Skip to main content

Posts

Showing posts from July, 2026

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಫೌಜಿ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ: ಡಿಸೆಂಬರ್ 3 ರಂದು ಬೆಳ್ಳಿಪರದೆ ಮೇಲೆ ಅಬ್ಬರ!

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಫೌಜಿ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ: ಡಿಸೆಂಬರ್ 3 ರಂದು ಬೆಳ್ಳಿಪರದೆ ಮೇಲೆ ಅಬ್ಬರ! ಭಾರತೀಯ ಚಿತ್ರರಂಗದ ಸ್ಟಾರ್ ನಟ ಪ್ರಭಾಸ್ ಅಭಿನಯದ, ನಿರ್ದೇಶಕ ಹನು ರಾಘವಪುಡಿ ಅವರ ಮಹತ್ವಾಕಾಂಕ್ಷೆಯ ಚಿತ್ರ 'ಫೌಜಿ'ಯ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಚಿತ್ರತಂಡವು ಆಕರ್ಷಕ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ, ಈ ಚಿತ್ರವು ಇದೇ ವರ್ಷದ ಡಿಸೆಂಬರ್ 3 ರಂದು ಪ್ರಪಂಚದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ ಎಂದು ಖಚಿತಪಡಿಸಿದೆ. 'ಅಜ್ಞಾತಪರ್ವ ಎಂಡ್ಸ್' ಎಂಬ ಕುತೂಹಲಕಾರಿ ಘೋಷಣೆಯೊಂದಿಗೆ, ಚಿತ್ರದ ನಿರ್ಮಾಪಕರು 'ದಿ ರೆಬೆಲಿಯನ್ ಬಿಗಿನ್ಸ್' ಎಂದು ಸಾರಿದ್ದಾರೆ. ಈ ಘೋಷಣೆಯು ಪ್ರೇಕ್ಷಕರಲ್ಲಿ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಭಾಸ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಸ್ಟರ್, ಚಿತ್ರದ ತೀವ್ರತೆಯನ್ನು ಎತ್ತಿ ತೋರಿಸುತ್ತದೆ. ರಕ್ತಸಿಕ್ತವಾದ ಉಡುಪಿನಲ್ಲಿ, ಸುತ್ತಲೂ ಶವಗಳ ನಡುವೆ ಕಲ್ಲಿನ ಮೇಲೆ ಕುಳಿತು ಗನ್ ಹಿಡಿದಿರುವ ಪ್ರಭಾಸ್ ಅವರ ಲುಕ್‌, ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದೆ. 'ಬಾಹುಬಲಿ'ಯ ನಂತರ ಪ್ರಭಾಸ್ ಮತ್ತೊಮ್ಮೆ ಒಂದು ಬೃಹತ್ ಪೀರಿಯಡ್ ಡ್ರಾಮಾ ಕಥೆಯೊಂದಿಗೆ ಬೆಳ್ಳಿಪರದೆಗೆ ಮರಳುತ್ತಿದ್ದಾರೆ. "ಎ ಬೆಟಾಲಿಯನ್‌ ಹೂ ಫೈಟ್ಸ್‌ ಅಲೋನ್‌" ಎ...

ಎಜೆ ಶೆಟ್ಟಿ ನಿರ್ದೇಶನದಲ್ಲಿ 'ಭೂರಮೆ' ವಿಡಿಯೋ ಸಾಂಗ್...

ಎಜೆ ಶೆಟ್ಟಿ ನಿರ್ದೇಶನದಲ್ಲಿ 'ಭೂರಮೆ' ವಿಡಿಯೋ ಸಾಂಗ್... ಹೊಸಬರಿಗೆ ಸಾಥ್ ಕೊಟ್ಟ ಸ್ಟಾರ್ ಡೈರೆಕ್ಟರ್ಸ್.. 'ಭೂರಮೆ' ವಿಡಿಯೋ ಸಾಂಗ್ ರಿಲೀಸ್... ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ? ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್ ಕ್ಯಾಪ್ ತೊಟ್ಟು‌ ನಿರ್ದೇಶಿಸಿರುವ ಚೊಚ್ಚಲ ಆಲ್ಬಂ ಸಾಂಗ್ ಭೂರಮೆ. ಯುವ ಪ್ರತಿಭೆಗಳಾದ ಅರ್ಥವ ವಿಶ್ವನಾಥ್ ಹಾಗೂ ಸುಷ್ಮಿತಾ ಶೆಟ್ಟಿ ನಟನೆಯ ಈ ಸಾಂಗ್ ಬಿಡುಗಡೆ ಕಾರ್ಯಕ್ರಮ AMBಯಲ್ಲಿ ನಿನ್ನೆ ಜರುಗಿತು. ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ಸ್ ಗಳಾದ ಎಪಿ ಅರ್ಜುನ್, ಚೇತನ್ ಕುಮಾರ್ ಹಾಗೂ ಪವನ್ ಒಡೆಯರ್ ವಿಶೇಷ ಅಥಿತಿಗಳಾಗಿ ಆಗಮಿಸಿ ಹೊಸಬರಿಗೆ ಸಾಥ್ ಕೊಟ್ಟರು. ಈ ಸಂದರ್ಭದಲ್ಲಿ ಯುವ ನಟ ಅಥರ್ವ ವಿಶ್ವನಾಥ್ ಮಾತನಾಡಿ, ಅರ್ಜುನ್ ಸರ್, ಪವನ್ ಸರ್ ಹಾಗೂ ಚೇತನ್ ಸರ್ ಹೊಸಬರಿಗೆ ಈ ರೀತಿ ಸಪೋರ್ಟ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಭೂರಮೆ ಇಷ್ಟು ಕ್ವಾಲಿಟಿಯಲ್ಲಿ ಬರಲು ಕಾರಣ ನನ್ನ ಎಲ್ಲಾ ಸ್ನೇಹಿತರು. ನಾನು ಈ ರೀತಿ ಹೆಜ್ಜೆ ಇಟ್ಟಾಗ ನನ್ನ ತಂದೆ ತಾಯಿ ಜೊತೆಯಾಗಿ ನಿಂತರು. ಭೂರಮೆ ಎನ್ನುವುದು ನಮ್ಮ ಕನಸು. ಸಿನಿಮಾ ಮಾಡಲು ಹೊರಟಿರುವ ನಾವು ತೆಗೆದುಕೊಂಡು ಮೊದಲ ಹೆಜ್ಜೆ ಇದು. ಈ ಸಾಂಗ್ ಗಾಗಿ ಎಜೆ ಶೆಟ್ಟಿಯವರು ಸಾಕಷ್ಟು ವರ...

ರುಕ್ಮಿಣಿ ರಾಧಾಕೃಷ್ಣ 2 ಹಾಡುಗಳ ಬಿಡುಗಡೆ..

ರುಕ್ಮಿಣಿ ರಾಧಾಕೃಷ್ಣ 2 ಹಾಡುಗಳ ಬಿಡುಗಡೆ..    ಉಮೇಶ್ ಫಿಲಂಸ್ ಲಾಂಛನದಲ್ಲಿ ಎನ್. ಹನುಮಂತರಾಜು, ಎನ್.ಹೆಚ್.ಉಮೇಶ್ ನಿರ್ಮಿಸುತ್ತಿರುವ 'ರುಕ್ಮಿಣಿ ರಾಧಾಕೃಷ್ಣ ಚಿತ್ರಕ್ಕೆ ಪ್ರಾಣ್ ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ. ಸುನಾದ್ ಗೌತಂ ಅವರ ಸಂಗೀತ ನಿರ್ದೇಶನವಿರುವ ೨ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್, ಪಾರು ಖ್ಯಾತಿಯ ಮೋಕ್ಷಿತಾ ಪೈ, ರಿಯಾ ಸಚ್ ದೇವ್ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  ಆಡಿಯೋ ರಿಲೀಸ್ ಮಾಡಿದ ಲಹರಿ ವೇಲು ಮಾತನಾಡುತ್ತ ಈ ಚಿತ್ರದಲ್ಲಿ ೫ ಸುಂದರ ಹಾಡುಗಳಿದ್ದು, ಅವುಗಳನ್ನು ಅಷ್ಟೇ ಅದ್ಭುತವಾಗಿ ಪಿಚ್ಚರೈಜೇಷನ್ ಮಾಡಿದ್ದಾರೆ. ನಾನು ಕೂಡ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದರು. ಸಾಹಿತಿ ಕೆ.ಕಲ್ಯಾಣ್ ಮಾತನಾಡಿ ನಿರ್ಮಾಪಕರಲ್ಲಿರುವ ಸಿದ್ದತೆ, ನಿರ್ದೇಶಕರಲ್ಲಿರುವ ಬದ್ದತೆ ಹಾಡುಗಳಲ್ಲಿ ಎದ್ದು ಕಾಣುತ್ತದೆ. ನಾಯಕಿ ಪಾತ್ರಕ್ಕೆ ತಮಿಳು ಹಿನ್ನೆಲೆ ಇರುತ್ತದೆ. ಹಾಗಾಗಿ ತಮಿಳು, ಕನ್ನಡ ಸೇರಿಸಿ ಒಂದು ಹಾಡನ್ನು ರಚಿಸಿದ್ದೇನೆ ಎಂದರು.             ನಾಯಕ ಭರತ್ ಕುಮಾರ್ ಮಾತನಾಡುತ್ತ ಲಹರಿ ವೇಲು ಅವರ ಬಳಿ ಹೋದಾಗ ಬಹಳ ಅರ್ಥ ಪೂರ್ಣವಾದ ಸಾಲುಗಳನ್ನು ಹಾಕಿದ್ದೀರಿ ಎಂದು ಪ್ರಶಂಸಿಸಿದರು. ಅಲ್ಲದೆ ಒಳ್ಳೆಯ ಮೊತ್ತಕ್ಕೆ ಆಡಿಯೋ ಮಾಡಿಕೊಟ್ಟರು. ೨ ಭಾಷೆಯ ...

ಕರ್ನಾಟಕ ಅರಸು ಮತ್ತು ರಾಜುಕ್ಷತ್ರಿಯ ಪ್ರತಿಷ್ಠಾನ ಪ್ರತಿಭಾ ಪುರಸ್ಕಾರ ಸಮಾರಂಭ..

ಕರ್ನಾಟಕ ಅರಸು ಮತ್ತು ರಾಜುಕ್ಷತ್ರಿಯ ಪ್ರತಿಷ್ಠಾನ ಪ್ರತಿಭಾ ಪುರಸ್ಕಾರ ಸಮಾರಂಭ.. ಶ್ರೀಮನ್ ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅರಸು ಮತ್ತು ರಾಜುಕ್ಷತ್ರಿಯ ಪ್ರತಿಷ್ಠಾನ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದ ಕಲಾ ದಂಪತಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಅವರನ್ನು ಸನ್ಮಾನಿಸಲಾಯಿತು, ಕಂಠೀರವಾ ಸ್ಟುಡಿಯೋ ಮಾಜಿ ಅಧ್ಯಕ್ಷರು ಶ್ರೀಮತಿ ವಿಜಯ ಲಕ್ಷ್ಮೀ ಅರಸು ಹಾಗೂ ತಿಪಟೂರು ಮಾಧ್ಯಮ ಸಂಚಾಲಕರು ಶ್ರೀ ದಯಾನಂದ ಸಾಗರ್ ಇದ್ದರು.

"ಲಂಕೆ" ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಅವರ ಮುಂದಿನ ಚಿತ್ರ "ಡೀಟಾಕ್ಸ್"...

"ಲಂಕೆ" ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಅವರ ಮುಂದಿನ ಚಿತ್ರ "ಡೀಟಾಕ್ಸ್"...  ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರದ ಪ್ರಮುಖಪಾತ್ರದಲ್ಲಿ ಬಹಭಾಷಾ ನಟ ಕಿಶೋರ್ ಕುಮಾರ್..   ಈ ಹಿಂದೆ "ಲಂಕೆ" ಚಿತ್ರವನ್ನು ನಿರ್ದೇಶಿಸಿದ್ದ, "ಬಣ್ಣಬಣ್ಣದ ಲೋಕ" ಚಿತ್ರದಲ್ಲಿ ನಟನೆಯನ್ನೂ ಮಾಡಿದ್ದ ರಾಮಪ್ರಸಾದ್ ದಾಸಪ್ಪ ನಿರ್ದೇಶನದ ಎರಡನೇ ಚಿತ್ರ "ಡೀಟಾಕ್ಸ್". ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.                 ನಾನು ಸಾಮಾನ್ಯವಾಗಿ ಚಿತ್ರ ಮುಗಿದ ಮೇಲೆ ಚಿತ್ರದ ಕುರಿತು ಮಾತನಾಡುತ್ತೇನೆ. ಏಕೆಂದರೆ ನಾವು ಮಾತನಾಡಬಾರದು. ನಮ್ಮ ಕೆಲಸ ಮಾತನಾಡಬೇಕು ಎಂಬುದರಲ್ಲಿ ನಂಬಿಕೆ ಇಟ್ಟಿರುವವನು ನಾನು. ಈ ಚಿತ್ರದ ಚಿತ್ರೀಕರಣ ಕೂಡ ಈಗ ಮುಕ್ತಾಯ ಹಂತ ತಲುಪಿದೆ. ಸೆಪ್ಟೆಂಬರ್ ಕೊನೆಯಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಇನ್ನೂ, "ಡೀಟಾಕ್ಸ್" ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಏಳರಿಂದ ಎಪ್ಪತ್ತರ ವಯಸ್ಸಿನ ಹ...

‘ನಾಗಬಂಧಂ’ ಮೂಲಕ ನಭಾ ನಟೇಶ್ ಭರ್ಜರಿ ಕಮ್‌ಬ್ಯಾಕ್: ‘ಸ್ವಯಂಭು’ ಚಿತ್ರದ ಮೇಲೆ ಹೆಚ್ಚಿದ ನಿರೀಕ್ಷೆ..

‘ನಾಗಬಂಧಂ’ ಮೂಲಕ ನಭಾ ನಟೇಶ್ ಭರ್ಜರಿ ಕಮ್‌ಬ್ಯಾಕ್: ‘ಸ್ವಯಂಭು’ ಚಿತ್ರದ ಮೇಲೆ ಹೆಚ್ಚಿದ ನಿರೀಕ್ಷೆ.. ಕನ್ನಡತಿ, ಪಟಾಕಿ ಪೋರಿ ನಭಾ ನಟೇಶ್ ಸದ್ಯ ಟಾಲಿವುಡ್ ಮತ್ತು ಬಾಲಿವುಡ್ ಅಂಗಳದಲ್ಲಿ ಭರ್ಜರಿ ಸೌಂಡು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ಅವರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ನಾಗಬಂಧಂ’ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದ್ದು, ನಭಾ ಅವರ ಅಭಿನಯ ಮತ್ತು ನೃತ್ಯಕ್ಕೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಹಾಗೂ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಮೇಲ್ನೋಟಕ್ಕೆ ಇದೊಂದು ಸಂಪೂರ್ಣ ಆಧ್ಯಾತ್ಮಿಕ ಹಿನ್ನೆಲೆಯ ಸಿನಿಮಾ ಎಂದು ಅನಿಸಿದರೂ, ಕಮರ್ಷಿಯಲ್ ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಮನರಂಜನಾತ್ಮಕ ಅಂಶಗಳೂ ಈ ಚಿತ್ರದಲ್ಲಿವೆ. ಬ್ರೇಕ್‌ನ ನಂತರ ಕಮ್‌ಬ್ಯಾಕ್ ಮಾಡಿದ ನಟಿ ವರ್ಷಗಳ ಹಿಂದೆ ನಭಾ ನಟೇಶ್ ಅವರಿಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಅವರ ಎಡ ಭುಜದ ಮೂಳೆ ಮುರಿದು ಗಂಭೀರವಾದ ಪೆಟ್ಟಾಗಿತ್ತು. ಇದಕ್ಕಾಗಿ ಅವರು ಪದೇ ಪದೇ ಸರಣಿ ಶಸ್ತ್ರಚಿಕಿತ್ಸೆಗಳಿಗೂ ಒಳಗಾಗಬೇಕಾಯಿತು. ಗಾಯದ ತೀವ್ರತೆಯಿಂದಾಗಿ ಸುದೀರ್ಘ ಕಾಲ ಚೇತರಿಸಿಕೊಳ್ಳುತ್ತಿದ್ದ ಅವರು, ಅನಿವಾರ್ಯವಾಗಿ ಚಿತ್ರರಂಗದಿಂದ ಕೆಲವು ಕಾಲ ಸಂಪೂರ್ಣ ದೂರ ಉಳಿದಿದ್ದರು. ಇದೀಗ ಎಲ್ಲ ನೋವುಗಳನ್ನು ಮೆಟ್ಟಿ ನಿಂತು ‘ನಾಗಬಂಧಂ’ ಮೂಲಕ ಭರ್ಜರಿ ಸಕ್ಸಸ್‌ ಜೊತೆಗೆ ಕಮ್‌ಬ್ಯಾಕ್ ಮಾಡಿರುವ ನಭಾಗೆ, ಪ್ರೇಕ್ಷಕರು ನೀಡ...

ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ "ಫಾರೆವರ್"ಗೆ ಅದ್ದೂರಿ ಚಾಲನೆ..

ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ "ಫಾರೆವರ್"ಗೆ ಅದ್ದೂರಿ ಚಾಲನೆ.. ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭಕೋರಿದ ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾ..  ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಲೂಸ್ ಮಾದ ಯೋಗಿ ಅಭಿನಯದ 51 ನೇ ಚಿತ್ರ "ಫಾರೆವರ್". ಸುಪ್ರೀಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಎಂ.ವೆಂಕಟನಾರಾಯಣ್(ಠಾಗೋರ್ ಕೃಷ್ಣ) ನಿರ್ಮಾಣದ, "ಚಂದ್ರಿಕ" ಖ್ಯಾತಿಯ ಯೋಗೇಶ್ ಎಂ ನಿರ್ದೇಶಿಸುತ್ತಿರುವ "ಫಾರೆವರ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಆರಂಭ ಫಲಕ ತೋರಿದರು. ಶಾಸಕ ಕೃಷ್ಣಪ್ಪ ಅವರು ಕ್ಯಾಮೆರಾ ಚಾಲನೆ ಮಾಡಿದರು. "ನಾಗರಹಾವು" ಚಿತ್ರದ ನಿರ್ಮಾಪಕ‌ ಸಾಜಿದ್ ಖುರೇಶಿ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಿದರು. ಗಣ್ಯರೆಲ್ಲರು ಸೇರಿ ಟ್ಯಾಂಕರ್ ಮೇಲಿದ್ದ ಶೀರ್ಷಿಕೆಯನ್ನು ಅನಾವರಣ ಮಾಡಿದ್ದು ವಿಶೇಷವಾಗಿತ್ತು. ಚಿತ್ರರಂಗ ಸಾಕಷ್ಟು ಗಣ್ಯರು ಹಾಗೂ ಸಹಸ್ರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.          ನಾನು ಹಾಗೂ ಧ್ರುವ ಸರ್ಜಾ ಒಂದೇ ಸ್ಕೂಲ್ ನಲ್ಲಿ ಓದಿದವರು. ಮೆಚ್ಚಿನ ಗೆಳೆಯ ಅವರು. ಅವರು ಬಂದು ನಮ್ಮ ಚಿತ್ರಕ್ಕೆ ಕ್ಲಾಪ್ ಮಾಡಿದ್ದು ಖುಷಿಯಾ...

ಮಿಸ್ಟರ್ ಅಂಡ್ ಮಿಸಸ್.. ರಾಜಾಹುಲಿ ಆಡಿಯೋ..

ಮಿಸ್ಟರ್ ಅಂಡ್ ಮಿಸಸ್.. ರಾಜಾಹುಲಿ ಆಡಿಯೋ..  ಸಚಿವ ರಾಮಲಿಂಗಾ ರೆಡ್ಡಿ ಬಿಡುಗಡೆ..    ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಜಾಹುಲಿ ಚಿತ್ರಕ್ಕೆ ಅಸಿಸ್ಟೆಂಟ್ ಆಗಿ ಕೆಲಸ ಮಾಡಿದ್ದ ಹೊನ್ನರಾಜ್ ನಾಯಕ ಕಮ್ ನಿರ್ದೇಶಕನಾಗಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ಆ್ಯಕ್ಷನ್ ಕಟ್ ಹೇಳಿರುವ 'ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ' ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು. ಸಚಿವ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಲವ್ಲಿಸ್ಟಾರ್ ಪ್ರೇಮ್ ಸಾಂಗ್ ರಿಲೀಸ್ ಮಾಡಿದರು. ನಿರ್ಮಾಪಕರ ಸಂಘದ ಎಂ.ಜಿ.ರಾಮಮೂರ್ತಿ, ನಿರ್ಮಾಪಕ ಸಾರಾ.ಗೋವಿಂದು, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.    ವೇದಿಕೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಹೊನ್ನರಾಜ್ ಈ ಚಿತ್ರದಲ್ಲಿ ನಟನೆ, ನಿರ್ದೇಶನದ ಜತೆ, ಚಿತ್ರ ನಿರ್ಮಾಣ ಸಹ ಮಾಡಿದ್ದಾರೆ. ಸಿನಿಮಾ ಚೆನ್ನಾಗಿ ಪ್ರದರ್ಶನಗೊಂಡು ಹಾಕಿದ ಹಣದ 4ರಷ್ಟು ವಾಪಸ್ ಬರಲಿ ಎಂದು ಶುಭ ಹಾರೈಸಿದರು. ನಟ ಪ್ರೇಮ್ ಮಾತನಾಡಿ ಹೊನ್ನರಾಜ್ ನನಗೆ ಜೂನಿಯರ್, ಆಗ ಚಾಮರಾಜ್ ಮಾಸ್ಟರ್ ನಮಗೆಲ್ಲ ಗುರುಗಳು, ಸಿನಿಮಾ ನಿರ್ಮಸಣ ಮಾಡಿದ್ದಾರೆ. ಅವರಿಗೆ ಒಳ್ಳೆ ಫಲ ಸಿಗಲಿ ಎಂದು   ಶುಭ ಹಾರೈಸಿದರು.  ಸಾರಾ ಗೋವಿಂದು ಮಾತನಾಡಿ ಸಿರಿವಂತ ರಾಜಕಾರಣಿ ಕೈಲಿ ಸಾಂಗ್ ಲಾಂಚ್ ಮಾಡಿಸಿದ್ದೀರ...

‘ಶ್ರೀಕೃಷ್ಣ’ ಈವಾರ ಬಿಡುಗಡೆ..

‘ಶ್ರೀಕೃಷ್ಣ’ ಈವಾರ ಬಿಡುಗಡೆ..    ಈ ಹಿಂದೆ ಬ್ರಹ್ಮರಾಕ್ಷಸ ಚಿತ್ರವನ್ನು ನಿರ್ದೇಶಿಸಿದ್ದ ಶಂಕರ್ ರಾಜ ವರ್ಮ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಮತ್ತೊಂದು ಸಾಮಾಜಿಕ ಕಥಾನಕ ಒಳಗೊಂಡ ಚಿತ್ರ ‘ಶ್ರೀಕೃಷ್ಣ’ ಈವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.     ಬೃಹಸ್ಪತಿ ಕ್ರಿಯೇಷನ್ಸ್ ಬ್ಯಾನರ್‍ ಅಡಿ ಶಂಕರ್ ರಾಜ ವರ್ಮ ಮತ್ತು ಅಜಯ್‍ ಕುಮಾರ್ ಪಿ.ಎಂ. ಅವರುಗಳು ಜಂಟಿಯಾಗಿ ನಿರ್ಮಿಸಿರುವ ‘ಶ್ರೀಕೃಷ್ಣ’ ಚಿತ್ರಕ್ಕೆ ಶಿವಲಿಂಗಯ್ಯ ಸಿ.ಎಂ, ಉಲ್ಲಾಸ್‍ ಕೆ.ಸಿ.ಎಸ್, ಚಾಣುಕ್ಯ ಆರ್‍, ‘ನೆನಪಿರಲಿ’ ಮೋಹನ್‍ ಮತ್ತು ಲತಾ ಮಂಜುನಾಥ್‍ ಅವರುಗಳು ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ.    ‘ಮೂವರು ಅನಾಥರ ಜೀವನದಲ್ಲಿ ಏನೆಲ್ಲಾ ಘಟನೆಗಳು ನಡೆಯುತ್ತವೆ ಎಂಬುದನ್ನು ಈ ಚಿತ್ರದಲ್ಲಿ ಕುತೂಹಲಕಾರಿಯಾಗಿ ಹೇಳಲಾಗಿದ್ದು, ಇಲ್ಲಿ ನಾಯಕಿಯೂ ಒಬ್ಬ ಅನಾಥೆಯಾಗಿರುತ್ತಾಳೆ. ಹೀಗಿರುವಾಗ, ಅವರ ಜೀವನದಲ್ಲೊಂದು ಘಟನೆ ನಡೆಯುತ್ತದೆ. ಇದರಿಂದ ಅವರು ಜೈಲಿಗೂ ಹೋಗಬೇಕಾಗುತ್ತದೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ನಂತರ ಅವರು ಏನೆಲ್ಲಾ ಮಾಡುತ್ತಾರೆ ಎನ್ನುವುದೇ ಶ್ರೀಕೃಷ್ಣ ಚಿತ್ರದ ಕಥಾಹಂದರ. ಈ ಚಿತ್ರದ ಜನಪ್ರಿಯ 'ಉಧೋ ಉಧೋ ಯಲ್ಲವ್ವ' ಹಾಡಿಗೆ ಎಂ.ಎಸ್‍. ತ್ಯಾಗರಾಜ್‍ ಸಾಹಿತ್ಯ ರಚಿಸಿ ಸಂಗೀತ ಸಂಯೋಜಿಸುವ ಜತೆಗೆ ಧ್ವನಿಯಾಗಿದ್ದಾರೆ.    ‘ಶ್ರೀಕೃಷ್ಣ’ ...

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ "ರಾ.. ರಾ.. RX"..

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ "ರಾ.. ರಾ.. RX".. ಅದ್ದೂರಿಯಾಗಿ ಆರಂಭವಾಯಿತು ಯತಿರಾಜ್ ನಿರ್ದೇಶನದ ಹಾಗೂ ಕಾರ್ತೀಕೇಯ ಎಂಟರ್ ಪ್ರೈಸಸ್ ನಿರ್ಮಾಣದ ಈ ಚಿತ್ರ..                          ಪತ್ರಕರ್ತ, ಕಲಾವಿದ ಹಾಗೂ ನಿರ್ದೇಶಕ ಯತಿರಾಜ್ ನಿರ್ದೇಶನದ ಮತ್ತು ಕಾರ್ತಿಕೇಯ ಎಂಟರ್ ಪ್ರೈಸಸ್ ಲಾಂಛನದಲ್ಲಿ ವೃದ್ಧಿ ಸುನೀಲ್, ಚೇತನ್ ಟಿ.ಆರ್ ಹಾಗೂ ಚಂದ್ರಶೇಖರ್ ಎಸ್ ಎಂ ನಿರ್ಮಿಸುತ್ತಿರುವ "ರಾ.. ರಾ..RX" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಹಿರಿಯ ಛಾಯಾಗ್ರಾಹಕ ಕೆ.ಎನ್ ನಾಗೇಶ್ ಕುಮಾರ್, ಪತ್ರಕರ್ತ ವಿ.ಸಿ.ಎನ್ ಮಂಜು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಿರ್ಮಾಪಕ ವೃದ್ಧಿ ಸುನೀಲ್ ಅವರ ಪತ್ನಿ ಪ್ರಿಯ ಕ್ಯಾಮೆರಾ ಚಾಲನೆ ಮಾಡಿದರು. ಸಮಾರಂಭಕ್ಕೆ ಆಗಮಿಸಿದ ಅಮ್ಮಂದರಿಂದ ಚಿತ್ರದ ಟೈಟಲ್ ಟೀಸರ್ ಅನಾವರಣವಾಗಿದ್ದು ವಿಶೇಷವಾಗಿತ್ತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.                            ಇದು, ನಾನು ಬರೆದಿರುವ ಕಥೆ. ಪುಸ್ತಕರೂಪದಲ್ಲಿ ಹೊರತರೋಣ ಅಂದುಕೊಂಡೆ. ಆದರೆ ಈಗ ಅದು ಚಿತ್ರವಾಗುತ್ತಿದೆ. ಈ ಕಥೆಯನ್ನು ಸಂಗೀತ ನಿರ್ದೇಶಕ ವಿಜಯ್ ಹರಿತ್ಸ ಅವರ ಹತ...

ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಕಥಾಹಂದರ ಹೊಂದಿರುವ "ಸರ್ವಾಂತರ್ಯಾಮಿ” ಚಿತ್ರಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ||ಚಂದ್ರಶೇಖರ ಕಂಬಾರ ಮೆಚ್ಚುಗೆ..

ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಕಥಾಹಂದರ ಹೊಂದಿರುವ "ಸರ್ವಾಂತರ್ಯಾಮಿ” ಚಿತ್ರಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ||ಚಂದ್ರಶೇಖರ ಕಂಬಾರ ಮೆಚ್ಚುಗೆ.. ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರವನ್ನು ಇತ್ತೀಚೆಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ||ಚಂದ್ರಶೇಖರ ಕಂಬಾರ ವೀಕ್ಷಿಸಿದರು. . "ಸರ್ವಾಂತರ್ಯಾಮಿ" ಚಿತ್ರ ಚೆನ್ನಾಗಿದೆ. ಮೊಬೈಲ್ ನಿಂದ ಮಕ್ಕಳು ಸೇರಿದಂತೆ ಎಲ್ಲರ ಮೇಲೂ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಈ ಸಿನಿಮಾದಲ್ಲಿ ನಿರ್ದೇಶಕರು ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಇದು ಪ್ರತಿಯೊಬ್ಬರು ನೋಡಲೇಬೇಕಾದ ಚಿತ್ರ ಎಂದು ಡಾ||ಚಂದ್ರಶೇಖರ ಕಂಬಾರ ತಿಳಿಸಿದ್ದಾರೆ. ವೀರಕಪುತ್ರ ಶ್ರೀನಿವಾಸ್, ನಿಡಸಾಲೆ ಪುಟ್ಟಸ್ವಾಮಿ, ಸಾಹಿತಿ ಗೋವಿಂದರಾಜು ಪಟೇಲ್, ರವೀಂದ್ರ ವಂಶಿ, ನಿರ್ದೇಶಕ ರಾಮ್ ನಾರಾಯಣ್ ಮುಂತಾದವರು ಕೂಡ ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡಿದ್ದಾರೆ.   ಆಟೋ ನಾಗರಾಜ್, ತೇಜಸ್ವಿನಿ, ಮೈರಾ, ಅಮೂಲ್ಯ ನಾರಾಯಣ್, ಸೂರ್ಯ ಪ್ರವೀಣ್, ಸಂಜನಾ, ಉಮೇಶ್ ಸಕ್ಕರೆನಾಡು, ಉಮೇಶ್ ಪುಂಗ, ಪೃಥ್ವಿರಾಜ್‌, ನಾಗೇಶ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. .

ಶ್ರೀನಗರ ಕಿಟ್ಟಿ ಹುಟ್ಟುಹಬ್ಬಕ್ಕೆ ವೇಷಗಳು ಚಿತ್ರದ ಸಾಂಗ್ ಗಿಫ್ಟ್...

ಶ್ರೀನಗರ ಕಿಟ್ಟಿ ಹುಟ್ಟುಹಬ್ಬಕ್ಕೆ ವೇಷಗಳು ಚಿತ್ರದ ಸಾಂಗ್ ಗಿಫ್ಟ್...  ಒಂದೇ ವೇದಿಕೆಯಲ್ಲಿ ಮೂರು ಚಿತ್ರಗಳ ಕಾರ್ಯಕ್ರಮ..  ಬುಧವಾರ ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬ. ಅವರ ಬರ್ತ್ ಡೇ ಅಂಗವಾಗಿ ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಬಗ್ಗೆ ರಚಿಸಿದ 'ವೇಷಗಳು' ಕಥೆಯನ್ನಾಧರಿಸಿ‌ ನಿರ್ಮಾಣವಾಗುತ್ತಿರುವ ವೇಷಗಳು, ಲವ್ ಕೇಸ್ ಹಾಗೂ ಮದರ್ ಲವ್ ಈ ಮೂರೂ ಚಿತ್ರಗಳ ವಿಶೇಷ ಪತ್ರಿಕಾಗೋಷ್ಠಿ ಸಮಾರಂಭ ನಡೆಯಿತು. ಈ ವೇಳೆ ಕಿಟ್ಟಿ ಅವರ ಬಹುನಿರೀಕ್ಷಿತ ವೇಷಗಳು ಚಿತ್ರದಲ್ಲಿ ‌ಕಿಟ್ಟಿ ಅವರೇ ದನಿಯಾಗಿರುವ ವಿಶೇಷ ಹಾಡನ್ನು ಬಿಡುಗಡೆ ಮಾಡಲಾಯಿತು. ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.    ಶ್ರೀನಗರ ಕಿಟ್ಟಿ ಅವರ ಕಳೆದ ಹುಟ್ಟುಹಬ್ಬದಂದು ವೇಷಗಳು ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿತ್ತು. ಈ ವರ್ಷದ ಅವರ ಬರ್ತ್ಡೇಗೆ ಕಿಟ್ಟಿ ಅವರೇ ಹಾಡಿರುವ ವಿಶೇಷ ಸಾಂಗ್ ರಿಲೀಸಾಗಿದೆ. ಭಾವನಾ ಬೆಳಗೆರೆ ಹಾಗೂ ಶ್ರೀನಗರ ಕಿಟ್ಟಿ ಅರ್ಪಿಸುವ 'ವೇಷಗಳು' ಚಿತ್ರಕ್ಕೆ ಕಿಶನ್ ರಾವ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಶ್ರೀನಗರ ಕಿಟ್ಟಿ ಅವರು ಈ ಚಿತ್ರದಲ್ಲಿ ಬಸಪ್ಪ ಹಾಗೂ ಬಸಮ್ಮ ಜೋಗತಿ ಹೀಗೆ ಎರಡು ಶೇಡ್ ಇರುವ ಪಾತ್ರವನ್ನು ನಿರ್ವಹಿಸಿದ್ದಾರೆ.       ವೇಷಗಳು ಚಿತ್ರದಲ್ಲಿ ನಮ್ಮ ಜೋಗತಿಯರ ಬಗ್ಗೆ ಹಾಗೂ ಅವರ ಜ...

"ಅಪ್ಪು ಕಪ್ ಸೀಸನ್ 4" ಗೆ ಅದ್ದೂರಿ ಚಾಲನೆ...

"ಅಪ್ಪು ಕಪ್ ಸೀಸನ್ 4" ಗೆ ಅದ್ದೂರಿ ಚಾಲನೆ...  ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ   "ಅಪ್ಪು ಕಪ್"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಮೂರು ಸೀಸನ್ ಅದ್ದೂರಿಯಾಗಿ ನಡೆದಿದೆ. ಇದೇ ಜುಲೈ 24, 25, 26 ರಂದು ಲೀಗ್ ಪಂದ್ಯಗಳು ನಡೆಯಲಿದೆ. " ಇತ್ತೀಚೆಗೆ "ಅಪ್ಪು ಕಪ್ ಸೀಸನ್ 4" ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ವಿ.ಪ್ರಭಾಕರ್, ವಿಧಾನ ಪರಿಷತ್ ಸದಸ್ಯರು ಹಾಗೂ ಸಾಯಿಗೋಲ್ಡ್ ಪ್ಯಾಲೆಸ್ ಮಾಲೀಕರಾದ ಟಿ.ಎ ಶರವಣ ಹಾಗೂ ಕನ್ನಡಪರ ಹೋರಾಟಗಾರರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. "ಅಪ್ಪು ಕಪ್" ನಲ್ಲಿ ಭಾಗವಹಿಸುತ್ತಿರುವ ಹತ್ತು ತಂಡಗಳ ಮಾಲೀಕರು, ನಾಯಕರು, ರಾಯಭಾರಿಗಳು, ಮೆನ್ ಹಾಗೂ ವುಮನ್ ಐಕಾನ್ ಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.  STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ "ಅಪ್ಪು ಕಪ್ ಸೀಸನ್ 4" ಅದ್ದೂರಿಯಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಉದ್ಘಾಟನಾ ಸಮಾರಂಭ ನಡೆದಿದೆ.  ...