ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ದ ಅಧ್ಯಕ್ಷರಾದ ಶ್ರೀ ಎಂ. ಜಿ. ರಾಮಮೂರ್ತಿ ಹಾಗೂ ಜಂಟಿ ಕಾರ್ಯದರ್ಶಿ ರಮೇಶ್ ಯಾದವ್..
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ದ ಅಧ್ಯಕ್ಷರಾದ ಶ್ರೀ ಎಂ. ಜಿ. ರಾಮಮೂರ್ತಿ ಹಾಗೂ ಜಂಟಿ ಕಾರ್ಯದರ್ಶಿ ರಮೇಶ್ ಯಾದವ್..
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ದ ಅಧ್ಯಕ್ಷರಾದ ಶ್ರೀ ಎಂ. ಜಿ. ರಾಮಮೂರ್ತಿ ಹಾಗೂ ಜಂಟಿ ಕಾರ್ಯದರ್ಶಿ ರಮೇಶ್ ಯಾದವ್ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿ ಜಮ್ಮು ಕಾಶ್ಮೀರದಲ್ಲಿ ಕನ್ನಡ ಸಿನೆಮಾಗಳ ಚಿತ್ರಕರಣದ ಬಗ್ಗೆ ಮಾತನಾಡಲಾಗಿ, ಓಮರ್ ಅಬ್ದುಲ್ಲಾ ಅವರು ಎಲ್ಲಾ ರೀತಿಯ ವ್ಯವಸ್ಥೆ ಹಾಗೂ ಭದ್ರತೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಈ ಸಭೆಯಲ್ಲಿ ಕಲಾವಿದರ ಸಂಘದಿಂದ ರಾಕ್ ಲೈನ್ ವೆಂಕಟೇಶ್ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಂದ ಸುಂದರ್ ರಾಜ್ ಭಾಗವಹಿಸಿದ್ದರು.
ಈ ಬಗ್ಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ರಾಮಮೂರ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.
ಡಾ. ರಾಜಕುಮಾರ್ ಅವರ ಸಮಾಧಿ ಜಾಗದ ಕುರಿತು ನಟ ಚೇತನ್ ಅಹಿಂಸ ಪೋಸ್ಟ್ ಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಖಂಡನೆ
ಇಡೀ ಕರ್ನಾಟಕದ ಮೆಚ್ಚಿನ ನಾಯಕ ವರನಟ ಡಾ. ರಾಜಕುಮಾರ್. ಏಪ್ರಿಲ್ 24 ‘ಗಾನಗಂಧರ್ವ’ ಡಾ. ರಾಜಕುಮಾರ್ ಅವರ ಹುಟ್ಟುಹಬ್ಬ. ಅದೇ ದಿನ ನಟ ಅಹಿಂಸ ಚೇತನ್ ಅವರು ಡಾ. ರಾಜಕುಮಾರ್ ಅವರ ಸಮಾಧಿಗೆ ಸರ್ಕಾರ ಜಾಗ ನೀಡಿರುವುದರ ಬಗ್ಗೆ ಪ್ರಶ್ನಿಸಿ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ‘ವರನಟ’ ರಾಜಕುಮಾರ್ ಅವರಿಗೆ ಅಗೌರವ ತರುವ ಚೇತನ್ ಅಹಿಂಸ ಅವರ ಹೇಳಿಕೆಯನ್ನು ಕನ್ನಡ ಚಲಚಿತ್ರ ನಿರ್ಮಾಪಕರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಎಂ.ಜಿ. ರಾಮಮೂರ್ತಿ ತಿಳಿಸಿದ್ದಾರೆ.
Comments
Post a Comment