Skip to main content

ಸುನಯನ "ಮೌನ ರಾಗ" ಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಸಾಥ್..

ಸುನಯನ "ಮೌನ ರಾಗ" ಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಸಾಥ್..
ಪತ್ರಕರ್ತೆ ಹಾಗೂ ವಿಮರ್ಶಕಿ ಸುನಯನ ಸುರೇಶ್ ಈಗ ನಿರ್ದೇಶಕಿಯಾಗಿದ್ದಾರೆ. ಇಪ್ಪತ್ತು ನಿಮಿಷಗಳ "ಮೌನ ರಾಗ" ಎಂಬ ಕಿರುಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಈ ಕಿರುಚಿತ್ರ ಪ್ರಶಸ್ತಿಯ ಜೊತೆಗೆ ಅಪಾರ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಇತ್ತೀಚೆಗೆ ಈ ಕಿರುಚಿತ್ರದ ವಿಶೇಷ ಪ್ರದರ್ಶನ ಬೆಂಗಳೂರಿನಲ್ಲಿ ನಡೆಯಿತು. ಅಶ್ವಿನಿ‌ ಪುನೀತ್ ರಾಜಕುಮಾರ್, ಪ್ರಿಯಾಂಕಾ ಉಪೇಂದ್ರ, ಕೆ.ಎಂ.ಚೈತನ್ಯ, ಪನ್ನಗಾಭರಣ, ಭಾವನಾ ರಾವ್, ಮೇಘನಾ ಗಾಂವ್ಕರ್, ಮಾನ್ವಿತ ಕಾಮತ್, ಪ್ರವೀಣ್ ತೇಜ್, ಶುಭ್ರ ಅಯ್ಯಪ್ಪ, ರಕ್ಷ್, ಪ್ರಭು ಮುಂಡ್ಕರ್, ದಿಶಾ ಮದನ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಸೆಲೆಬ್ರಿಟಿಗಳು "ಮೌನ ರಾಗ" ದ ವಿಶೇಷ ಪ್ರದರ್ಶನಕ್ಕೆ ಆಗಮಿಸಿ, ಸುನಯನ ಅವರ ಚೊಚ್ಚಲ ಪ್ರಯತ್ನಕ್ಕೆ ಮನಸ್ಸಾರೆ ಹಾರೈಸಿದರು. ನಂತರ ತಂಡದ ಸದಸ್ಯರು ಮಾತನಾಡಿದರು.
ಕಿರುಚಿತ್ರದಲ್ಲಿ ನಟಿಸಿರುವ ನಟಿ ಶ್ರುತಿ ಹರಿಹರನ್ ಮಾತನಾಡಿ, ಸುನಯನ ಅವರು ನನಗೆ ಬಹಳ ವರ್ಷಗಳ ಪರಿಚಯ. ಈಗ ಅವರು ನಿರ್ದೇಶಕಿಯಾಗಿರುವುದು ಖುಷಿಯಾಗಿದೆ. ಹೆಣ್ಣು ಮಕ್ಕಳ ದಿನನಿತ್ಯದ ಬವಣೆಗಳನ್ನು ಸುನಯನ ಇಪ್ಪತ್ತು ನಿಮಿಷಗಳಲ್ಲಿ ಮನಮುಟ್ಟುವಂತೆ ತೋರಿಸಿದ್ದಾರೆ. ನಿರ್ದೇಶನದ ಬಗ್ಗೆ ಆಸಕ್ತಿ ಹೊಂದಿರುವವರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಕಿರುಚಿತ್ರ ಸೂಕ್ತ ವೇದಿಕೆ. ಆ ಕೆಲಸವನ್ನು ಸುನಯನ ಅಚ್ಚುಕಟ್ಟಾಗಿ ಮಾಡಿದ್ದಾರೆ. ತಾಯಿ - ಮಗನ ಸೆಂಟಿಮೆಂಟ್ ಸನ್ನಿವೇಶಗಳು ಕೂಡ ಮನಸ್ಸಿಗೆ ಹತ್ತಿರವಾಗುತ್ತದೆ ಎಂದರು‌.
"ಮೌನ ರಾಗ" ನನ್ನ ಮೊದಲ ನಿರ್ದೇಶನದ ಕಿರುಚಿತ್ರ. ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವದಲ್ಲಿ ಈಗಾಗಲೇ ಪ್ರದರ್ಶನಗೊಂಡು ಪ್ರಶಸ್ತಿ ಹಾಗೂ ಮೆಚ್ಚುಗೆ ಪಡೆದುಕೊಂಡಿದೆ. ಸದ್ಯದಲ್ಲೇ ಓಟಿಟಿಯೊಂದರಲ್ಲಿ ಈ ಕಿರುಚಿತ್ರ ಬಿಡುಗಡೆಯಾಗಲಿದೆ. ಪ್ರೀತಾ ಜಯರಾಮ್ ಛಾಯಾಗ್ರಹಣ, ಅಲೋಕ್ ಸಂಗೀತ ನಿರ್ದೇಶನವಿರುವ "ಮೌನ ರಾಗ" ಚಿತ್ರೀಕರಣ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದಿದೆ. ಶೃತಿ ಹರಿಹರನ್, ಅಗ್ನಿವ್, ಸೂರಜ್ ಗೌಡ, ಹರ್ಷಿಲ್ ಕೌಶಿಕ್, ಸಂಯುಕ್ತ ಹೊರನಾಡ್, ಅನಿರುದ್ಧ್ ಆಚಾರ್ಯ, ರಾಜಶ್ರೀ ಪೊನ್ನಪ್ಪ, ಸುವಿಶ್, ಐಶ್ವರ್ಯ ಕೌಶಿಕ್, ALL OK, ರಿಷಬ್ ಮುಂತಾದವರು ಇದರಲ್ಲಿ ನಟಿಸಿದ್ದಾರೆ. ಆದಿತ್ಯ ಗುಣವಂತೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಹಾಗೂ ಅಶ್ವಿನಿ ರಮೇಶ್ ಎಕ್ಸಿಕ್ಯುಟಿವ್ ಪ್ರೊಡ್ಯುಸರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಮುಂದೆ ಡಾಕ್ಯುಮೆಂಟರಿ ಹಾಗೂ ಚಲನಚಿತ್ರವನ್ನು ನಿರ್ದೇಶಿಸುವ ಇರಾದೆ ಇದೆ.‌ ಸದ್ಯದಲ್ಲೇ ಅದರ ಬಗ್ಗೆ ಮಾಹಿತಿ ನೀಡುತ್ತೇನೆ. ಇಂದಿನ ವಿಶೇಷ ಪ್ರದರ್ಶನಕ್ಕೆ ಬಂದು ಹಾರೈಸಿದ ಎಲ್ಲರಿಗೂ ಧನ್ಯವಾದ ಎಂದರು ನಿರ್ಮಾಪಕಿ ಹಾಗೂ ನಿರ್ದೇಶಕಿ ಸುನಯನ ಸುರೇಶ್.     
ಈ ಕಿರುಚಿತ್ರಕ್ಕೆ ನಾನು ಸಂಗೀತ ಸಂಯೋಜಿಸಿದ್ದೇನೆ. ಯೋಗರಾಜ್ ಭಟ್ ಅವರು ಹಾಡೊಂದನ್ನು "ಮೌನ ರಾಗ"ಕ್ಕೆ ಬರೆದಿದ್ದಾರೆ ಎಂದರು ಸಂಗೀತ ನಿರ್ದೆಶಕ ALL OK.
"ಮೌನ ರಾಗ" ಕಿರುಚಿತ್ರದ ತಂತ್ರಜ್ಞರು ಹಾಗೂ ಕಲಾವಿದರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...