Skip to main content

Posts

Showing posts from January, 2026

ಕನ್ನಡ ಚಿತ್ರರಂಗದಲ್ಲಿ ಕಿಚ್ಚ ಸುದೀಪ್ ಹೊಸ ಮೈಲಿಗಲ್ಲು..

ಕನ್ನಡ ಚಿತ್ರರಂಗದಲ್ಲಿ ಕಿಚ್ಚ ಸುದೀಪ್ ಹೊಸ ಮೈಲಿಗಲ್ಲು .. ಕನ್ನಡ ಚಿತ್ರರಂಗದಲ್ಲಿ 30 ವರ್ಷಗಳ ಪೂರೈಸಿದ ಕಿಚ್ಚ ಸುದೀಪ್ 30 ವರ್ಷ ಸಿನಿ ಜರ್ನಿ ಗೆ ಬೆಸ್ಟ್ ವಿಷಸ್ ಮಾಡಲಿರೋ ಸಿಎಂ ಸಿದ್ದರಾಮಯ್ಯ, ಶಿವರಾಜ ಕುಮಾರ್, ವೀರೇಂದ್ರ ಹೆಗ್ಡೆ ಸುದೀಪ್ ರ ಸಿ ಡಿ ಪಿ ಲಾಚ್ ಮಾಡಲಿರೋ ಸಿ ಎಂ ಸಿದ್ದರಾಮಯ್ಯ  ನಟ ಶಿವರಾಜ್ ಕುಮಾರ್ ಸುನೀಲ್ ಶೆಟ್ಟಿ , ನಿಕಿಲ್ ಕುಮಾರ ಸ್ವಾಮಿ, ರುಕ್ಮಿಣಿ ವಸಂತ್ , ಅಶಿಕಾ ರಂಗನಾಥ್, ದೇವಿ ಶ್ರೀ ಪ್ರಸಾದ್, ಧ್ರುವ ಸರ್ಜಾ, ಪ್ರತಾಪ್ ಸಿಂಹ, ಜೆನಿಲಿಯಾ ಸೇರಿದಂತೆ ಸಿನಿಮಾದ ಹಲವು ದಿಗ್ಗಜರು ರಾಜಕೀಯ ಗಣ್ಯರು ಕ್ರಿಕೆಟರ್ ಗಳಿಂದ ಸುದೀಪ್ CDP ಸ್ಪೆಷಲ್ ಪೋಸ್ಟರ್ ಬಿಡುಗಡೆ. ಸಿಸಿಎಲ್ ಪಂದ್ಯಕ್ಕಾಗಿ ಕೊಯಮತ್ತೂರ್ ನಲ್ಲಿರುವ ಕಿಚ್ಚ ಇಂದಿನ ಸೆಮಿಫೈನಲ್ ಗೆದ್ದು ಕಿಚ್ಚನಿಗೆ ಗಿಫ್ಟ್ ಕೊಡಲು   ಸಜ್ಜಾಗಿರೋ ಕರ್ನಾಟಕ ಬುಲ್ಡೋಜರ್ ತಂಡ.

"ಒಬ್ಬನೆ ಶಿವ" ಚಿತ್ರದಲ್ಲಿ "ಪಿ.ಯು.ಸಿ" ಖ್ಯಾತಿಯ ಚೇತನ್ ಚಂದ್ರ..

"ಒಬ್ಬನೆ ಶಿವ" ಚಿತ್ರದಲ್ಲಿ "ಪಿ.ಯು.ಸಿ" ಖ್ಯಾತಿಯ ಚೇತನ್ ಚಂದ್ರ.. ವಿ.ಪಿ.ಶಂಕರ್ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣ... "ಪಿ.ಯು.ಸಿ" ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಟ ಚೇತನ್ ಚಂದ್ರ, "ಪ್ರೇಮಿಸಂ" ಮುಂತಾದ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾದರು. ಪ್ರಸ್ತುತ ಚೇತನ್ ಚಂದ್ರ "ಒಬ್ಬನೆ ಶಿವ" ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. URBAN LEGEND ಲಾಂಛನದಲ್ಲಿ ವಿ.ಪಿ.ಶಂಕರ್ ಅವರು ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಕನ್ನಡ ಹಾಗೂ ತಮಿಳು ಎರಡು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ‌. ಕೋಲಾರ ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಶೇಕಡಾ 80ರಷ್ಟು ಚಿತ್ರೀಕರಣ ಮುಕ್ತಾಯವಾಗಿದೆ. ಏಪ್ರಿಲ್ ನಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.      ಮೂರು ಹಾಡುಗಳಿರುವ ಈ ಚಿತ್ರಕ್ಕೆ ಸತ್ಯ ಕಶ್ಯಪ್ ಸಂಗೀತ ನೀಡುತ್ತಿದ್ದಾರೆ. ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಚಿತ್ರಕ್ಕೂ ಸತ್ಯ ಕಶ್ಯಪ್ ಸಂಗೀತ ನೀಡಿದ್ದಾರೆ. ಕೋರ್ಟ್ ರೂಮ್ ಡ್ರಾಮ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ವಿ.ಪಿ.ಶಂಕರ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಜನ್ ಛಾಯಾಗ್ರಹಣ ಹಾಗೂ ಅನ್ಬು ಸಂಕಲನ "ಒಬ್ಬನೆ ಶಿವ" ಚಿತ್ರಕ್ಕಿದೆ.       ಚೇತನ್ ಚಂದ...

"ಘಾರ್ಗಾ" ಚಿತ್ರದ ಬಂಗಾರಿ ಹಾಡು ಬಿಡುಗಡೆ ಮಾಡಿದ ದರ್ಶನ್ ಫ್ಯಾನ್ಸ್..

"ಘಾರ್ಗಾ" ಚಿತ್ರದ ಬಂಗಾರಿ ಹಾಡು ಬಿಡುಗಡೆ ಮಾಡಿದ ದರ್ಶನ್ ಫ್ಯಾನ್ಸ್..   ಅಶ್ವಿನಿ ರಾಮ್ ಪ್ರಸಾದ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಘಾರ್ಗಾ ತನ್ನ ವಿಭಿನ್ನ ಕಂಟೆಂಟ್, ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.    ಫೆ.6ರಂದು ರಿಲೀಸಾಗುತ್ತಿರುವ ಈ ಚಿತ್ರದಲ್ಲಿ ವಿಶೇಷವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗಾಗಿಯೇ ದರ್ಶನ್ ಅಭಿನಯದ ಗಜ ಚಿತ್ರದ ‌ ಸೂಪರ್ ಹಿಟ್ ಬಂಗಾರಿ ಯಾರೇ ನೀ ಬುಲ್ ಬುಲ್ ಹಾಡನ್ನು ರೀಮಿಕ್ಸ್ ಮಾಡಿ ಬಳಸಿಕೊಳ್ಳಲಾಗಿದೆ. ಇದು ದರ್ಶನ್ ಫ್ಯಾನ್ಸ್ ಗೆ ಒಂದು ಸರ್ ಪ್ರೈಸ್ ಗಿಪ್ಟ್ ಆಗಿದೆ.      ಇತ್ತೀಚೆಗೆ ನಡೆದ ಸಮಾರಂಭದಲ್ಲಿ  ಈ ಹಾಡನ್ನು ಆಗಮಿಸಿದ್ದ 50ಕ್ಕೂ ಹೆಚ್ಚು ದರ್ಶನ್ ಫ್ಯಾನ್ಸ್ ಲಾಂಚ್ ಮಾಡಿದರು.  ಫಾರ್ಗಾ ಒಂದು ಊರಿನ ಹೆಸರು, ದ ಲ್ಯಾಂಡ್ ಆಫ್ ಶಾಡೋ ಎಂಬ ಅಡಿಬರಹವಿದೆ. ಅರುಣ್ ರಾಮ್‌ಪ್ರಸಾದ್‌ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಘಾರ್ಗಾ ಒಂದು ಅಡ್ವೆಂಚರಸ್ ಡ್ರಾಮಾ, ಹಾರರ್ ಚಿತ್ರವಾಗಿದ್ದು, ಅರುಣ್ ಒಬ್ಬ ರೈಟರ್, ಸಂಶೋಧಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.     ಪ್ರಮುಖ ಪಾತ್ರದಲ್ಲಿ ಸಾಯಿಕುಮಾರ್ ಹಾಗೂ ನಾಯಕಿ ಪಾತ್ರದಲ್ಲಿ ರೆಹಾನ ಅಭಿನಯಿಸಿದ್ದಾರೆ. ಎಂ. ಶಶಿಧರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ...

"ಕೊರಗಜ್ಜ" ಚಿತ್ರದ ಪ್ರಮೋಷನ್ ಗೆ ನಟ.. ಮಮುಟ್ಟಿಯಿಂದ ಬ್ರೇಕ್?..ಕಬೀರ್ ಬೇಡಿಗೆ ಅವಮಾನ!!..

"ಕೊರಗಜ್ಜ" ಚಿತ್ರದ ಪ್ರಮೋಷನ್ ಗೆ ನಟ.. ಮಮುಟ್ಟಿಯಿಂದ ಬ್ರೇಕ್?.. ಕಬೀರ್ ಬೇಡಿಗೆ ಅವಮಾನ!!.. ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಪ್ಯಾನ್ ಇಂಡಿಯಾ ಫಿಲ್ಮ್ "ಕೊರಗಜ್ಜ" ಚಿತ್ರತಂಡ ಪ್ರಮೋಷನ್ ಸಲುವಾಗಿ ಕೊಚ್ಚಿಯ "ಹಾಲಿಡೇ ಇನ್" ಪಂಚತಾರ ಹೊಟೆಲ್ ನ 'ಗ್ರ್ಯಾಂಡ್ ಬಾಲ್ ರೂಮಿ'ನಲ್ಲಿ ಜನವರಿ 24ರಂದು ರಾತ್ರಿ 8ಕ್ಕೆ ಅದ್ದೂರಿ ಪತ್ರಿಕಾಗೋಷ್ಠಿ ಹಾಗೂ ಭೊಜನಕೂಟ ಆಯೋಜಿಸಲಾಗಿತ್ತು. ಸುಮಾರು ಒಂದು ವಾರಗಳ ಮೊದಲೇ ಕೊಚ್ಚಿಯ ಪಿ ಆರ್ ಒ ಮುಖಾಂತರ ಎಲ್ಲಾ ಮಾಧ್ಯಮಗಳಿಗೆ ಪತ್ರಿಕಾ ಗೋಷ್ಟಿಯ ಆಮಂತ್ರಣ ಕೂಡಾ ರವಾನೆಯಾಗಿತ್ತು. ಆದರೆ ಪ್ರೆಸ್ ಮೀಟ್ ನ ಮುಂಚಿನ ದಿನ ತಡರಾತ್ರಿ ಚಿತ್ರತಂಡಕ್ಕೆ ಪಿಆರ್ ಒ ಕರೆ ಮಾಡಿ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಅಥವಾ ಮುಂದೂಡುವಂತೆ "ಛಾತಪಾಚ"ಮಲಯಾಳಂ ಚಿತ್ರತಂಡವು ದಿಡೀರ್ ಆಗಿ ತಿಳಿಸಿದ್ದಾರೆ ಎಂದರು. ಲಕ್ಷಾಂತರ ರುಪಾಯಿ ಖರ್ಚು ಮಾಡಿ ಅದ್ದೂರಿ ಪತ್ರಿಕಾಗೋಷ್ಟಿ ನಡೆಸಲು ತಯಾರಿನಡೆಸಿದ್ದ 'ಕೊರಗಜ್ಜ' ಚಿತ್ರ ತಂಡಕ್ಕೆ ಆಘಾತವಾಯಿತು. ಈ ಬಗ್ಗೆ ಕಾರಣ ಕೇಳಿದಾಗ ಮಮುಟ್ಟಿ ಅಭಿನಯಿಸಿದ್ದ ಈ ಮಲಯಾಳಂ ಚಿತ್ರದ ಪ್ರಮೋಷನನ್ನು "ಕೊರಗಜ್ಜ" ಚಿತ್ರದ ಪ್ರಮೋಷನ್ ಸಮಯದಲ್ಲೇ ಜನವರಿ 24ರಂದೇ ರಾತ್ರಿ 8ಗಂಟೆಗೆ ನಡೆಸಲು ಅಂತಿಮ ಕ್ಷಣದಲ್ಲಿ ತೀರ್ಮಾನಿಸಿರುವುದರಿಂದ ಮತ್ತು ಮಮುಟ್ಟಿ ಯವರು ಈ ಕಾರ್ಯಕ್ರಮಕ್ಕೆ...

ಡಾ||ವಿ.ನಾಗೇಂದ್ರಪ್ರಸಾದ್ ಅವರಿಂದ ಬಿಡುಗಡೆಯಾಯಿತು "ಪ್ರೇಮಿ" ಚಿತ್ರದ "ಬಾರೋ ಬಾರೋ ಎಣ್ಣೆ ಹೊಡೆಯೋಣ ಹಾಡು..

ಡಾ||ವಿ.ನಾಗೇಂದ್ರಪ್ರಸಾದ್ ಅವರಿಂದ ಬಿಡುಗಡೆಯಾಯಿತು "ಪ್ರೇಮಿ" ಚಿತ್ರದ "ಬಾರೋ ಬಾರೋ ಎಣ್ಣೆ ಹೊಡೆಯೋಣ ಹಾಡು..  ಶ್ರೀ ಗುರು ಕರಿಬಸವೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಬಿ.ಸಿದ್ದಲಿಂಗಯ್ಯ ನಿರ್ಮಿಸುತ್ತಿರುವ ಹಾಗೂ ಎಸ್ ಪ್ರದೀಪ್ ವರ್ಮ ನಿರ್ದೇಶಿಸುತ್ತಿರುವ "ಪ್ರೇಮಿ" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ "ಮನಸ್ಸು ಏನೋ ಕಾಡಿದೆ" ಹಾಡು ಎಲ್ಲರ ಮನ ಗೆದ್ದಿದೆ. ಇತ್ತೀಚೆಗೆ ಈ ಚಿತ್ರದ "ಬಾರೋ ಬಾರೋ ಎಣ್ಣೆ ಹೊಡೆಯೋಣ" ಹಾಡನ್ನು ಖ್ಯಾತ ಗೀತರಚನೆಕಾರ ಡಾ||ವಿ.ನಾಗೇಂದ್ರಪ್ರಸಾದ್ ಬಿಡುಗಡೆ ಮಾಡಿದರು.‌ "ಹಾಡು ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ" ಎಂದು ನಾಗೇಂದ್ರ ಪ್ರಸಾದ್ ಹಾರೈಸಿದರು. ಚಿತ್ರದ ನಿರ್ದೇಶಕರಾದ ಎಸ್ ಪ್ರದೀಪ್ ವರ್ಮ ಅವರೆ ಬರೆದು, ಹಾಡಿ ಹಾಗೂ ಸಂಗೀತವನ್ನು ಸಂಯೋಜಿಸಿರುವ ಈ ಹಾಡಿನಲ್ಲಿ ಅದ್ವಿಕ್, ಕಿರಣ್ ರಾಜ್, ಹರ್ಷಿತಾ ಕಲ್ಲಿಂಗಲ್, ಎನ್ ಎಮ್ ವಿಮಲ್ ರಾಜ್, ಹರೀಶ್ ಉಕ್ಕಡಗಾತ್ರಿ ಅಭಿನಯಿಸಿದ್ದಾರೆ. ಫೆಬ್ರವರಿ 2 ರ ಸಂಜೆ 6 ಗಂಟೆಗೆ ಈ ಹಾಡು ಬಿಡುಗಡೆಯಾಗಲಿದೆ.             "ಪ್ರೇಮಿ" ಚಿತ್ರಕ್ಕೆ ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ದಾವಣಗೆರೆ, ದೇವರಬೆಳಕೆರೆ, ಗೋಕರ್ಣ,‌ ಕನಕಪುರ, ಚಿಕ್ಕಮಗಳೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ವಿಭಿನ್ನ ಕಥ...

ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಡಾ. ಸಂತೋಷ್ ಹೆಗಡೆಯವರಿಂದ ನಿರ್ಮಾಪಕ - ನಿರ್ದೇಶಕ ವೀರೇಂದ್ರಬಾಬು ನಂಜೇಗೌಡ ರಚಿಸಿರುವ "ಥ್ಯಾಂಕ್ಸ್ ಅಪ್ಪ" ಕನ್ನಡ ಕಾದಂಬರಿ ಲೋಕಾರ್ಪಣೆ...

ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಡಾ. ಸಂತೋಷ್ ಹೆಗಡೆಯವರಿಂದ ನಿರ್ಮಾಪಕ - ನಿರ್ದೇಶಕ ವೀರೇಂದ್ರಬಾಬು ನಂಜೇಗೌಡ ರಚಿಸಿರುವ "ಥ್ಯಾಂಕ್ಸ್ ಅಪ್ಪ" ಕನ್ನಡ ಕಾದಂಬರಿ ಲೋಕಾರ್ಪಣೆ... ನಮ್ಮನ್ನು ಭೂಮಿಗೆ ತಂದ ತಂದೆಗೆ ಸಲ್ಲಿಸಬಹುದಾದ ಕೃತಜ್ಞತೆಯ ಸಹಸ್ರನಾಮವಳಿಯೇ "ಥ್ಯಾಂಕ್ಸ್ ಅಪ್ಪ" ಕಾದಂಬರಿ. ನಿರ್ಮಾಪಕ - ನಿರ್ದೇಶಕ ವೀರೇಂದ್ರ ಬಾಬು ನಂಜೇಗೌಡ ಅವರು ಬರೆದಿರುವ "ಥ್ಯಾಂಕ್ಸ್ ಅಪ್ಪ" ಪುಸ್ತಕವನ್ನು ಮಲ್ಲೇಶ್ವರಂನ ರೇಣುಕಾಂಬ ಥಿಯೇಟರ್ ನಲ್ಲಿ ಡಾ. ಸಂತೋಷ್ ಹೆಗಡೆ ಇತ್ತೀಚೆಗೆ ಲೋಕಾರ್ಪಣೆ ಮಾಡಿದರು. ಜಿ.ಎಸ್.ಟಿ. ಜಂಟಿ ಆಯುಕ್ತರಾದ ಡಾ|| ಸಂಗಮೇಶ್ ಉಪಾಸೆ, ಮಾಜಿ ಶಾಸಕರಾದ ಶ್ರೀ ನೆ.ಲ.ನರೇಂದ್ರಬಾಬು, ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷರು, ಶ್ರೀ ಎಸ್. ಇ. ಸುಧೀಂದ್ರ, AICCಯ ನಾಷನಲ್ ಕಮಿಟಿ ಸದಸ್ಯರು ಕರ್ನಾಟಕ ಉಸ್ತುವಾರಿ ವಹಿಸಿರುವ ಶ್ರೀ ಸುಜೇಂದ್ರ ಶೆಟ್ಟಿ, ಕೆ.ಪಿ.ಸಿ.ಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷರು ಶ್ರೀಮತಿ ಪವಿತ್ರಾ ಆರ್ ಪ್ರಭಾಕರ್ ರೆಡ್ಡಿ, ವಕೀಲರಾದ ಬಿ.ಎಸ್. ಸಂತೋಷ್, ಬಿ.ವಿ. ಮಾಧವಮೂರ್ತಿ, ಪೋಲಿಸ್ ಇನ್ಸಪೆಕ್ಟರ್ ಜಗದೀಶ್* ರವರು ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಲೇಖಕರಾದ ವೀರೇಂದ್ರಬಾಬು ಅವರ ತಂದೆ ನಂಜೇಗೌಡ ಅವರು "ಥ್ಯಾಂಕ್ಸ್ ಅಪ್ಪ" ಕಾದಂಬರಿ ಬಿಡುಗಡೆಗೆ ಸಾಕ್ಷಿಯಾದರು. ಡಾ. ಸಂತೋ...

ಈ ವಾರ ತೆರೆಗೆ "ರಕ್ತ ಕಾಶ್ಮೀರ"..

ಈ ವಾರ ತೆರೆಗೆ "ರಕ್ತ ಕಾಶ್ಮೀರ".. ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯ.. MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ "ರಕ್ತ ಕಾಶ್ಮೀರ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮಾರ್ಸ್ ಸುರೇಶ್ ಅವರು ಈ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.   ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ‌‌‌. ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ ನಡೆಸಿ ಸಾವಿರಾರು ಅಮಾಯಕರನ್ನು ಹತ್ಯೆ ಮಾಡಿರುತ್ತಾರೆ. ಇದರಿಂದ ನೊಂದ ಚಿತ್ರದ ನಾಯಕ ಹಾಗೂ ನಾಯಕಿ ಬೆಂಗಳೂರಿನಿಂದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಗಿ ಅಲ್ಲಿರುವ ಉಗ್ರರನ್ನು ಮಟ್ಟಹಾಕುವ ಸನ್ನಿವೇವನ್ನು ಈ ಚಿತ್ರದಲ್ಲಿ ಚಿತ್ರಿಸಿಕೊಳ್ಳಲಾಗಿದೆ. ಕಾಶ್ಮೀರದಲ್ಲೇ ಸುಮಾರು ಒಂದು ತಿಂಗಳಿಗೂ ಅಧಿಕ ಚಿತ್ರೀಕರಣ ಮಾಡಲಾಗಿದೆ. ಸಾಕಷ್ಟು ಮಕ್ಕಳು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ದೇಶಪ್ರೇಮ ಸಾರುವ ಈ ಚಿತ್ರವನ್ನು ಕುಟುಂಬ ಸಮೇತ ನೋಡಬೇಕು. ಇನ್ನೂ ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಹದಿನ...

ಅಜಯ್ ಮೂವೀಸ್ ಸಂಸ್ಥೆಗೆ ಶುಭಕೋರಿದ ಅಶ್ವಿನಿ ಪುನೀತ್ ರಾಜಕುಮಾರ್..

ಅಜಯ್ ಮೂವೀಸ್ ಸಂಸ್ಥೆಗೆ ಶುಭಕೋರಿದ ಅಶ್ವಿನಿ ಪುನೀತ್ ರಾಜಕುಮಾರ್.. ಕನ್ನಡ ಚಿತ್ರರಂಗಕ್ಕೆ ಹೊಸದಾಗಿ ಬರುವವರಿಗೆ ಮೊದಲಿನಿಂದಲೂ ನಟ ಸಾರ್ವಭೌಮ ಡಾ||ರಾಜಕುಮಾರ್ ಅವರ ಕುಟುಂಬ ಪ್ರೋತ್ಸಾಹ ನೀಡುತಾ ಬಂದಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸಹ ಅದೇ ಕೆಲಸ ಮಾಡುತ್ತಿದ್ದಾರೆ. ಅಜಯ್ ಮೂವೀಸ್ ಎಂಬ ನೂತನ ಸಂಸ್ಥೆಯನ್ನು ನಿರ್ಮಾಪಕಿ ಮಮತ‌ ಅಮಿನ್ ಅವರು ಆರಂಭಿಸಿದ್ದಾರೆ ಹಾಗೂ ಅಜಯ್ ಸಾಗರ್ ಅವರ ನಿರ್ದೇಶನದಲ್ಲಿ "ಪ್ರೊಡಕ್ಷನ್ ನಂ ೧" ಚಿತ್ರವನ್ನು ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ನೂತನ ಚಿತ್ರತಂಡದ ಸದಸ್ಯರು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಅಜಯ್ ಮೂವೀಸ್ ಸಂಸ್ಥೆಗೆ ಶುಭವಾಗಲಿ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಹಾರೈಸಿದ್ದಾರೆ. ನಿರ್ಮಾಪಕಿ ಮಮತ ಅಮಿನ್, ನಿರ್ದೇಶಕ ಅಜಯ್ ಸಾಗರ್, ಛಾಯಾಗ್ರಾಹಕ ಮನೀಶ್ ಬಂಗೇರ, ನವಯುಗ ಹೋಟೆಲ್ ನ ಮಾಲೀಕರಾದ ಮಾರುತಿ ಸಾಲಿಗ್ರಾಮ, ಕಾರ್ಯಕಾರಿ ನಿರ್ಮಾಪಕ ಪ್ರತಾಪ್ ಸಾಲಿಗ್ರಾಮ ಹಾಗೂ ಪಿ.ಆರ್.ಕೆ ಸಂಸ್ಥೆಯ ಸತೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ನಮ್ಮ ಅಜಯ್ ಮೂವೀಸ್ ಸಂಸ್ಥೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಶುಭಕೋರಿದ್ದು ಬಹಳ ಸಂತೋಷವಾಗಿದೆ. ನಮಗೆ ಡಾ|ರಾಜಕುಮಾರ್, ಪಾರ್ವತಮ್ಮ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಆಶೀರ್ವಾದ ಸಿಕ್ಕಷ್ಟೇ ಖುಷಿಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅ...

'ಇರುಮುಡಿ' ಹೊತ್ತು ಬಂದ ಮಾಸ್ ಮಹಾರಾಜ...ರವಿತೇಜ 77ನೇ ಸಿನಿಮಾ ಅನೌನ್ಸ್..

'ಇರುಮುಡಿ' ಹೊತ್ತು ಬಂದ ಮಾಸ್ ಮಹಾರಾಜ... ರವಿತೇಜ 77ನೇ ಸಿನಿಮಾ ಅನೌನ್ಸ್.. ಮಾಸ್ ಮಹಾರಾಜ ರವಿತೇಜ 77ನೇ ಸಿನಿಮಾ 'ಇರುಮುಡಿ' ಫಸ್ಟ್ ಲುಕ್ ರಿಲೀಸ್.. ತೆಲುಗಿನ ಮಾಸ್ ಮಹಾರಾಜ ರವಿತೇಜ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನ್ಮದಿನ ಅಂಗವಾಗಿ 77ನೇ ಸಿನಿಮಾ ಘೋಷಣೆಯಾಗಿದೆ. ರವಿತೇಜ ಹೊಸ ಚಿತ್ರಕ್ಕೆ ಇರುಮುಡಿ‌ ಎಂಬ ಶೀರ್ಷಿಕೆ‌ ಇಡಲಾಗಿದೆ. ಜೊತೆಗೆ ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದೆ. ಶಬರಿಮಲೆ ಅಯ್ಯಪ್ಪ ದೀಕ್ಷಾಧಾರಿಗಳು ಯಾತ್ರೆಯ ಸಮಯದಲ್ಲಿ ತಲೆಯ ಮೇಲೆ ಹೊತ್ತುಕೊಂಡು ಸಾಗುವುದನ್ನು ಇರುಮುಡಿ ಎನ್ನುತ್ತಾರೆ. ಇರುಮುಡಿ ಸಿನಿಮಾಗೆ ಶಿವ‌ ನಿರ್ವಾಣ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕ ಶಿವ ನಿರ್ವಾಣ ಭಕ್ತಿಯ ಆಳ, ಭಾವನಾತ್ಮಕ ತೂಕ ಇರುವ ಪ್ರಬಲ ಚಿತ್ರಕಥೆಯನ್ನು ರಚಿಸಿದ್ದಾರೆ. ಅಲ್ಲದೇ ತಂದೆ-ಮಗಳ ಬಾಂಧವ್ಯ ಚಿತ್ರದ ಹೈಲೆಟ್. ರವಿತೇಜ ಹಿಂದೆಂದೂ ಕಾಣದ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಇರುಮುಡಿ ಸಿನಿಮಾದಲ್ಲಿ ಪ್ರಿಯಾ ಭವಾನಿ ಶಂಕರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಬೇಬಿ ನಕ್ಷತ್ರ ರವಿತೇಜ ಅವರ ಮಗಳನ್ನು ಅಭಿನಯಿಸುತ್ತಿದ್ದಾರೆ. ತಾರಾಗಣದಲ್ಲಿ ಸಾಯಿ ಕುಮಾರ್, ಅಜಯ್ ಘೋಷ್, ರಮೇಶ್ ಇಂದಿರಾ ಮತ್ತು ಸ್ವಸಿಕಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯರ್ನೇನಿ ಹಾಗೂ ರವಿ ಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ‌ಜಿವಿ ಪ್...

ರಣಬಾಲಿಯಾಗಿ ಬಂದ ರೌಡಿ ಬಾಯ್... ಮತ್ತೆ ಒಂದಾದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ..

ರಣಬಾಲಿಯಾಗಿ ಬಂದ ರೌಡಿ ಬಾಯ್...  ಮತ್ತೆ ಒಂದಾದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ.. ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಹೊಸ ಸಿನಿಮಾದ ಟೈಟಲ್ ರಿವೀಲ್.... ಟಾಲಿವುಡ್ ಸ್ಟಾರ್ ಕಪಲ್ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮತ್ತೊಮ್ಮೆ‌ ಒಂದಾಗಿದ್ದಾರೆ. ಗೀತಾ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಬಳಿಕ ಈ ಜೋಡಿ‌ಯ ಹೊಸ ಸಿನಿಮಾ ಘೋಷಣೆಯಾಗಿದೆ. ನಿನ್ನೆ ಗಣರಾಜ್ಯೋತ್ಸವದ ಅಂಗವಾಗಿ ಟೈಟಲ್ ಗ್ಲಿಂಪ್ಸ್ ಜೊತೆಗೆ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಾಗಿದೆ. ರಣಬಾಲಿಯಾಗಿ ವಿಜಯ್ ದೇವರಕೊಂಡ ಅಬ್ಬರಿಸಿದ್ದಾರೆ. ವಿಜಯ್ 14ನೇ ಸಿನಿಮಾಗೆ ರಣಬಾಲಿ ಎಂಬ ಶೀರ್ಷಿಕೆ ಇಡಲಾಗಿದೆ. ‌19ನೇ ಶತಮಾನದಲ್ಲಿ ಬ್ರಿಟಿಷರು ಉಂಟುಮಾಡಿದ ನೋವುಗಳ ಮೇಲೆ ಬೆಳಕು ಚೆಲ್ಲುವುದಲ್ಲದೇ, ಭಾರತದ ಬೃಹತ್ ಆರ್ಥಿಕ ಶೋಷಣೆಯ ಬಗ್ಗೆಯೂ ರಣಬಾಲಿ ಸಿನಿಮಾದಲ್ಲಿ ಕಟ್ಟಿಕೊಡಲಾಗುತ್ತಿದೆ. ಸೂಪರ್ ಹಿಟ್ ಟಾಕ್ಸಿ ವಾಲಾ ಸಿನಿಮಾ ಬಳಿಕ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ರಾಹುಲ್ ಸಂಕೃತ್ಯಾನ್ ರಣಬಾಲಿಗಾಗಿ ಕೈ ಜೋಡಿಸಿದ್ದಾರೆ. ಜಯಮ್ಮ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ, ದಿ ಮಮ್ಮಿ ಖ್ಯಾತಿಯ ಅರ್ನಾಲ್ಡ್ ಮೋಸ್ಲೂ, ಸರ್ ಥಿಯೋಡರ್ ಹೆಕ್ಟರ್ ತಾರಾ ಬಳಗದಲ್ಲಿದ್ದಾರೆ.  ಡಿಯರ್ ಕಾಮ್ರೇಡ್ ಮತ್ತು ಖುಷಿ ಸಿನಿಮಾ ಬಳಿಕ ಮೈತ್ರಿ ಮೂವೀ ಮೇಕರ್ಸ್ ವಿಜಯ್ ದೇವರಕೊಂಡ ರಣಬಾಲಿಗೆ ಹಣ ಹಾಕುತ್ತಿದೆ. ಈ ಚಿತ್ರವನ್ನು ನವೀನ್ ಯೆರ್ನೇನಿ ಮತ್ತು ವೈ ರವಿಶಂ...

'ಚೌಕಿದಾರ್'ಗೆ ಹ್ಯಾಟ್ರಿಕ್ ಹೀರೋ‌ ಶಿವಣ್ಣ ಸಾಥ್..ಇದೇ 30ಕ್ಕೆ ಪೃಥ್ವಿ-ಧನ್ಯಾ ಸಿನಿಮಾ ರಿಲೀಸ್..

'ಚೌಕಿದಾರ್'ಗೆ ಹ್ಯಾಟ್ರಿಕ್ ಹೀರೋ‌ ಶಿವಣ್ಣ ಸಾಥ್.. ಇದೇ 30ಕ್ಕೆ ಪೃಥ್ವಿ-ಧನ್ಯಾ ಸಿನಿಮಾ ರಿಲೀಸ್.. ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ್ ಸಿನಿಮಾಗೆ ಶಿವಣ್ಣ ಬೆಂಬಲ... ಇದೇ‌ 30ಕ್ಕೆ ಚಿತ್ರ ಬಿಡುಗಡೆ* ರಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಚೌಕಿದಾರ್ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 30ರಂದು ತೆರೆಗೆ ಎಂಟ್ರಿ ಕೊಡುತ್ತಿರುವ ಈ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಥ್ ಕೊಟ್ಟಿದ್ದಾರೆ. ನಿನ್ನೆ ಬೆಂಗಳೂರಿನ ಖಾಸಗಿ ಮಾಲ್ ನಲ್ಲಿ ಚೌಕಿದಾರ್ ಪ್ರೀ ರಿಲೀಸ್ ‌ಇವೆಂಟ್ ನಡೆಯಿತು. ಈ ಕಾರ್ಯಕ್ರಮಕ್ಕೆ ಶಿವಣ್ಣ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಹ್ಯಾಟ್ರಿಕ್ ಹೀರೋ ಶಿವಣ್ಣ ಮಾತನಾಡಿ, ಒಳ್ಳೆ ವ್ಯಕ್ತಿಗೆ ಒಳ್ಳೆಯದು ಆಗಬೇಕು ಎಂಬುವುದು ನಮ್ಮ ಭಾವನೆ. ಈ ಸಿನಿಮಾ ನೀಟ್ ಆಗಿ ಹೋಗಲಿ. ನಿಮ್ಮಂತ ನಿರ್ಮಾಪಕರು ಇಂಡಸ್ಟ್ರಿಗೆ ಬೇಕು. ಇನ್ನೂ ಹೆಚ್ಚಿನ ಸಿನಿಮಾ ಮಾಡಿ ನಮ್ಮದೇ ಸಿನಿಮಾ ಮಾಡಿ. ಚಂದ್ರಶೇಖರ್ ಬಂಡಿಯಪ್ಪ ಜೊತೆ ಸಿನಿಮಾ ಮಾಡಬೇಕಿತ್ತು. ಆದರೆ ಅದು ಯಾಕೋ ಟೇಕಾಫ್ ಆಗಲಿಲ್ಲ. ತುಂಬಾ ಒಳ್ಳೆ ಡೈರೆಕ್ಟರ್. ಎಮೋಷನ್ ತುಂಬಾ ಚೆನ್ನಾಗಿ ತೋರಿಸ್ತಾರೆ. ಸಾಯಿ ಕುಮಾರ್ ನಾನು ಮುದ್ದಿನ ಕಣ್ಮಣಿಯಿಂದ ಸ್ನೇಹಿತರು. ಬ್ರದರ್ಸ್ ಅಂದರೆ ತಪ್ಪಾಗಲ್ಲ. ಈ ಚಿತ್ರದಲ್ಲಿ ಪೃಥ್ವಿ ಗೆಟಪ್ ಚೆನ್ನಾಗಿದೆ. ಧನ್ಯಾ ಚಿಕ್ಕ ಮಗುವಿನ...

‘ಸೀತಾ ಪಯಣ’ ಭಾವನೆಗಳ ಜೊತೆಗಿನ ಸುಂದರ ಪಯಣ...

‘ಸೀತಾ ಪಯಣ’ ಭಾವನೆಗಳ ಜೊತೆಗಿನ ಸುಂದರ ಪಯಣ... ಅರ್ಜುನ್ ಸರ್ಜಾ ನಿರ್ದೇಶನದ ಹಾಗೂ ನಿರಂಜನ್ - ಐಶ್ವರ್ಯ ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 14ರಂದು ತೆರೆಗೆ..  ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಅವರ ನಿರ್ದೇಶನದ, ಶ್ರೀ ರಾಮ್ ಫಿಲಂಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಹಾಗೂ ನಿರಂಜನ್ - ಐಶ್ವರ್ಯ ಅರ್ಜುನ್ ನಾಯಕ - ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಸೀತಾ ಪಯಣ" ಚಿತ್ರ ಫೆಬ್ರವರಿ 14 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. 'ಸೀತಾ ಪಯಣ" ನಾನು ನಿರ್ದೇಶಿಸಿರುವ ಕನ್ನಡದ ಎರಡನೇ ಸಿನಿಮಾ. ಈವರೆಗೂ ಸುಮಾರು ಹದಿನೈದು ಚಿತ್ರಗಳ ನಿರ್ದೇಶನ ಮಾಡಿದ್ದೇನೆ. "ಸೀತಾ ಪಯಣ"ದ ಕಥೆಯನ್ನು ಹದಿಮೂರು ವರ್ಷಗಳ ಹಿಂದೆಯೇ ಸಿದ್ದಮಾಡಿಕೊಂಡಿದೆ. ಯಾವಾಗ ಇದನ್ನು ಚಿತ್ರ ಮಾಡುತ್ತೇನೊ ಎಂದು ಕಾಯುತ್ತಿದೆ. ಈಗ ಕಾಲ ಕೂಡಿಬಂದಿದೆ. ನನ್ನ ಮಗಳು ಐಶ್ವರ್ಯ ನಾಯಕಿಯಾಗಿ, ನಿರಂಜನ್ ನಾಯಕನಾಗಿ ನಟಿಸಿರುವ ಚಿತ್ರವಿದು. ಪ್ರಕಾಶ್ ರೈ, ಸತ್ಯರಾಜ್, ಕೋವೈ ಸರಳ ಅವರಂತಹ ಅನುಭವಿ ಕಲಾವಿದರ ತಾರಾಬಳಗವಿರುವ ಈ ಚಿತ್ರದಲ್ಲಿ ನಾನು ಕೂಡ ಅಭಿನಯಿಸಿದ್ದೇನೆ. ಆಕ್ಷನ್ ...

ಸಿನಿಮಾ ಪ್ರೆಸೆಂಟ್ ಮಾಡಲು ಮುಂದಾದ ಪವನ್ ಒಡೆಯರ್...

ಸಿನಿಮಾ ಪ್ರೆಸೆಂಟ್ ಮಾಡಲು ಮುಂದಾದ ಪವನ್ ಒಡೆಯರ್... ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಚಿತ್ರಕ್ಕೆ ಸಾಥ್.. ನಿರ್ದೇಶಕ ಪವನ್ ಒಡೆಯರ ಹೊಸ ಸಾಹಸ... ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಸಿನಿಮಾ ಪ್ರೆಸೆಂಟ್ ಮಾಡಲು ರೆಡಿ.. ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಸಿನಿಮಾಗೆ ಪವನ್ ಒಡೆಯರ್ ಸಾಥ್...ಚಿತ್ರ ಪ್ರೆಸೆಂಟ್ ಗೆ ಮುಂದಾದ ಸ್ಟಾರ್ ಡೈರೆಕ್ಟರ್.. ಸ್ಯಾಂಡಲ್‌ವುಡ್‌ನ ಯಶಸ್ವಿ ನಿರ್ದೇಶಕರ ಪಟ್ಟಿಯಲ್ಲಿ ಸ್ಥಾನ ಪಡೆದವರ ಪೈಕಿ ಪವನ್‌ ಒಡೆಯರ್‌ ಒಬ್ಬರು. ಅವರು ಗೂಗ್ಲಿ, ರಣವಿಕ್ರಮ, ಗೋವಿಂದಾಯ ನಮಃ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ. ಜೊತೆಗೆ ಪವನ್ ನಿರ್ಮಾಣದಲ್ಲಿಯೂ ಹೆಸರು ಮಾಡಿದ್ದಾರೆ. ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣ‌ ಮಾಡುತ್ತಿರುವ ಅವರೀಗ ಹೊಸ ಹೆಜ್ಜೆ ಇಟ್ಟಿದ್ದಾರೆ. ಪವನ್ ಒಡೆಯರ್ ಸಿನಿಮಾ ಪ್ರೆಸೆಂಟ್ ಗೆ ಇಳಿದಿದ್ದಾರೆ. ನಿರ್ದೇಶನ‌ ಜೊತೆಗೆ ನಿರ್ಮಾಣದಲ್ಲಿಯೂ ಬ್ಯುಸಿಯಾಗಿರುವ ಪವನ್ ಒಡೆಯರ್ ಈಗ ಸಿನಿಮಾಗಳ ಪ್ರೆಸೆಂಟ್ ಕೈ ಹಾಕಿದ್ದಾರೆ. ಅದರ ಮೊದಲ ಭಾಗವೆಂಬಂತೆ ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಸಿನಿಮಾವನ್ನು ಪ್ರೆಸೆಂಟ್ ಮಾಡಲು ಮುಂದಾಗಿದ್ದಾರೆ. 2021ರಲ್ಲಿ ತೆರೆಕಂಡ ವಿಜಯ ರಾಘವೇಂದ್ರ ನಟನೆಯ ‘ಸೀತಾರಾಮ್‌ ಬಿನೋಯ್‌’ ಸಿನಿಮಾ ಸೀಕ್ವೆಲ್‌ ಆಗಿರುವ 'ಸೆಕೆಂಡ್‌ ಕೇಸ್‌ ಆಫ್‌ ಸೀತಾರಾಮ್‌’ ನೋಡಿ ಪವನ್ ಒಡೆಯರ್ ಥ್ರಿಲ್ ಆಗಿದ್ದಾರೆ. ‌ಸೀಟಿನ ತುದಿಗೆ ಪ್ರೇಕ್ಷಕರನ್ನು‌ ಕುರಿಸುವ ...

ಬೆಲ್ ಬಾಟಮ್ ನಿರ್ಮಾಪಕರ ಹೊಸ ಸಿನಿಮಾ ಅನೌನ್ಸ್...

ಬೆಲ್ ಬಾಟಮ್ ನಿರ್ಮಾಪಕರ ಹೊಸ ಸಿನಿಮಾ ಅನೌನ್ಸ್... ಎಡಗೈ ಅಪಘಾತಕ್ಕೆ ಕಾರಣ‌ ನಿರ್ದೇಶಕ ಜೊತೆ ಚಿತ್ರ.. ಬೆಲ್ ಬಾಟಮ್ ನಿರ್ಮಾಪಕ ಜೊತೆ ಕೈ ಜೋಡಿಸಿದ ಎಡಗೈ ಅಪಘಾತಕ್ಕೆ ಕಾರಣ ನಿರ್ದೇಶಕರು.. ಬೆಲ್ ಬಾಟಮ್ ನಿರ್ಮಾಪಕ ಹೊಸ ಸಿನಿಮಾ... ಯಾರು ನಿರ್ದೇಶಕ? ನಟ? ಕನ್ನಡ ಚಿತ್ರರಂಗಕ್ಕೆ ಬೆಲ್ ಬಾಟಮ್ ನಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟಿರುವ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಏಳು ವರ್ಷಗಳ ಗ್ಯಾಪ್ ಬಳಿಕ ತಮ್ಮದೇ ಗೋಲ್ಡನ್ ಹಾರ್ಸ್ ಬ್ಯಾನರ್ ನಡಿ ಹುಬ್ಬಳ್ಳಿ ಹಂಟರ್ಸ್ ಎಂಬ ಚಿತ್ರ ನಿರ್ಮಾಣಕ್ಕೆ‌ ಸಂತೋಷ್ ಇಳಿದಿದ್ದಾರೆ. ಸಂತೋಷ್ ಕುಮಾರ್ ಅವರ ಹೊಸ ಸಿನಿಮಾಗೆ ಎಡಗೈ ಅಪಘಾತಕ್ಕೆ ಕಾರಣ ನಿರ್ದೇಶಕರು ಸಾಥ್ ಕೊಟ್ಟಿದ್ದಾರೆ. ಈ ಹಿಂದೆ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಮಾಡಿರುವ ಸಮರ್ಥ್ ಬಿ ಕಡ್ಕೋಲ್ ಹುಬ್ಬಳ್ಳಿ ಹಂಟರ್ಸ್ ಚಿತ್ರದ ಸಾರಥ್ಯ ವಹಿಸಿಕೊಂಡಿದ್ದಾರೆ. ಹೀರೋ ಯಾರು? ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ ಹುಬ್ಬಳ್ಳಿ ಹಂಟರ್ಸ್ ಸಿನಿಮಾದ ನಾಯಕ. ಮಹಾನಟಿ‌ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ. ಸಿನಿಮಾದ ಟೈಟಲ್ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಕಥೆ ಬರ...