Skip to main content

ಪೀಟರ್ ಏಪ್ರಿಲ್ 10ರಿಂದ ರಾಜ್ಯದಾದ್ಯಂತ ಬಿಡುಗಡೆ..

ಪೀಟರ್ ಏಪ್ರಿಲ್ 10ರಿಂದ ರಾಜ್ಯದಾದ್ಯಂತ ಬಿಡುಗಡೆ..
ಕೆ.ವಿ.ಎನ್ ಪ್ರೊಡಕ್ಷನ್ಸ್ ವಿತರಣೆಯಲ್ಲಿ ಪೀಟರ್ ರಿಲೀಸ್...
ಲವ್ ಮಾಕ್ಟೇಲ್ ಬೆನ್ನಿಗೆ ಮತ್ತೊಂದು ಬ್ಯೂಟಿಫುಲ್ ಕಂಟೆಂಟ್ ಪೀಟರ್...
ಸ್ಯಾಂಡ್ ವುಡ್ ನಲ್ಲಿ ಏಪ್ರಿಲ್ಗೆ ಭರವಸೆಯ ಸಿನಿಮಾ ಪೀಟರ್...
ಪೀಟರ್.... ಸ್ಯಾಂಡಲ್ ವುಡ್ ಅಂಗಳದಲ್ಲಿ ಈ ಬಿರುಬೇಸಿಗೆಯಲ್ಲಿ ಕನ್ನಡ ಪ್ರೇಕ್ಷಕರ ಕಣ್ಮನಕ್ಕೆ ತಂಪೆರೆಯಲು ಬರ್ತಿರೋ ಮ್ಯೂಸಿಕಲ್ ಲವ್ ಮಿಸ್ಟರಿ. ಈಗಾಗ್ಲೇ ಮೂರು ವಿಶಿಷ್ಠ ಹಾಡುಗಳಿಂದ ಗಮನ ಸೆಳೆದಿರೋ ಪೀಟರ್, ಟೀಸರ್ ನಿಂದ ಕನ್ನಡ ಸಿನಿಪ್ರಿಯರಲ್ಲಿ ವಿಶೇಷವಾದ ಕುತೂಹಲವನ್ನ ಮೂಡಿಸಿದೆ. ನಿನ್ನೆ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಹಾಡುಗಳ ಬಿಡುಗಡೆ ಹಾಗೂ ಪ್ರೀ ರಿಲೀಸ್ ಕಾರ್ಯಕ್ರಮ ಜರುಗಿತು. ಈ ವೇಳೆ ಇಡೀ ತಂಡ ಹಾಜರಾಗಿತ್ತು.‌
ಈ ಸಂದರ್ಭದಲ್ಲಿ ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ, ಪೀಟರ್ ಸಿನಿಮಾದ ಪ್ರತಿ ಹಂತದಲ್ಲಿ, ಪ್ರತಿ ಕಂಟೆಂಟ್ ನಲ್ಲಿಯೂ ನಾವು ಹೊಸತನ ಕೊಟ್ಟಿದ್ದೇವೆ. ನೋಡುಗರು ಥಿಯೇಟರ್ ನಲ್ಲಿ ಕೂತು ಮಡಿಕೇರಿಯ ಭಾಗಮಂಡಲದಲ್ಲಿ ನಡೆಯೋ ರೋಚಕ ಕಥೆಯನ್ನು ಅನುಭವಿಸಲೇಬೇಕು. ಅದಕ್ಕೆ ತಕ್ಕಂತೆ ಕಥೆ ಹೆಣೆದಿದ್ದು, ಶಬ್ಧ ವಿನ್ಯಾಸ, ಪರಿಸರ ಇದೆಲ್ಲದರಿಂದ ಪ್ರೇಕ್ಷಕ ಹೊಸ ಅನುಭವೆ ಪಡೆಯುವುದು ಗ್ಯಾರೆಂಟಿ. ಮ್ಯೂಸಿಕ್ ಅಂತಾ ಬಂದಾಗ ನಾಲ್ಕು ಜಾನರ್ ನಲ್ಲಿ ಮ್ಯೂಸಿಕ್ ಮಾಡಿದ್ದೇವೆ. ಪೀಟರ್ ಸಿನಿಮಾದ ಪ್ರತಿ ಕಂಟೆಂಟ್, ಹಾಡು, ಟೀಸರ್ ಎಲ್ಲವೂ ಕೂಡ ಆಡಿಯನ್ಸ್ ಗೆ ಹತ್ತಿರವಾಗಲೂ ಇದೇ ಕಾರಣ. ನಾವು ಭಿನ್ನವಾಗಿ ಕಂಟೆಂಟ್ ಪ್ರೆಸೆಂಟ್ ಮಾಡುತ್ತಾ ಬಂದಿದ್ದೇವೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಹೈದ್ರಾಬಾದ್ ನಲ್ಲಿಯೂ ಚಿತ್ರದ ಪ್ರಚಾರ ಕೆಲಸ ನಡೆಯುತ್ತಿದೆ. ಏಪ್ರಿಲ್ 10ಕ್ಕೆ ರಾಜ್ಯದಲ್ಲಿ ಬಿಡುಗಡೆಯಾದರೇ, ಇನ್ನೂ ಎರಡು ವಾರದ ಬಳಿಕ ಆಯಾಯಾ ರಾಜ್ಯಗಳಲ್ಲಿ ಬಿಡುಗಡೆ ಮಾಡಲಿದ್ದೇವೆ. ಪೀಟರ್ ಒಂದುವರೆ ವರ್ಷದ ಜರ್ನಿ. ಈ ಪಯಣದಲ್ಲಿ ಜೊತೆಯಾದ ಎಲ್ಲರಿಗೂ ಧನ್ಯವಾದ ಎಂದರು.
ನಾಯಕ ರಾಜೇಶ್ ಧ್ರುವ ಮಾತನಾಡಿ, ಪೀಟರ್ ನನ್ನ ಎರಡನೇ ಸಿನಿಮಾ. ಎಮೋಷನಲ್ ಜರ್ನಿ ಜೊತೆಗೆ ಒಂದೊಳ್ಳೆ ಕಲಾವಿದರು ಹಾಗೂ ಒಳ್ಳೆ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ಚೆನ್ನಾಗಿತ್ತು. ಸುಕೇಶ್ ಶೆಟ್ಟಿ ಅವರು ಮುಂದೆ ಕನ್ನಡ ಚಿತ್ರರಂಗದ ಮೋಸ್ಟ್ ವಾಂಟೆಂಡ್ ಡೈರೆಕ್ಟರ್ ಆಗುತ್ತಾರೆ. ಮೂರು ವರ್ಷ ಈ ಚಿತ್ರಕ್ಕಾಗಿ ಕೆಲಸ ಮಾಡಿ ಅಚ್ಚುಕಟ್ಟಾಗಿ ಔಟ್ ಫುಟ್ ತಂದಿದ್ದಾರೆ. ರವಿ ಹಾಗೂ ರಾಕೇಶ್ ಇಬ್ಬರು ಫ್ಯಾಷನೇಟೆಡ್ ಪ್ರೊಡ್ಯೂಸರ್. ಇವರಿಬ್ಬರೂ ಚಿತ್ರಕ್ಕೆ ಯಾವುದಕ್ಕೂ ಕಮ್ಮಿ ಮಾಡದೇ ಎಲ್ಲವನ್ನೂ ಸಿನಿಮಾಗೆ ನೀಡಿದ್ದಾರೆ. ಪೀಟರ್ ರಾಕ್ಷಸನೋ ಹೌದು, ರಕ್ಷಕನೂ ಹೌದು. ಅವನ ಜೀವನದಲ್ಲಿ ಚೆಂಡೆ ತುಂಬಾ ಮುಖ್ಯವಾಗಿರುತ್ತದೆ. ಅದರ ರಕ್ಷಣೆಗೆ ಹೇಗೆ ಮುಂದಾಗ್ತಾನೆ. ಹಾಗೂ ಅವನ ವೈಯಕ್ತಿಕ ಜೀವನದ ರಕ್ಷಣೆಗೆ ರಾಕ್ಷಸ ಆಗುತ್ತಾನೆ.‌ಅದನ್ನು‌ ನೀವು ಥಿಯೇಟರ್ ನಲ್ಲಿ ನೋಡಿ ಎಕ್ಸ್ ಪಿರಿಮೆಂಟ್ ಮಾಡಬೇಕು ಎಂದರು.

ಪೀಟರ್ ಚಿತ್ರದಲ್ಲಿ ರಾಜೇಶ್ ಧ್ರುವಾ, ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ಇನ್ನುಳಿದಂತೆ ರವೀಕ್ಷಾ ಶೆಟ್ಟಿ , ರಘು ಪಾಂಡೇಶ್ವರ್ , ಪ್ರತಿಮಾ ನಾಯಕ್, ರಾಮನಾಡಗೌಡ, ವರುಣ್ ಪಟೇಲ್ , ಭರತ್, ದೀನಾ, ರಾಧಾಕೃಷ್ಣ ಕುಂಬ್ಳೆ, ರಕ್ಷಿತ್ ದೊಡ್ಡೇರಾ ತಾರಾಗಣದಲ್ಲಿದ್ದಾರೆ.

ದೂರದರ್ಶನ ಸಿನಿಮಾ ನಿರ್ದೇಶಿಸಿದ್ದ ಸುಕೇಶ್ ಶೆಟ್ಟಿ ಪೀಟರ್ ಚಿತ್ರದ ಡೈರೆಕ್ಟರ್. ಚೊಚ್ಚಲ ಸಿನಿಮಾದಲ್ಲೇ ಪ್ರಶಂಸೆ ಗಳಿಸಿದ್ದ ಸುಕೇಶ್, ಈ ಸಲ ಮತ್ತೊಂದು ಮಣ್ಣಿನ ಸೊಗಡಿನ ಕಥೆಯನ್ನ ಎಳೆಯನ್ನಾಗಿಸಿಕೊಂಡು, ಕೌತುಕತೆ ತುಂಬಿದ ರೋಚಕ ಸಸ್ಪೆನ್ಸ್ ಇರೋ ಪ್ರೇಮಕಥೆಯನ್ನ ಪ್ರಸ್ತುತ ಪಡಿಸುವ ಪ್ರಯತ್ನ ಮಾಡಿದಂತಿದೆ. ಈಗಾಗ್ಲೇ ರಿಲೀಸ್ ಆಗಿರೋ ಟ್ರೈಲರ್ ಅದೆಲ್ಲವನ್ನೂ ಸಾರಿ ಹೇಳೋದ್ರ ಜೊತೆಗೆ, ಸಿನಿಪ್ರಿಯರನ್ನ ಆಕರ್ಷಿಸುತ್ತಿದೆ. ರಿತ್ವಿಕ್ ಮುರಳಿಧರ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಉದ್ಯಮದಲ್ಲಿ ಭರವಸೆಯ ಸಂಗೀತ ನಿರ್ದೇಶಕರಲ್ಲೊಬ್ಬರಾಗಿ ಗುರುತಿಸಿಕೊಳ್ತಿರೋ ರಿತ್ವಿಕ್, ಪೀಟರ್ ಮೂಲಕ ಹೊಸ ಮೈಲಿಗಲ್ಲನ್ನ ನೆಡೋ ಸೂಚನೆ ಕೊಟ್ಟಿದ್ದಾರೆ. 

ಪೀಟರ್ ಸಿನಿಮಾದಲ್ಲಿ ಈವರೆಗೂ ರಿಲೀಸ್ ಆಗಿರೋ ಮೂರು ಹಾಡುಗಳು ವಿಶಿಷ್ಠವಾಗಿ ಪ್ರೇಕ್ಷಕರ ನಾಡಿಮಿಡಿತವನ್ನ ಮಿಡಿಸಿವೆ.. ಅದ್ರಲ್ಲೂ ವಿಶೇಷವಾಗಿ ಸುಂದರಿ .. ಸುಂದರಿ... ರೊಮ್ಯಾಂಟಿಕ್ ಹಾಡು ಟ್ರೆಂಡ್ ನಲ್ಲಿದೆ.. ಸೈರಾಟ್ ಖ್ಯಾತಿಯ ಅಜಯ್ ಗೊಗಾವಲೆ ಹಾಡಿರೋ ಜೋಷ್ ಕಿ ಜವಾನಿ ಫ್ರೆಂಡ್ ಶಿಪ್ ಹಾಡು ಗಮನ ಸೆಳೆಯುತ್ತಿದೆ. ಇನ್ನೂ ತಾಯಿಯಾದೆಯಾ ಹಾಡು ಭಾವುಕರನ್ನಾಗಿಸ್ತಿದೆ.

ಕರ್ನಾಟಕ ಕೇರಳ ಗಡಿ ಭಾಗದಲ್ಲಿ ನಡೆಯೋ ಈ ಕಥೆಯನ್ನ ಗುರುಪ್ರಸಾದ್ ನಾರ್ನಾಡ್ ಛಾಯಾಗ್ರಹಣದಲ್ಲಿ ಸೆರೆಹಿಡಿಯಲಾಗಿದ್ದು, ನವೀನ್ ಶೆಟ್ಟಿ ಸಂಕಲ ಮಾಡಿದ್ದಾರೆ. ಪೀಟರ್ ತಾಂತ್ರಿಕವಾಗಿ ತುಂಬಾ ಸತ್ವಯುತ ಪ್ರಯತ್ನ. ಈ ಸಿನಿಮಾವನ್ನ ಬಹುತೇಕ ಉದ್ಯಮದ ಯುವ ತಂತ್ರಜ್ಞರೇ ಕೂಡಿ ಮಾಡಿರೋದು ವಿಶೇಷ. ವೃದ್ಧಿ ಸ್ಟುಡಿಯೋಸ್ ಬ್ಯಾನರ್ ನಡಿಯಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಿಗೆ ಸೌಂಡ್ ಡಿಸೈನರ್ ಆಗಿ ಕೆಲಸ ಮಾಡಿರೋ ರವಿ ಹೀರೇಮಠ್ ಮತ್ತು ರಾಕೇಶ್ ಹೆಗ್ಗಡೆ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. 

ಪೀಟರ್ ಸಿನಿಮಾದ ಕಂಟೆಂಟ್ ನೋಡಿದ ಇಷ್ಟಪಟ್ಟಿರೋ ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನ ವಿತರಿಸಲು ಮುಂದೆ ಬಂದಿದ್ದು, ಏಪ್ರಿಲ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಮಾಡ್ತಿದೆ. ಇಲ್ಲಿಯವರೆಗೂ ರಿಲೀಸ್ ಆಗಿರೋ ಪೀಟರ್ ಚಿತ್ರದ ಹಾಡು ವಿಡಿಯೋ ತುಣುಕುಗಳು ಚಿತ್ರದ ಗುಣಮಟ್ಟವನ್ನ ಕಥೆಯ ಆಶಯವನ್ನ ಆಕರ್ಷಕವಾಗಿ ಬಣ್ಣಿಸಿದ್ದು, ಕನ್ನಡ ಸಿನಿಪ್ರಿಯರು ಈ ಚಿತ್ರವನ್ನ ಅಪ್ಪಿ ಒಪ್ಪುವ ಸೂಚನೆ ದಟ್ಟವಾಗಿ ಕಾಣ್ತಿದೆ..

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...