Skip to main content

ಯಶಸ್ಸಿನ ಹಾದಿಯಲ್ಲಿ "Congratulations ಬ್ರದರ್"...

ಯಶಸ್ಸಿನ ಹಾದಿಯಲ್ಲಿ "Congratulations ಬ್ರದರ್"...
ಸಕ್ಸಸ್ ಮೀಟ್ ನಲ್ಲಿ ಖುಷಿ ಹಂಚಿಕೊಂಡ ಚಿತ್ರತಂಡ..
ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ಅವರು ನಿರ್ಮಿಸಿರುವ, ಪ್ರತಾಪ್ ಗಂಧರ್ವ ನಿರ್ದೇಶನದ, ಹೆಸರಾಂತ ನಿರ್ದೇಶಕ ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿರುವ ಹಾಗೂ ಯುವ ನಟ ರಕ್ಷಿತ್ ನಾಗ್ ನಾಯಕನಾಗಿ ಹಾಗೂ ಸಂಜನ್ ದಾಸ್, ಅನುಷಾ ನಾಯಕಿಯರಾಗಿ ನಟಿಸಿರುವ "congratulations ಬ್ರದರ್" ಚಿತ್ರ ನವೆಂಬರ್ 21 ರಂದು ಬಿಡುಗಡೆಯಾಗಿತ್ತು. ಎರಡನೇ ವಾರದಲ್ಲೂ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. 
ಮೊದಲು ಮಾತನಾಡಿದ ನಿರ್ಮಾಪಕ ಪ್ರಶಾಂತ್ ಕಲ್ಲೂರ್, ನಾನು ಸದ್ಯಕ್ಕೆ ಚಿತ್ರ ನಿರ್ಮಾಣ ಮಾಡಬೇಕೆಂದುಕೊಂಡಿರಲಿಲ್ಲ. ಆದರೆ ಹರಿ ಸಂತೋಷ್ ಅವರು ನನ್ನ ಬಿಡಲಿಲ್ಲ. ಆನಂತರ ನಾನು ಈ ಹೊಸತಂಡದ ಜೊತೆಗೆ ನಿಂತೆ. ಹರಿ ಸಂತೋಷ್ ಕ್ರಿಯೇಟಿವ್ ಹೆಡ್ ಆಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರತಂಡದವರು ಕೂಡ. ಎರಡನೇ ವಾರದಲ್ಲೂ ಜನ ನಮ್ಮ ಚಿತ್ರವನ್ನು ನೋಡುತ್ತಿದ್ದಾರೆ. ನಾನು ಕೂಡ ಇತ್ತೀಚಿಗೆ ನನ್ನ ಕುಟುಂಬದವರ ಜೊತೆಗೆ ಹೋಗಿ ಸಿನಿಮಾ ನೋಡಿದೆ. ಸಿನಿಮಾ ನೋಡಿದ ನನ್ನ ಅಪ್ಪ ಬೆನ್ನು ತಟ್ಟಿದ್ದರು. ನನಗೆ‌ ನಿಜವಾದ ಗೆಲುವು ಅದು. ಆರಂಭದಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿರುವ ನಿಮ್ಮೆಲ್ಲರಿಗೂ ಧನ್ಯವಾದ. ಇನ್ನೂ ಮುಂದೆ ನಮ್ಮ ಸಂಸ್ಥೆಯಿಂದ ಎರಡು ವರ್ಷಗಳಿಗೆ ಮೂರು ಸಿನಿಮಾ ಮಾಡುವ ಯೋಜನೆ ಇದೆ ಎಂದರು.
ನಾನು ಕೆಲಸವನ್ನು ಬಹಳ ಇಷ್ಟ ಪಡುವವನು. ನನಗೆ ಸಿಕ್ಕಿರುವ ತಂಡವೂ ಹಾಗೆ ಇದೆ. ಎಲ್ಲರೂ ಈ ಸಿನಿಮಾಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಬಿಡುಗಡೆ ಪೂರ್ವದಲ್ಲಿ ರಾಜ್ಯದ 24 ಜಿಲ್ಲೆಗಳಿಗೂ ನಮ್ಮ ಜೊತೆಗೆ ಭೇಟಿ ನೀಡಿದ್ದಾರೆ. ಹಾಗಾಗಿ ಈ ಚಿತ್ರ ಕರ್ನಾಟಕದ ಜನರನ್ನು ತಲುಪಿದೆ. ನಿರ್ಮಾಪಕ ಪ್ರಶಾಂತ್ ಕಲ್ಲೂರ್, ನ್ಯೂಸ್ ಫಸ್ಟ್ ರವಿಕುಮಾರ್ ಹಾಗೂ ಹರೀಶ್ ರೆಡ್ಡಿ ಅವರ ಸಹಕಾರ ಅಪಾರ. ನಮ್ಮ ಚಿತ್ರ ನೋಡಿದ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಬೇರೆ ಚಿತ್ರಗಳಲ್ಲಿ ಅವಕಾಶ ಸಿಕ್ಕಿದೆ. ಇದಕ್ಕಿಂತ ಖುಷಿ ಬೇರೆ ಏನು ಬೇಕು ಎಂದರು ಕ್ರಿಯೇಟಿವ್ ಹೆಡ್ ಹರಿ ಸಂತೋಷ್.
ಧಾರಾವಾಹಿ ನಿರ್ದೇಶಕ ಹೇಗೆ ಸಿನಿಮಾ ಮಾಡಿರಬಹುದು ಎಂಬ ಭಾವನೆ ಹಲವರಲ್ಲಿತ್ತು. ಆದರೆ ಸಿನಿಮಾ ನೋಡಿ ಮೇಲೆ ಧಾರಾವಾಹಿಯ ಛಾಯೆ ಇದರಲ್ಲಿ ಇಲ್ಲ ಎಂದು ನೋಡಿದವರು ಹೇಳಿದ್ದಾರೆ. ನನ್ನನ್ನು ನಂಬಿ ಬಂಡವಾಳ ಹಾಕಿದ ನಿರ್ಮಾಪಕರಿಗೆ,‌ ತಾವು ಒಬ್ಬ ನಿರ್ದೇಶಕನಾಗಿದ್ದರೂ, ನನಗೆ ನಿರ್ದೇಶನದಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಿದ ಹರಿ ಸಂತೋಷ್ ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಎಂದು ನಿರ್ದೇಶಕ ಪ್ರತಾಪ್ ಗಂಧರ್ವ ಹೇಳಿದರು.
ಈ ಚಿತ್ರದಲ್ಲಿ ನಟಿಸಿದ ಮೇಲೆ ನನಗೆ ಎರಡುಮೂರು ಚಿತ್ರಗಳಲ್ಲಿ ನಟಿಸುವ ಅವಾಕಾಶ ಬಂದಿದೆ. ಇದು ಸಾಧ್ಯವಾಗಿದ್ದು ಈ ಚಿತ್ರದ ನಿರ್ಮಾಪಕರು ಹಾಗೂ ಹರಿ ಸಂತೋಷ್ ಅವರಿಂದ ಎಂದು ನಾಯಕ ರಕ್ಷಿತ್ ನಾಗ್ ಹೇಳಿದರು.
ನಾಯಕಿಯರಾದ ಸಂಜನ ದಾಸ್, ಅನೂಷ ಹಾಗೂ ಚಿತ್ರದಲ್ಲಿ ನಟಿಸಿರುವ ಸುದರ್ಶನ್, ಚೇತನ್ ದುರ್ಗ ಸೇರಿದಂತೆ ಚಿತ್ರತಂಡದ ಸದಸ್ಯರು ಯಶಸ್ಸಿನ ಖುಷಿಯನ್ನು ಮಾತುಗಳ ಮೂಲಕ ಹಂಚಿಕೊಂಡರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...