Skip to main content

ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಕಾನ್ಫಿಡದಿಂದ ರಾಜ್ಯೋತ್ಸವ ಪ್ರಶಸ್ತಿ..

ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಕಾನ್ಫಿಡದಿಂದ ರಾಜ್ಯೋತ್ಸವ ಪ್ರಶಸ್ತಿ.. 
1984 ರಲ್ಲಿ ಎಸ್ ಆರ್ ಪುಟ್ಟಣ್ಣ ಕಣಗಾಲ್, ಸಿದ್ದಲಿಂಗಯ್ಯ, ಎಂ ಎನ್ ಲಕ್ಷ್ಮೀ ನಾರಾಯಣ ಹಾಗೂ ಹಿರಿಯ ನಿರ್ದೇಶಕರುಗಳು ಸೇರಿ ಕಟ್ಟಿದ ಸಂಸ್ಥೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ. ಕಾನ್ಫಿಡ. ಈಗ ಇದೆ ಸಂಘದಡಿಯಲ್ಲಿ ಮೂರು ವರ್ಷಗಳಿಂದ ಡಿಸೆಂಬರ್‌ ಒಂದರಂದು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರಾದ ಭಾರತೀಯ ಚಿತ್ರರಂಗದ ದಿಗ್ಗಜರು ಎಸ್ ಆರ್ ಪುಟ್ಟಣ್ಣ ಕಣಗಾಲರ ಹುಟ್ಟು ಹಬ್ಬವನ್ನು ನಿರ್ದೇಶಕರ  ಸಂಘ ಆಚರಣೆ ಮಾಡುತ್ತಾ. ಬಂದಿದೆ. ಅಂದು ಸದಸ್ಯರು ಮತ್ತು ಅವರ ಕುಟುಂಬ ವರ್ಗದವರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಈ ವರ್ಷವೂ ಕೂಡ ಪುಟ್ಟಣ್ಣ ಕಣಗಾಲರ ಜನ್ಮದಿನ ಆಚರಿಸುವುದರೊಂದಿಗೆ ಈ ವರ್ಷ ವಿಶೇಷ ಎಂಬಂತೆ ಸಂಘದ ಈಗಿನ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ ಒಂದರಂದು ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಚಿತ್ರರಂಗದ ಎಲ್ಲಾ ವಿಭಾಗದಿಂದ ಹಿರಿಯ ಕಾರ್ಮಿಕರು, ಕಲಾವಿದರು, ತಂತ್ರಜ್ಞರು, ನಿರ್ದೇಶಕರು, ನಿರ್ಮಾಪಕರುಗಳ ವಲಯದಿಂದ ಎಲ್ಲಾ ವಿಭಾಗಳಿಂದಲೂ ಅಂದರೆ  ನಿರ್ಮಾಣ ಸಹಾಯಕರಿಂದ ನಿರ್ಮಾಪಕರವರೆಗೆ  35 ಜನರನ್ನು  ಆಯ್ಕೆ ಮಾಡಿ ಅವರಿಗೆ ಕಾನ್ಫಿಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ  ಮುಖ್ಯ ಅತಿಥಿಗಳಾಗಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ‌ ಕೆ ವಿ ಪ್ರಭಾಕರ್, ಇಸ್ರೋದ ವಿಶಿಷ್ಟ ವಿಜ್ಞಾನಿ ರಾಮನಗೌಡ ವೆಂಕನಗೌಡ ನಾಡಗೌಡರುಹಿರಿಯ ನಿರ್ದೇಶಕರಾದ ಓಂ ಶ್ರೀ ಸಾಯಿಪ್ರಕಾಶ್, ಕಲಾವಿದರಾದ ಹಿರಿಯ ನಟ ಶ್ರೀಧರ್, ಸುಂದರ್ ರಾಜ್, ಶಿವಕುಮಾರ್, ಅನಿರುದ್ಧ ಜತಕರ್, ಶ್ರೀಮತಿ ಶ್ರೀರಕ್ಷಾ ಶಿವಕುಮಾರ್, ಶ್ರೀಮತಿ ಪ್ರಮೀಳಾ ಜೋಷಾಯ್, ಪುಟ್ಟಣ್ಣನವರ ಶಿಷ್ಯರಾದ ಚಂದ್ರಹಾಸ ಆಳ್ವ, ಶ್ರೀಮತಿ ಡಾ ಪುಣ್ಯವತಿ, ಡಾ. ಬಿ ಎಮ್ ಉಮೇಶ್ ಕುಮಾರ್, ಕೃಷ್ಣೇಗೌಡ, ಗುರುರಾಜ್ ಮತ್ತು ಪುಟ್ಟಣ್ಣ ಕಣಗಾಲ್ ರವರ ಮಕ್ಕಳಾದ ಭುವನೇಶ್ವರಿ ಮತ್ತು ತ್ರಿವೇಣಿ ಯವರು ಹಾಗೂ ಚಿತ್ರರಂಗದ ಮಹನೀಯರು, ಹಿರಿಯರು ಭಾಗವಹಿಸಿದ್ದರು. 
ಈ ಸಂದರ್ಭದಲ್ಲಿ ಟಾಪ್ ಸ್ಟಾರ್ ರೇಣುಕುಮಾರ್ ಅವರ ವಾದ್ಯಗೋಷ್ಠಿ ಕಾರ್ಯಕ್ರಮಕ್ಕೆ ಮೆರುಗು ನೀಡಿತ್ತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್, ಉಪಾಧ್ಯಕ್ಷರಾದ, ಜೋ ಸೈಮನ್, ಜಗದೀಶ್ ಕೊಪ್ಪ, ಕಾರ್ಯದರ್ಶಿಗಳಾದ ಟಾಪ್ ಸ್ಟಾರ್ ರೇಣುಕುಮಾರ್, ಜಂಟಿ ಕಾರ್ಯದರ್ಶಿಗಳಾದ ಮಳವಳ್ಳಿ ಸಾಯಿಕೃಷ್ಣ, ಖಜಾಂಚಿಗಳಾದ ಆದಿತ್ಯ ಚಿಕ್ಕಣ್ಣ ಹಾಗೂ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಉಪಸಮಿತಿ ಸದಸ್ಯರು ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದರು. 
ಕಾನ್ಫಿಡ ರಾಜ್ಯೋತ್ಸವ ಪ್ರಸಸ್ತಿ ವಿಜೇತರು
ಉಡುಪಿ ಕೃಷ್ಣ ನಿರ್ಮಾಣ ಸಹಾಯಕರು, ರಾಜಣ್ಣ 
ಬೆಳಕು ಚೆಲ್ಲುವವರು, ಮಹಾಬಲ ವಾಹನ ಚಾಲಕರು,
ಎ ಎಚ್ ಭಟ್ ರಾಘವೇಂದ್ರ ಹೊರಾಂಗಣ ಚಿತ್ರೀಕರಣ ಘಟಕ ಮಾಲೀಕರು,
 ಕೆ ಸಿ ನಾಗರಾಜ್, ವಸ್ತ್ರಾಲಂಕಾರರು, 
ಎನ್ ಕೆ ರಾಮಕೃಷ್ಣ ವರ್ಣಾಲಂಕಾರರು, 
ಜಿ ನಾಗೇಶ್ವರ ರಾವ್ ಕೇಶಾಲಂಕಾರರು,
ರವೀಂದ್ರನಾಥ ಕೆ ಎಸ್ ಕಂಠದಾನ ಕಲಾವಿದರು, 
ರಾಮಣ್ಣ ಎನ್ ಎಲ್ ನಿರ್ಮಾಣ ನಿರ್ವಾಹಕರು,
ಅಶ್ವಥ್ ನಾರಾಯಣ್ ಸ್ಥಿರ  ಚಿತ್ರ ಛಾಯಾಗ್ರಹಕರು, 
ಮಹೇಂದ್ರ ಧ್ವನಿ ಮುದ್ರಣಕಾರರು,
ಶಂಕರ್ ಎಫೆಕ್ಟ್ ಇಂಜಿನಿಯರ್, 
ಗಂಗಾಧರ್ ಸೋಮ್  
ಪ್ರಚಾರ ಕಲೆ,
ಸುಧೀಂದ್ರ ವೆಂಕಟೇಶ್ ಪತ್ರಿಕಾ ಸಂಪರ್ಕ ಪತ್ರಕರ್ತರು,
ರಿಚರ್ಡ್ ಲೂಯಿಸ್  ಬರಹಗಾರರು,
ದತ್ತಣ್ಣ  ಹಿರಿಯ ಚಲನಚಿತ್ರ ಕಲಾವಿದರು,
ಶ್ರೀಮತಿ ಎಂ ಎನ್ ಲಕ್ಷ್ಮೀ ದೇವಿ ಹಿರಿಯ ಚಲನಚಿತ್ರ ಕಲಾವಿದರು,
ರಮಣ ಕಣಗಾಲ್ ಸಹಾಯಕ ನಿರ್ದೇಶಕರು,
ರಘುನಂದನ್ ಬಿ ಸಹ ನಿರ್ದೇಶಕರು,
ಥ್ರಿಲ್ಲರ್ ಮಂಜು  ಸಾಹಸ ನಿರ್ದೇಶಕರು, 
ಬಾಬು ಖಾನ್ ಕಲಾ ನಿರ್ದೇಶಕರು,
ವಿಜಯ ರಾಮ್ ನೃತ್ಯ ನಿರ್ದೇಶಕರು
ಎಂ ಎನ್ ಸ್ವಾಮಿ ಸಂಕಲನಕಾರರು,  
ಶ್ರೀಮತಿ ಬಿ ಕೆ ಸುಮಿತ್ರ ಹಿನ್ನೆಲೆ ಗಾಯಕರು,
ಮೈಸೂರು ಮೋಹನ್  ಸಂಗೀತ ನಿರ್ದೇಶಕರು, 
ಕೆ ವಾಸುದೇವ ಛಾಯಾಗ್ರಹಕರು 
ಟಿ ಶ್ರೀನಿವಾಸ್ ರವರು ಪ್ರಾದೇಶಿಕ ಚಲನಚಿತ್ರ ವಿತರಕರು ಪ್ರದರ್ಶಕರು ನಿರ್ಮಾಪಕರು,
ಸುಂದರೇಶ್ ಬಿ ಕೆ ಅಭಿಮಾನದ ಸೇವೆ,
ಆದಿತ್ಯ ಚಿಕ್ಕಣ್ಣ ಅಭಿಮಾನದ ಸೇವೆ
ಕೆ ವಿ  ಚಂದ್ರಶೇಖರ್ ಚಲನಚಿತ್ರ ಪ್ರದರ್ಶಕರು,
ನಾರಾಯಣ ರೆಡ್ಡಿ ಚಲನಚಿತ್ರ ವಿತರಕರು,
ಎಸ್ ಎ ಶ್ರೀನಿವಾಸ್ ನಿರ್ಮಾಪಕರು,
 ನಂಜರಾಜೇ ಅರಸ್, ನಿರ್ದೇಶಕರು ಮುಂತಾದವರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...