದುವ ವಾತಾವರಣ ಲಭ್ಯವಾಗಿಸಿತು.
ಇದೇ ಸಂದರ್ಭದಲ್ಲಿ ದೈಜಿ ತಂಡಕ್ಕೆ ಮತ್ತೋರ್ವ ಕಲಾವಿದರಾದ, ಕನ್ನಡ ಸಿನೆಮಾದ ಹೆಸರಾಂತ ನಿರ್ದೇಶಕ ಗುರು ದೇಶಪಾಂಡೆ ಯವರು ಚಿತ್ರೀಕರಣದಲ್ಲಿ ಅತಿಥಿ ಪಾತ್ರದಲ್ಲಿ ಪಾಲ್ಗೊಂಡರು. ರಾಜಾ ಹುಲಿ, ರುದ್ರತಾಂಡವ ದಂತಹ ಅನೇಕ ಸಿನೆಮಾಗಳನ್ನು ನಿರ್ದೇಶಿಸಿರುವ ಗುರು ದೇಶಪಾಂಡೆ ಯವರು, ಈ ಚಿತ್ರದಲ್ಲಿ ಕಥಯ ಓಘಕ್ಕೆ ಹೊಂದುಕೊಂಡಂತೆ, ಅದಕ್ಕೆ ಮಹತ್ತರವಾದ ತಿರುವನ್ನು ತಂದುಕೊಡುವಂತಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಪಾತ್ರವು ಅಗೋಚರ, ಅಲೌಕಿಕ ಶಕ್ತಿಗಳ ವಿವಿಧ ತಿರುಳುಗಳನ್ನು ಪರಿಚಯಿಸುವ, ಜನರ ಮನಸ್ಸಿನಲ್ಲಿ ಗಟ್ಟಿಯಾಗಿ ಬೇರೂರುವ ಒಂದು ಪಾತ್ರವಾಗಿ ಹೊರಹೊಮ್ಮುವುದರಲ್ಲಿ ಅನುಮಾನವಿಲ್ಲ.
ದೈಜಿ ಸಿನಿಮಾವು ಜನರ ಮನಸ್ಸಿನಲ್ಲಿ ಅತೀ ಹೆಚ್ಚು ನಿರೀಕ್ಷೆ ಹುಟ್ಟಿಸಿರುವ ಕನ್ನಡದ ಸಿನಿಮಾಗಳಲ್ಲಿ ಒಂದು ಎಂಬುದು ಈಗಾಗಲೇ ಟೀಸರ್ ನಿಂದ ತಂಡ ತೋರಿಸಿಕೊಟ್ಟಿದೆ. ದೈಜಿ ಬರೀ ಚಾಣಾಕ್ಷ ಚಿತ್ರಕಥೆಯಷ್ಟೇ ಅಲ್ಲದೇ ಇದರ ಚಿತ್ರೀಕರಣವು ಭಾರತದ ವಿವಿಧ ರಾಜ್ಯ, ಕರ್ನಾಟಕದ ವಿವಿಧ ಜಿಲ್ಲೆಗಳು ಹಾಗೂ ಯುನೈಟೆಡ್ ಕಿಂಗ್ಡಮ್ ಗಳಲ್ಲಿ ನಡೆದಿದ್ದು ಇದರ ಕಥೆಯು ಆಳ ಹಾಗೂ ವಿಸ್ತಾರತೆಯಿಂದ ಕೂಡಿದೆ ಎನ್ನುವುದು ಸ್ಪಷ್ಟ.
ಈ ಸಿನೆಮಾದ ತಾರಾಗಣ ಕೂಡ ಕುತೂಹಲಕಾರಿಯಾಗಿದೆ. ರಮೇಶ್ ಅರವಿಂದ್ ಹಾಗೂ ರಾಧಿಕಾ ನಾರಾಯಣ್ ರವರ ಅದ್ಭುತ ಹಾಗೂ ಮನೋಜ್ಞ ನಟನೆಯು ಭಾವನಾತ್ಮಕ, ಸಸ್ಪೆನ್ಸ್, ರೋಮಾಂಚಕತೆಯ ಈ ಚಿತ್ರಕ್ಕೆ ಭದ್ರ ಬುನಾದಿಯಾಗಿದೆ. ತಾರಾಗಣದಲ್ಲಿ ದಿಗಂತ್ ಮಂಚಾಲೆ, ಅವಿನಾಶ್ ಯೆಳಂದೂರ್, ನಿಧಿ ಹೆಗ್ಡೆ, ಶ್ರೀಧರ್ ಕೊಣನೂರ್, ಬಿ.ಎಂ.ಗಿರಿರಾಜ್ ರವರು ಮುಖ್ಯ ಭೂಮಿಕೆಯಲ್ಲಿದ್ದರೆ, ಇನ್ನೂ ಹಾಲಿವುಡ್ ನಲ್ಲಿ ನಟಿಸಿರುವ ನಟರಾದ ಸ್ಯಾಂಡಿ ಹಿಗಿನ್ಸ್, ಸಾಲ್ ಯೂಸುಫ್, ಎಲ್ಲೆನ್ ಶಂಬರ್ಲಿಯನ್, ಫ್ಲೋರೆನ್ಶಿಯಾ ಮಾರ್ಟಿನೆಜ಼ ರವರು ಮುಖ್ಯ ಪಾತ್ರದಲ್ಲಿದ್ದಾರೆ, ಅಷ್ಟೇ ಅಲ್ಲದೇ ಮಿಸ್ ಐರ್ಲೆಂಡ್ ಅಲೆಕ್ಸಾಂಡ್ರಾ ಟೇಲರ್ ಈ ಚಿತ್ರದ ಅತೀ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದು, ಈ ಸಿನೆಮಾದ ಕಥೆಯ ವಿಸ್ತಾರತೆ, ಅಂತರರಾಷ್ಟ್ರೀಯ ಮಟ್ಟದ ಮಹತ್ವವನ್ನು ತೋರುತ್ತದೆ.
ದೈಜಿ ಗೆ ಶ್ರೀಶ ಎಮ್. ಕುದುವಳ್ಳಿ ಯವರ ಛಾಯಾಗ್ರಹಣವಿದ್ದು, ಜುಡಾ ಸ್ಯಾಂಡಿ ರವರ ಹಿನ್ನೆಲೆ ಸಂಗೀತವಿದೆ. ಗಟ್ಟಿಯಾದ ಚಿತ್ರಕಥೆ, ಜಾಗತಿಕ ತಾರಾಗಣ, ಅದ್ಭುತ ಸನ್ನಿವೇಶಗಳಿಂದ ಕೂಡಿದ ದೈಜಿ ಚಿತ್ರವು ಕನ್ನಡದ ಬಹುನಿರೀಕ್ಷಿತ ಚಿತ್ರವಾಗಿ ಹೊರಹೊಮ್ಮಿದೆ. ವಾಸ್ತವಿಕತೆ ಹಾಗೂ ಅತೀಂದ್ರಿಯ ಶಕ್ತಿಗಳ ನಡುವಿನ ಸಂಘರ್ಷವು ವೀಕ್ಷಕರಿಗೆ ಒಳ್ಳೆಯ ಚಿತ್ರ ನೀಡುವಲ್ಲಿ ಯಶಸ್ವಿಯಾಗುವುದರಲ್ಲಿ ಸಂದೇಹವಿಲ್ಲ.
ದೈಜಿ ಸಿನಿಮಾ ಗೆ ಕೇವಲ ಎರಡು ದಿನಗಳ ಚಿತ್ರೀಕರಣ ಉಳಿದಿದ್ದು, ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ಪ್ರಾರಂಭವಾಗಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...