Skip to main content

ತೀರ್ಥರೂಪ ತಂದೆಯವರಿಗೆ ಟ್ರೇಲರ್ ರಿಲೀಸ್..ಎಮೋಷನ್ ಕಥೆಯೊಂದಿಗೆ ಬಂದ ಹೊಂದಿಸಿ ಬರೆಯಿರಿ‌ ನಿರ್ದೇಶಕ..

ತೀರ್ಥರೂಪ ತಂದೆಯವರಿಗೆ ಟ್ರೇಲರ್ ರಿಲೀಸ್..
ಎಮೋಷನ್ ಕಥೆಯೊಂದಿಗೆ ಬಂದ ಹೊಂದಿಸಿ ಬರೆಯಿರಿ‌ ನಿರ್ದೇಶಕ..
ತೀರ್ಥರೂಪ ತಂದೆಯವರಿಗೆ ಸಿನಿಮಾ ಮೂಲಕ ಎಮೋಷನ್ ಕಥೆ ಹೇಳಲು ಹೊರಟ ರಾಮೇನಹಳ್ಳಿ ಜಗನ್ನಾಥ್..

ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಬದುಕನ್ನು ಬಂದಂತೆ ಸ್ವೀಕರಿಸಿ ಎಂಬ ಸಂದೇಶ ಕೊಟ್ಟಿರುವ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್. ಈಗ ಅವರು ಬದುಕಿನಲ್ಲಾದ ಒಂದು ಚಿಕ್ಕ ತಪ್ಪು ಕುಟುಂಬವನ್ನು ಎಷ್ಟು ದೂರು ಮಾಡುತ್ತದೆ. ಅದು ಒಂದಾಗಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬ ಆಶಯದ ಜೊತೆಗೆ ತಂದೆ ತಾಯಿ ಮೌಲ್ಯಗಳನ್ನು ಸಾರುವ ಕಂಟೆಂಟ್ ನೊಂದಿಗೆ ಬಂದಿದ್ದಾರೆ. ಈ ಕಥೆಗೆ ಚಿತ್ರಕ್ಕೆ ತೀರ್ಥರೂಪ ತಂದೆಯವರಿಗೆ ಎಂಬ ಅಪ್ಪಟ ಟೈಟಲ್ ಇಟ್ಟಿದ್ದಾರೆ. ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂಬಿ‌ ಲೆಗಸಿಯಲ್ಲಿ ನಿನ್ನೆ ಟ್ರೇಲರ್ ಲಾಂಚ್ ಕಾರ್ಯಕ್ರಮ ಜರುಗಿತು. ಹೊಂದಿಸಿ ಬರೆಯಿರಿ ಚಿತ್ರತಂಡ ತೀರ್ಥರೂಪ ತಂದೆಯವರಿಗೆ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. 
ಟ್ರೇಲರ್ ಬಿಡುಗಡೆ ಬಳಿಕ ಹಿರಿಯ ನಟಿ ಸಿತಾರಾ ಮಾತನಾಡಿ,‌ ನನಗೆ ಚಿತ್ರದಲ್ಲಿ ಒಂದೊಳ್ಳೆ ಪಾತ್ರ ಕೊಟ್ಟಿದ್ದಾರೆ. ನಿಮಗೆ ನನ್ನ ಪಾತ್ರ ಇಷ್ಟವಾಗುತ್ತದೆ. ಕಥೆ ಪ್ರೇಕ್ಷಕರ ಹೃದಯ ತಟ್ಟುತ್ತದೆ. ಕನ್ನಡದಲ್ಲಿ ತುಂಬಾ ದಿನಗಳ ಬಳಿಕ ಬಣ್ಣ ಹಚ್ಚಿದ್ದೇನೆ. ನಾನು ನನ್ನ ಕನಸು ಆದಮೇಲೆ ರಾಜೇಶ್ ನಟರಂಗ ಅವರ ಜೊತೆ ನಟಿಸಿದ್ದೇನೆ ಎಂದರು.
ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಮಾತನಾಡಿ, ಇದು ಬೇರೆ ಕಥೆಗೆ ಇಟ್ಟ ಟೈಟಲ್. ನಾನು ನಿಹಾರ್ ಭೇಟಿಯಾದಾಗ ಕಥೆ ಬಗ್ಗೆ ಚರ್ಚೆ ಮಾಡಿದೆವು.‌ ಥಿಯೇಟರ್ ಗೆ ಪ್ರೇಕ್ಷಕರನ್ನು ಆಕರ್ಷಿಸಲು ಟೈಟಲ್ ಬಹಳ ಮುಖ್ಯ.‌ ಅಲ್ಲದೇ ಜನಕ್ಕೆ ಹತ್ತಿರವಾಗಿ ಇರಬೇಕು ಹಾಗೂ ಕಥೆಗೆ ಅದು ಸೂಟ್ ಆಗುವ ರೀತಿಯೂ ಇರಬೇಕು. ಹೀಗಾಗಿ ಈ ಚಿತ್ರಕ್ಕೆ ಇದೇ ಟೈಟಲ್ ಇಟ್ಟೇವು. ತೀರ್ಥರೂಪ ತಂದೆಯವರಿಗೆ ತುಂಬಾ ಒಳ್ಳೆ ಟೈಟಲ್ ಎಂದು ಎಲ್ಲರೂ ಹೇಳಿದರು. ಚಿತ್ರದ ಪ್ರಮುಖ ಪಾತ್ರಧಾರಿ ಹುಡುಕಾಟದಲ್ಲಿ ಕೊನೆಗೆ ಏನೂ ಸಿಗಲಿದೆ ಎನ್ನುವುದು ಚಿತ್ರದ ಆಶಯ. ಈ ಚಿತ್ರದಲ್ಲಿ ಕಲಾವಿದರ ದಂಡೇ‌ ಇದೆ. ಎಲ್ಲಾ ಪಾತ್ರಗಳು ಸಹಜವಾಗಿ, ಉತ್ತಮವಾಗಿ ಮೂಡಿ‌ಬಂದಿದೆ ಎನಿಸುತ್ತದೆ ಎಂದರು.

ನಟ ನಿಹಾರ್ ಮುಖೇಶ್, ನಾನು ಮೂಲತಃ ಮೈಸೂರು ಹುಡ್ಗ. ಸೀರಿಯಲ್ ಮೂಲಕ ನನ್ನ ಜರ್ನಿ ಶುರುವಾಯ್ತು. ಹೊಂದಿಸಿ ಬರೆಯಿರಿ ಚಿತ್ರ ನೋಡಿದ ಮೇಲೆ ನಿರ್ದೇಶಕ ಜಗನ್ನಾಥ ಅವರ ಜೊತೆ ಕೆಲಸ ಮಾಡಬೇಕು ಎಂದುಕೊಂಡೆ. ಅದು ನನಸಾಗಿದೆ. ನಾನು ಪೃಥ್ವಿ ಎಂಬ ಪಾತ್ರ ಮಾಡಿದ್ದೇನೆ. ಪಾತ್ರದಲ್ಲಿ ತುಂಬಾ ಎಮೋಷನ್ ಪ್ಲೇ ಆಗಿದೆ ಎಂದರು.

ಚಿತ್ರದಲ್ಲಿ‌ ನಾಯಕ ನಿಹಾರ್ ಮುಕೇಶ್‌ಗೆ ನಾಯಕಿಯಾಗಿ ರಚನಾ ಇಂದರ್ ನಟಿಸಿದ್ದಾರೆ. ರಾಜೇಶ್ ನಟರಂಗ, ಸಿತಾರಾ, ರವೀಂದ್ರ ವಿಜಯ್, ಅಜಿತ್ ಹಂಡೆ ಸೇರಿದಂತೆ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಚಿತ್ರವು ‘ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗಿದ್ದು, ರಾಮೇನಹಳ್ಳಿ ಜಗನ್ನಾಥ್‌ ಅವರೇ ಕಥೆ ಬರೆದಿದ್ದಾರೆ. ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ‘ಸಂಡೇ ಸಿನಿಮಾಸ್’ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದೆ. ರವಿಚಂದ್ರ ಎ.ಜೆ ಅವರು ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಸಾಥ್ ಕೊಟ್ಟಿದ್ದಾರೆ.
'ತೀರ್ಥರೂಪ ತಂದೆಯವರಿಗೆ' ಚಿತ್ರ ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಚಿತ್ರೀಕರಣಗೊಂಡಿದೆ. ಮೊದಲು ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗಲಿದ್ದು, ಆ ಬಳಿಕ ತೆಲುಗು ಆವೃತ್ತಿಯು 'ಪ್ರಿಯಮೈನ್ ನಾನಾಕು' ಎಂಬ ಶೀರ್ಷಿಕೆಯೊಂದಿಗೆ ರಿಲೀಸ್ ಆಗಲಿದೆ. ಚಿತ್ರಕ್ಕೆ ದೀಪಕ್ ಯರಗೇರಾ ಅವರ ಛಾಯಾಗ್ರಹಣ, ಜೋ ಕಾಸ್ಟ್ ಸಂಗೀತ ಸಂಯೋಜನೆ ಮತ್ತು ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.

ಜನವರಿ 1ರಂದು ಚಿತ್ರ ಬಿಡುಗಡೆ..
ತೀರ್ಥರೂಪ ತಂದೆಯವರಿಗೆ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜನವರಿ 1ರಂದು ಸಿನಿಮಾವನ್ನು ಚಿತ್ರಮಂದಿರಗಳಿಗೆ ತರಲು ಚಿತ್ರತಂಡ ಸಜ್ಜಾಗಿದೆ. ಇಡೀ ಕುಟುಂಬ ಕುಳಿತು ನೋಡುವ ಕಾಡುವ ಕಥೆಯನ್ನು ರಾಮೇನಹಳ್ಳಿ ಜಗನ್ನಾಥ್ ತೀರ್ಥರೂಪ ತಂದೆಯವರಿಗೆ ಚಿತ್ರದ ಮೂಲಕ ಹೇಳಲಿದ್ದಾರೆ. ಹೊಸ ವರ್ಷವನ್ನು ಹೊಸ ಕಥೆಯೊಂದಿಗೆ ಪ್ರೇಕ್ಷಕರು ಸ್ವಾಗತ ಮಾಡಲಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...