Skip to main content

ಹಾಡುಗಳ ಮೂಲಕವೇ ಸಂಚಲನ ಮೂಡಿಸಿದ್ದ ಮರಳಿ ಮನಸಾಗಿದೆ ಚಿತ್ರದ ಟೀಸರ್ ಬಿಡುಗಡೆಗೆ ಸಾಕ್ಷಿಯಾದ ಸಿನಿ ಪ್ರೇಮಿಗಳು..

ಹಾಡುಗಳ ಮೂಲಕವೇ ಸಂಚಲನ ಮೂಡಿಸಿದ್ದ ಮರಳಿ ಮನಸಾಗಿದೆ ಚಿತ್ರದ ಟೀಸರ್ ಬಿಡುಗಡೆಗೆ ಸಾಕ್ಷಿಯಾದ ಸಿನಿ ಪ್ರೇಮಿಗಳು..
ದಾವಣಗೆರೆಯ ಮುದೇಗೌಡ್ರು ನವೀನ್ ಕುಮಾರ್ ಆರ್. ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ಅವರ ನಿರ್ಮಾಣದಲ್ಲಿ ಕಾರ್ಕಳದ ನಾಗರಾಜ್ ಶಂಕರ್ ಅವರ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನದಲ್ಲಿ ಮೂಡಿಬಂದಿರುವ `ಮರಳಿ ಮನಸಾಗಿದೆ' ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಗೆ ಇಂದು ದಾವಣಗೆರೆ ಜನತೆ ಸಾಕ್ಷಿಯಾದರು. ಕರುನಾಡ ಸಮರ ಸೇನೆ ಇದಕ್ಕೆ ಸಾಥ್ ನೀಡಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳದ ಶ್ರೀ ವೀರಭದ್ರ ಸ್ವಾಮಿ ಸನ್ನಿಧಾನದಲ್ಲಿ `ಮರಳಿ ಮನಸಾಗಿದೆ' ಚಿತ್ರದ ಮಹೂರ್ತ ದಿಂದ ಶುಭಾರಂಭಗೊಂಡು ಜಿಲ್ಲೆ ಮತ್ತು ನಾಡಿನ ಪ್ರಮುಖ ತಾಣಗಳಲ್ಲಿ ಚಿತ್ರೀಕರಣಗೊಂಡು ತೆರೆಗೆ ಸಿದ್ದವಾಗಿ, ಟೀಸರ್ ದಾವಣಗೆರೆಯಲ್ಲಿಯೇ ಬಿಡುಗಡೆಯಾಗಿರುವುದು ಕನ್ನಡಿಗರು ಹೆಮ್ಮೆಪಡುವ ವಿಚಾರವಾಗಿದೆ ಎಂದರು. ಯುವ ಪೀಳಿಗೆಗೆ ಭಾವನೆಗಳನ್ನು ಬೆಸೆಯುವಂತಹದ್ದು, ಮನಸ್ಸನ್ನು, ಬುದ್ದಿಯನ್ನು ಸ್ವಾಸ್ಥಗೊಳಿಸುವಂತಹದ್ದು, ಜೊತೆಗೆ ಸ್ವಾಸ್ಥ್ಯ ಬದುಕಿ ನಡೆಗೆ ಸಾಗುವಂತಹ ಸಂದೇಶವನ್ನು ಸಾರುವ ಚಿತ್ರ ನಿರ್ಮಾಣಗೊಂಡಿರುವುದು ಸಂತಸ ಉಂಟುಮಾಡಿದೆ. ಕನ್ನಡ ಚಿತ್ರಗಳನ್ನು ಪ್ರೇಕ್ಷಕರು ನೇರವಾಗಿ ಚಿತ್ರಮಂದಿರಗಳಿಗೇ ಹೋಗಿ ನೋಡುವಂತೆ ಕರೆ ನೀಡಿದರು.
ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಮಾತನಾಡಿ, `ಮರಳಿ ಮನಸಾಗಿದೆ' ಚಿತ್ರ ಶತದಿನೋತ್ಸವ ಆಚರಿಸುವ ಜೊತೆಗೆ ಪ್ಯಾನ್ ಇಂಡಿಯಾ ಖ್ಯಾತಿ ಗಳಿಸುವ ಚಿತ್ರಗಳನ್ನು ನಿರ್ಮಾಣ ಮಾಡಲಿ, ಚಿತ್ರದ ನಟ-ನಟಿಯರು ಪ್ಯಾನ್ ಇಂಡಿಯಾ ಸ್ಟಾರ್‌ಗಳಾಗಿ ಮಿಂಚಲಿ ಎಂದು ಶುಭ ಹಾರೈಸಿದರು. ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ ಅವರು, ಚಿತ್ರದ ಟೀಸರ್ ಗಮನಿಸಿದರೆ ಯುವ ಜನರ ಮನಸ್ಸನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದೆ. ಯುವಕರಲ್ಲಿ ಉತ್ಸಾಹ ಮೂಡಿಸುವ ಚಿತ್ರ ಇದಾಗಿದೆ.
ರಂಗಕರ್ಮಿ, ಹಿರಿಯ ಪತ್ರಕರ್ತ ಬಾ.ಮ. ಬಸವರಾಜಯ್ಯ ಮಾತನಾಡಿ, `ಮರಳಿ ಮನಸಾಗಿದೆ' ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಶಾಸಕ ಕೆ.ಎಸ್.ಬಸವಂತಪ್ಪ, ಹಿರಿಯ ಪತ್ರಕರ್ತ ಹೆಚ್.ಬಿ. ಮಂಜುನಾಥ್, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಪಾಲಿಕೆ ಮಾಜಿ ಸದಸ್ಯ ಗಡಿಗುಡಾಳ್ ಮಂಜುನಾಥ್, ಕರ್ನಾಟಕ ಮುಕ್ತ ವಿವಿ ಕುಲಸಚಿವ ಡಾ.ಹೆಚ್.ವಿಶ್ವನಾಥ್ ಮತ್ತಿತರರು `ಮರಳಿ ಮನಸಾಗಿದೆ' ಚಿತ್ರ ಯಶಸ್ವಿಗೊಳ್ಳಲಿ ಎಂದು ಶುಭ ಹಾರೈಸಿದರು.
ಚಿತ್ರದ ನಿರ್ಮಾಪಕ ಮುದೇಗೌಡ್ರ ನವೀನ್, ತೆಲಗಿ ಮಲ್ಲಿಕಾರ್ಜುನಪ್ಪ, ನಾಯಕ ನಟ ಅರ್ಜುನ್ ವೇದಾಂತ್, ನಾಯಕಿ ನಟಿ ಸ್ಮೃತಿ ವೆಂಕಟೇಶ್, ನಿರ್ದೇಶಕ ನಾಗರಾಜ್ ಶಂಕರ್, ವಿಜಯ್ ಕುಮಾರ್ ಎಸ್, ಹರೀಶ್ ಎಸ್. ಎಂ ಹಾಗೂ ಸಂಜಯ್ ಉಮ್ರಾನಿ ಅವರು, ಚಿತ್ರದ ಟೀಸರ್ ಬಿಡುಗಡೆಗೆ 
ಸಹಕರಿಸಿದ ಕನ್ನಡ ಸಮರ ಸೇನೆಯ ಸಹಕಾರವನ್ನು ಕೃತಜ್ಞತಾ ಭಾವದಿಂದ ಸ್ಮರಿಸಿದರು. ನೇರವಾಗಿ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ಅ.ಭಾ. ವೀರಶೈವ ಮಹಾಸಭಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಸಹನಾ ರವಿ, ಕನ್ನಡ ಸಮರ ಸೇನೆಯ ಕಿರಣ್ ಬಾಳೆಹೊಲದ, ಸಂಸ್ಥಾಪಕ ಅಧ್ಯಕ್ಷ ಐಗೂರು ಸುರೇಶ್, ಜಿಲ್ಲಾಧ್ಯಕ್ಷ ರಮೇಶ್ ಬೇಳೂರು ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು. ಇಡೀಯ ಕಾರ್ಯಕ್ರಮವನ್ನು ಬಹಳ ಅರ್ಥಗರ್ಭಿತ ಹಾಗೂ ಅಚ್ಚುಕಟ್ಟಾಗಿ ತಮ್ಮ ನಿರೂಪಣೆಯ ಮೂಲಕ ಎಂ. ಬಿ. ನಾಗರಾಜ್ ಕಾಕನೂರು ಅವರು ನೆರವೇರಿಸಿಕೊಟ್ಟರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...