Skip to main content

"ಲ್ಯಾಂಡ್ ಲಾರ್ಡ್ " ನಲ್ಲಿ ದುನಿಯಾ ವಿಜಯ್ - ರಾಜ್ ಬಿ ಶೆಟ್ಟಿ ಜುಗಲ್ ಬಂದಿ...

"ಲ್ಯಾಂಡ್ ಲಾರ್ಡ್ " ನಲ್ಲಿ ದುನಿಯಾ ವಿಜಯ್ - ರಾಜ್ ಬಿ ಶೆಟ್ಟಿ ಜುಗಲ್ ಬಂದಿ..."ದಿ ರೂಲರ್" ಟೀಸರ್ ಮೂಲಕ ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯ..
 ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಚಿತ್ರದ ಸರ್ವೈವರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ಈಗ ಈ ಚಿತ್ರದ "ದಿ ರೂಲರ್" ಟೀಸರ್ ಬಿಡುಗಡೆಯಾಗಿದೆ‌. "ದಿ ರೂಲರ್" ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಅಭಿನಯಿಸಿದ್ದಾರೆ. ಇದು ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ಆಗಿದೆ. "ದಿ ರೂಲರ್" ಟೀಸರ್ ನೋಡಿದ ರಾಜ್ ಬಿ ಶೆಟ್ಟಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಬಹು ನಿರೀಕ್ಷಿತ ಈ ಚಿತ್ರ 2026ರ ಜನವರಿ 23 ರಂದು ಬಿಡುಗಡೆಯಾಗುತ್ತಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 
ನಾನು ಈ ಚಿತ್ರ ಒಪ್ಪಿಕೊಳ್ಳಲು ಮೊದಲ ಕಾರಣ ನಿರ್ದೇಶಕ ಜಡೇಶ್ ಅವರು‌ ಎಂದು ಮಾತನಾಡಿದ ನಟ ರಾಜ್ ಬಿ ಶೆಟ್ಟಿ, ಏಕೆಂದರೆ ಒಬ್ಬ ನಿರ್ದೇಶಕ ಗೆಲ್ಲಲ್ಲೇಬೇಕು ಎಂದು ಬಯಸುವವನು ನಾನು. ಈ ಚಿತ್ರದಲ್ಲಿ ನನ್ನದು ಶೋಷಕ ವರ್ಗದಲ್ಲಿರುವಂತಹ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವಂತಹ ವ್ಯಕ್ತಿಯ ಪಾತ್ರ. ಈ ಪಾತ್ರಕ್ಕೆ ಕೂದಲಿರಬೇಕು ಎಂದು ನಿರ್ದೇಶಕರು ಹೇಳಿದರು. ನಾನು ಬೇಕಾ? ಎಂದು ಕೇಳಿದೆ. ಏಕೆಂದರೆ ಕೆಲವು ವಿಗ್ ಗಳು ನನಗೆ ಸೆಟ್ ಆಗುವುದಿಲ್ಲ. ನಾನೊಂದು ಕಡೆ‌.‌ ಅದೊಂದು ಕಡೆ ಆಗುತ್ತದೆ. ನಾನು ಹಾಗೂ ವಿಗ್ ಇಬ್ಬರೂ ಒಟ್ಟಿಗೆ ನಟಿಸಬೇಕು ಅಂತ ವಿಗ್ ಬೇಕು ಅಂತ ಹೇಳಿದೆ. ಹಾಗಾಗಿ ನನಗೆ ತಿಳಿದಿರುವವರ ಬಳಿ ವಿಗ್ ತರಿಸಿಕೊಳ್ಳುತ್ತೇನೆ. ಅವರು ನನಗೆ ಸರಿ ಹೊಂದುವ ವಿಗ್ ಕೊಡುತ್ತಾರೆ ಎಂದೆ. ಟೀಸರ್ ನೋಡಿದಾಗ ನನ್ನ ತಲೆಗೆ ವಿಗ್ ಸರಿ ಹೊಂದಿದೆ ಎನಿಸಿತು. ಕೋಲಾರ ಭಾಷೆಯಲ್ಲಿ ನನ್ನ ಸಂಭಾಷಣೆ ಇರುತ್ತದೆ. ದುನಿಯಾ ವಿಜಯ್ ಅವರ ಜೊತೆಗೆ ಮೊದಲ ಬಾರಿಗೆ ನಟಿಸಿದ್ದೇನೆ. ಬಹಳ ಖುಷಿಯಾಗಿದೆ. ನಿರ್ಮಾಪಕರಿಗೆ ಒಳ್ಳೆಯದಾಗಲಿ‌. ಈ ಚಿತ್ರ ಯಶಸ್ವಿಯಾಗಲಿ ಎಂದರು.
ನಾನು ಇಪ್ಪತ್ತು ವರ್ಷಗಳ ಹಿಂದೆ "ನನ್ತಾವ ಇರೋದು ಎರಡೇ ಎರಡು ಟೊಮೆಟೊ, ಹದಿನೈದೇ ರೂಪಾಯಿ ಕಾಣ್ಣಣ್ಣ" ಅಂತ ಬಂದೆ. ರಾಜ್ ಬಿ ಶೆಟ್ಟಿ ಅವರು ಒಂದು ಮೊಟ್ಟೆ ಇಟ್ಟುಕೊಂಡು ಬಂದವರು. ಆಗ ನಮ್ಮನ್ನು ಎಷ್ಟು ಜನ ಆಡಿಕೊಂಡಿದ್ದಾರೆ. ಕೊನೆಗೆ ನಾನೇ "ಸರ್ವೈವರ್", ಅವರೆ "ರೂಲರ್" ಆಗಿದ್ದೀವಿ. ಆಡಿಕೊಂಡವರಿಗೆಲ್ಲಾ ತುಂಬು ಹೃದಯದ ಧನ್ಯವಾದ. ಈ ಚಿತ್ರದಲ್ಲಿ ನಟಿಸಿರುವ ಪ್ರತಿಯೊಬ್ಬ ಕಲಾವಿದರು ಉತ್ತಮವಾಗಿ ನಟಿಸಿದ್ದಾರೆ. ಜಡೇಶ್ ಅವರ ಕಥೆ ಕೇಳಿ ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ. ಜನವರಿ 23 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಮೂರು ಹಾಡುಗಳು ಹಾಗೂ ಟ್ರೇಲರ್ ಅನಾವರಣವಾಗಲಿದೆ ಎಂದು ನಾಯಕ ದುನಿಯಾ ವಿಜಯ್ ತಿಳಿಸಿದರು.
ಮೊದಲು ಈ ಚಿತ್ರದ ಕಥೆ ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದ ನಿರ್ಮಾಪಕರಿಗೆ ಧನ್ಯವಾದ. ಇನ್ನೂ ಈ ಚಿತ್ರದಲ್ಲಿ ನಟಿಸಿರುವ ದುನಿಯಾ ವಿಜಯ್ ಅವರು 50 ವರ್ಷ ವಯಸ್ಸಾದವರ ಪಾತ್ರದಲ್ಲಿ, ರಚಿತರಾಮ್ ಅವರು ಒಂದು ಮಗುವಿನ ತಾಯಿಯ ಪಾತ್ರದಲ್ಲಿ, ರಾಜ್ ಬಿ ಶೆಟ್ಟಿ ಅವರು "ದಿ ರೂಲರ್" ಪಾತ್ರದಲ್ಲಿ ಹೀಗೆ ಅವರೆಲ್ಲರೂ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪರಾಗಲಿ ಹಾಗೂ ಕಲಾವಿದರಾಗಲಿ ನನಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದಾರೆ. ಯಾರು ಕೂಡ ಯಾವುದನ್ನು ಪ್ರಶ್ನೆ ಮಾಡಲಿಲ್ಲ‌. ಅದರಿಂದ ನಾನು ಅಂದಕೊಂಡ ಹಾಗೆ ಈ ಚಿತ್ರ ಬರಲು ಸಾಧ್ಯವಾಯಿತು ಎಂದರು ಚಿತ್ರದ ನಿರ್ದೇಶಕ ಜಡೇಶ್ ಕೆ ಹಂಪಿ. 
ಕಳೆದ ತಿಂಗಳು ನಮ್ಮ ಚಿತ್ರದ "ದಿ ಸರ್ವೈವರ್" ಟೀಸರ್ ಬಿಡುಗಡೆಯಾಗಿತ್ತು. ಈಗ "ದಿ ರೂಲರ್" ಟೀಸರ್ ಅನಾವರಣವಾಗಿದೆ. ನಮ್ಮ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ರಾಜ್ ಬಿ ಶೆಟ್ಟಿ ಅವರಿಬ್ಬರು ನಟಿಸಿರುವುದು ಬಹಳ ಸಂತೋಷವಾಗಿದೆ. ಆರಂಭದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹ ಹೀಗೆ ಮುಂದುವರೆಯಲಿ ಎಂದು ನಿರ್ಮಾಪಕ ಹೇಮಂತ್ ಗೌಡ ಹೇಳಿದರು.
ನಾನು ಈ ಚಿತ್ರದಲ್ಲಿ ಪದ್ಮ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಕೋಲಾರ ಭಾಷೆಯಲ್ಲೇ ನನ್ನ ಸಂಭಾಷಣೆ ಕೂಡ ಇರುತ್ತದೆ ಎಂದು ನಟಿ ಭಾವನಾರಾವ್ ತಿಳಿಸಿದರು.
ಸಂಭಾಷಣೆ ಬರೆದಿರುವ ಮಾಸ್ತಿ, ಶ್ರೀಕಾಂತ್, ಮಂಜುನಾಥ್ (ಕೋಲಾರ ಭಾಗ), ಚಿತ್ರದಲ್ಲಿ ನಟಿಸಿರುವ ರಾಕೇಶ್ ಅಡಿಗ, ಶಿಶಿರ್, ಮಿತ್ರ, ಅಭಿಷೇಕ್ ದಾಸ್, ಮಹಾಂತೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಸ್ವಾಮಿ ಜೆ ಗೌಡ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...